ವರ್ಕಾಡಿ ಕೊಡ್ಲಮೊಗರಿನಲ್ಲಿ ಭಾರೀ ಗಾಂಜಾ ಬೇಟೆ. 116 ಕೆ ಜಿ ಗಾಂಜಾ ಹಾಗೂ ಮಿನಿ ಲಾರಿ ವಶ.

ಮಂಜೇಶ್ವರ : ಮಂಜೇಶ್ವರ ಪೋಲೀಸ್ ಠಾಣಾ ವ್ಯಾಪ್ತಿಯ ವರ್ಕಾಡಿ ಕೊಡ್ಲಮೊಗರಿನಲ್ಲಿ ಭಾರೀ ಗಾಂಜಾ ಬೇಟೆ. 116 ಕೆ ಜಿ ಗಾಂಜಾ ಹಾಗೂ ಮಿನಿ ಲಾರಿಯೊಂದನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ. ಸುಳ್ಯಮೆ ಯಲ್ಲಿರುವ ಮನೆಯೊಂದರ ಶೆಡ್ ನಲ್ಲಿ ನಾಲ್ಕು ಗೋಣಿ ಚೀಲಗಳಲ್ಲಾಗಿ ತೆಗೆದಿರಿಸಲಾಗಿದ್ದ ರೀತಿಯಲ್ಲಿ ಗಾಂಜಾ ಪತ್ತೆ ಹಚ್ಚಲಾಗಿದೆ. ಗಾಂಜಾ ಸಾಗಾಟ ಮಾಡಲು ಉಪಯೋಗಿಸಿದ್ದೆಂದು ಶಂಕಿಸಲಾಗುತ್ತಿರುವ ಮಿನಿ ಲಾರಿ ಶೆಡ್ ನ ಸಮೀಪದಲ್ಲಿ ನಿಲುಗಡೆಯಾಗಿತ್ತು.ರಹಸ್ಯ ಮಾಹಿತಿಯಂತೆ ಎ ಎಸ್ಪಿ ನಂದ ಗೋಪಾಲ್ ರವರ ನೇತೃತ್ವದಲ್ಲಿ ಮಂಜೇಶ್ವರ ಪೊಲೀಸರು ಕಾರ್ಯಾಚರಣೆ…

Read More

ಓಟ್ ಚೋರ ಬಿಜೆಪಿಗೆ ವಿಗ್ರಹ ಚೋರ ಸಿಪಿಎಂ ಸಾಥ್- ಕಾಂಗ್ರೆಸ್ ಆರೋಪ.

ಮತದಾರ ಯಾದಿಯಲ್ಲಿ ಕ್ರಿಮಿನಲ್ ಸ್ವಭಾವದ ಹಸ್ತಕ್ಷೇಪ ನಡೆಸಿ ಅಧಿಕಾರಕ್ಕೇರಿದ ಬಿಜೆಪಿಗೆ ಕೇರಳದ ಶಬರಿಮಲೆ ಕ್ಷೇತ್ರದಲ್ಲಿ ಸ್ವರ್ಣ ಕವಾಟಗಳ ಕಳ್ಳತನದಲ್ಲಿ ಜವಾಬ್ದಾರಿಕೆಯಿರುವ ಸರಕಾರವು ಕೈ ಜೋಡಿಸಿರುವುದಾಗಿ ಅನುಮಾನಗಳಿವೆ. ಉಗಾಂಡಾದ ಯಾವುದೋ ಕುಗ್ರಾಮದಲ್ಲಿ ಎರಡು ದಿನ ನಳ್ಳಿ ನೀರು ಬರದಿದ್ದರೆ ಮೂರನೇ ದಿನ ದೆಹಲಿಯ ಉಗಾಂಡಾ ರಾಯಭಾರ ಕಚೇರಿಯ ಮುಂಭಾಗ ಹೋರಾಟ ನಡೆಸುವ ಸಿಪಿಎಂ ಈ ಓಟ್ ಕಳ್ಳತನದ ಬಗ್ಗೆ ಚಕಾರವೆತ್ತಿಲ್ಲ. ಅದೇ ರೀತಿ ಭಾರತದ ಅತ್ಯಂತ ಪವಿತ್ರ ಆರಾಧನಾ ಕೇಂದ್ರವಾಗಿರುವ ಶಬರಿಮಲೆ ಕ್ಷೇತ್ರದ ಬಾಗಿಲು, ಗೋಡೆಗಳ ಸ್ವರ್ಣ ಚೋರತನಕ್ಕೆ…

