ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು — ಓಣಂ ಹಬ್ಬದ ಸಂಭ್ರಮ

ಬಾಯಾರು: ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 04-09-2025 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಓಣಂ ಆಚರಣೆಯ ಮಹತ್ವದ ಮಾತಿನೊಂದಿಗೆ ಪ್ರಾರಂಭವಾಗಿ ಸೊಗಸಾದ ಓಣಂ ಪೂಕಳಂ ರಚಿಸಿ ಅಲಂಕಾರ ದ ವೇದಿಕೆಯಲ್ಲಿ ಈ ತಿಂಗಳ ಮಾಸಪತ್ರಿಕೆಯನ್ನು ಬಿಡುಗಡೆ ಗೊಳಿಸಿದ ಅತಿಥಿಗಳಾದ ಪೆಳತ್ತಡ್ಕ ಶ್ರೀ ರಾಮಕೃಷ್ಣ ಭಟ್ ,ವ್ಯವಸ್ಥಾಪಕರಾದ ಶ್ರೀ ಎಚ್ ಮಹಾಲಿಂಗ ಭಟ್ , ಟ್ರಸ್ಟ್ ಸದಸ್ಯರಾದ ಪಯ್ಯರಕೋಡಿ ಶ್ರೀ ಸದಾಶಿವ ಭಟ್ , ಶಾಲಾ ಪ್ರಾಂಶುಪಾಲರಾದ ಶ್ರೀ ವಾಮನನ್,ಮಾರ್ಗದರ್ಶಕರಾದ ಶ್ರೀ ಕೃಷ್ಣ ನಾಯಾಕ್…

Read More

ಮೀಂಜ ಪಂಚಾಯತ್ NREG ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಮಾರ್ಚ್ ಹಾಗೂ ಧರಣಿ

ಮಂಜೇಶ್ವರ : ಮೀಂಜ ಪಂಚಾಯತ್ NREG ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಮೀಯಪದವು ಅಂಚೆ ಕಚೇರಿಗೆ ಮಾರ್ಚ್ ಹಾಗೂ ಧರಣಿ ನಡೆಸಲಾಯಿತು. ಸಿಪಿಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೇರಳ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಕಾಮ್ರೇಡ್ ಕೆ.ಆರ್.ಜಯಾನಂದ ಉದ್ಘಾಟಿಸಿದರು. ಅಧ್ಯಕ್ಷತೆ NREG ಏರಿಯಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಎಲಿಯಾನ ಅಧ್ಯಕ್ಷತೆ ವಹಿಸಿದರು. ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ, ಲೋಕಲ್ ಕಾರ್ಯದರ್ಶಿ ಲೋಕೇಶ್ ಚಿನಾಲ, ಮಹಿಳಾ ಅಸೋಸಿಯೇಶನ್ ನ ನೇತಾರೆ ಶ್ರೀಮತಿ ಐರಿನ್ ಜೋಸ್ಫಿನ್…

Read More

ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ” ಯಲ್ಲಿ ಓಣಂ ಹಬ್ಬ ಆಚರಣೆ.

ಚಿಗುರುಪಾದೆ ಮೀಂಜ ಮಂಗಲ್ಪಾಡಿ ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ” ಯಲ್ಲಿ ಜರಗಿದ ಓಣಂ ಹಬ್ಬವನ್ನು, ಉದುಮ ಶಾಸಕ ಸಿ.ಎಚ್.ಕುಂಞಂಬು ರವರು ಪೂಕಳಂ ನ ದೀಪ ಬೆಳಗಿಸಿ ಉದ್ಘಾಟಿಸಿದರು. ಸೊಸೈಟಿ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ,ಉಪಾಧ್ಯಕ್ಷ ಶ್ರೀ ರವೀಂದ್ರ ಶೆಟ್ಟಿ ಬೊಳ್ಳಾರು, ನಿರ್ದೇಶಕರುಗಳಾದ ಶ್ರೀ ರವೀಂದ್ರ ನ್, ಲೋಕೇಶ್ ಚಿನಾಲ, ರಾಮಚಂದ್ರ ಟಿ. ಶ್ರೀಮತಿ ಚಂದ್ರಾವತಿ ಕು ಳೂರು, ಶ್ರೀ ವಿಶ್ವನಾಥ,ಶ್ರೀ ಮೊಹಮ್ಮದ್ ಖಾಲಿದ್ ಮೊದಲಾದವರು ಭಾಗವಹಿಸಿದರು. ಸೊಸೈಟಿ ಕಾರ್ಯದರ್ಶಿ ಶ್ರೀ ಉದಯ ಚಿನಾಲ ಸ್ವಾಗತಿಸಿ, ಸಿಬ್ಬಂದಿ…

