ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ರಾಜ್ಯೋತ್ಸವ ಹಕ್ಕುಗಳಿಗಾಗಿ ಹೋರಾಡುವುದು ನಮ್ಮ ಹಕ್ಕು: ಮುರಳೀಧರ ಬಳ್ಳಕುರಾಯ

ಕಾಸರಗೋಡು : ನಮ್ಮ ಹಕ್ಕುಗಳು ಮತ್ತು ಸಂವಿಧಾನಾತ್ಮಕ ಸವಲತ್ತುಗಳು ನಿರಾಕರಿಸಲ್ಪಟ್ಟಾಗ ಅವುಗಳನ್ನು ಮರಳಿ ಪಡೆಯಲು ಹೋರಾಡುವುದು ನಮ್ಮ ಹಕ್ಕು. ಕೇರಳ ಸರಕಾರ ಈ ಬಗ್ಗೆ ತಿಳಿದುಕೊಂಡು ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಬೇಕಾಗಿದೆ ಎಂದು ಕರ್ನಾಟಕ ಸಮಿತಿಯ ಅಧ್ಯಕ್ಷ, ನ್ಯಾಯವಾದಿ ಮುರಳೀಧರ ಬಳ್ಳಕುರಾಯ ಹೇಳಿದರು. ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಆಶ್ರಯದಲ್ಲಿ ನಡೆದ ಕಾಸರಗೋಡು ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವದಾಖಲೆ ಸೃಷ್ಟಿಸಿದ ಶಾಸ್ತ್ರೀಯ ನೃತ್ಯ ಕಲಾವಿದೆ ಮಂಗಳೂರಿನ ರೆಮೊನಾ ಇವೆಟ್…

Read More

ಮಂಗಳೂರಿನ ನಟೋರಿಯಸ್ ರೌಡಿಶೀಟರ್ ನೌಫಲ್ ಅಲಿಯಾಸ್ ನೌಫ ಮರ್ಡರ್…!ಉಪ್ಪಳದ ರೈಲ್ವೇ ಹಳಿಯಲ್ಲಿ ಶವ ಪತ್ತೆ

ಮಂಗಳೂರಿನ ನಟ್ಟೋರಿಯಸ್ ರೌಡಿ ಶಿಟರ್ ನೌಫಲ್ ಅಲಿಯಾಸ್ ನೌಫನ ಶವ ಉಪ್ಪಳದ ರೈಲ್ವೇ ಹಳಿಯಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಉಪ್ಪಳದ ರೈಲ್ವೆ ಟ್ರಾಕ್ ನಲ್ಲಿ ಶವ ಬಿದಿದ್ದು ಕೊಲೆಯಾಗಿರಬಹುದು ಎಂದು ಶಂಕೆಯಿದೆ. ಸ್ಥಳಕ್ಕೆ ಕೇರಳ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ಕೊಲೆಯಾದ ನೌಫಲ್ ನ ವಿರುದ್ಧ ಮಂಗಳೂರು ಮತ್ತು ದ.ಕ ಜಿಲ್ಲೆಯಲ್ಲಿ ಅನೇಕ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳಿವೆ.ಈತ ಮಂಗಳೂರಿನ ಫೈಸಲ್ ನಗರದ ನಿವಾಸಿ ಯಾಗಿರುತ್ತಾನೆ.

Read More

ಉಪ್ಪಳ ವಿದ್ಯುತ್ ಸೆಕ್ಷನ್ ಸಬ್ ಇಂಜಿನಿಯರ್ ಸೆಬಾಸ್ಟಿನ್ ರವರಿಗೆ ಉಪ್ಪಳ ವ್ಯಾಪಾರ ಭವನದಲ್ಲಿ ಬೀಳ್ಳೊಡುಗೆ ಸಮಾರಂಭ