Read More

ಪ್ರತಿಭೆಗಳ ಅನಾವರಣಕ್ಕೆ ಸೃಜನೋತ್ಸವ ಸಹಕಾರಿ : ಕಮಲಾಕ್ಷ ಡಿ

ಕೊಡ್ಲಮೊಗರು : ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ವೇದಿಕೆಯನ್ನು ನೀಡುವುದರೊಂದಿಗೆ ಪ್ರತಿಭೆಗಳ ಅನಾವರಣಕ್ಕೆ ಸೃಜನೋತ್ಸವ ಸೂಕ್ತ ವೇದಿಕೆಯನ್ನು ನೀಡುತ್ತದೆ.ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಮಕ್ಕಳ ಬೆಳವಣಿಗೆಗೆ ಉತ್ತೇಜನ ನೀಡುವ ಗ್ರಂಥಾಲಯದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಕಾರ್ಯದರ್ಶಿ ಕಮಲಾಕ್ಷ ಡಿ ರವರು ತಿಳಿಸಿದರು. ಅವರು ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಹಕಾರದಲ್ಲಿ ವರ್ಕಾಡಿ ಪಂಚಾಯತ್ ನೇತೃತ್ವ ಸಮಿತಿಯ ಆಶ್ರಯದಲ್ಲಿ ಜರಗಿದ ವರ್ಕಾಡಿ ಪಂಚಾಯತ್ ಮಟ್ಟದ ಸೃಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಂಜೇಶ್ವರ…

Read More

ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಅನಿವಾಸಿ ಕನ್ನಡಿಗರ ಸಮ್ಮೇಳನ ಹೊರನಾಡ ಕನ್ನಡಿಗರ ಸಮ್ಮೇಳನದ ಗೌರವ ಪುರಸ್ಕಾರಕ್ಕೆ ಆಯ್ಕೆ .

ಮಂಜುನಾಥ ಎಜುಕೇಷನ್ ಟ್ರಸ್ಟ್ (ರಿ ),ಹೃದಯವಾಹಿನಿ ಕರ್ನಾಟಕ,ಮಂಗಳೂರು ಹಾಗೂ ಎಸ್. ಕೆ.ಮುನ್ಸಿಪಾಲ್ ಎಂಪ್ಲಾಯಿಸ್ ಯೂನಿಯನ್(ರಿ),ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ 2025 ಅಕ್ಟೋಬರ್ 9 ಗುರುವಾರದಂದು ನಡೆಯುವ ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದಲ್ಲಿ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ ಕಾಸರಗೋಡು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ…

Read More

ಪೆರ್ಲದ ವಾಹನ ಚಾಲಕ ಕುಂಬಳೆಯಲ್ಲಿ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ.

ಕುಂಬಳೆ : ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ರೈಲಿಗೆ ತಲೆ ಒಡ್ಡಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಮೃತ ವ್ಯಕ್ತಿ ಪೆರ್ಲದಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಟುಕುಕ್ಕೆ ಸಮೀಪ ಸೂರ್ಡೇಲು ನಿವಾಸಿ ದಿ.ಶೀನಪ್ಪ ರೈಗಳ ಪುತ್ರ ತಾರನಾಥ ರೈ (46) ಎಂದು ಗುರುತಿಸಲಾಗಿದೆ. ಈ ಹಿಂದೆ ಪೆರ್ಲದಲ್ಲಿ ಬಾಡಿಗೆ ವಾಹನ ಚಲಾಯಿಸುತ್ತಿದ್ದ ಇವರು ಇದೀಗ ಸ್ವಲ್ಪ ಸಮಯಗಳ ಹಿಂದೆ ತನ್ನ ವಾಹನಗಳನ್ನು ಮಾರಿದ್ದು ಬಳಿಕ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರೆಂದು ತಿಳಿದು ಬಂದಿದೆ….

