ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರು ಪರಸ್ಪರ ಡಿಕ್ಕಿ ಮಹಿಳೆಯೊಬ್ಬರ ದಾರುಣ ಸಾವು

ಮಂಜೇಶ್ವರ : ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ವರ್ಕಾಡಿ ಸಮೀಪದ ಕೋಳ್ಯೂರು ಪದವು ನಿವಾಸಿ ನವ್ಯ (28) ಸಾವನ್ನಪ್ಪಿದ ದುರ್ದೈವಿ. ಇವರ ಪತಿ ಪದ್ಮನಾಭ(36) ಹಾಗೂ ಮಗು ಗಾಯನ್ ಎಂಬಿವರು ಗಾಯಗೊಂಡು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೃತ ನವ್ಯಾ ಅವರು ತಲಪ್ಪಾಡಿಯ ಗೇರೇಜ್ ಮಾಲಕ ಶಿವರಾಮ ಆಚಾರ್ಯ ರ ಪುತ್ರಿಯಾಗಿದ್ದು, ಔಷಧಿಗೆಂದು ಕಾರಿನಲ್ಲಿ ತೆರಳುತ್ತಿದ್ದರು. ಉಪ್ಪಳ ಭಾಗದಿಂದ ಮಂಗಳೂರು ಕಡೆ…

Read More

ಮಂಜೇಶ್ವರದಲ್ಲಿ ಸುರಿದ ಧಾರಾಕಾರ ಮಳೆ ಮನೆ, ಮಸೀದಿ ,ದೇವಸ್ಥಾನ, ವ್ಯಾಪಾರ ಸಂಸ್ಥೆ ಜಲಾವೃತ

ಮಂಜೇಶ್ವರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆ, ಮಸೀದಿ ,ದೇವಸ್ಥಾನ ,ವ್ಯಾಪಾರ ಸಂಸ್ಥೆ ಜಲಾವೃತಗೊಂಡಿದೆ.ಎಡೆಬಿಡದೆ ಸುರಿಯುತ್ತಿರುವ ಮಳೆನೀರಿನಿಂದಾಗಿ ಮಂಜೇಶ್ವರ ತಾಲೂಕಿನ ಪ್ರದೇಶವಾದ ಕನಿಲ, ಪೊಸೋಟು , ಹೊಸಂಗಡಿ , ಬಂಗ್ರಮಂಜೇಶ್ವರ್ ,ಕಾಡಿಯಾರ್ ಸಂಪೂರ್ಣ ಜಲಾವೃತವಾಗಿದೆ. ಹಾಗು ಅಂಗಡಿ , ಕ್ಲಬ್ ದೇವಾಲಯಗಳಿಗೂ ನೀರು ನುಗ್ಗಿದ್ದು ಹಲವು ನಾಶ ನಷ್ಟ ಸಂಭವಿಸಿದೆ. ಕೆಲವೊಂದು ಕಡೆಗಳಲ್ಲಿ ಅಪಾಯವನ್ನುಟುಮಾಡಿದೆ . ಕಾಡಿಯಾರ್ ನಲ್ಲಿ ಮೀನಿನ ಬಲೆ ದೋಣಿ , ದೋಣಿಯ ಇಂಜಿನ್ , ಮನೆಗಳಿಗೆ ಹನಿಯಾಗಿ ಬಹಳಷ್ಟು ನಾಶ ನಷ್ಟ ಸಂಭವಿಸಿದೆ. ಪಂಚಾಯತ್…

Read More

ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸು ಡಿಕ್ಕಿ : ಗಾಯಗೊಂಡ ಮೂವರ ಪೈಕಿ ಒಬ್ಬನ ಸ್ಥಿತಿ ಗಂಭೀರ…!

ಮಂಜೇಶ್ವರ: ರೈಲು ನಿಲ್ದಾಣದಿಂದ ಬರುತ್ತಿದ್ದ ಕಾರಿಗೆ ಕಾಸರಗೋಡು ಭಾಗದಿಂದ ತಲಪಾಡಿಗೆ ತೆರಳುತಿದ್ದ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಈ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಯ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ಪೊಸೋಟಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ವರ್ಕಾಡಿ ಮಜೀರ್ ಪಳ್ಳ ನಿವಾಸಿಗಳಾದವ ಪ್ರೀತಮ್ (20), ಪ್ರಜ್ವಲ್ (21), ಕೆಲ್ವಿನ್ (20) ಎಂಬಿ ಗಾಯಗಳಾಗಿದ್ದು, ಈ ಪೈಕಿ ಕೆಲ್ವಿನ್ ಸ್ಥಿತಿ ಗಂಭಿರವಾಗಿದೆ. ಸ್ಥಳೀಯರು ಕೂಡಲೇ ಗಾಯಳುಗಳನ್ನು…