ಮಂಜೇಶ್ವರ : ಸುದೀರ್ಘ ಕಾಲ ಸೇವೆಯನ್ನು ನೀಡಿ ನಿವೃತರಾದ ಉಪ್ಪಳ ವಿದ್ಯುತ್ ಸೆಕ್ಷನ್ ಸಬ್ ಇಂಜಿನಿಯರ್ ಸೆಬಾಸ್ಟಿನ್ ರವರಿಗೆ ಉಪ್ಪಳ ವ್ಯಾಪಾರ ಭವಣದಲ್ಲಿ ನಡೆದ ಸಮಾರಂಭದಲ್ಲಿ ಬೀಳ್ಳೊಡುಗೆ ನೀಡಲಾಯಿತು.ಕಳೆದ 29 ವರ್ಷಗಳಲ್ಲಿ ಇವರು ಕಾಸರಗೋಡು ನೆಲಿಕುನ್ನು, ಪೈವಳಿಕೆ, ಉಪ್ಪಳ ಸೇರಿದಂತೆ ವಿವಿಧ ಸೆಕ್ಷನ್ ಗಳಲ್ಲಿ ಸೇವೆಯನ್ನು ಜನರ ಪ್ರೀತಿಗೆ ಪಾತ್ರರಾಗಿದ್ದರು. ಉಪ್ಪಳ ಸಬ್ ಅಸಿಸ್ಟಂಟ್ ಇಂಜಿನಿಯರ್ ಜಯನ್ ರವರ ಅಧ್ಯಕ್ಷತೆಯಲ್ಲಿ ನಡೆದ ವಿದಾಯ ಕೂಟ ಸಮಾರಂಭವನ್ನು ನಕಾಸರಗೋಡು ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗರಜ ಭಟ್ ಉದ್ಘಾಟಿಸಿದರು. ಈ ಸಂದರ್ಭ…

Read More

ಪಾವೂರು ಅಂಗನವಾಡಿಯಲ್ಲಿ ಪ್ರವೇಶ ಉತ್ಸವ

ಮಂಜೇಶ್ವರ: ಪಾವೂರು ಅಂಗನವಾಡಿ ಇಂದು ನಡೆದ ಪ್ರವೇಶ ಉತ್ಸವದಲ್ಲಿ ವರ್ಕಾಡಿ ಗ್ರಾಮ ಪಂಚಾಯತ್ ಸದಸ್ಯ ಕಮರುಂನ್ನಿಸ ಮುಸ್ತಾಫಾ ಅವರನ್ನು ಪಾವೂರು ಅಂಗನವಾಡಿ ವೆಲ್ಫೇರ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತಾಡಿದ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಪ್ರವೇಶ ಉತ್ಸವ ಮಕ್ಕಳಿಗೆ ಹೊಸ ಹುರುಪು ಹಾಗೂ ಸಂತೋಷ ತಂದಿದೆ ಇದೆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ತಿಂಗಳಿಗೆ 1ಸಾವಿರ ಅನುದಾನ ಹೆಚ್ಚಿಸಿರುದರಿಂದ ಅವರಿಗೂ ಸಂತೋಷ ಆಗಿದೆ ಏಂದು ಗಣೇಶ್ ಪಾವೂರು ಹೇಳಿದರು ಈ…

Read More

ಮೀಂಜ : 41ನೇ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

ಮೀಯಪದವು : ದಿವಂಗತ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ 41ನೇ ಪುಣ್ಯತಿಥಿ ಕಾರ್ಯಕ್ರಮ ಮೀಯಪದವಿನಲ್ಲಿ ಜರುಗಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ಪುಷ್ಪಾರ್ಚನೆಗೈದರು.ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಾಮೋದರ ಮಾಸ್ತರ್ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಮುಖಂಡರಾದ ಪಿ. ಸೋಮಪ್ಪ ಮುಖ್ಯ ಪ್ರಭಾಷಣಗೈದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜೀ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮುಖಂಡರುಗಳಾದ ಮೊಹಮ್ಮದ್ ಜೆ, ಜೋಕಿಂ, ಮೊಂತೇರೋ, ಹಮೀದ್ ಮೀಯಪದವು, ಫಿಲೋಮಿನಾ…

