ಜ್ವರಭಾಧಿಸಿ ಸಮಾಜ ಸೇವಕನ ಯುವಕನ ದಾರುಣ ಅಂತ್ಯ

ಮಂಜೇಶ್ವರ : ನಾಡಿನ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಯುವಕನೊಬ್ಬ ಜ್ವರದ ಭಾಧೆಯಿಂದ ದುರ್ದೈವವಶಾತ್ ತನ್ನ ಅಮೂಲ್ಯ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಉದ್ಯಾವರ ನಿವಾಸಿ ಅಬ್ದುಲ್ ಜಬ್ಬಾರ್ (47) ಮೃತ ದುರ್ದೈವಿ.ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದ ಅಬ್ದುಲ್ ಜಬ್ಬಾರ್ ಸಮಾಜ ಸೇವೆಗಾಗಿ ತನ್ನ ಜೀವನವನ್ನು ಅರ್ಪಿಸಿದ್ದ ಅನಾಥ ಮಕ್ಕಳಿಗೆ ಶಿಕ್ಷಣ, ಹಿಂದುಳಿದ ಕುಟುಂಬಗಳಿಗೆ ಆಹಾರ ವಿತರಣೆ ಹಾಗೂ ಪರಿಸರ ಸಂರಕ್ಷಣೆ ಎಂಬಂತಹ ಅನೇಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದನು. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯುವಕ ಸ್ಥಳೀಯ ಆಸ್ಪತ್ರೆಯಿಂದ ಚಿಕಿತ್ಸೆ…

Read More

ಲೋಕೋಪಯೋಗಿ ಇಲಾಖೆ ರಸ್ತೆ ದುರಸ್ಥಿ -ಕೂಡಲೇ ಸಂಚಾರ ಯೋಗ್ಯ ಮಾಡಲು ಬಿಜೆಪಿ ಅಗ್ರಹ

ಮಂಜೇಶ್ವರ: ಸಜಂಕಿಲ -ಬಾಯರ್ ರಸ್ತೆ, ಕುರುಡಪದವು ಲಾಲ್ ಬಾಗ್ ರಸ್ತೆ, ಹೊಸಂಗಡಿ- ಮಜೀಬೈಲ್ ಕಂಗುಮೆ ರಸ್ತೆ ವರ್ಕಾಡಿ ದೈಗೋಳಿ, ಗುವೇದಪಡ್ಪುರಸ್ತೆ ಮಂಜೇಶ್ವರ ಕೆದುoಬಾಡಿ ರಸ್ತೆ ಗಳನ್ನು ಸಂಚಾರ ಯೋಗ್ಯಗೊಳಿಸಬೇಕು, ಮತ್ತು ಕಾಮಗಾರಿ ಕೂಡಲೇ ಪೂರ್ಣ ಮಾಡಬೇಕೆಂದು ಬಿಜೆಪಿ ಮಂಡಲ ಸಮಿತಿ ಅಗ್ರಹಿಸಿದೆ. ಮಂಜೇಶ್ವರ ಶಾಸಕರ ಹಾಗೂ ಲೋಕಪಯೋಗಿ ಇಲಾಖೆಯ ಬೇಜವಾಬ್ದಾರಿ ಮತ್ತು ಸ್ಥಳೀಯ ಪಂಚಾಯತ್ ಆಡಳಿತದ ನಿಕ್ರಿಯತೆ ಇದಕೆಲ್ಲ ಕಾರಣ.ಜನರ ಸಮಸ್ಯೆಗೆ ಪರಿಹಾರ ಕಾಣದ ಶಾಸಕರು ವಿದೇಶ ಸುತ್ತುವುದು ಬಿಟ್ಟು ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಬಿಜೆಪಿ ಮಂಜೇಶ್ವರ…

Read More

ಆಟೋ ರಿಕ್ಷಾದಲ್ಲಿ ಸಾಗಿಸಲಾಗುತಿದ್ದ 22.5 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣ : ಆರೋಪಿಗಳಿಗೆ 10 ವರ್ಷ ಕಠಿಣ ಸಜೆ ಹಾಗೂ ದಂಡ

