ಜಿಲ್ಲೆಯ ಹಲವು ಪಂಚಾಯತ್‌ಗಳಲ್ಲಿ ಎಡರಂಗದ ಆಡಳಿತಕ್ಕೆ ಹಿನ್ನಡೆ- ಮೀಂಜದಲ್ಲೂ ಎಡರಂಗಕ್ಕೆ ಕೈತಪ್ಪಿದ ಆಡಳಿತ

ಮಂಜೇಶ್ವರ: ಜಿಲ್ಲೆಯ ಹಲವು ಪಂಚಾಯತ್‌ಗಳಲ್ಲಿ ಎಡರಂಗದ ಆಡಳಿತಕ್ಕೆ ಹಿನ್ನಡೆಯಾಗಿರುವಂತೆಯೇ ಮೀಂಜದಲ್ಲೂ ಎಡರಂಗ ಆಡಳಿತ ಕೈತಪ್ಪಿದೆ.ಇಲ್ಲಿ ಕಳೆದಬಾರಿ ಸಿಪಿಐಗೆ 3 ಸೀಟು ಲಭಿಸಿದ್ದು, ಎಡರಂಗಕ್ಕೆ ಒಟ್ಟು 5 ಸ್ಥಾನ ಲಭಿಸಿತ್ತು. ಆದರೆ ಈ ಬಾರಿ ಸಿಪಿಎಂಗೆ ಒಂದು ಸ್ಥಾನ ಮಾತ್ರ ಲಭಿಸಿದೆ. ಕಳೆದಬಾರಿ ಆರು ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ 1 ಸೀಟು ಹೆಚ್ಚಿಸಿಕೊಂಡಿದೆ. ಈ ಬಾರಿ ಇಲ್ಲಿ ಯುಡಿಎಫ್ 9 ಸೀಟುಗಳನ್ನು ಪಡೆದು ಆಡಳಿತವನ್ನು ತನ್ನದಾಗಿಸಿದೆ. ಮಂಜೇಶ್ವರದಲ್ಲಿ ಯುಡಿ ಎಫ್ ಸಂಭ್ರಮಾಚರಣೆ ನಡೆಸಿದೆ. ತೂಮಿನಾಡಿನಿಂದ ಮಂಜೇಶ್ವರ ಅಂಡರ್ ಪಾಸ್…

Read More

ಪೇರಾಲ್ ಕಣ್ಣೂರಿನಲ್ಲಿ ಇ.ಕೆ. ನಾಯನಾ‌ರ್ ವಾಚನಾಲಯದ ಮೇಲೆ ಪಟಾಕಿ ಸಿಡಿಸಿ ಹಾನಿ- ಕುಂಬಳೆ ಪೊಲೀಸರು ಕೇಸು ದಾಖಲು

ಮಂಜೇಶ್ವರ: ಪೇರಾಲ್ ಕಣ್ಣೂರಿನಲ್ಲಿ ಇ.ಕೆ. ನಾಯನಾ‌ರ್ ವಾಚನಾಲಯದ ಮೇಲೆ ಪಟಾಕಿ ಸಿಡಿಸಿ ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಶನಿವಾರ ಸಂಜೆ ಯುಡಿಎಫ್ ಕಾರ್ಯಕರ್ತರ ತಂಡ ಈ ಕೃತ್ಯವೆಸಗಿರುವುದಾಗಿ ಸಿಪಿಎಂ ಆರೋಪಿಸಿದೆ. ವಾಚನಾಲಯಕ್ಕೆ ಪಟಾಕಿ ಎಸೆದು ಬಳಿಕ ಪ್ಲೆಕ್ಸ್ ಬೋರ್ಡ್‌ಗಳನ್ನು ಹಾನಿಗೈಯುವುದರ ಜೊತೆಯಾಗಿ ವಾಚನಾಲಯದ ಮುಂಬಾಗದಲ್ಲಿ ನಿಂತಿದ್ದ ಹಸೈನಾರ್ ಕೋರಿತ್ತಳ (52) ಎಂಬವರಿಗೂ ಹಲ್ಲೆಗೈದಿರುವ ಬಗ್ಗೆ ದೂರಲಾಗಿದೆ. ಹಸೈನಾರ್ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿ ಸಿಪಿಎಂ ನೀಡಿದ…

