ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ “ಕೇರಳೋತ್ಸವ – 2025”

ಮಂಜೇಶ್ವರ: – ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ ಏರ್ಪಡಿಸಲಾದ “ಕೇರಳೋತ್ಸವ – 2025” ಕಾರ್ಯಕ್ರಮವು ಭಾರೀ ಉತ್ಸಾಹ ಹಾಗೂ ಸಂಸ್ಕೃತಿಯ ಜಾತ್ರೆಯಂತೆ ವಿಜೃಂಭಣೆಯಿಂದ ನೆರವೇರಿತು. ಈ ಉತ್ಸವವು ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಸಾಂಘಿಕತೆಯ ಸಮನ್ವಯದಿಂದ ಗಮನ ಸೆಳೆದಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನಾ ಮೊಂತೇರೋ ಅವರು ಉದ್ಘಾಟಿಸಿದರು. ಅವರು ತಮ್ಮ ಭಾಷಣದಲ್ಲಿ ಕೇರಳೋತ್ಸವದ ಮಹತ್ವವನ್ನು ವಿವರಿಸಿ, “ಈ ಉತ್ಸವವು ನಮ್ಮ ನಾಡು-ನೂತನತೆಗೆ ಕಿರುಚಿತ್ರವಾಗಿದೆ. ಕ್ರೀಡೆ, ಕಲೆ ಮತ್ತು ಜನಸಾಮಾನ್ಯರ ಭಾಗವಹಿಸುವಿಕೆಯಿಂದ ಗ್ರಾಮೀಣ ಪ್ರದೇಶದ ಸಮಗ್ರ…

Read More

ಶಾಲಾ ಕಲೋತ್ಸವ ವೇದಿಕೆಯಲ್ಲಿ ಬೇರೆ ದೇಶದ ಧ್ವಜ ಹಾರಿಸದಂತೆ ತಡೆದ ಕಾರ್ಯ ಅಭಿನಂದನೀಯ – ಆದರ್ಶ ಬಿ ಎಂ

ಶಾಲಾ ಕಲೋತ್ಸವ ವೇದಿಕೆಯಲ್ಲಿ ಬೇರೆ ದೇಶದ ಧ್ವಜ ಹಾರಿಸದಂತೆ ತಡೆದ ಅಧ್ಯಾಪಕರ ಸಮಾಯೋಚಿತ ಕಾರ್ಯ ಅಭಿನಂದನೀಯ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಕೇರಳ ರಾಜ್ಯಪಾಲರು ಭಾರತ ಮಾತೆಗೆ ಪುಷ್ಪರ್ಚನೆ ಮಾಡಿದಕ್ಕೆ ಅವರ ವಿರುದ್ಧ ರಸ್ತೆ ರಸ್ತೆ ಗಳಲ್ಲಿ ಪ್ರತಿಭಟನೆ ಮಾಡಿದವರು ಯೂನಿವರ್ಸಿಟಿ ಯಲ್ಲಿ ಗಲಾಟೆ ಮಾಡಿದವರು ವಿದ್ಯಾಭ್ಯಾಸ ಬಂದ್ ನಡೆಸಿದವರು ಕಲೋತ್ಸವ ವೇದಿಕೆಯಲ್ಲಿ ಪ್ಯಾಲೇಸ್ತಿನ್ ಧ್ವಜ ಹಾರಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ಹಾಸ್ಯಸ್ಪದ.ಮಂಜೇಶ್ವರ ಶಾಸಕರು ಜನಸಂದನಿ ಇರುವಲ್ಲಿ ಬಂದು ಬೀದಿ…

