ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಉಚಿತ ಆಯುರ್ವೇದ ಶಿಬಿರ

ಮಂಜೇಶ್ವರ: ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿ, ಆದಿಕ್ಷೇತ್ರ ಶ್ರೀ ರಕೇಶ್ವರೀ ದೇವಸ್ಥಾನ ಹೊಸಂಗಡಿ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್ (ರಿ) ಕೊಂಡೆವೂರು ಮತ್ತು ಒನ್‌ಸೈಟ್ ಎಸ್ಪಿಲೋರ್ ಲಕೋಟಿಕಾ ಫೌಂಡೇಶನ್ ಬೆಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮಂಗಳೂರು ಡಾ. ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ)ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶ್ರೀ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತಲಪಾಡಿ, ಮಂಗಳೂರು ಇದರ ಸಹಯೋಗದಲ್ಲಿ…

Read More

ಮಂಜೇಶ್ವರ ಗ್ರಾಮ ಪಂಚಾಯತಿನ ನೂತನ ಆಡಳಿತ ಸಮಿತಿ ಸದಸ್ಯರ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

ಮಂಜೇಶ್ವರ ಗ್ರಾಮ ಪಂಚಾಯತಿನ ನೂತನ ಆಡಳಿತ ಸಮಿತಿ ಸದಸ್ಯರ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಭಾನುವಾರದಂದು ಮಂಜೇಶ್ವರದ ಗೋವಿಂದ ಪೈ ಗಿಳಿವಿಂಡುವಿನಲ್ಲಿ ಜರುಗಿತು. ನೂತನವಾಗಿ ಆಯ್ಕೆಯಾದ ಎಲ್ಲಾ ಸದಸ್ಯರು ಪದವಿ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಆಡಳಿತದ ಜವಾಬ್ದಾರಿ ವಹಿಸಿಕೊಂಡರು. ಅದೇ ರೀತಿ ಮಂಗಲ್ಪಾಡಿ ಪಂಚಾಯತಿನಲ್ಲಿ ಅವಿರೋಧವಾಗಿ ಗೆದ್ದು ಬಂದ  ಯು ಡಿ  ಎಫ್ ಅಭ್ಯರ್ಥಿ ಶಮೀನಾ ಟೀಚರ್ ಉರ್ದು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷತೆಯಾಗಿತ್ತು. ಅದೇ ರೀತಿ ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಮೂವರು ಮಹಿಳಾ ಸದಸ್ಯರುಗಳು ಆಂಗ್ಲ…

Read More

ವಿಶ್ವ ರಾಮಕ್ಷತ್ರಿಯ ತ್ರೈಮಾಸಿಕ ಮಹಾಸಭೆಯಲ್ಲಿ “ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ವ್ಯಕ್ತಿ ಚಿತ್ರಣ ಕೃತಿ ಲೋಕಾರ್ಪಣೆ.

ಕಾಸರಗೋಡು : ಕನ್ನಡ ಭವನದ ತ್ರಿವಿಕ್ರಮ ಶಕ್ತಿ ಡಾ. ವಾಮನ್ ರಾವ್ ಬೇಕಲ್ “ಎಂಬ ಕೃತಿ ವಿಶ್ವ ರಾಮಕ್ಷತ್ರಿಯ ತ್ರೈಮಾಸಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ ಶ್ರೀ ಎಚ್ ಆರ್ ಶಶಿಧರ್ ನಾಯ್ಕ್ ರೀಗೆ ವಿ. ರಾ. ಮಹಾಸಂಘ ಉಪಾಧ್ಯಕ್ಷರೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರೂ ಆದ ಡಾ. ವಾಮನ್ ರಾವ್ ಬೇಕಲ್ ನೀಡಿ ಶಶಿಧರ್ ನಾಯ್ಕ್ ಲೋಕಾರ್ಪಣೆ ಮಾಡಿದರು. ಈ ಕೃತಿಯನ್ನು ಡಾ. ಮೊಗಸಾಲೆಯವರ ಕಾಂತಾವರ ಕನ್ನಡ ಸಂಘವು “ನಾಡಿಗೆ ನಮಸ್ಕಾರ “ಎಂಬ ಪುಸ್ತಕ ಮಾಲೆಯಲ್ಲಿ ಸಾಹಿತಿ ವಿರಾಜ್…

