ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ವತಿಯಿಂದ ಪ್ರಶಾಂತ್ ರೈ ಮೆಮೋರಿಯಲ್ ಕ್ರಿಕೆಟ್ ಪಂದ್ಯಾಟ

ಮಿಯಪದವು : ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ಕಾಸರಗೋಡು ಇದರ ನೇತೃತ್ವದಲ್ಲಿ ದಿವಂಗತ ಅಧ್ಯಾಪಕ ಪ್ರಶಾಂತ್ ರೈ ಅವರ ಸ್ಮರಣಾರ್ಥ ಇಂಡಿಪೆಂಡೆನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಮೀಯಪದವು ಶಾಲಾ ಮೈದಾನದಲ್ಲಿ ಜರಗಿತು. ಪಂದ್ಯಾಟವನ್ನು ಮೀಯಪದವು ಯು ಪಿ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ಉದ್ಘಾಟಿಸಿದರು. ಟಿ ಎಸ್ಸಿ ಯ ಅಧ್ಯಕ್ಷರಾದ ಸಂಜೀವ ಸಿ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರುಗಳಾದ ಉದಯ್ ಸಾರಂಗ್ ಮತ್ತು ಸದಾಶಿವ ಬಾಲಮಿತ್ರ,ಜತೆ ಕಾರ್ಯದರ್ಶಿ ರಘುವೀರ್ ಉಪಸ್ಥಿತರಿದ್ದರು. ಟಿ ಎಸ್ಸಿ ಕಾರ್ಯದರ್ಶಿ ಪ್ರಶಾಂತ್…

Read More

ಬೀದಿ ನಾಯಿಗಳ ಹಾವಳಿಯಿಂದ ತತ್ತರಿಸಿದ ಜನತೆ : ಮಂಜೇಶ್ವರ ಗ್ರಾ. ಪಂ. ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ.

ಮಂಜೇಶ್ವರ: ಬೀದಿ ನಾಯಿಗಳ ದಾಳಿಯಿಂದ ಹೈರಾಣಾಗಿರುವ ಮಂಜೇಶ್ವರದ ಜನತೆ ಗುರುವಾರ ಗ್ರಾಮ ಪಂಚಾಯತ್‌ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಧರಣಿ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರಿಗೂ ಆತಂಕ ಮೂಡಿಸಿರುವ ಈ ಸಮಸ್ಯೆಯ ಬಗ್ಗೆ ವರ್ಷಗಳ ಹಿಂದೆಯಿಂದಲೇ ಹಲವಾರು ಬಾರಿ ದೂರು ನೀಡಿದರೂ ಕೂಡ ಕ್ರಮ ಕೈಗೊಳ್ಳದೆ ಇದ್ದ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯತೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ ಮಂಜೇಶ್ವರ ರಿಜಿಸ್ಟ್ರಾರ್ ಕಚೇರಿ ಪರಿಸರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ,…

Read More

ಕೇರಳ ಕಾಂಗ್ರೆಸ್ ನಲ್ಲಿ ಅಶ್ಲೀಲಾ ಸಂದೇಶ ವಿವಾದ. ಇಕ್ಕಟ್ಟಿನಲ್ಲಿ ಕೆಪಿಸಿಸಿ..ಶಿಸ್ತು ಕ್ರಮಕ್ಕೆ ಆಗ್ರಹಿಸಿ ವಿಪಕ್ಷ ಗಳಿಂದ ವ್ಯಾಪಕ ಪ್ರತಿಭಟನೆ.ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್

ತಿರುವನಂತಪುರಂ : ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಹಾಗೂ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯ ಪೂರ್ವ ತಯಾರಿಯಲ್ಲಿದ್ದ ರಾಜ್ಯ ಕಾಂಗ್ರೆಸ್ ಸಮಿತಿಗೆ ಯುವ ಕಾಂಗ್ರೆಸ್ ಅಧ್ಯಕ್ಷರ ಅಶ್ಲೀಲಾ ಸಂದೇಶ ವಿವಾದ ತೀವ್ರ ಮುಜುಗರ ಉಂಟು ಮಾಡಿದ್ದೂ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.ಉಭಯ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಪ್ರಚಾರ ಕಾರ್ಯದಲ್ಲಿ ಇದೊಂದು ಅಸ್ತ್ರವಾಗಲಿದೆ ಎಂಬ ಆತಂಕ ಕೆಪಿಸಿಸಿ ಗೆ ಇದೆ. ಯುವ ನಟಿ ಹಾಗೂ ಮಾಜಿ ಮಾಧ್ಯಮ ಪ್ರತಿನಿಧಿ ಯಾದ ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲಾ…