Read More

ಶಾಸಕರ ಆಸ್ತಿ ಅಭಿವೃದ್ಧಿ ನಿಧಿಯ ಭಾಗವಾಗಿ 2020–21 ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಮೀಂಜ ಕೃಷಿ ಭವನದ ಉದ್ಘಾಟನೆ

ಮಂಜೇಶ್ವರ: ಶಾಸಕರ ಆಸ್ತಿ ಅಭಿವೃದ್ಧಿ ನಿಧಿಯ ಭಾಗವಾಗಿ 2020–21 ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಮೀಂಜ ಕೃಷಿ ಭವನವನ್ನು ಗೌರವಾನ್ವಿತ ಕೃಷಿ ಸಚಿವರಾದ ಶ್ರೀ ಪಿ. ಪ್ರಸಾದ್ ಅವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮಂಜೇಶ್ವರ ಶಾಸಕ ಶ್ರೀ ಎ. ಕೆ. ಎಂ. ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. “ರೈತರ ದ್ವಿತೀಯ ಮನೆಯಾಗಿರುವುದು ಕೃಷಿ ಭವನ. ರೈತರಿಗೆ ಉತ್ತಮ ಸೇವೆಗಳು ನೀಡುವ ಉದ್ದೇಶದಿಂದ ಈ ಕೃಷಿ ಭವನದಲ್ಲಿ ಪ್ಲಾಂಟ್ ಹೆಲ್ತ್ ಕ್ಲಿನಿಕ್ (ಸಸ್ಯ ಆರೋಗ್ಯ ಕೇಂದ್ರ) ಕೂಡ…

Read More

ಮಂಜೇಶ್ವರ : ವನಿತಾ ತರಬೇತಿ ಕೇಂದ್ರ ಉದ್ಘಾಟನೆ .

ಮಂಜೇಶ್ವರ ಬಡಾಜೆ ಕಲ್ಲ ದೇವಸ್ಥಾನ ಬಳಿ ಮಂಜೇಶ್ವರ ಗ್ರಾಮ ಪಂಚಾಯತ್ ಅನುದಾನದೊಂದಿಗೆ ನಿರ್ಮಿಸಲಾದ ವನಿತಾ ತರಬೇತಿ ಕೇಂದ್ರದ ಉದ್ಘಾಟನೆ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಮ್ಮದ್ ಸಿದ್ದಿಕ್ ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೋ ದೀಪ ಪ್ರಜ್ವಲನಗೈದು ಉದ್ಧಾಟಿಸಿ ಶುಭ ಹಾರೈಸಿದರು. ಸ್ಫೂರ್ತಿ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಮ್ಯಾನೇಜರ್ ಮಧುಸೂದನ ಬಳ್ಳಕ್ಕುರಾಯ, ಸಿಡಿಎಸ್ ಸದಸ್ಯೆ ಪ್ರಭಾವತಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕುಟುಂಬಶ್ರೀ ಮಂಜೇಶ್ವರ ಚಯರ್ ಪರ್ಸನ್…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣ

ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣಗೊಂಡ ದಾಖಲೆಗಳ ಹಸ್ತಾಂತರ ಮತ್ತು ಕಳೆದ 5 ವರ್ಷಗಳಲ್ಲಿ ಪಂಚಾಯತಿನಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ವೀಡಿಯೋ ಬಿಡುಗಡೆ ಹಾಗೂ ಲೈಫ್ ಭವನ ಪದ್ಧತಿಯ ನೂತನ ಫಲಾನುಭವಿಗಳಿಗೆ ಮಾಹಿತಿ ಕಾರ್ಯಕ್ರಮ ಮಂಜೇಶ್ವರ ಗೋವಿಂದ ಪೈ ಗಿಳಿವಿಂಡುನಲ್ಲಿ ಅದ್ದೂರಿಯಾಗಿ ನಡೆಯಿತು. ಮಂಜೇಶ್ವರ ಗ್ರಾಮ ಪಂಚಾಯತ್‌ನ ಆಡಳಿತಾತ್ಮಕ ಪಾರದರ್ಶಕತೆ, ದಕ್ಷತೆ ಮತ್ತು ಸಾರ್ವಜನಿಕ ಸೇವಾ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಡಿಜಿಟಲೀಕರಣಗೊಂಡ ದಾಖಲೆಗಳ ಹಸ್ತಾಂತರ…