Read More

ಶ್ರೀ ವಾಸುಕೀ ನಾಗರಾಜ ರಕ್ತೇಶ್ವರೀ ಪರಿವಾರ ದೈವಗಳ ಪ್ರತಿಷ್ಠಾ ವರ್ಧಂತ್ಯುತ್ಸವ

ಪಾವೂರು: ಶ್ರೀ ವಾಸುಕೀ ನಾಗರಾಜ ರಕ್ತೇಶ್ವರೀ ಪರಿವಾರ ದೈವಗಳ ಸನ್ನಿದಿ ಪಾವೂರು ತಚ್ಛಿರೆಪದವಿನಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಇದೇ ಬರುವ ತಾರೀಕು 25 . 12 . 2025 ನೇ ಗುರುವಾರದಂದು ಬ್ರಹ್ಮ ಶ್ರೀ ವರ್ಕಾಡಿ ಹೊಸ ಮನೆ ರಾಜೇಶ ತಾಳಿತ್ತಾಯರ ನೇತೃತ್ವದಲ್ಲಿ ವಿವಿಧ ವೈಧಿಕ , ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು. ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮಹಾ ಗಣಪತಿ ಹೋಮ , ಕಲಶ ಪೂಜೆ , ಪ್ರಧಾನ ಹೋಮ ,ಪಂಚಾಮೃತ ಅಭಿಷೇಕ…

Read More

ಸಿನಿಮಾ–ಟೂರಿಸಂ ಯೋಜನೆಗಳು ಕೇರಳದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಬಲ ತುಂಬುತ್ತವೆ: ಸಚಿವ ಪಿ.ಎ. ಮೊಹಮ್ಮದ್ ರಿಯಾಸ್

ಕೇರಳದಲ್ಲಿ ಸಿನಿಮಾ–ಟೂರಿಸಂ ಯೋಜನೆಗಳನ್ನು ಜಾರಿಗೊಳಿಸುವುದರಿಂದ ರಾಜ್ಯದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೊಸ ಉತ್ತೇಜನ ದೊರೆಯಲಿದೆ ಎಂದು ಕೇರಳದ ಪ್ರವಾಸೋದ್ಯಮ ಮತ್ತು ಸಾರ್ವಜನಿಕ ಕಾರ್ಯಗಳ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಹೇಳಿದರು. 1995ರಲ್ಲಿ ಬಿಡುಗಡೆಯಾದ ಖ್ಯಾತ ಚಿತ್ರ ‘ಬಾಂಬೆ’ಯ ನಿರ್ದೇಶಕ ಮಣಿರತ್ನಂ, ನಾಯಕಿ ಮನೀಷಾ ಕೊಯ್ರಾಲಾ ಹಾಗೂ ಛಾಯಾಗ್ರಾಹಕ ರಾಜೀವ್ ಮೆನನ್ ಅವರೊಂದಿಗೆ ಬೇಕಲ್ ಕೋಟೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಸಚಿವರು ಈ ಮಾತುಗಳನ್ನು ಹೇಳಿದರು. ಸಿನಿಮಾ–ಟೂರಿಸಂ ಯೋಜನೆಯ ಮೂಲಕ ಹಳೆಯ ಚಿತ್ರಗಳ ಲೊಕೇಶನ್‌ಗಳನ್ನು ಸಾರ್ವಜನಿಕರಿಗೆ ಪರಿಚಯಿಸಿ, ಅದರಿಂದ ಪ್ರವಾಸೋದ್ಯಮದ…