Read More

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಿದೂರು ಶ್ರೀ ಮಹಾದೇವ ನವಜೀವನ ಸಮಿತಿ ಆಶ್ರಯದಲ್ಲಿ ನವಜೀವನೋತ್ಸವ – ಅಗೋಸ್ಟ್ -23 ರಂದು

ಕುಂಬಳೆ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಜೇಶ್ವರ ತಾಲೂಕು ಮತ್ತು ಕಿದೂರು ಶ್ರೀ ಮಹಾದೇವ ನವಜೀವನ ಸಮಿತಿ ಆಶ್ರಯದಲ್ಲಿ ನವಜೀವನೋತ್ಸವ ಹಾಗೂ ಕೆಸರ್ದ ಕಂಡದ್ ಕುಸಲ್ದ ಗೊಬ್ಬು ಲು ಅಗೋಸ್ಟ್ -23 ರಂದು ನಡೆಯಲಿದೆ.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಉದ್ಘಾಟಿಸಲಿದ್ದಾರೆ. ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಡಾ. ಜಯಪ್ರಕಾಶ್ ನಾರಾಯಣ ತೊಟ್ಟಿತೋಡಿ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ…

Read More

ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಅಖಂಡ ಭಜನೋತ್ಸಹ ,ಸಾಮೂಹಿಕ ವಿಷ್ಣು ಸಹಸ್ರ ನಾಮ ಹವನ ಆಗಸ್ಟ್ 24 ರಂದು.

ಉಪ್ಪಳ : ಕೊಂಡೆವೂರ್ ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳ 22 ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಅಖಂಡ ಭಜನೋತ್ಸಹ ,ಸಾಮೂಹಿಕ ವಿಷ್ಣು ಸಹಸ್ರ ನಾಮ ಹವನ ಆಗಸ್ಟ್ 24 ಭಾನುವಾರದಂದು ಪರಮಪೂಜ್ಯ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ.ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ ,ಬೆಳಗ್ಗೆ 8 ಗಂಟೆಗೆ ಶ್ರೀ ವಿಷ್ಣು ಸಹಸ್ರನಾಮ ಹವನ ಆರಂಭ,ಪೂರ್ವಾಹ್ನ 10 ಕ್ಕೆ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಆರಂಭ,10.45 ಕ್ಕೆ ಪೂರ್ಣಾಹುತಿ ಮಹಾಪೂಜೆ ,ಮಧ್ಯಾಹ್ನ…

Read More

ಮಂಜೇಶ್ವರ: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ,:ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಜೇಶ್ವರ : ಅಪ್ರಾಪ್ತೆ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ ತಲೆಮರೆಸೀಕೊಂಡಿದ್ದಆರೋಪಿ, ಕರ್ನಾಟಕ ಚಿತ್ರದುರ್ಗ ಮೂಲದ ತಿಮ್ಮಯ್ಯ (38)ಎಂಬಾತನನ್ನು ಮಂಜೇಶ್ವರ ಠಾಣಾಧಿಕಾರಿ ಬಂಧಿಸಿದ್ದಾರೆ. ತಲೆಮರೆಸಿಕೊಂಡ ಆರೋಪಿಯನ್ನು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಜಯ ಭಾಸ್ಕರ್ ರೆಡ್ಡಿ ನಿರ್ದೇಶನದಂತೆ ಎ ಎಸ್ಪಿ ನಂದಗೋಪನ್ ಅವರ ಮೇಲ್ನೋಟದ ತನಿಖೆಯಲ್ಲಿ ಮಂಜೇಶ್ವರ ಎಸ್‌ ಏಕೆ. ಆರ್. ಉಮೇಶ್ ನೇತೃತ್ವದಲ್ಲಿ ಬಂಧಿಸಲಾಯಿತು. ಅಪ್ರಾಪ್ತ ಬಾಲಕಿ ಗೆ ದೌರ್ಜನ್ಯ ನೀಡಿದ ಬಳಿಕ ಪೋಕ್ಸೊ ಕೇಸು ಹೊಂದಿದ ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ ಜಾಮೀನು ಪಡೆದು ತಲೆಮರೆಸಿಕೊಂಡಿದ್ದನು.ಅನಂತರ ಈತನನ್ನು ಪತ್ತೆ…

