ಪೊಯೈ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಾವೂರು ಇದರ ಜಂಟಿ ಆಶ್ರಯದಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ.

ಪಾವೂರು :ಪೊಯೈಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಾವೂರು ಇದರ ಜಂಟಿ ಆಶ್ರಯದಲ್ಲಿ ಮೊಸರು ಕುಡಿಕೆ ಕಾರ್ಯಕ್ರಮವು ಕ್ಷೇತ್ರದ ಅಧ್ಯಕ್ಷರಾದ ಶ್ರೀ ಮನೋಹರ ಶೆಟ್ಟಿ ಕೆದುಂಬಾಡಿ ಇವರ ನೇತೃತ್ವದಲ್ಲಿ ಉದ್ಘಾಟಿಸಲ್ಪಟ್ಟಿತು. ನಂತರ ವಿವಿಧ ಸ್ಪರ್ಧೆಗಳು ನಡೆದವು. ಅದರಲ್ಲಿ ಮುಖ್ಯವಾಗಿ ಪುಟಾಣಿ ಮಕ್ಕಳಿಂದ ಕೃಷ್ಣನ ವೇಷವು ಕಣ್ಮನ ಸೆಳೆಯಿತು. ಸಂಜೆ ಹೊತ್ತಿನಲ್ಲಿ ನಡೆದ ಸಮರೋಪ ಸಮಾರಂಬದ ಅಧ್ಯಕ್ಷತೆಯನ್ನು ಭಜನಾ ಮಂಡಳಿ ಅಧ್ಯಕ್ಷರಾದ ಮೋನಪ್ಪ ಶೆಟ್ಟಿ ಮುಟ್ಲ ವಹಿಸಿದ್ದರು. ಸಭೆಯಲ್ಲಿ ಮುಖ್ಯವಾಗಿ ಶ್ರೀಧರ ಶೆಟ್ಟಿ…

Read More

ಮಾದಕ ಮುಕ್ತ ಸಮಾಜಕ್ಕೆ ಕರೆ, ಸರಕಾರಿ ಪ್ರೌಢಶಾಲೆ ಮೂಡಂಬೈಲಿನಲ್ಲಿ ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆ

ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಮೂಡಂಬೈಲ್ ಇಲ್ಲಿ ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು.ಶಾಲಾ ಮುಖ್ಯೋಪಾಧ್ಯಾಯೀನಿ ಶ್ರೀಮತಿ ದಯಾವತಿ ಸಾಲಿಯನ್ ಧ್ವಜಾರೋಹಣ ನಡೆಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಕುರಿತು ಪ್ರಾಸ್ತವಿಕ ನುಡಿಗಳನ್ನಾಡಿದರು . ಬಳಿಕ ಮುಖ್ಯ ಅತಿಥಿಗಳಾದ ಮಂಜೇಶ್ವರ ಜನ ಮೈತ್ರಿ ಪೊಲೀಸ್ ಅಧಿಕಾರಿಯಾದ ಮಧು ಸರ್ ಅವರು ಮಾತನಾಡಿ ನಮ್ಮ ಸಮಾಜ ಮಾದಕ ವಸ್ತುವಿನ ಪಿಡುಗುವಿನಿಂದಾಗಿ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದೆ ಇದನ್ನು ಬಗೆಹರಿಸಲು ನಾವೆಲ್ಲರೂ ಮಾದಕ ಮುಕ್ತ ಸಮಾಜವನ್ನು ನಿರ್ಮಿಸಲು ಕೈಜೋಡಿಸಬೇಕಾಗಿ ವಿನಂತಿಸಿದರು. ಬಳಿಕ…