Read More

ಕೇರಳ ಕನ್ನಡ ಮಾಧ್ಯಮ ಶಾಲಾ ಆವರಣದಲ್ಲಿ ಸಾಂಸ್ಕೃತಿಕ ಭವನ ಉದ್ಘಾಟಣೆ

2022-23ನೇ ಸಾಲಿನಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ರೂ.40.00ಲಕ್ಷಗಳ ಅನುದಾನದಿಂದ ಗಡಿ ಭಾಗದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಇವರ ಮೂಲಕ ಮಹಾಜನ ಸಂಸ್ಕೃತ ಕಾಲೇಜು, ಹೈಯರ್ ಸೆಕೆಂಡರಿ ಶಾಲೆ, ಪೆರಡಾಲ, ನೀರ್ಚಾಲು, ನೀರ್ಚಾಲು (ಅಂಚೆ), ಕುಂಬಳೆ (ದಾರಿ), ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಶತಮಾನ ಕಂಡ ಕನ್ನಡ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಾಂಸ್ಕೃತಿಕ ಭವನವನ್ನು ನಿನ್ನೆ ಉದ್ಘಾಟನೆ ಮಾಡಲಾಯಿತು..

Read More

ಕಾಸರಗೋಡು ಜಿಲ್ಲೆಯ ಕೆ.ಪಿ.ಎಸ್.ಎಂ.ಎ.ಯ ನೇತೃತ್ವದಲ್ಲಿ, ಕಾಞ್ಙಂಗಾಡು ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಸಾಮೂಹಿಕ ಧರಣಿ

ಕಾಸರಗೋಡು ಜಿಲ್ಲೆಯ ಕೆ.ಪಿ.ಎಸ್.ಎಂ.ಎ.ಯ ನೇತೃತ್ವದಲ್ಲಿ, ಕಾಞ್ಙಂಗಾಡು ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಸಾಮೂಹಿಕ ಧರಣಿಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಮಣಿ ಕೊಲ್ಲಂ ಉದ್ಘಾಟಿಸಿದರು. ಕೇರಳದ ಎಯ್ಡೆಡ್ ಶಾಲೆಗಳ ವ್ಯವಸ್ಥಾಪಕರು ಎದುರಿಸುತ್ತಿರುವ ತೊಂದರೆಗಳನ್ನು ಶೀಘ್ರದಲ್ಲೇ ಪರಿಹರಿಸಬೇಕು, ಇಲ್ಲವಾದರೆ ರಾಜ್ಯದಾದ್ಯಂತ ಪ್ರಬಲವಾದ ಪ್ರತಿಭಟನೆಗಳನ್ನು ಸಂಘಟಿಸಲಾಗುವುದೆಂದು ಪ್ರಧಾನ ಕಾರ್ಯದರ್ಶಿ ಹೇಳಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವಿ.ಕೆ. ರಾಜನ್ ನಾಯರ್ ಅಧ್ಯಕ್ಷತೆ ವಹಿಸಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜೀವನ್ ಮೇಲನಡಿ, ಪ್ರಸೀತ್ ಕುಮಾರ್, ಎಸ್.ಎನ್. ಶರ್ಮ, ಶ್ರೀಧರ ರಾವ್, ಜಯದೇವ…

