ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ – ಕಾಸರಗೋಡು ಕನ್ನಡ ಗ್ರಾಮೋತ್ಸವದ ಪೋಸ್ಟರನ್ನು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರಿಂದ ಬಿಡುಗಡೆ.

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ). ಕನ್ನಡ ಗ್ರಾಮ ,ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮದಿನಾಚರಣೆ , ಮತ್ತು ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಕಾಸರಗೋಡು ಕನ್ನಡ ಗ್ರಾಮೋತ್ಸವ-2025 ಒಂದು ದಿನ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮ ದಲ್ಲಿ 2025 ನವೆಂಬರ್ 04 ಮಂಗಳವಾರದಂದು ಬೆಳಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರ ತನಕ ಕೇರಳ- ಕರ್ನಾಟಕ ಸಾಹಿತ್ಯ…

Read More

ಅಧಿವೇಶನದಲ್ಲಿ ಭಾಗವಹಿಸದೆ ಇರುವುದು ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ -ಬಿಜೆಪಿ.

ಮೀoಜ: ಮಂಜೇಶ್ವರ ಶಾಸಕರ ಕಪಟ ನಾಟಕ ನಿಲ್ಲಿಸಬೇಕು, ಶಾಸಕರು ಅಧಿವೇಶನದಲ್ಲಿ ಭಾಗವಹಿಸದೆ ಇದ್ದುದ್ದು ಬೇಜವಾಬ್ದಾರಿ ತನದ ಪರಮಾವಧಿ ಅಭಿವೃದ್ಧಿಯಲ್ಲಿ ಮೂಲಭೂತ ಸೌಕರ್ಯ ದಲ್ಲಿ, ಅತಂತ್ಯ ಹಿಂದುಳಿದ ಪ್ರದೇಶವದ ಮಂಜೇಶ್ವರ ವಿ ಸಭಾ ಕೇತ್ರ ದ ಅಭಿವೃದ್ಧಿ ಯ ರೂಪುರೇಷೆ ಸಿದ್ದಪಡಿಸಿ ಅಧಿವೇಶನದಲ್ಲಿ ಭಾಗವಹಿಸಿ ಯೋಜನೆ ಗಳನ್ನು ಅನುಷ್ಠಾನ ಮಾಡಬೇಕಾದ ಶಾಸಕರು ಅಧಿವೇಶನ ದಲ್ಲಿ ಭಾಗವಹಿಸದೆ ಇರುವುದು ಬೇಜವಾಬ್ದಾರಿ, ಮಂಜೇಶ್ವರ ದಲ್ಲಿ ಬಂದು ಕಪಟ ನಾಟಕ ಹೋರಾಟ ಮಾಡುವುದು ನಿಲ್ಲಿಸಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾ ಉಸ್ತುವಾರಿ ನ್ಯಾ ಸಜೀವನ್…

Read More

ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿ ಒಕ್ಕೂಟಗಳು ಲಾ-ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಏಕದಿನ ಸೂಚನಾ ಮುಷ್ಕರ ಹಾಗೂ ಸಹಿ ಸಂಗ್ರಹ ಅಭಿಯಾನ.

ಮಂಜೇಶ್ವರ – ತೌಡುಗೋಳಿ ರಸ್ತೆಯು ರಾಷ್ಟ್ರೀಯ ಹೆದ್ದಾರಿ 66ನ್ನು ಸಂಪರ್ಕಿಸುವ, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಲಾ-ಕಾಲೇಜು, ಹಾರ್ಬರ್ ಆಫೀಸ್ ಜನಸಾಮಾನ್ಯರು ಸೇರಿದಂತೆ ಅತೀ ಹೆಚ್ಚು ಜನ ಬಾಹುಲ್ಯವಿರುವ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಜಂಕ್ಷನ್‌ನಲ್ಲಿ ಅತ್ಯಗತ್ಯವಾಗಿರುವ, ಫೂಟ್ ಓವರ್ ಬ್ರಿಡ್ಜ್ ಸ್ಥಾಪನೆಗಾಗಿ ಕಳೆದ ಒಂದೂವರೆ ವರ್ಷಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆಯಾದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಹೋರಾಟ ಸಮಿತಿಯ ನೇತೃತ್ವದಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದ್ದು ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಸಂಬಂಧ ಪಟ್ಟ ಇಲಾಖೆಗೆ ನ್ಯಾಯಾಲಯ…

Read More

ಸರ್ಕಾರಿ ಲೋವರ್ ಪ್ರೈಮರಿ ಶಾಲೆ (GLPS) ಬಡಾಜೆಯ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ.