Read More

ಮೀಂಜ ಶ್ರೀ ಸತ್ಯನಾರಾಯಣ ಸೇವಾ ಸಮಿತಿಯ ಸ್ಥಾಪಕ ಸದಸ್ಯರು ಮತ್ತು ಅರ್ಚಕರೂ ಆಗಿದ್ದ ಶಿವರಾಮ ಆಚಾರ್ಯ ಕೋಳ್ಯೂರುಪದವು ವಿಧಿವಶ

ಮೀಂಜ:- ಶ್ರೀ ಸತ್ಯನಾರಾಯಣ ಸೇವಾ ಸಮಿತಿಯ ಸ್ಥಾಪಕ ಸದಸ್ಯರು ಮತ್ತು ಅರ್ಚಕರೂ ಆಗಿದ್ದ ಶಿವರಾಮ ಆಚಾರ್ಯ ಕೋಳ್ಯೂರುಪದವು (63 ) ಅಲ್ಪ ಕಾಲದ ಅಸೌಖ್ಯದಿಂದ ಡಿ.13 ರಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ಪತ್ನಿ ಮೀನಾಕ್ಷಿ ,ತಮ್ಮ ಶಂಕರ ಆಚಾರ್ಯ, ತಂಗಿ ದೇವಕಿ, ಮಗ ಸಂತೋಷ್,ಸೊಸೆ ಶ್ವೇತಾ, ಅಳಿಯ ಪದ್ಮನಾಭ,ಮೊಮ್ಮಗ ಗಾಯನ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಕಿರಿಯ ಮಗ ಅಶೋಕ ಮತ್ತು ಮಗಳಾದ ನವ್ಯ ಇವರು ಅಕಾಲಿಕ ಮರಣಕ್ಕೀಡಾದ ಕಾರಣ ಈ ಮೊದಲೇ ಕಳೆದುಕೊಂಡಿದ್ದಾರೆ. ಶ್ರೀ…

Read More

ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಮಾನೋತ್ಸವ, ಶ್ರೀ ಸತ್ಯಸಾಯಿ ಪಾದುಕಾ ಪ್ರತಿಷ್ಠಾಪನೆ ಹಾಗೂ ಶಾಲಾ ವಾರ್ಷಿಕೋತ್ಸವ – ಪ್ರಶಾಂತಿ ಸಂಭ್ರಮ

ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಅಂಗವಾಗಿ, ಶ್ರೀ ಸತ್ಯಸಾಯಿ ಪಾದುಕಾ ಪ್ರತಿಷ್ಠಾಪನೆ ಹಾಗೂ ಶಾಲಾ ವಾರ್ಷಿಕೋತ್ಸವವನ್ನು ಒಳಗೊಂಡ “ಪ್ರಶಾಂತಿ ಸಂಭ್ರಮ”ವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ಡಿಸೆಂಬರ್ 13ರ ಶನಿವಾರದಂದು, ಪುಟ್ಟಪರ್ತಿಯ ಶ್ರೀ ಸತ್ಯಸಾಯಿ ಬಾಬಾ ಆಶ್ರಮ – ಪ್ರಶಾಂತಿ ನಿಲಯಂನಿಂದ ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರಕ್ಕೆ ಲಭಿಸಿದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಅಮೃತಶಿಲಾ ಪಾದುಕೆಯ ಪ್ರತಿಷ್ಠಾಪನಾ ಕಾರ್ಯಕ್ರಮವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಈ ಪಾದುಕಾ ಪ್ರತಿಷ್ಠಾಪನೆಯನ್ನು ಶ್ರೀ ಸತ್ಯಸಾಯಿ…

Read More

ಕೇರಳ ಸ್ಥಳೀಯಾಡಳಿತ ಚುನಾವಣೆ ಫಲಿತಾಂಶ ಪ್ರಕಟ .ಮಂಜೇಶ್ವರ ಗ್ರಾಮ ಪಂಚಾಯತ್‌ ಯುಡಿಎಫ್‌ ಗೆ ಸ್ಪಷ್ಟ ಬಹುಮತ