ಕಾಸರಗೋಡು : ಆಟೋ ರಿಕ್ಷಾದಲ್ಲಿ ಸಾಗಿಸಲಾಗುತಿದ್ದ 22.5 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಗಳಿಗೆ ಹತ್ತು ವರ್ಷ ಕಠಿಣ ಸಜೆ ಹಾಗೂ ಒಂದು ಲಕ್ಷ ರೂ. ನಂತೆ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಕಾಸರಗೋಡು ಅಡಿಷನಲ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ (ಧ್ವಿ) ನ್ಯಾಯಾಧೀಶೆ ಕೆ ಪ್ರಿಯಾ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ. ನೆಲ್ಲಿಕಟ್ಟೆ ಹಮೂಸ್ ನಗರದ ಅಬ್ದುಲ್ ರಹ್ಮಾನ್ (55), ಪೆರುಂಬಳ ಕಡವ್ ನಿವಾಸಿ ಸಿ ಎ ಆಹ್ಮದ್ ಕಬೀರ್ (43) ಹಾಗೂ ಆದೂರು ನಿವಾಸಿ ಕೆ…

Read More

ಪಿಣರಾಯಿ ಸರಕಾರಕ್ಕೆ ವಿನಾಶ ಕಾಲೇ ವಿಪರೀತ ಬುದ್ಧಿ- ಕಾಂಗ್ರೆಸ್

ದೈವ ದೇವರುಗಳನ್ನು ಧಿಕ್ಕರಿಸಿ ರಾಜಕೀಯ ಮಾಡಿ ಹೊಟ್ಟೆ ಹೊರೆದುಕೊಳ್ಳುತ್ತಿದ್ದ ಪಿಣರಾಯಿ ನೇತೃತ್ವದ ಸಿಪಿಎಂ ಸರಕಾರ ತನ್ನ ಅಂಧಾ ದರ್ಬಾರ್ ದೆಸೆಯಿಂದ ಅಧಿಕಾರ ಕೈ ತಪ್ಪಿ ಹೋಗುತ್ತದೆ ಎಂಬ ಪರಿಸ್ಥಿತಿ ನಿರ್ಮಾಣವಾದಾಗ ದೈವ ದೇವರುಗಳ ಮೊರೆ ಹೋಗುವ ಮೂಲಕ ಆಸ್ತಿಕರ ಭಾವನೆಗಳಿಗೆ ಘಾಸಿಯುಂಟು ಮಾಡಿದೆ. ಅವಸರದ ಕಳ್ಳರಂತೆ ಕಂಡ ಕಂಡ ದೇವಸ್ಥಾನಗಳ ಹುಂಡಿಗೆ ಕೈ ಹಾಕುವುದು ಮಾತ್ರವಲ್ಲದೆ ಶಬರಿಮಲೆ ಕ್ಷೇತ್ರದ ಬಾಗಿಲು, ದಾರಂದ ಮತ್ತಿತರ ಸ್ವರ್ಣಲೇಪಿತ ಪೂಜನೀಯ ವಸ್ತುಗಳನ್ನು ಕದ್ದೊಯ್ಯುವ ನಿರ್ಲಜ್ಜ ಹಗಲು ದರೋಡೆಗೆ ಇಳಿದಿದೆ. ಈ ಆಟವು…