Read More

ಕಾಸರಗೋಡು ಜಿಲ್ಲಾ ವಿಜ್ಞಾನೋತ್ಸವ : ಮಂಜೇಶ್ವರದ ಇಬ್ರಾಹಿಂ ಶಾಹಿದ್ ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಜೇಶ್ವರ: ಮಂಜೇಶ್ವರ ಸಿರಾಜುಲ್ ಹುದಾ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಇಬ್ರಾಹಿಂ ಶಾಹಿದ್ ಎಚ್ 2025–26 ಶೈಕ್ಷಣಿಕ ವರ್ಷದ ಕಾಸರಗೋಡು ಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ವೆಬ್‌ಪೇಜ್ ಡಿಸೈನಿಂಗ್ ವಿಭಾಗದಲ್ಲಿ ವಿಜಯ ಸಾಧಿಸಿ. ಇದೀಗ ಈ ಪೋರ ಕೇರಳ ರಾಜ್ಯ ಮಟ್ಟದ ಐಟಿ ಫೇರ್ ಗೆ ಆಯ್ಕೆಗೊಂಡಿದ್ದಾನೆ. ಮಂಜೇಶ್ವರ ಚೌಕಿ ನಿವಾಸಿ, ಸಮಾಜ ಸೇವಕ ಹಾಗೂ ದೃಶ್ಯ ಮಾಧ್ಯಮ ಕ್ಯಾಮರಾಮ್ಯಾನ್ ಮೊಹಮ್ಮದ್ ಹನೀಫ್ ಶಾರ್ಜಾ ಹಾಗೂ ಕದೀಜಾ ದಂಪತಿಗಳ ಪುತ್ರನಾದ ಇಬ್ರಾಹಿಂ ಶಾಹಿದ್, ಬಾಲ್ಯದಿಂದಲೇ ತಾಂತ್ರಿಕ ಕ್ಷೇತ್ರದ ಮೇಲೆ…

Read More

ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದ ಡೆಕೋರ್ ಪ್ಯಾನೆಲ್ ಇಂಡಸ್ಟ್ರೀಸ್ ನಲ್ಲಿ ಬಾಯ್ಲರ್ ಸ್ಟೋಟ .ಓರ್ವ ಸಾವು, ಹಲವರಿಗೆ ಗಾಯ.

ಮಂಜೇಶ್ವರ : ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದ ಡೆಕೋರ್ ಪ್ಯಾನೆಲ್ ಇಂಡಸ್ಟ್ರೀಸ್ ನಲ್ಲಿ ಬಾಯ್ಲರ್ ಸ್ಟೋಟಗೊಂಡು ಸಂಭವಿಸಿದ ದುರಂತದಲ್ಲಿ ಒಬ್ಬ ಘಟನಾ ಸ್ಥಳದಲ್ಲೇ ಸಾವನ್ನಪ್ಪಿ 16 ಮಂದಿ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಪರಿಸರದ ಮನೆ, ಕಾರ್ಖಾನೆಗಳಿಗೆ ಛಿದ್ರಗೊಂಡ ಕಲ್ಲುಗಳು ರಟ್ಟಿದ್ದಲ್ಲದೇ, ಸ್ಫೋಟದ ಕಂಪನಕ್ಕೆ ಅನಂತಪುರ ಕ್ಷೇತ್ರ ಪರಿಸರವೇ ಕಂಪಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸಹಾಯದಿಂದ ಗಾಯಾಳುಗಳನ್ನು…

Read More
error: Content is protected !!