ಮಂಜೇಶ್ವರ ರೈಲ್ವೆ ನಿಲ್ದಾಣ ಮತ್ತು ರಾಷ್ಟ್ರೀಯ ಹೆದ್ದಾರಿ: ಪ್ರಯಾಣಿಕರ ಸಂಕಷ್ಟಕ್ಕೆ ಪರಿಹಾರ ಸಿಗಲಿ

ಮಂಜೇಶ್ವರ: ಪ್ರಯಾಣಿಕರ ಸಂಕಷ್ಟ ಹಾಗೂ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಪರಿಹಾರ ಕಾಣದ ಮಂಜೇಶ್ವರ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶ. ಲಿಫ್ಟ್ ಸೌಲಭ್ಯವಿಲ್ಲದಿರುವುದು ಮತ್ತು ಪ್ಲಾಟ್‌ಫಾರ್ಮ್‌ಗಳಲ್ಲಿ ಮೇಲ್ಚಾವಣಿ ಇಲ್ಲದಿರುವುದರಿಂದ ವೃದ್ಧರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ನಿತ್ಯ ಪ್ರಯಾಣಿಕರು ಅನುಭವಿಸುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ​ ಬಹುತೇಕ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಿಫ್ಟ್‌ಗಳನ್ನು ಕಲ್ಪಿಸಲಾಗಿದ್ದರೂ, ಮಂಜೇಶ್ವರದಲ್ಲಿ ಈವರೆಗೆ ಈ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಲಗೇಜ್‌ಗಳೊಂದಿಗೆ ಬರುವವರು, ಅಶಕ್ತರು, ವೃದ್ಧರು ಮತ್ತು ಕೈಯಲ್ಲಿ ಹಸುಗೂಸುಗಳೊಂದಿಗೆ ಪ್ರಯಾಣಿಸುವ ತಾಯಂದಿರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ….

Read More

ಉದ್ಯಾವರ ಮಾಡದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆರಂಭ

ಮಂಜೇಶ್ವರ : ತೀಯಾ ಸಮಾಜ ಸಭಾ ಭವನ (ರಿ ) ಉದ್ಯಾವರ ಮಾಡ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 134ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ಇಂದು ತೀಯಾ ಸಮಾಜ ಸಭಾ ಭವನದಲ್ಲಿ ಆರಂಭಗೊಂಡಿತು. ಶಿಬಿರವನ್ನು ಉದ್ಯಾವರ ಮಾಡದ ಅಣ್ಣ ದೈವದ ಪಾತ್ರಿ ಶ್ರೀ ರಾಜ ಬೆಳ್ಚಪ್ಪಾಡರು ಮತ್ತು ತಮ್ಮ ದೈವದ ಪಾತ್ರಿ ತಿಮಿರಿ ಬೆಲ್ಚಾಪ್ಪಾಡರು ಒಟ್ಟಿಗೆ ಸೇರಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನೀಲಯ್ಯ ಪುಮಣ್ಣು ವಹಿಸಿದ್ದರು….

Read More

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ರೂಪಶ್ರೀ ವರ್ಕಾಡಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಅಧಿಕೃತವಾಗಿ ಘೋಷಿಸಲಾಗಿದ್ದು, ಈ ಬಾರಿಯೂ ದಕ್ಷಿಣ ಭಾರತದ ಸಿನಿಮಾಗಳು ಪ್ರಮುಖ ವಿಭಾಗಗಳಲ್ಲಿ ಮೇಲುಗೈ ಸಾಧಿಸಿವೆ. ಅದರಲ್ಲೂ ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣ ಸಿಕ್ಕಿದ್ದು, ರಕ್ಷಿತ್ ಶೆಟ್ಟಿ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ‘ಮಿಥ್ಯ’ ಸಿನಿಮಾ ಬರೋಬ್ಬರಿ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ವರ್ಷದ ಪ್ರಶಸ್ತಿ ಪಟ್ಟಿಯಲ್ಲಿ ‘ಮಿಥ್ಯ’ ಮೂರು ಪ್ರಮುಖ ವಿಭಾಗಗಳಲ್ಲಿ ಗೆಲುವು ಸಾಧಿಸಿದೆ. ಚಿತ್ರದಲ್ಲಿನ ಅದ್ಭುತ ಅಭಿನಯಕ್ಕಾಗಿ ಬಾಲನಟ ಆತಿಶ್ ಶೆಟ್ಟಿ ಅವರಿಗೆ ಅತ್ಯುತ್ತಮ ಬಾಲನಟ…

Read More

ಅವಗಣನೆಯ ಅಂಚಿನಲ್ಲಿ ಒಂದು ಬದುಕು: ನಾಗರಿಕ ಸೌಲಭ್ಯಗಳಿಂದ ವಂಚಿತವಾಗಿರುವ ಪಾವೂರು ಗೇರುಕಟ್ಟೆಯ ಜಿಮ್ಮಿ ಕೊನೇರಿಯ ಕುಟುಂಬದ ನೈಜ ಸ್ಥಿತಿಗತಿ