Read More

ಕೋಟೆ ಮನೆ ವೆಂಕಟರಮಣ ಆಚಾರ್ಯರವರ ಶತ ಸಂಭ್ರಮ

ಮಂಜೇಶ್ವರ : ಮಂಜೇಶ್ವರ ಹೊಸಂಗಡಿಯ ಹೆಸರಾಂತ ಕಾಸ್ಟ ಶಿಲ್ಪಿ ಕೋಟೆ ಮನೆ ವೆಂಕಟರಮಣ ಆಚಾರ್ಯರವರ 100 ನೇ ಹುಟ್ಟುಹಬ್ಬವನ್ನು ಇತ್ತೀಚಿಗೆ ಸಂಭ್ರಮದಿಂದ ಆಚರಿಸಲಾಯಿತು. ಹಲವು ವರ್ಷಗಳಿಂದ ಶ್ರೀ ಮತ್ ಅನಂತೇಶ್ವರ ದೇವಸ್ಥಾನದ ಬಳಿಯಿರುವ ಕಟ್ಟಡದಲ್ಲಿ ಮರದ ಕೆಲಸವನ್ನು ನಿರ್ವಹಿಸುತ್ತಿರುವ ಇವರು 5 ನೇ ತರಗತಿ ಪೂರೈಸಿದ ಬಳಿಕ ತಂದೆಯ ಕೆಲಸವನ್ನು ಮುಂದುವರಿಸಿದ್ದರು. 1951 ರಲ್ಲಿ ಶಾರದಾ ರವರನ್ನು ವಿವಾಹವಾಗಿ ಇಬ್ಬರು ಗಂಡು ಮಕ್ಕಳು ಮತ್ತು ಐವರು ಹೆಣ್ಣುಮಕ್ಕಳಿರುವ ಸಂತೃಪ್ತ ಕುಟುಂಬ ಇವರದ್ದುಹಿರಿಯ ಪುತ್ರ ಹರಿಶ್ಚಂದ್ರ ಆಚಾರ್ಯ ಹೆಸರಾಂತ…

Read More

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು (ಭಿತ್ತಿ ಪತ್ರ) ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು (ಭಿತ್ತಿ ಪತ್ರ) ಶ್ರೀ ಎಡನೀರು ಮಠದ…

Read More

ಪುನರ್‌ ಡಾಮಾರೀಕರಣ ಕಾಮಗಾರಿ ಪೂರ್ಣಗೊಂಡ ಒಂದೇ ವರ್ಷದಲ್ಲೇ ಸಂಪೂರ್ಣ ಹದಗೆಟ್ಟ ಕೆದಂಬಾಡಿ ರಸ್ತೆ .

ಮಂಜೇಶ್ವರ : ಅದೆಷ್ಟೋ ನಿರೀಕ್ಷೆಗಳಿಂದ ಕಾಮಗಾರಿ ಪೂರ್ಣಗೊಂಡಿದ್ದ ಮಂಜೇಶ್ವರ ಗೋವಿಂದ ಪೈ – ಕೆದಂಬಾಡಿ ರಸ್ತೆಯ ಪುನರ್‌ಡಾಮಾರೀಕರಣ ಕಾಮಗಾರಿ ಪೂರ್ಣಗೊಂಡ ಒಂದೇ ವರ್ಷದಲ್ಲೇ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸುಮಾರು ₹5.24 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯ ನೇತೃತ್ವದಲ್ಲಿ ಈ ರಸ್ತೆ ಡಾಮಾರೀಕರಣಗೊಂಡಿದ್ದರೂ, ಇದೀಗ ರಸ್ತೆ ಎರಡೂ ಬದಿಗಳು ಸಂಪೂರ್ಣವಾಗಿ ಕುಸಿದು ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಸುಮಾರು 5.2 ಕಿ.ಮೀ ಉದ್ದದ ಈ ರಸ್ತೆ, ಕಾಮಗಾರಿ ಆರಂಭವಾಗುವ ವೇಳೆಯೇ ಅಗಲದಲ್ಲಿ ಅತಿಯಾದ ಕೊರತೆಯಿದ್ದ ಕಾರಣ ಸ್ಥಳೀಯರು ಭಾರೀ ವಿರೋಧ…

Read More

ಬಿಜೆಪಿಯಿಯಿಂದ ಜಿಲ್ಲಾಧಿಕಾರಿ ಕಚೇರಿಯತ್ತ ಪ್ರತಿಭಟನಾ ಮಾರ್ಚ್. ಶಬರಿಮಲೆಯಲ್ಲಿ ನಡೆದ ಲೂಟಿ : ಸಿ ಎಂ ಪಿಣರಾಯಿ ರಾಜೀನಾಮೆ ನೀಡಬೇಕು : ಎ.ಪಿ. ಅಬ್ದುಲ್ಲ ಕುಟ್ಟಿ