Read More

ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಮಂಗಲ್ಪಾಡಿ ಮಂಜೇಶ್ವರ ನೇತ್ರತ್ವ ಸಮಿತಿ ‘ಬಾಲವೇದಿ ಸೃಜನೋತ್ಸವ’.

ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಮಂಗಲ್ಪಾಡಿ ಮಂಜೇಶ್ವರ ನೇತ್ರತ್ವ ಸಮಿತಿ ಬಾಲವೇದಿ ಸೃಜನೋತ್ಸವ ಆದಿತ್ಯವಾರ ಯುವಶಕ್ತಿ ಫ್ರೆಡ್ಸ್ ಸರ್ಕಲ್ ಲೈಬ್ರೆರಿ ಯಲ್ಲಿ ನಡೆಯಿತು. ಕೇರಳ ಸ್ಟೇಟ್ ಲೈಬ್ರೆರಿ ಕೌನ್ಸಿಲ್ ಸದಸ್ಯರಾದ ದಾಸಪ್ಪ ಶೆಟ್ಟಿ ಮಾಸ್ಟರ್ ಉದ್ಘಾಟನೆ ಮಾಡಿ ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಮಂಗಲ್ಪಾಡಿ ನೇತೃತ್ವ ಸಮಿತಿ ಕನ್ವೆನರ್ ರವೀಂದ್ರ ಶೆಟ್ಟಿ ಬೋಳ್ಳಾರು ವಹಿಸಿದರು. ಮುಖ್ಯ ಅತಿಥಿ ಯಾದ ಭಾಗ್ಯ ಕರುಣಾಕರ ಬರ್ಲಾಯಾ ಸೃಜನೋತ್ಸವದ ಬಗ್ಗೆ ಮಾಹಿತಿ ನೀಡಿದರು .ಈ ಕಾರ್ಯಕ್ರಮದಲ್ಲಿ ತಾಲೂಕು ಲೈಬ್ರರಿ ಕೌನ್ಸಿಲ್…

Read More

ಕಮ್ಯುನಿಸ್ಟ್ ಚಿನ್ನ ಕಳ್ಳರ ಸಂತೆ : ಬಿಜೆಪಿ

ಚಿನ್ನ ಕಳ್ಳ ಸಾಗಾಟ ಕಮ್ಯುನಿಸ್ಟ್ ಪಕ್ಷದ ಕುಲಕಸುಬು, ಆಡಳಿತ ಬಲ ಉಪಯೋಗಿಸಿ ಶಬರಿಮಲೆ ಸನ್ನಿದಿಯಲ್ಲಿಯೇ ಚಿನ್ನ ಕಳ್ಳ ಸಾಗಾಟ ಕ್ಕೆ ಸಾಥ್ ನೀಡಿರುವಾಗ ಪಿನರಾಯಿ ಸರಕಾರ ಹಿಂದೂಗಳ ಧಾರ್ಮಿಕ ಭಾವನೆ, ನಂಬಿಕೆಗೆ ಮಾಡಿರುವ ಅವಮಾನ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ಹೇಳಿದರು. ಬಿಜೆಪಿ ಮಂಜೇಶ್ವರ ಮಂಡಲ ಸಭೆ ವರ್ಕಾಡಿ ಕಚೇರಿ ಯಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು.ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಬಾರಿಯ ಸ್ಥಳೀಯಡಳಿತ…

Read More

ಮಂಜೇಶ್ವರ : ಆರ್ಥಿಕ ಸಂಕಷ್ಟವನ್ನು ಎದುರಿಸುತಿದ್ದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ.

ಮಂಜೇಶ್ವರ : ಆರ್ಥಿಕ ಸಂಕಷ್ಟವನ್ನು ಎದುರಿಸುತಿದ್ದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ ಗೆಯ್ದ ಘಟನೆ ಮಂಜೇಶ್ವರ ಕಡಂಬಾರಿನಲ್ಲಿ ಸಂಭವಿಸಿದೆ. ಕಡಂಬಾರು ಜಂಭದ ಪದವು ಅಯ್ಯಪ್ಪ ಮಂದಿರದ ಎದುರಿನಲ್ಲಿ ವಾಸವಾಗಿರುವ ಅಜಿತ್ ಹಾಗೂ ಈತನ ಪತ್ನಿ ಶ್ವೇತಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಳು ಮಜೀರ್ಪಳ್ಳ ಬೇಕರಿ ಸಮೀಪದ ಸೈ೦ಟ್ ಮೇರಿಸ್ ಶಾಲೆಯಲ್ಲಿ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಇವರಿಗೆ ಮೂರು ವರ್ಷ ಪ್ರಾಯದ ಮಗುವೊಂದು ಇದ್ದು ಫೈನಾನ್ಸ್ ನಿಂದ ಸಾಲ ಪಡೆದು ತೊಂದರೆ ಗೊಳಗಾಗಿದ್ದರೆಂದು ತಿಳಿದು ಬಂದಿದೆ . ಮಾಹಿತಿ ಅರಿತ…

