ಮಂಜೇಶ್ವರ ರೈಲ್ವೆ ನಿಲ್ದಾಣ ಮತ್ತು ರಾಷ್ಟ್ರೀಯ ಹೆದ್ದಾರಿ: ಪ್ರಯಾಣಿಕರ ಸಂಕಷ್ಟಕ್ಕೆ ಪರಿಹಾರ ಸಿಗಲಿ
ಮಂಜೇಶ್ವರ: ಪ್ರಯಾಣಿಕರ ಸಂಕಷ್ಟ ಹಾಗೂ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಪರಿಹಾರ ಕಾಣದ ಮಂಜೇಶ್ವರ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶ. ಲಿಫ್ಟ್ ಸೌಲಭ್ಯವಿಲ್ಲದಿರುವುದು ಮತ್ತು ಪ್ಲಾಟ್ಫಾರ್ಮ್ಗಳಲ್ಲಿ ಮೇಲ್ಚಾವಣಿ ಇಲ್ಲದಿರುವುದರಿಂದ ವೃದ್ಧರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ನಿತ್ಯ ಪ್ರಯಾಣಿಕರು ಅನುಭವಿಸುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ಬಹುತೇಕ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಿಫ್ಟ್ಗಳನ್ನು ಕಲ್ಪಿಸಲಾಗಿದ್ದರೂ, ಮಂಜೇಶ್ವರದಲ್ಲಿ ಈವರೆಗೆ ಈ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಲಗೇಜ್ಗಳೊಂದಿಗೆ ಬರುವವರು, ಅಶಕ್ತರು, ವೃದ್ಧರು ಮತ್ತು ಕೈಯಲ್ಲಿ ಹಸುಗೂಸುಗಳೊಂದಿಗೆ ಪ್ರಯಾಣಿಸುವ ತಾಯಂದಿರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ….