ಬಡಾಜೆ: ಸರ್ಕಾರಿ ಲೋವರ್ ಪ್ರೈಮರಿ ಶಾಲೆ (GLPS) ಬಡಾಜೆಯ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವನ್ನು ಶಾಲಾ ಮೈದಾನದಲ್ಲಿ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಗ್ಗೆ 10.30 ಗಂಟೆಗೆ ಅಬ್ದುಲ್ ರಹಿಮಾನ್ ಮಜ್ಮ ಧ್ವಜಾರೋಹಣ ಮಾಡುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಣಾಕ್ಷಿ ಟೀಚರ್ ಕ್ರೀಡೋತ್ಸವವನ್ನು ಉದ್ಘಾಟಿಸಿದರು. ವಾರ್ಡ್ ಸದಸ್ಯರಾದ ಯಾದವ್ ಬಡಾಜೆ, ಪಿಟಿಎ ಅಧ್ಯಕ್ಷ ಯಾಕೂಬ್, ನೂರನೇ ವರ್ಷದ ಸಮಿತಿಯ ಅಧ್ಯಕ್ಷ ರಝಾಕ್ ಕಿಟ್ಟಗುಂಡಿ, ಕಾರ್ಯದರ್ಶಿ ಮುಸ್ತಫಾ ಕೋಡಿ, ಯವರು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ…

Read More

ಕುಂಜತ್ತೂರಿನ ಜಿ.ವಿ.ಎಚ್.ಎಸ್.ಎಸ್ ಶಾಲೆಯಲ್ಲಿ ವಾರ್ಷಿಕ ಶಾಲಾ ಕ್ರೀಡೋತ್ಸವ.

ಮಂಜೇಶ್ವರ : ಕುಂಜತ್ತೂರಿನ ಜಿ.ವಿ.ಎಚ್.ಎಸ್.ಎಸ್ ಶಾಲೆಯಲ್ಲಿ ಶುಕ್ರವಾರದಂದು ವಿಜೃಂಭಣೆಯಿಂದ ವಾರ್ಷಿಕ ಶಾಲಾ ಕ್ರೀಡೋತ್ಸವ ನಡೆಯಿತು. ಶಾಲೆಯ ಆವರಣವೇ ಕ್ರಿಯಾಶೀಲತೆಯಿಂದ ತುಂಬಿ ತುಳುಕುತ್ತಿತ್ತು. ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನೀತಾ ಕೆ.ಬಿ ಅವರು ಧ್ವಜಾರೋಹಣದ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಸಮೂಹ ಗಾಯನದಿಂದ ಉದ್ವೇಗಕಾರಿ ವಾತಾವರಣ ನಿರ್ಮಾಣವಾಯಿತು. ಆತಿಥ್ಯ ವಹಿಸಿದ್ದ ಶ್ರೀನಿವಾಸ್ ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಹಾಗೂ ಎಸ್‌ಪಿಸಿ ಘಟಕದ ಶ್ರೀ ರಂಜಿತ್…

Read More

ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ನವೀಕರಣಕ್ಕಾಗಿ ಧರ್ಮಸ್ಥಳ ಕ್ಷೇತ್ರದಿಂದ ಆರ್ಥಿಕ ನೆರವು.

ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕೆಲಸಗಳು ಬರದಿಂದ ಸಾಗುತ್ತಿದ್ದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಡೆಯವರು ಆರ್ಥಿಕ ನೆರವನ್ನು ನೀಡಿದ್ದಾರೆ. ಇಂದು ಬೆಳಗ್ಗೆ ಕ್ಷೇತ್ರ ಪರಿಸರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳು ಹಾಗು ಜನಜಾಗ್ರತಿಯ ಪ್ರಮುಖರು ರೂ.5 ಲಕ್ಷ ಡಿ.ಡಿ ಯನ್ನು ಕ್ಷೇತ್ರ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಡಾ.ಜಯಪ್ರಕಾಶ್ ನಾರಾಯಣ್ ತೊಟ್ಟತೋಡಿ ಮಾತನಾಡಿ ನಿವೇದನೆಗಾಗಿ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಹೋದಾಗ ಬಹಳ…

Read More

ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025 ಸೆಪ್ಟೆಂಬರ್ 22 ಕ್ಕೆ ಚಾಲನೆ.

ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ “ಶ್ರೀ ದುರ್ಗಾಂಬ ವೇದಿಕೆ” ಯಲ್ಲಿ 2925 ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರ ತನಕ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ-2025 ಜರುಗಲಿದೆ. ಕನ್ನಡ ಭವನದ ಸಂಸ್ಥಾಪಕ ಶ್ರೀ ವಾಮನ್ ರಾವ್ ಬೇಕಲ್ ಸಾರಥ್ಯದಲ್ಲಿ ಕಳೆದ 12 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ದಸರಾ ಸಂಭ್ರಮದ ಈ ಬಾರಿಯ ಉದ್ಘಾಟನೆ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 11 ಗಂಟೆಗೆ ಪಾಂಗೋಡು ಕ್ಷೇತ್ರ ಸಭಾಂಗಣದಲ್ಲಿ ಧಾರ್ಮಿಕ, ಸಾಮಾಜಿಕ ಮುಂದಾಳು ಡಾl ಕೆ.ಎನ್….