Read More

ಯುವ ಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರೆರಿ (ರಿ)ಯುವ ಶಕ್ತಿ ಫ್ರೆಂಡ್ಷ್ ಸರ್ಕಲ್ ಲೈಬ್ರೆರಿ (ರಿ)ಸುಭಾಷ್ ನಗರ ಬೇಕೂರು ಇದರವತಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಯುವ ಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರೆರಿ (ರಿ)ಯುವ ಶಕ್ತಿ ಫ್ರೆಂಡ್ಷ್ ಸರ್ಕಲ್ ಲೈಬ್ರೆರಿ (ರಿ)K .G .D 6412 ಸುಭಾಷ್ ನಗರ ಬೇಕೂರು ಇದರವತಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮನೋಜ್ ಕುಮಾರ್ ವಹಿಸಿದರು. ಮಂಗಲ್ಪಾಡಿ ಪಂಚಾಯತ್ ಸದಸ್ಯೆ ಸುಜಾತ.ಯು.ಶೆಟ್ಟಿ ಧ್ವಜಾರೋಹಣ ಮಾಡಿ ಉದ್ಘಾಟಿಸಿ ಮಾತಾಡಿದರು. ಈ ಸಂದರ್ಭದಲ್ಲಿ ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಕಾರ್ಯಕಾರಿ ಸಮಿತಿ ಸದಸ್ಯೆ ವನಿತಾ ಆರ್ ಶೆಟ್ಟಿ ಶುಭಹಾರೈಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಲೈಬ್ರೆರಿ ಅಧ್ಯಕ್ಷರಾದ ಲಕ್ಷ್ಮಣ ಪೂಜಾರಿ, ಲೈಬ್ರೆರಿ ಕಾರ್ಯದರ್ಶಿ…

Read More

ಶ್ರೀ ಶಾರದಾ ಎ.ಯು.ಪಿ ಶಾಲೆ ಚೇವಾರು. ಶಾಲಾ ಮಟ್ಟದ ಸಂಸ್ಕೃತ ದಿನಾಚರಣೆ.

ಶ್ರೀ ಶಾರದಾ ಎ.ಯು.ಪಿ ಶಾಲೆ ಚೇವಾರು ಇಲ್ಲಿ ಶಾಲಾ ಮಟ್ಟದ ಸಂಸ್ಕೃತ ದಿನಾಚರಣೆಯು ನೆರವೇರಿತು.ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಶ್ಯಾಮ ಭಟ್ .ಯು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿನಿಯರಾದ ಶ್ರೀ ರಕ್ಷಾ . ಪಿ ಕಾರ್ಯಕ್ರಮವನ್ನು ನಿರೂಪಿಸಿ, ಸಾಕ್ಷ್ಯಾ .ಎ ಸ್ವಾಗತಿಸಿ, ವಂಶಿತಾ .ಯಂ ವಂದಿಸಿದರು.ಶಾಲಾ ಸಂಸ್ಕೃತ ಅಧ್ಯಾಪಿಕೆ ಶ್ರೀಮತಿ ಪ್ರಮೀಳಾ ಡಿ.ಯನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಭಾಷಾ ಕ್ಲಬ್ ನ ವತಿಯಿಂದ ಈ ಕಾರ್ಯಕ್ರಮವು ನೆರವೇರಿತು

Read More

ಅಂಗಡಿಯ ಮುಂಭಾಗದಲ್ಲಿ ಅಪಾರ ಪ್ರಮಾಣದ ರಕ್ತದ ಕಲೆ ಪತ್ತೆ-ಸ್ಥಳೀಯರಲ್ಲಿ ಆತಂಕ

ಮಂಜೇಶ್ವರ: ಶನಿವಾರ ಬೆಳಿಗ್ಗೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿ ಪದವು ಎಂಬಲ್ಲಿನ ಒಂದು ಅಂಗಡಿಯ ಮುಂಭಾಗದಲ್ಲಿ ಅಪಾರ ಪ್ರಮಾಣದ ರಕ್ತದ ಕಲೆ ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಕುತೂಹಲವನ್ನು ಮೂಡಿಸಿದೆ. ಅದೇ ರೀತಿಯಾಗಿ, ಸಮೀಪದಲ್ಲಿನ ಮನೆಯೊಂದರ ಮುಂದೆಯೂ ಇದೇ ರೀತಿಯ ರಕ್ತದ ಗುರುತುಗಳು ಕಾಣಿಸಿಕೊಂಡಿವೆ. ಸ್ಥಳೀಯ ನಿವಾಸಿಗಳ ಪ್ರಕಾರ, ಇಂತಹ ಅಪರೂಪದ ದೃಶ್ಯ ಅವರು ಈವರೆಗೆ ಕಂಡಿರಲಿಲ್ಲ. “ಬೆಳಗ್ಗೆ ಅಂಗಡಿಗೆ ಹೋಗುತ್ತಿದ್ದಾಗ ರಕ್ತದ ಗುರುತುಗಳು ಕಂಡು ಬೆಚ್ಚಿಬಿದ್ದೆವು. ನೈಜವಾಗಿ ಏನು ನಡೆದಿದೆ ಎಂಬುದು ಇನ್ನೂ…