Read More

ಕಾಸರಗೋಡು “ಸಿಂಧೂರ🔴 ಮಹಿಳಾ ಸಂಘ” ಉದ್ಘಾಟನೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯ ಬೆದ್ರಡ್ಕ ರಾಮ್ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನವಾಗಿ ಮಹಿಳಾ ಸಂಘ ರೂಪೀಕರಣಗೊಂಡಿತು. ಮೊಗ್ರಾಲ್ ಪುತ್ತೂರು ಪಂಚಾಯತಿನ 9 ನೇ ವಾರ್ಡು ಸದಸ್ಯೆ ಶ್ರೀಮತಿ ಪ್ರಮೀಳಾ ಮಜಲ್ ದೀಪ ಬೆಳಗಿಸಿ ರಾಮ್ ನಗರದ “ಸಿಂಧೂರ🔴 ಮಹಿಳಾ ಸಂಘ”ವನ್ನು ಉದ್ಘಾಟಿಸಿದರು. ರಾಮ್ ನಗರ ರಾಮ್ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷ ಶ್ರೀ ಸಂದೇಶ್, ಕಾರ್ಯದರ್ಶಿ ಶ್ರೀ ಶರತ್, ಕೋಶಾಧಿಕಾರಿ ಶ್ರೀ ಸತೀಶ್ (ಸಚ್ಚಿ) ಉಪಸ್ಥಿತರಿದ್ದರು. ಶ್ರೀ ರಂಜು ರಾಮ್ ನಗರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ನೂತನ ಸಂಘದ…

Read More

ಕಾಸರಗೋಡು ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಕಚೇರಿಗಳಲ್ಲಿ ಅಧಿಕಾರಿಗಳ ತೀವ್ರ ಕೊರತೆ . ಸಂಕಷ್ಟದಲ್ಲಿ ಗ್ರಾಮಸ್ಥರು.

ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಮಂಗಲ್ಪಾಡಿ , ವರ್ಕಾಡಿ ಗ್ರಾಮ ಪಂಚಾಯತು ಸೇರಿದಂತೆ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಕಚೇರಿಗಳಲ್ಲಿ ಅಧಿಕಾರಿಗಳ ತೀವ್ರ ಕೊರತೆಯು ಕಂಡುಬರುತ್ತಿದ್ದು, ಈ ಪರಿಣಾಮವಾಗಿ ವಿವಿಧ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡ ಸ್ಥಿತಿಯಲ್ಲಿ ಉಳಿದಿವೆ. ಗ್ರಾಮಸ್ಥರು ಈ ಸ್ಥಿತಿಯಿಂದ ಸಂಕಷ್ಟಕ್ಕೀಡಾಗುತಿದ್ದು, ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಕಾರ್ಯದರ್ಶಿ ಹುದ್ದೆ ಕಳೆದ ಕೆಲವು ತಿಂಗಳಿಂದ ಖಾಲಿ ಬಿದ್ದಿದೆ. ಈ ಕಾರಣದಿಂದ ಹಲವು ಯೋಜನೆಗಳು ವಿಳಂಬಗೊಳ್ಳುತ್ತಿದೆ. ಇದೇ ರೀತಿ ಮಂಗಲ್ಪಾಡಿ ಪಂಚಾಯತಿನಲ್ಲಿ ಸಹ ಯೋಜನೆಗಳ ಅನುಷ್ಠಾನಕ್ಕೆ…

Read More

ಕನಿಲ ಶ್ರೀ ಭಗವತೀ ಕ್ಷೇತ್ರಕ್ಕೆ ಭೇಟಿ ಕೊಟ್ಟ ಕೊಡುಗೈ ದಾನಿ ಶ್ರೀ ಸದಾಶಿವ ಶೆಟ್ಟಿ ಕನ್ಯಾನ.

ಮಂಜೇಶ್ವರ: ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ಜೀರ್ಣೋದ್ದಾರದ ಕೆಲಸ ಕಾರ್ಯಗಳು ಬರದಿಂದ ಸಾಗುತ್ತಾ ಇದ್ದು . ಇಂದು ಕೊಡುಗೈ ದಾನಿ ಬಡವರ ಬಂಧು ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಕೂಳೂರು ಅವರು ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ . ಬರದಿಂದ ಸಾಗುತ್ತಿರುವ ಜೀರ್ಣೋದ್ದಾರ ಕೆಲಸವನ್ನು ವೀಕ್ಷಿಸಿ, ರೂಪುರೇಷೆ ನೋಡಿ ಕೆಲವೊಂದು ಸಲಹೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಜೀರ್ಣೋದ್ದಾರ ಸಮಿತಿ ಮತ್ತು ಆಡಳಿತ ಸಮಿತಿಯಿಂದ ಸದಾಶಿವ ಶೆಟ್ಟಿಯವರಿಗೆ ಶಾಲು ಹೊದಿಸಿ ಫಲ ಪುಷ್ಪವನಿತ್ತು ಗೌರವಿಸಲಾಯಿತು.ಈ ಹಿಂದೆ…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಯಾ ಬಜಾರ್ ಬಸ್ ನಿಲ್ದಾಣದ ಹೆಸರಿನಲ್ಲಿ ಬದಲಾವಣೆ .ಪ್ರಯಾಣಿಕರಲ್ಲಿ ಗೊಂದಲ.