Read More

ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲೇ ಗಮನ ಸೆಳೆಯುತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆ

ಮಂಜೇಶ್ವರ: ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲೇ ಗಮನ ಸೆಳೆಯುತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ಇತ್ತೀಚೆಗೆ “ಟ್ಯಾಲೆಂಟ್ ಹಂಟ್ ಡೇ” ಉತ್ಸವ ಸಂಭ್ರಮದಿಂದ ಆಚರಿಸಲಾಯಿತು. ಈ ವಿಶೇಷ ದಿನಾಚರಣೆಯ ಉದ್ದೇಶ, ವಿದ್ಯಾರ್ಥಿಗಳಲ್ಲಿರುವ ಅಡಗಿದ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಪ್ರೋತ್ಸಾಹಿಸುವುದಾಗಿತ್ತು. ಈ ಸಂಭ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ, ಹಾಡು, ಚಿತ್ರಕಲೆ, ನಾಟಕ, ಭಾಷಣ, ಕರಾಟೆ ಹಾಗೂ ವಿವಿಧ ಕಲಾತ್ಮಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮ ವೈಯಕ್ತಿಕ ಪ್ರತಿಭೆಯನ್ನು ಮೆರೆದರು. ಪ್ರತಿ ತರಗತಿಯಿಂದ ವಿದ್ಯಾರ್ಥಿಗಳು ಭಾಗಿ ಆಗಿದ್ದು,…

Read More

ಚಲಿಸುತ್ತಿದ್ದ ಟ್ಯಾಂಕರ್ ಲಾರಿಯಿಂದ ಸ್ಪಿರಿಟ್ ಸೋರಿಕೆ

ಮಂಜೇಶ್ವರ: ಚಲಿಸುತ್ತಿದ್ದ ಟ್ಯಾಂಕರ್ ಲಾರಿಯಿಂದ ಸ್ಪಿರಿಟ್ ಸೋರಿಕೆಯಾಗಿ ಆತಂಕದ ಪರಿಸ್ಥಿತಿ ಎದುರಾಗಿದೆ. ಮಂಜೇಶ್ವರ ಹೊಸಂಗಡಿ ವಾಮಂಜೂರು ಅಬಕಾರಿ ತಪಾಸಣಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಬಳಿಕ ಟ್ಯಾಂಕರ್ ಲಾರಿಯಿಂದ ಪಾತ್ರೆಗೆ ಸ್ಪಿರಿಟ್ ಹರಿಯುವ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಪ್ರದೇಶದಿಂದ ಕೋಝಿಕ್ಕೋಡ್ ಗೆ ತೆರಳುತಿದ್ದ ಟ್ಯಾಂಕರ್ ಲಾರಿಯಲ್ಲಿ ಈ ರೀತಿಯ ಸೋರಿಕೆ ಕಂಡು ಬಂದಿದೆ.ಸ್ಥಳಕ್ಕೆ ಅಗ್ನಿಶಾಮಕದಳ, ಪೊಲೀಸರು ಆಗಮಿಸಿ ಸುರಕ್ಷತೆಯಲ್ಲಿ ಬೇರೊಂದು ಟ್ಯಾಂಕರಿಗೆ ಸ್ಪಿರಿಟ್ ವರ್ಗಾಯಿಸಿದ್ದಾರೆ.

Read More

ವರ್ಕಾಡಿ ಕಜೆಪದವಿನಲ್ಲಿ ಭೂಮಿ ಬಿರುಕು ಉಂಟಾದ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ

ಮಂಜೇಶ್ವರ: ವರ್ಕಾಡಿ ಗ್ರಾಮಪಂಚಾಯತ್ತಿನ ಕೆಜೆಪದವಿಯಲ್ಲಿ ಭಯಾನಕವಾಗಿ ಉಂಟಾಗುತ್ತಿರುವ ಭೂಮಿ ಬಿರುಕುಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ವಿಶೇಷ ತಂಡ ಸ್ಥಳಕ್ಕೆ ಭೇಟಿ ನೀಡಿತು. 2019ರಿಂದ ಆರಂಭವಾದ ಈ ಸಮಸ್ಯೆ, ಕಳೆದ ವರ್ಷ (2024) ಅತ್ಯಂತ ಗಂಭೀರ ಸ್ವರೂಪವನ್ನು ಪಡೆದಿದ್ದು, ಈ ವರ್ಷ ಭೂಭಾಗವು ಹೆಚ್ಚು ತಳಮಟ್ಟಕ್ಕೆ ಇಳಿಯುತ್ತಿದ್ದಂತೆ, ಆ ಪ್ರದೇಶದ ಮೂವರು ಕುಟುಂಬಗಳನ್ನು ತುರ್ತು ಅವಸ್ಥೆಯಲ್ಲಿ ಸ್ಥಳಾಂತರಿಸಬೇಕಾದ ಪರಿಸ್ಥಿತಿ ಉಂಟಾಯಿತು. ಭೂಮಿ ಬಿರುಕುಗಳಿಂದಾಗಿ ಕೃಷಿಭೂಮಿಗಳು ನಾಶವಾಗಿದ್ದು, ಸ್ಥಳೀಯರ ಪ್ರಮುಖ ಆರ್ಥಿಕ ಆಧಾರವಾದ ಕೃಷಿಯೇ ದುರ್ಬಲಗೊಂಡಿದೆ. ಪ್ರದೇಶದಲ್ಲಿನ ಮನೆಗಳು ಕೂಡ…

Read More
error: Content is protected !!