Read More

ಹಿರಿಯರ ಕನಸುಗಳಿಗೆ ತಣ್ಣೀರೆರಚಿದ ಛಿದ್ರ ಶಕ್ತಿಗಳ ವಿರುದ್ಧ ಕಾಂಗ್ರೆಸ್ ಹೋರಾಟ- ರಮಾನಾಥ ರೈ

ಕಾಸರಗೋಡು: ವಿದೇಶಿ ಗುಲಾಮಗಿರಿಯಿಂದ ದೇಶವನ್ನು ಸ್ವತಂತ್ರಗೊಳಿಸಿದ ತ್ಯಾಗಮಯಿ ಕಾಂಗ್ರೆಸ್ ನಾಯಕರು ಕಂಡ ಶಾಂತ ಸುಂದರ ಭಾರತದ ಕನಸನ್ನು ಭಗ್ನಗೊಳಿಸಿದ ಮತೀಯ ಶಕ್ತಿಗಳ ವಿರುದ್ಧ ನೈಜ ದೇಶಪ್ರೇಮಿಗಳಾದ ಕಾಂಗ್ರೆಸಿಗರು ಸಂಧಿಯಿಲ್ಲದ ಹೋರಾಟ ನಡೆಸುವ ಮೂಲಕ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಗೊಳಿಸಲು ಶ್ರಮಿಸಬೇಕಿದೆ. ಇದರ ಜೊತೆಗೆ ಮಾದಕ ದ್ರವ್ಯ ಮುಂತಾದ ಸಾಮಾಜಿಕ ಪಿಡುಗುಗಳ ವಿರುದ್ಧವೂ ಹೋರಾಟ ಚಾಲ್ತಿಯಲ್ಲಿಡಬೇಕು ಎಂದು ಕರ್ನಾಟಕದ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಬಿ.ರಮಾನಾಥ ರೈಯವರು ಕರೆ ನೀಡಿದ್ದಾರೆ. ಅವರು ಮಂಗಲ್ಪಾಡಿ ಮಂಡಲ ಕಾಂಗ್ರೆಸ್…

Read More

ಮುಡಿಮಾರಿನ ಯುವಕರಿಂದ ರಸ್ತೆ ಶ್ರಮದಾನ

ಪಾವೂರು :ಸ್ವಾತಂತ್ರ್ಯ ದಿವಸ ಮುಡಿಮಾರು ಬಸ್ಟ್ಯಾಂಡಿನಿಂದ ಮುಡಿಮಾರು ಮಲರಾಯ ಕ್ಷೇತ್ರದವರೆಗೆ ರಸ್ತೆಯನ್ನು ಮುಡಿಮಾರಿನ ಯುವಕರು ಶ್ರಮದಾನದ ಮೂಲಕ ದುರಸ್ಥಿಗೊಳಿಸಿದರು. ರಸ್ತೆಯಲ್ಲಿ ವಾಹನಗಳು ಬಿಡಿ ಶಾಲಾ-ಕಾಲೇಜು ಕೆಲಸಕ್ಕೆ ಹೋಗುವ ಮಹಿಳೆಯರು ದಿನ ನಿತ್ಯ ಆ ರಸ್ತೆಯಲ್ಲಿ ನಡೆದುಕೊಂಡು ಹೋಗುವುದಕ್ಕೂ ಪರದಾಡುತ್ತಿದ್ದರು.ಇಂಥ ದುಸ್ಥಿತಿಗೆ ತಲುಪಿರುವ ರಸ್ತೆಯನ್ನು ಮುಡಿಮಾರಿನ ಯುವಕರು ರಸ್ತೆಯ ಬದಿಯಲ್ಲಿರುವ ಮರದ ಕೊಂಬೆಗಳನ್ನು ಕಡಿದು ರಸ್ತೆಯಲ್ಲಿರುವ ಹೊಂಡಗಳನ್ನು ಕಲ್ಲುಗಳಿಂದ ಮುಚ್ಚಿ ರಸ್ತೆಯನ್ನು ದುರಸ್ಥಿಗೊಳಿಸಿದರು.

