ಹಟ್ಟಿಯಿಂದ ದನವನ್ನು ಕದ್ದು ದನದ ಮಾಲಕನ ತೋಟದಲ್ಲೇ ಅದನ್ನು ಕೊಂದ ಕಟುಕರನ್ನು ಬಂಧಿಸಿದ ಪೊಲೀಸರು

ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇರ್ಷಾದ್ (34), ಮಹಮ್ಮದ್ ಮನ್ಸೂರ್ (48), ಅಬ್ದುಲ್ ಅಝೀಮ್ (18) ಎಂದು ಗುರುತಿಸಲಾಗಿದೆ. ಅವರು ಸೆ.4ರಂದು ನಸುಕಿನ ವೇಳೆ ಪೆರ್ನೆಯ ಕಡಂಬು ನಿವಾಸಿ ದೇಜಪ್ಪ ಮೂಲ್ಯರ ಹಟ್ಟಿಯಿಂದ ದನವನ್ನು ಕದ್ದು, ದೇಜಪ್ಪ ಮೂಲ್ಯರ ಜಾಗದಲ್ಲೇ ಅದನ್ನು ಕೊಂದು ಅದರ ಹೊಟ್ಟೆಯೊಳಗಿನ ಕರುಳು ಸೇರಿದಂತೆ…

Read More

ರಸ್ತೆ ದಾಟುತ್ತಿರುವ ಮಧ್ಯೆ ಗೃಹಿಣಿಗೆ ಕಾರು ಡಿಕ್ಕಿ ಹೊಡೆದು ದಾರುಣ ಅಂತ್ಯ

ಕಾಸರಗೋಡು : ಅಡ್ಕತ್ತಬೈಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮನೆ ಗೃಹಿಣಿಯೊಬ್ಬರು ರಸ್ತೆ ದಾಟುತ್ತಿರುವ ಮಧ್ಯೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗೃಹಿಣಿಯೊಬ್ಬರು ಸಾವನ್ನಪ್ಪಿದ್ದಾರೆ. ಅಡ್ಕತ್ತ ಬೈಲ್ ಕಲ್ಲುವಳಪ್ಪಿಲ್ ನಿವಾಸಿ ಯೂಸುಫ್ ಎಂಬವರ ಧರ್ಮ ಪತ್ನಿ ನಸಿಯಾ (51) ಸಾವನ್ನಪ್ಪಿದ ದುರ್ದೈವಿ.ಬಾನುವಾರ ಸಂಜೆ 5.25 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ನಸಿಯಾ ರಸ್ತೆ ದಾಟುತ್ತಿರುವ ಮಧ್ಯೆ ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ಡಿಕ್ಕಿ ಹೊಡೆದು ಮೇಲಕ್ಕೆಸೆದಿದೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಈ…

Read More

ಓಣಂ ಹಬ್ಬದ ಸಂದರ್ಭದಲ್ಲಿ ಕೇರಳದಲ್ಲಿ ₹826.38 ದಾಖಲೆಯ ಮದ್ಯ ಮಾರಾಟ.

ತಿರುವನಂತಪುರ: ಕೇರಳ ಓಣಂ ಹಬ್ಬದ ಸಂದರ್ಭದಲ್ಲಿ ದಾಖಲೆಯ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳ ರಾಜ್ಯ ಪಾನೀಯ ನಿಗಮದ (ಕೆಎಸ್‌ಬಿಸಿ) ಔಟ್‌ಲೆಟ್‌ಗಳಲ್ಲಿ ₹826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಸಾರ್ವಕಾಲಿಕ ದಾಖಲೆಯಾಗಿದೆ ಎಂದು ವರದಿಯಾಗಿದೆ. 10 ದಿನಗಳ ಹಬ್ಬದ ಅವಧಿಯಲ್ಲಿ ( ಆಗಸ್ಟ್ 25 ರಿಂದ ಸೆಪ್ಟೆಂಬರ್ 4ರವರೆಗೆ) ₹826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಕಳೆದ ವರ್ಷ ಈ ಹಬ್ಬದ ಅವಧಿಯಲ್ಲಿ ₹776 ಕೋಟಿಯಷ್ಟು ಮದ್ಯ ಮಾರಾಟವಾಗಿತ್ತು. ಅಂದರೆ ಶೇ 6.38ರಷ್ಟು ಏರಿಕೆ…

Read More

25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶ್ರೀಮತಿ ಪ್ರೇಮಲತಾ ಟೀಚರ್ ಗೆ ಗೌರವ ಸನ್ಮಾನ

ಮಂಜೇಶ್ವರ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಿ.ಎಲ್. ಪಿ.ಯಸ್ ವಾಮಂಜೂರು ಶಾಲಾ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸೇರಿದಂತೆ ಶಾಲೆಯಲ್ಲಿ ಸುದೀರ್ಘ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶ್ರೀಮತಿ ಪ್ರೇಮಲತಾ ಟೀಚರ್ ಇವರನ್ನು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

Read More

ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿ ವತಿಯಿಂದ ಓಣಂ ಆಚರಣೆ.

ದೇಶದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ ನಮ್ಮ ಸಮಾಜದ ಮಹಿಳೆಯರು ಕೂಡ ಉನ್ನತಮಟ್ಟದಲ್ಲಿ ಗುರುತಿಸಿಕೊಳ್ಳಬೇಕು: ಭಾಗೀರಥಿ ರಾಮ ಚಕ್ಕಿಗುಡ್ಡೆ , ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿ ವತಿಯಿಂದ ಓಣಂ ಆಚರಣೆ : ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿಯ ಸಹಯೋಗದೊಂದಿಗೆ ವಾಮಂಜೂರು ಶಾಲೆಯಲ್ಲಿ ಓಣಂ ಆಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಶ್ರೀಮತಿ ಭಾಗೀರಥಿ ರಾಮ ಚಕ್ಕಿಗುಡ್ಡೆ ಉದ್ಘಾಟಿಸಿದರು. ಇಡೀ ನಮ್ಮ ದೇಶದಲ್ಲಿ ಮಹಿಳೆಯರು ಎಲ್ಲಾ…

Read More

ಬಾವಿಯಲ್ಲಿ ಮಹಿಳೆಯ ಶವ ಪತ್ತೆ.

ಮಂಜೇಶ್ವರ:ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರ ಸಮೀಪದ ಮೀಯಪದವು ಅಡ್ಕದಗುರಿ ಎಂಬಲ್ಲಿ ನಡೆದಿದೆ.ಅಡ್ಕದಗುರಿಯ ಐರಿನ್ ಡಿಸೋಜ (60) ಮೃತಪಟ್ಟವರು. ಬುಧವಾರ ರಾತ್ರಿ ಮಲಗಿದ್ದ ಐರಿನ್ ಬೆಳಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು. ಶೋಧ ನಡೆಸಿದಾಗ ಮೃತದೇಹ ಮನೆ ಅಂಗಳದ ಬಾವಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತಲಪಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು. ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು.

Read More

ಮಂಜೇಶ್ವರದೆಲ್ಲೆಡೆ ಸಂಭ್ರಮದ ಈದ್ ಮಿಲಾದ್.

ಮಂಜೇಶ್ವರ: ಪ್ರವಾದಿ ಹಜರತ್ ಮುಹಮ್ಮದ್ ನಬಿ (ಸ.ಅ.ವ) ಅವರ ಜನ್ಮ ದಿನಾಚರಣೆಯಾದ ಈದ್ ಮಿಲಾದ್ ಉಲ್ ನಬಿ ಪವಿತ್ರತೆಯೊಂದಿಗೆ ಹಾಗೂ ಭಕ್ತಿ ಭಾವದಿಂದ ಮಂಜೇಶ್ವರದಾದ್ಯಂತ ಆಚರಿಸಲಾಯಿತು. ಮಸೀದಿಗಳಲ್ಲಿ ವಿಶೇಷ ಮೌಲೂದ್ ಪಠಣ, ಧಾರ್ಮಿಕ ಉಪನ್ಯಾಸಗಳು ಮತ್ತು ಪ್ರಾರ್ಥನೆಗಳು ನೆರವೇರಿದವು. ಮಂಜೇಶ್ವರದ ಪ್ರಮುಖ ಬೀದಿಗಳು ಹಸಿರು ಧ್ವಜಗಳು, ಬೆಳಕಿನ ಅಲಂಕಾರ ಮತ್ತು ಧಾರ್ಮಿಕ ಸಂದೇಶಗಳಿಂದ ಕಂಗೊಳಿಸಿತು. ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಎಲ್ಲರೂ ಶೋಭಾಯಾತ್ರೆಗಳಲ್ಲಿ ಪಾಲ್ಗೊಂಡು ಪ್ರವಾದಿಯ ಜೀವನೋಪದೇಶಗಳನ್ನು ಸ್ಮರಿಸಿದರು. ಧಾರ್ಮಿಕ ಪಂಡಿತರು ಪ್ರವಾದಿಯ ಆದರ್ಶಗಳನ್ನು ಪಾಲಿಸುವ ಮಹತ್ವವನ್ನು…

Read More

ವರ್ಕಾಡಿ ಮಂಡಲ ಕಾಂಗ್ರೆಸ್ ಕಚೇರಿಯಲ್ಲಿ ಮತದಾರರ ಪಟ್ಟಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಂಚುವ ಕಾರ್ಯಕ್ರಮ.