Read More

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರಸರ್ಕಾರದ ನಿಲುವಿಗೆ ಎದುರಾಗಿ CPI(M) ನೇತೃತ್ವ ದಲ್ಲಿ ಪಂಜಿನ ಮೆರವಣಿಗೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರ ಸರ್ಕಾರದ ನಿಲುವಿಗೆ ಎದುರಾಗಿ C.P.I ( M ) ನೇತೃತ್ವ ದಲ್ಲಿ ಪಂಜಿನ ಮೆರವಣಿಗೆ ಸಿ.ಪಿ.ಐ (ಎಂ ) ಉಪ್ಪಳ ಲೋಕಲ್ ಕಮಿಟಿ ನೇತೃತ್ವದಲ್ಲಿ ಬೇಕೂರು ಸುಭಾಷ್ ನಗರದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಉಪ್ಪಳ ಲೋಕಲ್ ಕಮಿಟಿ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬೋಳ್ಳಾರು ವಹಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು C.P.I (M) ಮಂಜೇಶ್ವರ ಏರಿಯಾ ಕಮಿಟಿ ಸದಸ್ಯ ಸಾಧಿಕ್ ಚಿರುಗೋಳಿ ಉದ್ಘಾಟಿಸಿ ಮಾತನಾಡಿದರು.ಲೋಕಲ್ ಸಮಿತಿ ಸದಸ್ಯ ಉಮೇಶ್…

Read More

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರಸರ್ಕಾರದ ನಿಲುವಿಗೆ ಎದುರಾಗಿ CPI (M) ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸಲು ತೀರ್ಮಾನಿಸಿದ ಕೇಂದ್ರ ಸರ್ಕಾರದ ನಿಲುವುಗೆದುರಾಗಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಸಿಪಿಐಎಂ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆಆರ್ ಜಯಾನಂದ ರವರು ಪ್ರತಿಭಟನೆ ಸಭೆ ಉದ್ಘಾಟನೆ ಮಾಡಿದರು. ಸಿಪಿಎಂ ಪಕ್ಷದ ಏರಿಯಾ ಸಮಿತಿ ಸದಸ್ಯರು ಲೋಕಲ್ ಕಾರ್ಯದರ್ಶಿಗಳು ಎಂಬಿವರು ಭಾಗವಹಿಸಿದರು.

Read More

ಅಂತ್ಯವಿಶ್ರಾಂತಿ ಹೊಂದಿರುವ ಪವಿತ್ರಾತ್ಮರಾದ ‘ಅಸ್ಸಯ್ಯಿದ್ ಶಹೀದ್ ವಲಿಯುಲ್ಲಾಹಿ (ರ.ಅ)’ ಅವರ ನಾಮದೇಯದಲ್ಲಿ ನಡೆಯುವ ಉದಯಾಸ್ತಮ ನ ಉರೂಸ್‌ಗೆ ದ್ವಜಾರೋಹಣ

ಮಂಜೇಶ್ವರ: ಉತ್ತರ ಕೇರಳದ ಅತ್ಯಂತ ಪ್ರಸಿದ್ಧವಾದ ಉದ್ಯಾವರ ಸಾವಿರ ಜಮಾಅತ್ ಆವರಣದಲ್ಲಿ ಅಂತ್ಯವಿಶ್ರಾಂತಿ ಹೊಂದಿರುವ ಪವಿತ್ರಾತ್ಮರಾದ ‘ಅಸ್ಸಯ್ಯಿದ್ ಶಹೀದ್ ವಲಿಯುಲ್ಲಾಹಿ (ರ.ಅ)’ ಅವರ ನಾಮದೇಯದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ಉದಯಾಸ್ತಮ ನ ಉರೂಸ್‌ಗೆ ಡಿಸೆಂಬರ್ 19ರಂದು ದ್ವಜಾರೋಹಣ ನಡೆಯಿತು. ಡಿಸೆಂಬರ್ 19ರಂದು (ಶುಕ್ರವಾರ) ಮಧ್ಯಾಹ್ನ ಜುಮಾ ನಮಾಜಿನ ನಂತರ, ಸಾವಿರಾರು ವಿಶ್ವಾಸಿಗಳ ಸಾನ್ನಿಧ್ಯದಲ್ಲಿ ದರ್ಗಾ ಶರೀಫ್ ಸಮಿತಿ ಅಧ್ಯಕ್ಷ ಹಾಗೂ ಉರೂಸ್ ಸಮಿತಿಯ ಮುಖ್ಯ ಸಲಹೆಗಾರ ಸಯ್ಯಿದ್ ಪೂಕ್ಕುಂನ್ನಿ ತಂಗಳ್ ಉದ್ಯಾವರ ಧ್ವಜಾರೋಹಣ ನೆರವೇರಿಸಿದರು. ಡಿಸೆಂಬರ್ 25ರಂದು…