​ಮಂಜೇಶ್ವರ: ಕೇರಳ ರಾಜ್ಯವು ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಹೊತ್ತಿನಲ್ಲೇ, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪಾವೂರು ಗೇರುಕಟ್ಟೆಯ ಅರಣ್ಯ ಪ್ರದೇಶದಲ್ಲಿ ನೆಲೆಸಿರುವ ಜಿಮ್ಮಿ ಕೊನೇರಿಯ (37) ಎಂಬುವವರ ಕುಟುಂಬವು ಕನಿಷ್ಠ ನಾಗರಿಕ ಸೌಕರ್ಯಗಳಿಗೂ ಪರದಾಡುತ್ತಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಕಳೆದ ಒಂದು ದಶಕದಿಂದ ಈ ಕುಟುಂಬವು ಕಾಡಿನೊಳಗಿನ ಒಂದು ಮುರುಕು ಗುಡಿಸಲಿನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದೆ. ಬಾಲ್ಯದಲ್ಲೇ ಹೆತ್ತವರನ್ನು ಕಳೆದುಕೊಂಡು ಅನಾಥವಾಗಿ ಬೆಳೆದ ಜಿಮ್ಮಿ, ಇಂದು ಪತ್ನಿ ಲೀಲಾವತಿ ಮತ್ತು ಆರು ವರ್ಷದ…

Read More

ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಮಂಜೇಶ್ವರ, ಜುಲೈ 20: ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮಹಾಸಭೆಯು ನಿನ್ನೆ ಸಂಜೆ 4 ಗಂಟೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕಳೆದ ಸಾಲಿನ ವರದಿ ವಾಚನ, 45ನೇ ವರ್ಷದ ಲೆಕ್ಕಪತ್ರ ಮಂಡನೆ ಹಾಗೂ 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕಾಗಿ ನೂತನ ಆಡಳಿತ ಸಮಿತಿಯ ಆಯ್ಕೆ ಪ್ರಕ್ರಿಯೆ ನೆರವೇರಿತು. 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯಾದವ ಬಡಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಕಮಲಾಕ್ಷ ತೂಮಿನಾಡು ಹಾಗೂ ಕೋಶಾಧಿಕಾರಿಯಾಗಿ ಅಶೋಕ್…

Read More

ಮಾಜೀ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅನುಸ್ಮರಣೆ ಹಾಗೂ ರಕ್ತದಾನ ಶಿಬಿರ

ಮಂಜೇಶ್ವರ : ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿಯವರ ತೃತೀಯ ಸಂಸ್ಮರಣೆ ಹಾಗೂ ರಕ್ತದಾನ ಶಿಬಿರ ಮಜೀರ್ ಪಳ್ಳದಲ್ಲಿ ಜರುಗಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಜರುಗಿದ ಅನುಸ್ಮರಣಾ ಕಾರ್ಯಕ್ರಮವನ್ನು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸೋಮಪ್ಪ ಉದ್ಘಾಟಿಸಿದರು. ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಾಮೋದರ ಮಾಸ್ತರ್ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಪ್ರಾಸ್ತಾವಿಕ ಭಾಷಣಗೈದು ಸ್ವಾಗತಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಕಬೈಲು ಸತೀಶ ಅಡಪ ಮುಖ್ಯ ಅತಿಥಿಗಳಾಗಿ…

Read More

ಬಂಗ್ರಮಂಜೇಶ್ವರದಲ್ಲಿ ಭೂಕುಸಿತ, ಮನೆ-ಬಾವಿ ನಾಶ: ಕುಟುಂಬ ಸ್ಥಳಾಂತರ

​ಮಂಜೇಶ್ವರ: ಬಂಗ್ರಮಂಜೇಶ್ವರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದ್ದು, ಕನಿಲ ಭಂಡಾರ ನಿಲಯದ ಪುರುಷೋತ್ತಮ ಅವರ ಮನೆಗೆ ಭಾರಿ ಹಾನಿಯಾಗಿದೆ. ಶುಕ್ರವಾರ ಮಣ್ಣು ಕುಸಿದು ಬಾವಿ ಸಂಪೂರ್ಣವಾಗಿ ಮುಚ್ಚಿಹೋಗಿದ್ದರೆ, ಶನಿವಾರ ಮುಂಜಾನೆ ಮತ್ತೆ ಗುಡ್ಡ ಕುಸಿದು ಮನೆಯ ಅಡುಗೆಕೋಣೆಯ ಮೇಲೆ ಬಿದ್ದಿದೆ. ಪರಿಣಾಮ ಮನೆಯ ಭಾಗಶಃ ಹಾನಿಗೊಳಗಾಗಿದ್ದು, ಆತಂಕಗೊಂಡ ಎಂಟು ಮಂದಿಯ ಕುಟುಂಬವನ್ನು ಸುರಕ್ಷಿತವಾಗಿ ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ. ಸುತ್ತಮುತ್ತಲಿನ ಮನೆಗಳಿಗೂ ಗುಡ್ಡ ಕುಸಿತದ ಭೀತಿ ಎದುರಾಗಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ. ಘಟನಾ ಸ್ಥಳಕ್ಕೆ ಪಂಚಾಯತ್ ಮತ್ತು…

Read More

ಮನೆಯಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ!