Read More

ಕಟೀಲಿನ ಗೋಣಿಚೀಲ ಸಮಸ್ಯೆ – ಸುದ್ದಿಗೋಷ್ಠಿಯಲ್ಲಿ ಸ್ಪಷ್ಟತೆ

ಮಂಗಳೂರು: ಇತ್ತೀಚಿಗೆ ವೈರಲ್ ಆದ ಕಟೀಲು ಪರಿಸರದ ನ್ಯಾಯಬೆಲೆ ಅಂಗಡಿಯೊಂದರ ಗೋಣಿ ಚೀಲ ಸಮಸ್ಯೆಯ ಕುರಿತಾದ ಸ್ಪಷ್ಟತೆಯನ್ನು ನೀಡುವ ಸಲುವಾಗಿ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷರಾದ ಕೇಶವ ಮೂರ್ತಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು . ಸುದ್ದಿಗೋಷ್ಠಿಯಲ್ಲಿ ಕಟೀಲು ಪರಿಸರದ ನ್ಯಾಯಬೆಲೆ ಪಡಿತರ ವಿತರಕರಾದ ದೀಪಾ ನಾಯಕ್ ಮಾತನಾಡಿ , ಇತ್ತೀಚೆಗೆ ಮಂಗಳೂರಿನ ಕಟೀಲು ಪರಿಸರದ ನ್ಯಾಯಬೆಲೆ ಅಂಗಡಿಯೊಂದರಲ್ಲಿ ಗ್ರಾಹಕರಾದ ಸತೀಶ್ ಮತ್ತು ವಿಜಯ್ ಎಂಬಾತ ಚಿತ್ರೀಕರಿಸಿದ ವಿಡಿಯೋ…

Read More

ಎಸ್ ಪಿ ಸಿ ಓಣಂ ತ್ರಿದಿನ ಶಿಬಿರ ಸಂಪನ್ನ.

ಶ್ರೀ ದುರ್ಗಾ ಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕ ದಲ್ಲಿ ಎಸ್ ಪಿ ಸಿ ವಿದ್ಯಾರ್ಥಿಗಳ ಓಣಂ ತ್ರಿದಿನ ಶಿಬಿರದ ಔಪಚಾರಿಕ ಉದ್ಘಾಟನಾ ಸಮಾರಂಭ ಜರಗಿತು.ಪ್ರಸ್ತುತ ಸಭೆಯ ಅಧ್ಯಕ್ಷತೆಯನ್ನು ಪುತ್ತಿಗೆ ಪಂಚಾಯತು ಅಧ್ಯಕ್ಷ ಶ್ರೀ ಸುಬ್ಬಣ್ಣ ಆಳ್ವ ನೆರವೇರಿಸಿ ಮಾತನಾಡುತ್ತಾ ಯೂನಿಟ್ ನಲ್ಲಿರುವ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿ ಶಿಸ್ತಿನಿಂದ ಇತರರಿಗೆ ಮಾದರಿಯಾಗಬೇಕು ಎಂದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬದಿಯಡ್ಕ ಆರಕ್ಷಕ ಠಾಣೆಯ ಎಸ್. ಐ ಯಾಗಿರುವ ಶ್ರೀ ಅಖಿಲ್ ಟಿ ದೀಪ ಬೆಳಗಿಸಿ ಉದ್ಘಾಟಿಸಿ ಎಸ್…

Read More

ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ, ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿವಿಧ ಕ್ರೀಡಾ – ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ : ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಕೇರಳ ಗಡಿ ಪ್ರದೇಶದಲ್ಲಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿವಿಧ ಕ್ರೀಡಾ – ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲ ಅಬ್ದುಲ್ ಖಾದರ್ ಚಾಲನೆ ನೀಡಿದರು. ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವನೆ, ದೈಹಿಕ ಆರೋಗ್ಯ ಮತ್ತು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ದಿನಾಚರಣೆಯಲ್ಲಿ ಕ್ರೀಡಾ ಸ್ಪರ್ಧೆಗಳು, ವ್ಯಾಯಾಮ, ಓಟ, ವಾಲಿಬಾಲ್ ಮೊದಲಾದ ಹಲವು ಕ್ರೀಡಾ ಪಂದ್ಯಾವಳಿಗಳು ನಡೆಯಿತು. ವಿದ್ಯಾರ್ಥಿಗಳೊಂದಿಗೆ ಶಿಕ್ಷಕರೂ ಕೆಲವು ಮನರಂಜನಾ ಆಟಗಳಲ್ಲಿ ಪಾಲ್ಗೊಂಡು…

