ಕೊಪ್ಪಳದ ಸಾಹಿತಿ ದಂಪತಿಗಳಾದ ಮಹೇಶ್ ಮನ್ನಾಪುರ–ಅನ್ನಪೂರ್ಣರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’
ಕಾಸರಗೋಡು, ಜು.15: ಕೊಪ್ಪಳ ಜಿಲ್ಲೆಯ ಶ್ರೇಷ್ಠ ಸಾಹಿತಿಗಳಾದ ಶ್ರೀ ಮಹೇಶ್ ಮನ್ನಾಪುರ ಹಾಗೂ ಶ್ರೀಮತಿ ಅನ್ನಪೂರ್ಣ ಮಹೇಶ್ ಮನ್ನಾಪುರ ದಂಪತಿಗಳಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ. ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26ರಂದು ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ…