ಉಪ್ಪಳ : ಜೋಡುಕಲ್ಲುವಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಗುರುಪ್ರಸಾದ್ ಮತ್ತು ತುಳಸಿ ದಂಪತಿಗಳ ಒಂದೂವರೆ ವರ್ಷದ ಪುತ್ರ ರಿತುರಾಜ್ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ. ಶನಿವಾರ ಮಧ್ಯಾಹ್ನ ತಾಯಿ ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದಾಗ, ಅನಿರೀಕ್ಷಿತವಾಗಿ ಬಂದ ನಾಯಿ ಮಗುವನ್ನು ಕಚ್ಚಿ ಎಳೆದಾಡಿದೆ. ಮಗುವಿನ ಚೀರಾಟ ಕೇಳಿ ತಾಯಿ ಕೂಡಲೇ ಓಡಿಬಂದಾಗ ನಾಯಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಭಾಗದಲ್ಲಿ ಬೀದಿ…

Read More

ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಮಳಿಗೆಗೆ ನುಗ್ಗಿದ ಕಾರು

​ಮಂಜೇಶ್ವರ: ಇಲ್ಲಿಯ ಕಟ್ಟೆ ಬಜಾರ್ ತಿರುವಿನಲ್ಲಿ ಇಂದು ಅನಿರೀಕ್ಷಿತ ಅಪಘಾತವೊಂದು ಸಂಭವಿಸಿದೆ.ಹೊಸಂಗಡಿಯಿಂದ ಮಂಜೇಶ್ವರದತ್ತ ತೆರಳುತ್ತಿದ್ದ ಕಾರಿನ ಒಳಗೆ ಹಠಾತ್ತನೆ ಇಲಿಯೊಂದು ಕಾಣಿಸಿಕೊಂಡಿದ್ದೇ ಚಾಲಕನ ಗಾಬರಿಗೆ ಕಾರಣವಾಯಿತು. ಚಾಲಕನ ಕಾಲಿನ ಬಳಿ ಇಲಿ ಚಲಿಸುತ್ತಿದ್ದಂತೆಯೇ ಕಸಿವಿಸಿಗೊಂಡ ಚಾಲಕ ವಾಹನದ ಮೇಲಿನ ಹಿಡಿತ ಕಳೆದುಕೊಂಡರು. ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದು, ತದನಂತರ ಸಮೀಪವಿದ್ದ ಹಳೆಯ ಕಟ್ಟಡದ ಟೈಲರ್ ಅಂಗಡಿಯೊಳಗೆ ನುಗ್ಗಿತು. ಅದೃಷ್ಟವಶಾತ್, ಫೋನ್ ಮಾತನಾಡಲು ದ್ವಿಚಕ್ರ ವಾಹನದಿಂದ ಇಳಿದಿದ್ದ ಸವಾರ ಕ್ಷಣಾರ್ಧದಲ್ಲಿ…

Read More

ಭಾರೀ ಮಳೆಗೆ ಮಂಜೇಶ್ವರದಲ್ಲಿ ಗುಡ್ಡ ಕುಸಿತ; ಬಾವಿ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಳ

ಮಂಜೇಶ್ವರ: ನಿನ್ನೆ ಸುರಿದ ಭಾರೀ ಮಳೆಯ ಪರಿಣಾಮ ಮಂಜೇಶ್ವರದ ಪೊಯ್ಯೆ ಕಂಡ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ.ಗುಡ್ಡದಿಂದ ಜರಿದು ಬಂದ ಅಪಾರ ಪ್ರಮಾಣದ ಮಣ್ಣು ಪುರುಷೋತ್ತಮ ಎಂಬವರ ಮನೆಯ ಬಾವಿಯೊಳಗೆ ನುಗ್ಗಿ, ಬಾವಿ ಸಂಪೂರ್ಣ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಬಾವಿಗೆ ಭಾರೀ ಹಾನಿಯಾಗಿದ್ದು, ಬಳಕೆಗೆ ಅಸಾಧ್ಯವಾಗಿದೆ. ಗುಡ್ಡ ಕುಸಿತ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಮನೆ ಇದ್ದರೂ, ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

Read More
error: Content is protected !!