Read More

ಕೇರಳ ವ್ಯಾಪಾರಿ ಏಕೋಪನ ಸಮಿತಿ ,ಮಂಜೇಶ್ವರ ಘಟಕದ ವಾರ್ಷಿಕ ಸಭೆ

ಮಂಜೇಶ್ವರ : ಕೇರಳ ವ್ಯಾಪಾರಿ ಏಕೋಪನ ಸಮತಿ ಇದರ ಮಂಜೇಶ್ವರ ಘಟಕದ ವಾರ್ಷಿಕ ಸಭೆ ಮಂಜೇಶ್ವರ ವ್ಯಾಪಾರಿ ಭವಣದಲ್ಲಿ ಜರಗಿತು.ಸಂಘಟನೆಯ ಅಧ್ಯಕ್ಷ ಬಶೀರ್ ಕನಿಲರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಆಹ್ಮದ್ ಶೆರೀಫ್ ಉದ್ಘಾಟಿಸಿದರು. ಸಮಾರಂಭದಲ್ಲಿ ಮರಣ ಹೊಂದಿದ ವ್ಯಾಪಾರಿಗಳ ಕುಟುಂಬಗಳಿಗೆ 4ಲಕ್ಷ ರೂಪಾಯಿಯಂತೆ ಎರಡು ಕುಟುಂಬಗಳಿಗಿರುವ ಧನ ಸಹಾಯವನ್ನು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ವಿತರಣೆ ನಡೆಸಿದರು. ಜಿಲ್ಲಾ ವ್ಯಾಪಾರಿ ಭವನ ಕಟ್ಟಡ ಸಹಾಯಾರ್ಥ ಹಮ್ಮಿ ಕೊಳ್ಳಲಾದ ಲಕ್ಕಿ ಕೂಪನ್ ಡ್ರಾ…

Read More

ನಿರ್ಲಜ್ಜ ಓಟ್ ಚೋರತನದಿಂದ ಪ್ರಜಾಪ್ರಭುತ್ವ ಬುಡಮೇಲು-ಕಾಂಗ್ರೆಸ್.

ಶತಾಯಗತಾಯ ಅಧಿಕಾರ ಉಳಿಸಿಕೊಳ್ಳುವ ಧಾವಂತದಲ್ಲಿ ಬಿಜೆಪಿಯು ನಿರ್ಲಜ್ಜವಾಗಿ ಓಟ್ ಕಳ್ಳತನ ನಡೆಸಿದ್ದು ಜಗಜ್ಜಾಹೀರಾಗಿದೆ. ಒಂದೆಡೆ ಲಕ್ಷಾಂತರ ನಕಲಿ ಮತದಾರರ ಸೇರ್ಪಡೆಗೊಳಿಸಿ ತಮ್ಮ ಓಟ್ ಗಳ ಸಂಖ್ಯೆ ಹೆಚ್ಚಿಸುವುದು ಹಾಗೂ ಅರ್ಹ ಮತದಾರರನ್ನು ಅಂತಿಮ ಮತದಾರ ಪಟ್ಟಿಯಿಂದ ಹೊರತು ಪಡಿಸಿ ವಿಪಕ್ಷಗಳ ಬಲ ಕುಗ್ಗಿಸುವುದು ಮುಂತಾದ ವಾಮ ಮಾರ್ಗಗಳ ಮೂಲಕ ಆಡಳಿತವನ್ನು ಕದಿಯಲಾಗಿದೆ. ಇದಕ್ಕೆ ಚುನಾವಣಾ ಆಯೋಗವೂ ಕೈ ಜೋಡಿಸಿದ್ದು ವಿಪರ್ಯಾಸ. ಬಿಜೆಪಿಯಿಂದ ಮಾಸಿಕ ಚಂದಾ ಪಡೆಯುವ ಮಾನಗೇಡಿ ಮಡಿಲ ಮಾಧ್ಯಮಗಳು ಎಲ್ಲವನ್ನು ಕಂಡೂ ಕಾಣದಂತೆ ಜಾಣ ಕುರುಡುತನ…

Read More
error: Content is protected !!