Read More

ಸಾಮಾಜಿಕ ಪಿಡುಗುಗಳ ವಿರುದ್ಧ ಜನಾಂದೋಲನ -ಕಾಂಗ್ರೆಸ್ ಘೋಷಣೆ

ಕಾಸರಗೋಡು: ಮಾದಕ ದ್ರವ್ಯ ಮತ್ತಿತರ ಸಾಮಾಜಿಕ ಪಿಡುಗುಗಳು ಜನತೆಯ ಆರೋಗ್ಯದ ಮೇಲೆ ಮಾತ್ರವಲ್ಲ, ಒಟ್ಟು ದೇಶದ ಹಿತಾಸಕ್ತಿಯ ಮೇಲಿನ ದಾಳಿ ಎಂದೇ ಪರಿಗಣಿಸಬೇಕಾಗಿದೆ. ಇದು ನಾಡಿನ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಸಕಲ ವಲಯಗಳನ್ನೂ ವಿಕಲಗೊಳಿಸುವ ಮಹಾಮಾರಿಗಳಾಗಿವೆ. ಇದರ ವಿರುದ್ಧ ಪರಿಣಾಮಕಾರಿ ಜನಾಂದೋಲನ ನಡೆಸಲು ಕಾಂಗ್ರೆಸಿಗರು ಮುಂದಾಗಬೇಕು ಎಂದು ಇಂಟಕ್ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಹಾಗೂ ವರ್ಕಾಡಿ ಮಂಡಲ ಕಾಂಗ್ರೆಸ್ ಉಸ್ತುವಾರಿ ಶ್ರೀ ಶಾಹುಲ್ ಹಮೀದ್ ಪೆರ್ಲ ಕರೆ ನೀಡಿದ್ದಾರೆ.ಎಐಸಿಸಿ ಹಾಗೂ ಕೆಪಿಸಿಸಿ ಆದೇಶ ಪ್ರಕಾರ…

Read More

ಪಾವೂರು ಅಂಗನವಾಡಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ.

ಮಂಜೇಶ್ವರ :ಪಾವೂರು ಅಂಗನವಾಡಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ವರ್ಕಾಡಿ ಪಂಚಾಯತ್ ಸದಸ್ಯೆ ಕಾಮುರುಂನ್ನಿಸ ಮುಸ್ತಾಫಾ ದೋಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ,ಇಬ್ರಾಹಿಂ ಹಾಜಿ ಕೊಂಬಗುರಿ ,ಮುಸ್ತಾಫಾ ಮಚಂಬಾಡಿ ,ಶಾಫಿ ಭಂಡಾಸಾಲೆ, ಜಾಫರ್ ಪಾವೂರು ,ಶಾಫಿ ಪಾವೂರು ಭದ್ರು ಕುಂಡಾಪು ,ಅಬ್ಬೊಕರ್ ಕೊಂಬಗುರಿ, ಅಂಗನವಾಡಿ ಪುಟಾಣಿ ಮಕ್ಕಳು ಮಹಿಳೆಯರು ಊರಿನ ಜನರು ಭಾಗವಹಿಸಿದರು .ಅಂಗನವಾಡಿ ಕಾರ್ಯಕರ್ತೆ ಸೈಲಜಾ ಸ್ವಾಗತಿಸಿ ಸಹಾಯಕ ಕಾರ್ಯಕರ್ತೆ ಸುಚಿತ್ರ ವಂದಿಸಿದರು

Read More

ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ.

ಬಾಯಾರು :ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ವಿಜೃಂಭಣೆಯಿಂದ ಜರಗಿತು.ಶ್ರೀ ಸತ್ಯನಾರಾಯಣ ಭಟ್, ಸೇರಾಜೆ, ಚೀಫ್ ಮ್ಯಾನೇಜರ್, ರಿಫೈನರಿ ಆಫೀಸರ್, ಎಂ.ಆರ್.ಪಿ.ಎಲ್., ಮಂಗಳೂರು, ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ಮಾತನಾಡುತ್ತಾ ,”ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನವನ್ನು ಸ್ಮರಿಸಿ, ಚಾರಿತ್ರ್ಯದಿಂದಲೇ ಭಾರತ ವಿಶ್ವಗುರು “ಎಂಬುದಾಗಿ ಮಕ್ಕಳಿಗೆ ಹಿತವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪೆಲತ್ತಡ್ಕ ರಾಮಕೃಷ್ಣ ಭಟ್, ಉಪಾಧ್ಯಕ್ಷರು, ಪ್ರಶಾಂತಿ ಸೇವಾ ಟ್ರಸ್ಟ್ ಇವರು ವಹಿಸಿದ್ದರು.ಶ್ರೀ ಮಾಣಿಪ್ಪಾಡಿ ನಾರಾಯಣ ಭಟ್,…

Read More
error: Content is protected !!