ಕೇಂದ್ರ ಸರಕಾರದ ವಕ್ಸ್ ತಿದ್ದುಪಡಿ ಕಾಯ್ದೆಯ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ
ಮಂಜೇಶ್ವರ : ಕೇಂದ್ರ ಸರಕಾರದ ವಕ್ಸ್ ತಿದ್ದುಪಡಿಕಾಯ್ದೆಯ ವಿರುದ್ಧ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಎಲ್ಲಾ ಮುಸ್ಲಿಂ ಸಂಘಟನೆಗಳನ್ನು ಒಟ್ಟುಗೂಡಿಸಿಕೊಂಡು ರಾಷ್ಟ್ರಾದ್ಯಂತ ಭಾರೀ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್ ತಿದ್ದುಪಡಿ ವಿಧೇಯಕ 25ನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ವಕ್ಫ್ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕುಂಜತ್ತೂರಿನಿಂದ ಹೊಸಂಗಡಿ ತನಕ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾ ಮೆರವಣಿಗೆಗೂ ಮುನ್ನ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಅಮಾನುಷ ಕೃತ್ಯವನ್ನು ಖಂಡಿಸಿ ಹುತಾತ್ಮರಾದವರ ಆತ್ಮಕ್ಕೆ ಶಾಂತಿಗಾಗಿ ಒಂದು ನಿಮಿಷದ ಮೌನ…