ಕಾಸರಗೋಡು: ಶಬರಿಮಲೆ ದೇವಸ್ಥಾನದಲ್ಲಿ ನಡೆದ ಅಕ್ರಮ ಹಾಗು ಚಿನ್ನಾಭರಣ ಲೂಟಿಯ ಬಗ್ಗೆ ಸಿಬಿಐ ಸಹಿತ ಕೇಂದ್ರೀಯ ಏಜೆನ್ಸಿಯಿಂದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಶಬರಿಮಲೆಯಲ್ಲಿನ ಚಿನ್ನದ ಆಭರಣಗಳನ್ನು ರಾಜ್ಯ ಸರಕಾರದ ತಿಳುವಳಿಕೆಯಲ್ಲೇ ಕಳ್ಳಸಾಗಾಣಿಕೆ ಮಾಡಲಾಗಿದೆ ಎಂದೂ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ ಪಿ ಅಬ್ದುಲ್ಲ ಕುಟ್ಟಿ ಒತ್ತಾಯಿಸಿದರು . ಶಬರಿಮಲೆ ಕ್ಷೇತ್ರದಲ್ಲಿ ನಡೆದ ಅಕ್ರಮ ಹಾಗು ಚಿನ್ನಾಭರಣ ಲೂಟ ವಿರೋಧಿಸಿ ಬಿಜೆಪಿ…

Read More

ಮೀನು ವ್ಯಾಪಾರಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆಗೈಯ್ಯಲೆತ್ನಿಸಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳು ಬಂಧನ.

ಮಂಜೇಶ್ವರ : ಬಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಬದಿಯಡ್ಕ ಸೀತಾಂಗೋಳಿ ಸಮೀಪ ಸ್ಥಳೀಯ ನಿವಾಸಿ ಹಾಗೂ ಮೀನು ವ್ಯಾಪಾರಿ ಅನಿಲ್‌ ಕುಮಾರ್ (40) ರ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆಗೈಯ್ಯಲೆತ್ನಿಸಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ನೇರವಾಗಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಬಳಿಕ ಪೊಲೀಸರು ಅವರನ್ನು ಬಂಧಿಸಿದ್ದಾರೆ.ಬದಿಯಡ್ಕ ಕುದ್ರೆಪ್ಪಾಡಿ ನಿವಾಸಿಗಳಾದ ಮಹೇಶ್, ರಜೀಶ್ ಅಲಿಯಾಸ್ ಮೋಣು, ಅಜಿತ್ ಕುಮಾರ್ ಹಾಗೂ ಹರಿಕೃಷ್ಣ ಬಂಧಿತ ಆರೋಪಿಗಳು. ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ಪೊಲೀಸರು…

Read More

ಕಡಂಬಾರಿನಲ್ಲಿ ಆತ್ಮಹತ್ಯೆ ಪ್ರಕರಣ.ಸ್ಕೂಟರಿನಲ್ಲಿ ಆಗಮಿಸಿದ ಇಬ್ಬರು ಮಹಿಳೆಯರು ಅಧ್ಯಾಪಿಕೆಗೆ ಹಲ್ಲೆ ಮಾಡಿದ ದೃಶ್ಯ ಸಿ ಸಿ ಟಿವಿಯಲ್ಲಿ ಸೆರೆ.

ಮಂಜೇಶ್ವರ : ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಂಬಾರಿನಲ್ಲಿರುವ ಯುವ ಅಧ್ಯಾಪಿಕೆ ಹಾಗೂ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆಯಲ್ಲಿ ನಿಗೂಢತೆ ಹೆಚ್ಚಾಗುತ್ತಿದೆ. ಸ್ಕೂಟರಿನಲ್ಲಿ ಆಗಮಿಸಿದ ಇಬ್ಬರು ಮಹಿಳೆಯರು ಅಧ್ಯಾಪಿಕೆಯನ್ನು ದೂಡಿ ಹಲ್ಲೆಗೈಯುತ್ತಿರುವ ಸಿ ಸಿ ಟಿವಿ ದೃಶ್ಯ ಬೆಳಕಿಗೆ ಬಂದಿರುವುದು ನಿಗೂಢತೆಯನ್ನು ಹೆಚ್ಚಿಸಿದೆ. ಕಡಂಬಾರಿನ ಅಜಿತ್ (35) ಹಾಗೂ ಪತ್ನಿ ಖಾಸಗಿ ಶಾಲೆಯೊಂದರ ಅಧ್ಯಾಪಿಕೆಯಾಗಿರುವ ಶ್ವೇತಾ (27) ಎಂಬಿವರು ಮಂಗಳವಾರದಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ಸ್ಪಂಧಿಸದೆ…

Read More
error: Content is protected !!