Read More

ಮಂಜೇಶ್ವರ ತಾಲೂಕ್ ಲೈಬ್ರರಿ ಕೌನ್ಸಿಲ್ , ಮೀoಜ ಪಂಚಾಯತ್ ನೇತೃತ್ವ ಸಮಿತಿ ಮತ್ತು ಮೀಯಪದವು ಹಳೆ ವಿದ್ಯಾರ್ಥಿ ಸಂಘ ಗ್ರಂಥಾಲಯದ ಆಶ್ರಯದಲ್ಲಿ “ಬಾಲವೇದಿ ಸೃಜನೋತ್ಸವ 2025”

ಮಂಜೇಶ್ವರ ತಾಲೂಕ್ ಲೈಬ್ರರಿ ಕೌನ್ಸಿಲ್ ಹಾಗೂ ಮೀoಜ ಪಂಚಾಯತ್ ನೇತೃತ್ವ ಸಮಿತಿ ಮತ್ತು ಮೀಯಪದವು ಹಳೆ ವಿದ್ಯಾರ್ಥಿ ಸಂಘ ಗ್ರಂಥಾಲಯದ ಆಶ್ರಯದಲ್ಲಿ ನಡೆದ ಸೃಜನೋತ್ಸವ ವನ್ನು ಮೀoಜ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಂದರಿ ಆರ್ ಶೆಟ್ಟಿ ಉದ್ಘಾಟಿಸಿದರು. ರಾಮಚಂದ್ರ ಟಿ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಲೈಬ್ರರಿ ಕೌನ್ಸಿಲ್ ಸದಸ್ಯರಾದ ಶ್ರೀ ಅಹಮ್ಮದ್ ಹುಸೈನ್ ಮಾಸ್ತರ್, ನಿವೃತ್ತ ಅದ್ಯಾಪಕರಾದ ಶ್ರೀ ರಾಜರಾಮ ಮಾಸ್ಟರ್, ಮೀಯಪದವು ಶಾಲಾ ಶಿಕ್ಷಕಿ ಶ್ರೀಮತಿ ಸಾವಿತ್ರಿ, ಶಿಕ್ಷಕರಾದ ಶ್ರೀ ರಾಮಚಂದ್ರ ಮಾಸ್ಟರ್,…

Read More

ಶೋಭಾ ದಿನೇಶ್ ಉದ್ಯಾವರ ರಿಗೆ ಕಾಸರಗೋಡು ದಸರಾ ಕವಿ ಸಾಧಕ ಪ್ರಶಸ್ತಿ 2025.

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನ ನವರಾತ್ರಿ ವೇದಿಕೆಯಲ್ಲಿ, ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಪ್ರಯೋಜಕತ್ವದಲ್ಲಿ ನಡೆದ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025.ಸರಣಿ ಕಾರ್ಯಕ್ರಮ ದಲ್ಲಿ ನಡೆದ “ಕಾಸರಗೋಡು ದಸರಾ ಕವಿಗೋಷ್ಠಿ ಯಲ್ಲಿ ಮೇರು ಕವಿ ಸಂಘಟಕಿ, ಕನ್ನಡ ಭವನ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷೆಯಾದ ಶ್ರೀಮತಿ ಶೋಭಾ ದಿನೇಶ್ ಉದ್ಯಾವರ ಇವರಿಗೆ “ಕಾಸರಗೋಡು ದಸರಾ ಕವಿ ಸಾಧಕ ಪ್ರಶಸ್ತಿ ನೀಡಲಾಯಿತು. ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು…

Read More
error: Content is protected !!