ಕಾರು ಹಾಗೂ ಬೈಕ್ ಪರಸ್ಪರ ಡಿಕ್ಕಿ . ಇಬ್ಬರು ಹೊರ ರಾಜ್ಯ ಕಾರ್ಮಿಕರು ಗಾಯ.

ಮಂಜೇಶ್ವರ : ಕಾರು ಹಾಗೂ ಬೈಕ್ ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ಹೊರ ರಾಜ್ಯ ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಕಾಸರಗೋಡು ಕಡೆಗೆ ಬರುತ್ತಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಹೊಸಂಗಡಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಕಾರ್ಮಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

Read More

ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಕುಟುಂಬಶ್ರೀ ಸಿಡಿಎಸ್ ಸಂಯುಕ್ತ ಆಶ್ರಯದಲ್ಲಿ ‘ಉದ್ಯೋಗ ಮೇಳ’

ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಕುಟುಂಬಶ್ರೀ ಸಿಡಿಎಸ್ ಸಂಯುಕ್ತವಾಗಿ ವಿಜ್ಞಾನಕೇರಳ ಯೋಜನೆಯ ಭಾಗವಾಗಿ ಉದ್ಯೋಗ ಮೇಳ ಮಂಜೇಶ್ವರದಲ್ಲಿ ಆಯೋಜಿಸಲಾಯಿತು.ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೊಹಮ್ಮದ್ ಸಿದ್ಧಿಕ್ ಅವರು ಉದ್ಘಾಟನೆ ನೆರವೇರಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಮುಂತಾಜ್ ಸಮೀರ, ರಾಜೇಶ್ ಅವರು ಶುಭಾಶಯ ಸಂದೇಶಗಳನ್ನು ನೀಡಿ ಮಾತನಾಡಿದರು. ಅದೇ ರೀತಿ ವಾರ್ಡ್ ಸದಸ್ಯರಾದ ಲಕ್ಷ್ಮಣನ್, ವಿನಯ ಭಾಸ್ಕರ್, ಆದರ್ಶ್, ಮುಸ್ತಫಾ ಅವರು ಸಹ ಪಾಲ್ಗೊಂಡರು.ಸುಮಾರು 200 ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿದರು. 20 ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡ ಈ…

Read More

ಮಂಜೇಶ್ವರ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ – ವಿದ್ಯಾರ್ಥಿಗಳು ಪವಾಡಸದೃಶ ಪಾರು

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಭಾರೀ ಒಂದು ದುರಂತ ತಪ್ಪಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಶಾಲೆಯ ಎರಡನೇ ತರಗತಿಯ ಮೇಲ್ಛಾವಣಿ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಪಾಠಕ್ಕೆ ತಡವಾಗಿ ಬಂದ ವಿದ್ಯಾರ್ಥಿಗಳು ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆ ಬೆಳಿಗ್ಗೆ 8.45ರ ಸುಮಾರಿಗೆ ಸಂಭವಿಸಿದೆ. ಅಪಘಾತದ ಹೊತ್ತಿನಲ್ಲಿ ವಿದ್ಯಾರ್ಥಿಗಳು ತರಗತಿ ಕೊಠಡಿಗೆ ಇನ್ನೂ ತಲುಪಿರಲಿಲ್ಲ. ಒಂದು ವೇಳೆ ವಿದ್ಯಾರ್ಥಿಗಳು ಆಗಲೇ ತರಗತಿಯಲ್ಲಿ ಹಾಜರಿದ್ದರೆ, ಭಾರೀ ದುರಂತ ತಪ್ಪಿಸಿಕೊಳ್ಳಲಾಗುತ್ತಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಸಮಯದಲ್ಲಿ, ಶಾಲೆಯ…

Read More

ಕಾಸರಗೋಡು ದಸರಾ ಸಾಹಿತ್ಯ ವೈಭವ…..!

ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಾಂಸ್ಕೃತಿಕ ಘಟಕ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಇದರ ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025 ಕಾರ್ಯಕ್ರಮದ ಅಂಗವಾಗಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಕೀರ್ತನಾ ಪ್ರತಿಷ್ಠಾನ ಮುಜುಂಗಾವು ಇದರ ಆಶ್ರಯದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರ ಬಗ್ಗೆ ಗಾನಗಂಗೆ ಕೃತಿ ರಚಿಸಿದ…

Read More

ಕಲ್ಕೂರ ಪ್ರತಿಷ್ಠಾನದ ರೂವಾರಿ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ರೀಗೆ “ಕಾಸರಗೋಡು ದಸರಾ ಸಾಧಕ ಸನ್ಮಾನ

ಕನ್ನಡ ಭವನ ಕಾಸರಗೋಡು ಸಂಸ್ಥಾಪಕ ಡಾ. ವಾಮನ್ ರಾವ್ ಬೇಕಲ್ ಸಾರತ್ಯದ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ 2025. ವೇದಿಕೆಯಲ್ಲಿ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ರೂವಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಸುದೀರ್ಘ ಕಲಾವದಿಯ ಅಧ್ಯಕ್ಷ ರಾಗಿದ್ದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಇವರ ಜೀವಮಾನದ ಸರ್ವತೋಮುಖ ಕನ್ನಡ ಸೇವೆ, ಧಾರ್ಮಿಕ ಸೇವೆ, ಸಾಮಾಜಿಕ ಸೇವೆಯನ್ನು, ಸಾಧನೆಯನ್ನು ಪರಿಗಣಿಸಿ “ಕಾಸರಗೋಡು ದಸರಾ ಸಾಧಕ ಪ್ರಶಸ್ತಿ 2025.ನೀಡಿ ಗೌರವಿಸಲಾಯಿತು. ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನ -ಸಾಂಸ್ಕೃತಿಕ ಘಟಕ ಅಧ್ಯಕ್ಷ…

Read More

ರಾಷ್ಟ್ರವ್ಯಾಪಕವಾಗಿ ಆಯೋಜಿಸಲಾಗಿರುವ ಕೇಂದ್ರ ಸರಕಾರದ ಮತಕಳ್ಳತನದ ವಿರುದ್ಧ ಸಹಿ ಅಭಿಯಾನದ ಭಾಗವಾಗಿ ಮಂಜೇಶ್ವರ ಬ್ಲಾಕ್ ಮಟ್ಟದ ಅಭಿಯಾನ

ಮಂಜೇಶ್ವರ:ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ರಾಷ್ಟ್ರವ್ಯಾಪಕವಾಗಿ ಆಯೋಜಿಸಲಾಗಿರುವ ಕೇಂದ್ರ ಸರಕಾರದ ಮತಕಳ್ಳತನದ ವಿರುದ್ಧ ಸಹಿ ಅಭಿಯಾನದ ಭಾಗವಾಗಿ ಮಂಜೇಶ್ವರ ಬ್ಲಾಕ್ ಮಟ್ಟದ ಅಭಿಯಾನವನ್ನು ಡಿಸಿಸಿ ಅಧ್ಯಕ್ಷ ಪಿ.ಕೆ. ಫೈಸಲ್ ಉದ್ಘಾಟಿಸಿದರು. ಪ್ರಜಾಪ್ರಭುತ್ವದ ಆಡಿಸ್ತಂಬವಾದ ಮತವನ್ನು ಶುದ್ಧವಾಗಿ ಸಂರಕ್ಷಿಸಬೇಕು. ಹಣ, ಸುಳ್ಳು ಭರವಸೆಗಳು, ಬೆದರಿಕೆಗಳು ಮುಂತಾದವುಗಳ ಮೂಲಕ ಜನರ ಮತವನ್ನು ಕಸಿದುಕೊಳ್ಳುವ ಬಿಜೆಪಿ ಪ್ರಜಾಪ್ರಭುತ್ವವನ್ನೂ ಜನರ ಭವಿಷ್ಯವನ್ನೂ ಮಾರುತ್ತಿದೆ,” ಎಂದು ಪಿ ಕೆ ಫೈಸಲ್ ಉದ್ಘಾಟನಾ ಭಾಷಣದಲ್ಲಿ ಹೇಳಿದರು.ಬ್ಲಾಕ್ ಅಧ್ಯಕ್ಷ ಡಿ.ಎಂ.ಕೆ. ಮೊಹಮ್ಮದ್ ಅಧ್ಯಕ್ಷತೆ ವಹಿಸಿದರು. ಮಾಜಿ ಡಿಸಿಸಿ ಹಕೀಂ…

