ಉಪ್ಪಳ ಬಳಿಯ ದಡ್ಡಂಗಡಿ ಕಂಚಿಲ ನಿವಾಸಿ, (35) ರ ಹರೆಯದ ಇಲೆಕ್ಟಿಶಿಯನ್ ಶರಣ್ ರಾಜ್ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆ
ಮಂಜೇಶ್ವರ: ಉಪ್ಪಳ ಬಳಿಯ ದಡ್ಡಂಗಡಿ ಕಂಚಿಲ ನಿವಾಸಿ, ಟೈಲರ್ ದೂಮಣ್ಣ ಶೆಟ್ಟಿಗಾರ್ ರ ಪುತ್ರ ಇಲೆಕ್ಟಿಶಿಯನ್ ವೃತ್ತಿಯಲ್ಲಿ ತೊಡಗಿಕೊಂಡಿರುವ ಶರಣ್ ರಾಜ್ (35) ಇಂದು ಬೆಳಗ್ಗೆ ಮನೆಯೊಳಗೆ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂಡಲೇ ಮನೆಯವರು ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಶರಣ್ ರಾಜ್ ರನ್ನು ಕುಣಿಕೆಯಿಂದ ಕೆಳಗಿಳಿಸಿ ಉಪ್ಪಳದ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಶರಣ್ ರಾಜ್ ಮೃತಪಟ್ಟಿದ್ದಾನೆ. ಇದೀಗ ಮೃತದೇಹವನ್ನು ಮಂಗಲ್ಪಾಡಿಯ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ನೇಣು ಬಿಗಿಯಲು…