Read More

ಭಾರತ್ ಸೇವಕ್ ಸಮಾಜ್ ನ 73 ನೇ ಸ್ಥಾಪಕ ದಿನಾಚರಣೆಉಪ್ಪಳ ನ್ಯೂ ಭಾರತ್ ಸಂಸ್ಥೆಗೆ ಅತ್ಯುತ್ತಮ ಸೇವಾ ಪ್ರಶಸ್ತಿ

ಉಪ್ಪಳ : ಭಾರತ್ ಸೇವಕ್ ಸಮಾಜ್ ನ 73 ನೇ ಸ್ಥಾಪಕ ದಿನಾಚರಣೆಯು ತಿರುವನಂತಪುರದ ಟಾಗೋರ್ ಸಭಾಂಗಣದಲ್ಲಿ ಇತ್ತಿಚ್ಚೆಗೆ ನಡೆಯಿತು. ಸಮಾರಂಭದಲ್ಲಿ ವಿದ್ಯಾರ್ಥಿಗಳ ಸರ್ವೋತುಮುಖ ಅಭಿವೃದ್ಧಿಗೆ ಪ್ರಾಧಾನ್ಯತೆಯನ್ನು ನೀಡಿ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಉಪ್ಪಳದ ನ್ಯೂ ಭಾರತ್ ಸಂಸ್ಥೆಗೆ ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ರಘುಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ನಿರಂತರ ಮೂರು ವರ್ಷಗಳಿಂದ ಈ ಸಂಸ್ಥೆಯು ಈ ಪ್ರಶಸ್ತಿಯನ್ನು ಪಡೆಯುತ್ತಿವೆ. ಸಮಾರಂಭವನ್ನು ಪದ್ಮ ವಿಭೂಷಣ ಶ್ರೀ ಅಡೂರು ಗೋಪಾಲ ಕೃಷ್ಣನ್ ಉದ್ಘಾಟಿಸಿದರು. ಭಾರತ್…

Read More

ಬೀದಿ ನಾಯಿಯೊಂದು ಅಟ್ಟಾಡಿಸಿ ದಾಳಿ ,ಬಾಲಕನಿಗೆ ಗಂಭೀರ ಗಾಯ

ಮಂಜೇಶ್ವರ : ನಾಯಿ ಹಾವಳಿ ವಿಪರೀತವಾಗಿದ್ದು ಕಡಿದು ಗಾಯಗೊಳಿಸುತ್ತಿರುವ ಬಗ್ಗೆ ಆಗಾಗ ವರದಿಯಾಗುತ್ತಿದೆ.ಮಂಗಳವಾರ ಸಂಜೆ ಮದ್ರಸಕ್ಕೆ ತೆರಳುತಿದ್ದ 8 ವರ್ಷದ ಬಾಲಕನೊಬ್ಬನಿಗೆ ಬೀದಿ ನಾಯಿಯೊಂದು ಅಟ್ಟಾಡಿಸಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ.ಮಂಜೇಶ್ವರ ರಿಜಿಸ್ಟ್ಟಾರ್ ಕಚೇರಿ ಪರಿಸರವಾಸಿ ರಶೀದ್ ಎಂಬವರ ಪುತ್ರ ಅಬೂಬಕ್ಕರ್ ರಫಾನ್ (8) ಎಂಬಾತನನ್ನು ನಾಯಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ಬಾಲಕನ ಬೊಬ್ಬೆ ಕೇಳಿ ಜನ ಸೇರುವಾಗ ನಾಯಿ ಬಾಲಕನನ್ನು ಬಿಟ್ಟು ಓಡಿದೆ. ಬಳಿಕ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಬೀದಿ ನಾಯಿಗಳ…