ಮಂಜೇಶ್ವರ :ವರ್ಕಾಡಿ ಮಂಡಲ ಕಾಂಗ್ರೆಸ್ ಕಚೇರಿಯಲ್ಲಿ ಮತದಾರರ ಪಟ್ಟಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಂಚುವ ಕಾರ್ಯಕ್ರಮ ನಡೆಯಿತು. .ಕಾರ್ಯಕ್ರಮದಲ್ಲಿ ವರ್ಕಾಡಿ ಮಂಡಲ ಅಧ್ಯಕ್ಷ ಪುರುಷೋತ್ತಮ ಅರಿಬೈಲ್ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್ ಬೋರ್ಕಳ. U. D.F.ಅಧ್ಯಕ್ಷ ಮಜಲ್ ಮಹಮ್ಮದ್. ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಗಣೇಶ್ ಪಾವೂರು. ಕಾಂಗ್ರೆಸ್ ಕಾರ್ಯದರ್ಶಿವಸಂತ ರಾಜ್ ಸದಾಶಿವ ಆಜೀಸ್ ಕಲ್ಲೂರು ಮಹಮ್ಮದ್ ಕೆದುoಬಾಡಿ ಇನ್ನು ಹಲವು ನಾಯಕರು ಕಾರ್ಯಕರ್ತರು ಭಾಗವಹಿಸಿದರು

Read More

ಕೈಕಂಬದಲ್ಲಿ ರಾಶಿ ಬಿದ್ದಿರುವ ತ್ಯಾಜ್ಯ. ಪರಿಹಾರವನ್ನು ಕಲ್ಪಿಸದ ಅಧಿಕಾರಸ್ಥರ ವಿರುದ್ಧ ಪ್ರತಿಭಟನೆ.

ಮಂಜೇಶ್ವರ : ಕೈಕಂಬದಲ್ಲಿ ರಾಶಿ ಬಿದ್ದಿರುವ ತ್ಯಾಜ್ಯಗಳಿಗೆ ಯಾವುದೇ ಪರಿಹಾರವನ್ನು ಕಲ್ಪಿಸದ ಅಧಿಕಾರಸ್ಥರ ವಿರುದ್ಧ ಹಾಗೂ ಕೈಕಂಬದ ಅಪಾರ್ಟ್‌ಮೆಂಟೊಂದರ ಮಲಿನ ಜಲವನ್ನು ಸಾರ್ವಜನಿಕ ಸ್ಥಳಕ್ಕೆ ಹರಿಯಬಿಡುವುದರ ವಿರುದ್ಧ ಕೈಕಂಬ ಮಾಲಿನ್ಯಮುಕ್ತ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು. ಕೈಕಂಬ ಅಪಾರ್ಟ್‌ಮೆಂಟ್‌ನಿಂದ ಸಮೀಪ ನಿವಾಸಿಗಳ ಕುಡಿಯುವ ನೀರಿನ ಮೂಲ ಕೂಡಾ ಮಲಿನೀಕರಣಗೊಳ್ಳುತ್ತಿದ್ದು ಹಲವು ವರ್ಷಗಳಿಂದ ಕಾನೂನು ಹೋರಾಟ ನಡೆಸಲಾಗುತಿದ್ದರೂ ಇವರ ವಿರುದ್ಧ ನಿರಂತರ ದೂರು ನೀಡಲಾಗುತಿದ್ದರೂ ಇದ್ಯಾವುದನ್ನೂ ಲೆಕ್ಕಿಸದೆ ನಿರಂತರವಾಗಿ ಫ್ಲಾಟ್‌ನಿಂದ ಮಲಿನ ಜಲವನ್ನು ಸಾರ್ವಜನಿಕ ಸ್ಥಳಗಳಿಗೆ ಹರಿಯಬಿಡಲಾಗುತ್ತಿದ್ದರೂ ಈ…

Read More

ಹಯಾತುಲ್ ಇಸ್ಲಾಂ ಮದ್ರಸದಲ್ಲಿ ಮೀಲಾದ್ ಆಚರಣೆ.

ಪುಚ್ಚತ್ತವಯಲ್: ಪ್ರವಾದಿ ಹಜ್ರತ್ ಮುಹಮ್ಮದ್ ಮುಸ್ತಫಾ (ಸ.ಅ) ಅವರ 1500ನೇ ಜನ್ಮದಿನಾಚರಣೆ ಅಂಗವಾಗಿ ಹಯಾತುಲ್ ಇಸ್ಲಾಂ ಮದ್ರಸ, ಪುಚ್ಚತ್ತವಯಲ್‌ನಲ್ಲಿ ಭಕ್ತಿಪೂರ್ಣ ಮೀಲಾದ್ ರ‍್ಯಾಲಿ ಹಾಗೂ ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಮಾಅತ್ ಖತೀಬ್ ಉಮರುಲ್ ಫಾರೂಖ್ ಹನೀಫಿ ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ನಂತರ ಮದ್ರಸ ವಿದ್ಯಾರ್ಥಿಗಳು ವರ್ಣರಂಜಿತ ಘೋಷಯಾತ್ರೆಯಲ್ಲಿ ಭಾಗವಹಿಸಿದರು. ದಫ್, ಸ್ಕೌಟ್ ಮತ್ತು ಹೂವಿನಿಂದ ಅಲಂಕರಿಸಿದ ಫ್ಲವರ್‌ಶೋಗಳು ಮೀಲಾದ್ ರ‍್ಯಾಲಿಗೆ ಮೆರುಗು ನೀಡಿದವು. ಮೀಲಾದ್ ರ‍್ಯಾಲಿಯು ಮಚ್ಚಂಬಾಡಿ ಜುಮಾ ಮಸೀದಿಯಿಂದ ಕೋಡಿ…

Read More
error: Content is protected !!