Read More

ಪಳ್ಳದ ಕೊಟ್ಯ ಶ್ರೀ ಧೂಮಾವತಿ “ದೀಪಾವಳಿ ನೆಮೋತ್ಸವ “ಆಮಂತ್ರಣ ಪತ್ರಿಕೆ ಬಿಡುಗಡೆ.

ಕಾಸರಗೋಡು : ಕಾಸರಗೋಡು ಕೋಟೆ ಬಾಗಿಲಿನಲ್ಲಿರುವ ಪಳ್ಳದಕೊಟ್ಯ ಶ್ರೀ ಧೂಮಾವತಿ ದೈವ ಕೋಲ ವರ್ಷಮ್ರತಿ, ಕಾಸರಗೋಡು ಕೋಟೆ ನಾಯಕರ ಮನೆತನದವರು, ಸಮಾಜದವರು, ಹಾಗೂ ಊರವರ ಸಹಕಾರದೊಂದಿಗೆ ದೀಪಾವಳಿ ದಿನದಂದು, ಪಳ್ಳದಕೊಟ್ಯ ತರವಾಡಿನಿಂದ ವೈಭವದಿಂದ ಬಂಡಾರ ಮೆರವಣಿಗೆ ಮೂಲಕ ಬಂದು ನಡೆಯುವುದು ಪ್ರಾಚೀನದಿಂದ ನಡೆದು ಬರುವುದು ಇತಿಹಾಸ. ಈ ಐತಿಹಾಸಿಕ ಪರಂಪರೆಯ ಶ್ರೀ ಪಳ್ಳದಕೊಟ್ಯ ಶ್ರೀ ಧೂಮಾವತಿ ದೈವಕೋಲದ ಆಮಂತ್ರಣ ಪತ್ರಿಕೆ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನ ದಲ್ಲಿ ನಡೆಯುತ್ತಿರುವ ಕಾಸರಗೋಡು ದಸರಾ ಸಂಭ್ರಮ ವೇದಿಕೆಯಲ್ಲಿ…

Read More

ಓಟ್ ಚೋರರ ಹಾರಾಟಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಶತಃಸ್ಸಿದ್ಧ- ಪಿ.ಕೆ.ಫೈಸಲ್

ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಚುನಾವಣೆಯಲ್ಲಿ ಬಿಜೆಪಿಯು ನಿರ್ಲಜ್ಜ ಅಕ್ರಮವೆಸಗುವ ಮೂಲಕ ಅನ್ಯಾಯವಾಗಿ ಅಧಿಕಾರ ಗಳಿಸಿಕೊಂಡಿದೆ. ವಿವಿಧೆಡೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ಸಹಸ್ರಾರು ಮತದಾರರನ್ನು ಅವರ ಅರಿವಿಗೇ ಬಾರದೆ ಯಾದಿಯಿಂದ ಹೊರತು ಪಡಿಸಿ ಅಷ್ಟೇ ಸಂಖ್ಯೆಯ ನಕಲಿ ಮತದಾರರನ್ನು ಕಳ್ಳತನದಿಂದ ಸೇರ್ಪಡೆಗೊಳಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲುಗೊಳಿಸಲಾಗಿದೆ. ಒಬ್ಬನಿಗೆ ಕಷ್ಟದಿಂದ ಇರಲು ಅಸಾಧ್ಯವಾದ ಕೊಠಡಿಗಳಲ್ಲಿ 80 ಕ್ಕಿಂತಲೂ ಹೆಚ್ಚಿನ ನಕಲಿ ಮತದಾರರನ್ನು ಸೇರ್ಪಡೆಗೊಳಿಸಲಾಗಿದೆ. ತಂದೆಯ ಹೆಸರು ಇರುವಲ್ಲಿ ಮನಸಿಗೆ ಕಂಡ ಹೆಸರುಗಳನ್ನು, ಅಕ್ಷರಮಾಲೆಯಲ್ಲಿರುವ ಸಕಲ ಅಕ್ಷರಗಳನ್ನು ಬರೆಯಲಾಗಿದೆ….