Read More

ಭಾರತೀಯ ಜನತಾ ಪಾರ್ಟಿ ಬಡಾಜೆ ವತಿಯಿಂದ ಅಭಿನಂದನಾ ಕಾರ್ಯಕ್ರಮ

ಕೇರಳ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತಿನ ಬಡಾಜೆ ವಾರ್ಡಿನಲ್ಲಿ ಗೆದ್ದ ನೂತನ ಸದ್ಯಸ್ಯರನ್ನು ಅಭಿನಂದಿಸುವ ಕಾರ್ಯಕ್ರಕಾಮ ವೈ.ಎಸ್.ಬಿ ಮೈದಾನ ಬಡಾಜೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೋಹಿತ್ ಕುಮಾರ್ ಬಡಾಜೆ ಅವರು ವಹಿಸಿದರು , ಕಾಸರಗೋಡು ಬಿಜೆಪಿ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು .ವೇದಿಕೆಯಲ್ಲಿ ಚುನಾವಣೆಯಲ್ಲಿ ಗೆದ್ದು ಅಧಿಕಾರ ಸ್ವೀಕರಿಸಿದ ಕೀರ್ತೇಶ್ವರ ವಾರ್ಡ್ ಸದಸ್ಯರಾದ ಶ್ರೀ ಪ್ರಕಾಶ್ , ಬಡಾಜೆ ವಾರ್ಡ್ ಸದಸ್ಯೆ ಬೇಬಿ ಲತಾ, ಯಾದವ ಬಡಾಜೆ , ಮಂಜೇಶ್ವರ ಗ್ರಾಮ ಪಂಚಾಯತ್…

Read More

ಯುಡಿಎಫ್ ನೇತೃತ್ವದ ಗೂಂಡಾ ತಂಡಗಳು ಎಡರಂಗದ ಕಾರ್ಯಕರ್ತರ ಮೇಲೆ ವಿನಃಕಾರಣ ಆಕ್ರಮಣ -ಕೆ ಆರ್ ಜಯಾನಂದ

ಮಂಜೇಶ್ವರ ತ್ರಿಸ್ತರ ಚುನಾವಣೆಯ ನಂತರ ಮಂಜೇಶ್ವರ ಮಂಡಲದ ವಿವಿಧ ಪ್ರದೇಶಗಳಲ್ಲಿ ಯುಡಿಎಫ್ ನೇತೃತ್ವದ ಗೂಂಡಾ ತಂಡಗಳು ಎಡರಂಗದ ಕಾರ್ಯಕರ್ತರ ಮೇಲೆ ಏನೇ ಕಾರಣ ಇಲ್ಲದೆ ಆಕ್ರಮಣ ನಡೆಸುತ್ತಿರುವುದು ಖಂಡನೀಯವಾಗಿದೆ.ಈ ಅಕ್ರಮಕಾರಿಗಳಿಗೆ ಮಂಜೇಶ್ವರ ಶಾಸಕರ ಬೆಂಬಲವು ಗೂಂಡಾ ತಂಡಗಳಿಗೆ ಅಕ್ರಮಕ್ಕೆ ಪ್ರೋತ್ಸಾಹ ನೀಡುವುದಾಗಿದೆ.ಚುನಾವಣೆಯ ನಂತರ ಜನಪ್ರತಿನಿಧಿಗಳು ಈ ರೀತಿಯ ಆಕ್ರಮಣಗಳಿಗೆ ನೇತೃತ್ವ ನೀಡುವುದು ಈ ಪರಿಸರದ ಜನರ ನೆಮ್ಮದಿಯನ್ನು ಕೆಡಿಸುವುದಾಗಿದೆ. ಸಮಾಧಾನ ಪರವಾಗಿ ಚುನಾವಣೆಯ ನಂತರ ಈ ಆಕ್ರಮಣ ನಡೆಸುವುದು ಗೂಂಡಾ ರಾಜ್ಯವನ್ನಾಗಿಸುವ ಮುಸ್ಲಿಂ ಲೀಗಿನ ತಂತ್ರವಾಗಿದೆ.ಗರ್ಭಿಣಿ ಮಹಿಳೆ…

Read More
error: Content is protected !!