ಮಂಜೇಶ್ವರ: ಕೇರಳ ಸ್ಥಳೀಯಾಡಳಿತ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಬಹುಮತವನ್ನು ಸಾಧಿಸಿದೆ. ಒಟ್ಟು 24 ಸ್ಥಾನಗಳ ಪೈಕಿ ಯುಡಿಎಫ್‌ 14 ಸ್ಥಾನಗಳನ್ನು ಗೆದ್ದು ಪಂಚಾಯತ್‌ ಮೇಲೆ ಹಿಡಿತ ಸಾಧಿಸಿದೆ.ಮಂಜೇಶ್ವರ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಸಮಾಜ ಸೇವಕ ಹಾಗೂ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಅವರು ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಿದ್ದಾರೆ. ಚುನಾವಣಾ ಅವಧಿಯಲ್ಲಿ ಎದುರಾಳಿಗಳಿಂದ ನಡೆದ ಅಪಪ್ರಚಾರಗಳನ್ನೆಲ್ಲಾ ಜನತೆಯ ಸ್ಪಷ್ಟ ತೀರ್ಪಿನ ಮೂಲಕ ಮಣಿಸಿ…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಎರಡನೇ ವಾರ್ಡ್‌ನಲ್ಲಿ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಭರ್ಜರಿ ಗೆಲುವು

ಮಂಜೇಶ್ವರ:  ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್‌ನ ಎರಡನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಸಮಾಜ ಸೇವಕ ಹಾಗೂ ಯುಡಿಎಫ್ ಅಭ್ಯರ್ಥಿ ಇಲ್ಯಾಸ್ ತೂಮಿನಾಡು ಅವರು ಅತ್ಯಧಿಕ ಬಹುಮತದಿಂದ ವಿಜಯ ಸಾಧಿಸಿದ್ದಾರೆ. ಚುನಾವಣಾ ಅವಧಿಯಲ್ಲಿ ಎದುರಾಳಿಗಳಿಂದ ನಡೆದ ಅಪಪ್ರಚಾರಗಳನ್ನೆಲ್ಲಾ ಜನತೆಯ ಸ್ಪಷ್ಟ ತೀರ್ಪಿನ ಮೂಲಕ ಮಣಿಸಿ ಅವರು ಗಮನಾರ್ಹ ಗೆಲುವು ದಾಖಲಿಸಿದ್ದಾರೆ.ಗೆಲುವಿನ ನಂತರ ಮಾತನಾಡಿದ ಇಲ್ಯಾಸ್ ತೂಮಿನಾಡು ಅವರು, “ಇದು ನನ್ನ ವೈಯಕ್ತಿಕ ಗೆಲುವಲ್ಲ. ಇದು ನನ್ನ ಗ್ರಾಮದ ಜನತೆಯ ಗೆಲುವು. ನನ್ನ ಮೇಲೆ ನಂಬಿಕೆ ಇಟ್ಟು ಮತ…

Read More

ಮೂರು ತಿಂಗಳ ಹಸುಗೂಸಿನ ತಾಯಿಯೊಬ್ಬಳು ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ

ಮಂಜೇಶ್ವರ : ಮೂರು ತಿಂಗಳ ಹಸುಗೂಸಿನ ತಾಯಿಯೊಬ್ಬಳು ಗಂಡನ ಮನೆಯಲ್ಲಿ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಪ್ಪಳ ಸೋಂಕಾಲ ಕೊಡಂಗೆ ರಸ್ತೆ ನಿವಾಸಿ ಮೊಯ್ದಿನ್ ಸವಾದ್‌ ಎಂಬವರ ಪತ್ನಿ ಫಾತಿಮತ್ ನಬೀನಾ (25) ಸಾವನ್ನಪ್ಪಿದ ದುರ್ದೈವಿ. ಈಕೆ ಮಲಗುವ ಕಿಟಿಕಿಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ವ್ಯಕ್ತವಾಗಿಲ್ಲ. ಪ್ರಕರಣ ದಾಖಲಿಸಿ ಮಂಜೇಶ್ವರ ಪೊಲೀಸರು ತನಿಖೆಗೆ ಚಾಲನೆ ನೀಡಿದ್ದಾರೆ.