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಯಾ ಬಜಾರ್ ಬಸ್ ನಿಲ್ದಾಣದ ಹೆಸರಿನಲ್ಲಿ ಬದಲಾವಣೆ ಮಾಡಿರುವುದು ಪ್ರಯಾಣಿಕರಲ್ಲಿ ಗೊಂದಲವನ್ನು ಸೃಷ್ಟಿಸಿದೆ. ನಯಾ ಬಜಾರಿನ ಮಂಗಳೂರು ಕಡೆಗೆ ಸಂಚರಿಸುವ ರಸ್ತೆಯಲ್ಲಿರುವ ಬಸ್ ನಿಲ್ದಾಣಕ್ಕೆ ಮಂಗಲ್ಪಾಡಿ ಎಂಬ ಹೆಸರಿನಲ್ಲಿ ಫಲಕವನ್ನು ಸ್ಥಾಪಿಸಿರುವುದು ಪ್ರಯಾಣಿಕರ ಗೊಂದಲಕ್ಕೆ ಕಾರಣವಾಗಿದೆ. ನಯಾಬಜಾರಿಗೆ ಹೊರಗಿನಿಂದ ಆಗಮಿಸುವ ಪ್ರಯಾಣಿಕರೂ, ಹೊಸದಾಗಿ ಬರುವ ಬಸ್ ಚಾಲಕರೂ ಈ ಸ್ಥಳವನ್ನು ಅರ್ಥಮಾಡಿಕೊಳ್ಳದೇ ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಹತ್ತಿರದಲ್ಲಿರುವ ಕೈಕಂಬ ಬಸ್ ನಿಲ್ದಾಣಕ್ಕೆ ತಲುಪಿದಾಗ ಮಾತ್ರವೇ ಅರ್ಥವಾಗುತ್ತಿದೆ. ನಯಾ ಬಜಾರ್ ಬಸ್ ನಿಲ್ದಾಣವನ್ನು ದಾಟಿ ಹೋಗಿರುವುದು….

Read More

“ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ.

ಮಂಜೇಶ್ವರ : ಕಳೆದ ಸುಮಾರು 17 ವರ್ಷಗಳಿಂದ ವಿದ್ಯಾಭ್ಯಾಸ ಕ್ಷೇತ್ರದಲ್ಲಿ ವಿಶೇಷ ಗಮನ ಸೆಳೆಯಿತ್ತಿರುವ ಹೊಸಂಗಡಿ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು. ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್…

Read More

ಡಾ. ಕೆರೆಮನೆ ಮಹಾಬಲ ಹೆಗಡೆ ಸ್ಮಾರಕ ರಂಗ ಪ್ರತಿಷ್ಠಾನ(ರಿ)ದಿಂದ ಎಲ್. ಎಸ್. ಶಾಸ್ತ್ರಿ ಅವರಿಗೆ “ಮಹಾಬಲ ಪ್ರಶಸ್ತಿ”

ಪ್ರಸಿದ್ಧ ಯಕ್ಷಗಾನ ಕಲಾವಿದ ಡಾ. ಕೆರೆಮನೆ ಮಹಾಬಲ ಹೆಗಡೆಯವರ 16ನೆಯ ಸಂಸ್ಮರಣಾ ದಿನ ಮತ್ತು ಕೆರೆಮನೆ ರಾಮ ಹೆಗಡೆಯವರ 6 ನೆಯ ಸಂಸ್ಮರಣಾ ದಿನಗಳ ಅಂಗವಾಗಿ ಇದೇ ಒ.18 ರಂದು ರಂದು ಸಂಜೆ 4 ಗಂಟೆಗೆ ಹೊನ್ನಾವರ ತಾಲೂಕು ಗುಣವಂತೆಯ ಕೆರೆಮನೆ ಶಿವರಾಮ ಹೆಗಡೆ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಸಾಹಿತಿ, ರಂಗಚಿಂತಕ ಶ್ರೀ ಲಕ್ಷ್ಮೀನಾರಾಯಣ ಶಾಸ್ತ್ರಿ , ನಾಜಗಾರ ( ಬೆಳಗಾವಿ) ಇವರಿಗೆ ಈ ವರ್ಷದ ” ಮಹಾಬಲ ಪ್ರಶಸ್ತಿ ” ನೀಡಿ ಗೌರವಿಸಲಾಗುವುದು….