Read More

ನಾಲ್ಕನೇ ತರಗತಿಯ ವಿದ್ಯಾರ್ಥಿ ಶಾಲೆಯ ಕ್ರೀಡಾ ಸ್ಪರ್ಧೆಯ ಮಧ್ಯೆ ಕುಸಿದು ಬಿದ್ದು ಸಾವು.

ಮಂಜೇಶ್ವರ: ನಾಲ್ಕನೇ ತರಗತಿಯ ವಿದ್ಯಾರ್ಥಿ ಶಾಲೆಯ ಕ್ರೀಡಾ ಸ್ಪರ್ಧೆಯ ಮಧ್ಯೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.. ಮಂಗಲ್ಪಾಡಿ ಜಿಎಲ್‌ಪಿ ಶಾಲೆಯ ವಿದ್ಯಾರ್ಥಿ ಹಸನ್ ರಝಾ (10) ಸಾವನ್ನಪ್ಪಿದ ದುರ್ದೈವಿ . ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಶಾಲೆಯ ಕ್ರೀಡಾ ಸ್ಪರ್ಧೆ ನಡೆಯುವಾಗ ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾದರೂ ಜೀವವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉತ್ತರ ಪ್ರದೇಶದ ಮುರ್ಶಿದಾಬಾದ್ ಮೂಲದ ಇಲ್ಸಾಫಲಿ ಅವರ ಪುತ್ರನಾಗಿದ್ದಾರೆ .

Read More

ಮಂಜೇಶ್ವರ ಟ್ರಕ್ ಪಾರ್ಕಿಂಗ್ ಪ್ರದೇಶದಲ್ಲಿ ಗಾಂಜಾ ಸಸ್ಯ ಪತ್ತೆ ಹಚ್ಚಿದ ಕುಂಬಳೆ ಅಬಕಾರಿ ಇಲಾಖೆಯ ಅಧಿಕಾರಿಗಳು.

ಮಂಜೇಶ್ವರ : ಮಂಜೇಶ್ವರ ತಾಲೂಕು ವ್ಯಾಪ್ತಿಯ ಕಾಸರಗೋಡು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿರುವ ಟ್ರಕ್ ಪಾರ್ಕಿಂಗ್ ಪ್ರದೇಶದ ಸಮೀಪದಲ್ಲಿ 90 ಸೆಂಟಿಮೀಟರ್ ಎತ್ತರದಲ್ಲಿ ಬೆಳೆದ ಗಾಂಜಾ ಸಸ್ಯವನ್ನು ಕುಂಬಳ ಅಬಕಾರಿ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಬಕಾರಿ ಇಲಾಖೆಯ ಮಂಜೇಶ್ವರ ಶಾಖೆಯ ಇನ್ಸ್ಪೆಕ್ಟರ್ ಶ್ರಾವಣ್ ಕೆ.ವಿ ಹಾಗೂ ಅವರ ತಂಡ ಗಾಂಜಾ ಸಹಿತ ಪತ್ತೆಹಚ್ಚಿ, ಕಾನೂನು ಅನುಸಾರ ವಶಪಡಿಸಿಕೊಂಡು NDPS ಪ್ರಕರಣ ದಾಖಲಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಆರೋಪಿಗಳೆಂದೇ ಯಾರನ್ನೂ ಪ್ರಕರಣದಲ್ಲಿ ಸೇರಿಸಲು ಸಾಧ್ಯವಾಗಿಲ್ಲ….

Read More
error: Content is protected !!