Read More

ತ್ರಿಸ್ತರ ಚುನಾವಣೆ ಜಿಲ್ಲೆಯಲ್ಲಿ 74.89ಶೇ. ಮತದಾನ

ಮಂಜೇಶ್ವರ : ನಿನ್ನೆ ನಡೆದ ತ್ರಿಸ್ತರ ಚುನಾವಣೆಯಲ್ಲಿ ಮತದಾರರು ಬಿರುಸಿನಿಂದ ಮತದಾನಗೃದಿದ್ದಾರೆ, ಸಂಜೆ 6ಗಂಟೆಯ ತನಕ ಜಿಲ್ಲೆಯಲ್ಲಿ 74.89ಶೇ. ಮತದಾನ ನಡೆದಿದೆ. ಅನೇಕ ಮತಗಟ್ಟೆಗಳಲ್ಲಿ ಮತಯಂತ್ರಗಳ ತೊಂದರೆಯಿಂದಾಗಿ ಮತ್ತು ಮತದಾರರ ಸರದಿ ಸಾಲುಗಳಿದ್ದ ಕಾರಣ 6ಗಂಟೆ ದಾಟಿಯೂ ಮತದಾನ ಮುಂದುವರಿದಿದೆ. ಕೆಲವೊಂದು ವಾರ್ಡ್ ಗಳಲ್ಲಿ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆದಿದ್ದರೂ ಎಲ್ಲಿಯೂ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.ಜಿಲ್ಲೆಯಲ್ಲಿ ಪ್ರಸಕ್ತ ವರದಿಯಂತೆ 814997 ಮಂದಿ ಮತದಾನ ಗೈದರು. ಈಪೈಕಿ 366957 ಪುರುಷರು ಮತ್ತು 448038…

Read More

ಶ್ರೀ ಅಯ್ಯಪ್ಪ ಭಜನಾ ಮಂದಿರ, ಬಾಳ್ಳೂರು – ವಾರ್ಷಿಕ ಮಹೋತ್ಸವ

ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಳ್ಳೂರಿನ ವಾರ್ಷಿಕ ಮಹೋತ್ಸವವು 13-12-2025 (ಶನಿವಾರ) ರಿಂದ 14-12-2025 (ಆದಿತ್ಯವಾರ)ದ ವರೆಗೆ ದಡ್ಡಂಗಡಿ ವೇದಮೂರ್ತಿ ಬಾಲಕೃಷ್ಣ ಭಟ್ ಅವರ ಪೌರೋಹಿತ್ಯದಲ್ಲಿ, ಕೊಂಡೆವೂರು ಮಠ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಜರಗಲಿದೆ. ಈ ಸಂದರ್ಭದಲ್ಲಿ 13ನೇ ವರ್ಷದ ಏಕಾಹ ಭಜನೆ, 36ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ಬಯಲಾಟ ಸೇರಿದಂತೆ ವಿವಿಧ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Read More

ಭಯದ ವಾತಾವರಣ ಸೃಷ್ಟಿಸಿದ ನಾಗರಾಹಾವು: ಸೆರೆ ಹಿಡಿದು ಮಾನವೀಯತೆ ಮೆರೆದ ಉರಗ ತಜ್ಞ ರಾಜು ಕಿದೂರು

ಕುಂಬ್ಳೆ : ಎರಡು ದಿನಗಳಿಂದ ಬಂಬ್ರಾಣ ಬತ್ತೆರಿ ನಿವಾಸಿ ನಾರಾಯಣ ಅವರ ಮನೆ ಅಂಗಳದಲ್ಲಿ ಸುತ್ತಾಡುತ್ತಿದ್ದ ನಾಗರ ಹಾವೊಂದು ಮನೆ ಮಂದಿಗೆ ಭಯದ ವಾತಾವರಣ ಸೃಷ್ಟಿಸಿತ್ತು. ಇದೀಗ ಕೊನೆಗೂ ಇಂದು ಮುಂಜಾನೆ 7 ಗಂಟೆಯ ಸುಮಾರಿಗೆ ಹೊಲಿ ಫ್ಯಾಮಿಲಿ ಶಾಲಾ ಅಧ್ಯಾಪಕರು ಹಾಗೂ ನುರಿತ ಉರಗ ತಜ್ಞರಾದ ರಾಜು ಕಿದುರ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೂ ಮನೆ ಹಾಗೂ ಊರ ಮಂದಿ ನಿಟ್ಟುಸಿರು ಬಿಡುವಂತಾಗಿದೆ. ಈ ಸಂಧರ್ಭದಲ್ಲಿ ಉರಗ ತಜ್ಞರಾದ ರಾಜು…

Read More
error: Content is protected !!