Read More

ಕನ್ನಡ ಭವನ ಪ್ರಕಾಶನದ “ಮರೆಯಲಾಗದವರು “9ನೇ ಕೃತಿ ಬಿಡುಗಡೆ.

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ನಡೆಯುತ್ತಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025.ವೇದಿಕೆಯಲ್ಲಿ ಆದರ್ಶ ಮಹಿಳೆ, ಮೇರು ಯಕ್ಷಗಾನ ಕಲಾವಿದೆ, ಉದ್ಯಮಿ, ಸಾಮಾಜಿಕ ಕಾರ್ಯಕರ್ತೆ ದಿ. ಶ್ರೀಮತಿ ಗಾಯತ್ರಿ ನಾಗೇಶ್ ಇವರ ಸಂಸ್ಮರಣೆ -ನುಡಿನಮನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮ ದಲ್ಲಿ ಗಾಯತ್ರಿ ನಾಗೇಶ್ ಇವರ ಬಗ್ಗೆ ಕಾಸರಗೋಡು ಕನ್ನಡ ಭವನ ಪ್ರಕಾಶನದ ಪ್ರಕಾಶಕಿ ಸಂಧ್ಯಾರಾಣಿ ಟೀಚರ್ ರಚಿಸಿದ “ಮರೆಯಲಾಗದವರು “ಎಂಬ ವ್ಯಕ್ತಿ ಚಿತ್ರಣ ಕೃತಿ ಬಿಡುಗಡೆ ಗೊಳಿಸಲಾಯಿತು. ರಾಮರಾಜ…

Read More

ಕ್ರೀಡೆಗಳು ಮನೋಸ್ಥೈರ್ಯ ಹಾಗೂ ಶಾರೀರಿಕ ದೃಢತೆಯನ್ನು ಹೆಚ್ಚಿಸುತ್ತದೆ : ಶ್ರೀನಿವಾಸ್ ರಾವ್

ಆನೆಕಲ್ಲು: ” ಕ್ರೀಡೆಗಳು ಮಾನಸಿಕ ಸ್ಥೈರ್ಯದೊಂದಿಗೆ ಶಾರೀರಿಕ ದೃಢತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ.ಆದ್ದರಿಂದ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಕ್ರೀಡಾ ತರಬೇತಿ ಉತ್ತಮ ರೀತಿಯಲ್ಲಿ ಸಿಗುವಂತಾಗಬೇಕು” ಎಂದು ಎ ಯು ಪಿ ಶಾಲೆ ಬಾಕ್ರಬೈಲ್ ನ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ರಾವ್ ತಿಳಿಸಿದರು.ಅವರು ಎ.ಯು.ಪಿ ಶಾಲೆ ಆನೆಕಲ್ಲಿನಲ್ಲಿ ಜರಗಿದ ಶಾಲಾ ಮಟ್ಟದ ಕ್ರೀಡೋತ್ಸವನ್ನು ಉದ್ಘಾಟಿಸಿ ಮಾತನಾಡಿದರು. ಹಳೆ ವಿದ್ಯಾರ್ಥಿ ಕುಮಾರಿ ಹರಿಣಾಕ್ಷಿ ಟೀಚರ್ ಮಾತನಾಡಿ ,”ಕ್ರೀಡೆಗಳು ಮಾನಸಿಕ ಒತ್ತಡವನ್ನು ನಿಯಂತ್ರಿಸುವುದರೊಂದಿಗೆ ಉತ್ತಮ ಆರೋಗ್ಯವನ್ನು ನೀಡುತ್ತದೆ.ಆದುದರಿಂದ ಶಾಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ…

Read More
error: Content is protected !!