Read More

ಶ್ರೀ ಧೂಮಾವತಿ ಕೋಮಾರಾಯ ಚಾಮುಂಡೇಶ್ವರೀ ಬಬ್ಬರ್ಯ, ಅಣ್ಣಪ್ಪ ಪಂಜುರ್ಲಿ, ಗುಳಿಗ, ಕೊರತಿ ದೈವಸ್ಥಾನ ಕಕ್ಕೆಪ್ಪಾಡಿ, ಪುತ್ತಿಗೆ.ನಿಧಿ ಕುಂಭ ಕಾರ್ಯಕ್ರಮ ,ವಿಜ್ಞಾಪನಾ ಪತ್ರ ಬಿಡುಗಡೆ 24 ರಂದು.

ಅತೀ ಪುರಾತನ ಹಾಗೂ ಇತಿಹಾಸ ಪ್ರಸಿದ್ಧವಾದ ಪುತ್ತಿಗೆ ಶ್ರೀ ಧೂಮಾವತಿ ಕೋಮಾರಾಯ ದೈವಸ್ಥಾನವು ಅತೀ ಪುರಾತನವಾದದ್ದು ಅಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನವನ್ನು ಜೀರ್ಣೋದ್ದಾರ ಮಾಡುವ ಉದ್ದೇಶದಿಂದ ಕ್ಷೇತ್ರದಲ್ಲಿ ನಿಧಿ ಕುಂಭ ವಿಜ್ಞಾಪನಾ ಪತ್ರ ಬಿಡುಗಡೆಯು ಆಗಸ್ಟ್ 24 ಭಾನುವಾರದಂದು ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಬಾಕುಡ ಸಮುದಾಯದ 18 ದೈವಸ್ಥಾನಗಳ ದೈವಗಳ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶಂಕರ್ ಅಡ್ಕ ದೀಪ ಪ್ರಜ್ವಲನೆ ಮಾಡಲಿದ್ದಾರೆ .ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಬ್ಬಣ್ಣ ಆಳ್ವ ಸಮಾರಂಭವನ್ನು ಉಧ್ಘಾಟಿಸಲಿದ್ದಾರೆ. ಪುತ್ತಿಗೆ ಶ್ರೀ…

Read More

ಮಂಜೇಶ್ವರ ಗ್ರಾಮ ಪಂಚಾಯತು ಹಾಗೂ ಕೃಷಿಭವನದ ಸಂಯುಕ್ತಾಶ್ರಯದಲ್ಲಿ ಕೃಷಿಕ ದಿನಾಚರಣೆ.

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ಹಾಗೂ ಕೃಷಿಭವನದ ಸಂಯುಕ್ತಾಶ್ರಯದಲ್ಲಿ ಕೃಷಿಕ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಜೇಶ್ವರ ಕಲಾಸ್ಪರ್ಶಂ ಆಡಿಯಟೋರಿಯಂನಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಂಜೇಶ್ವರ ವಿಧಾನಸಭಾ ಸದಸ್ಯ ಎ.ಕೆ.ಎಂ ಅಶ್ರಫ್ ಉದ್ಘಾಟಿಸಿ ಮಾತನಾಡಿದರು. ನಂತರ, ಅವರು ವಿವಿಧ ವರ್ಗಗಳ ಕೃಷಿಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಮಂಜೇಶ್ವರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮೊಂತೇರೋ ವಹಿಸಿದ್ದರು. ಕೃಷಿ ಅಧಿಕಾರಿ ಶ್ರೀ ಶ್ರೀನಾಥ್ ಸ್ವಾಗತ ಭಾಷಣ ನೀಡಿದರು. ವೇದಿಕೆಯಲ್ಲಿ ಪಂಚಾಯತು ಉಪಾಧ್ಯಕ್ಷ…

Read More
error: Content is protected !!