Read More

ಎಡೆಬಿಡದೆ ಸುರಿಯುತ್ತಿರುವ ಮಳೆ : ಹೊಸಂಗಡಿ ಪೇಟೆ ವ್ಯಾಪಾರಿಗಳು ಸಂಕಷ್ಟದಲ್ಲಿ

ಧಾರಾಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೊಸಂಗಡಿ ಪೇಟೆಯ ವ್ಯಾಪಾರ ಮಳಿಗೆಗಳು,ಅಂಗಡಿಗಳು,ಹೋಟೆಲುಗಳು ಸಂಪೂರ್ಣ ಜಲಾವೃತಗೊಂಡಿದೆ. ಇದರಿಂದಾಗಿ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲಿಕ್ಕಿದ್ದು ಅಪಾರ ನಾಶ ನಷ್ಟ ಉಂಟಾಗಿದೆ.ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದು ಇದಕ್ಕೆ ಪ್ರಮುಖ ಕಾರಣ ಪಂಚಾಯತ್ ಅಧಿಕಾರಿಗಳು ಹೊಣೆಯೆಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿವರ್ಷವೂ ಇಂತಹ ಕೃತಕ ನೆರೆ ಬರುವುದು ಹೊಸಂಗಡಿಯಲ್ಲಿ ಸಹಜವಾಗಿದೆ.ಸೂಕ್ತ ಕ್ರಮವನ್ನು ಕೈಗೊಳ್ಳಬೇಕು,ವ್ಯಾಪಾರಿಗಳಿಗೆ ನಷ್ಟ ಪರಿಹಾರವನ್ನು ನೀಡಬೇಕು ,ಇಲ್ಲದೆ ಇದ್ದಲ್ಲಿ ಹೋರಾಟವನ್ನು ನಡೆಸುವುದಾಗಿ ಮಂಜೇಶ್ವರ ವ್ಯಾಪಾರ ವ್ಯವಸಾಯಿ ಏಕೋಪನ ಸಮಿತಿಯ…

Read More

ಕುಂಬಳೆ ಪರಿಸರದಲ್ಲಿ ಸರಣಿ ಕಾರು ಅಪಘಾತ ಹಲವರು ಗಾಯದಿಂದ ಪಾರು

ಮಂಜೇಶ್ವರ: ಕುಂಬಳೆ ಸಮೀಪದ ಭಾಸ್ಕರನಗರ ಕೆಎಸ್‌ಟಿಪಿ ರಸ್ತೆಯಲ್ಲಿ ಗಂಟೆಗಳ ವ್ಯತ್ಯಾಸದಲ್ಲಿ ಎರಡು ಕಾರುಗಳು ಅಪಘಾತಕ್ಕೀಡಾ ಗಿವೆ. ಈ ಪೈಕಿ ಒಂದು ಕಾರಿನಲ್ಲಿದ್ದ ಏಳು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮತ್ತೊಂದು ಕಾರಿನಲ್ಲಿದ್ದ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ಮರಳಿ ಬರುತ್ತಿದ್ದ ಕಳತ್ತೂರು ನಿವಾಸಿಗಳು ಸಂಚರಿಸಿದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿಚರಂಡಿಗೆ ಮಗುಚಿ ಬಿದ್ದಿದೆ. ಅದರಲ್ಲಿದ್ದ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಮತ್ತೊಂದು ಅಪಘಾತ ಕಳೆದ ರಾತ್ರಿ 12.30ರ ವೇಳೆ ಸಂಭವಿಸಿದೆ. ಇದರಲ್ಲಿ…

Read More

ಅಬ್ದುಲ್ ರಹೀಂ ಕೊಲೆ ಪ್ರಕರಣ -ದೀಪಕ್ ಸಹಿತ ಮೂವರು ಪೊಲೀಸರ ವಶಕ್ಕೆ

ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹೀಂ ಅವರನ್ನು ಕೊಲೆಗೈದ‌ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More

ಕುಂಬಳೆಯಲ್ಲಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ ಅಪಾಯದಿಂದ ಪಾರಾದ ಚಾಲಕ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಯಲ್ಲಿ ಸಂಚರಿಸುತ್ತಿದ್ದ ಕಾರು ಬೆಂಕಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ಕುಂಬಳೆಯಲ್ಲಿ ಸಂಭವಿಸಿದೆ. ಶಿರಿಯಾ ಬತ್ತೇರಿ ಮಹಲ್‌ನ ಮೂಸಾ ಖಲೀಲ್ ಎಂಬವರ ಸ್ವಿಫ್ಟ್ ಕಾರು ಬೆಂಕಿಗಾಹುತಿಯಾ ಗಿದೆ. ಮೂಸಾ ಖಲೀಲ್ ಬಂದ್ಯೋಡು ಭಾಗದಿಂದ ಕುಂಬಳೆ ಪೇಟೆಗೆ ಬರುತ್ತಿದ್ದರು. ಕುಂಬಳೆ ಪೇಟೆ ಸಮೀಪಕ್ಕೆ ತಲುಪಿದಾಗ ಕಾರಿನ ಮುಂಭಾಗದಿಂದ ಹೊಗೆ ಏಳುತ್ತಿರುವುದು ಕಂಡುಬಂದಿದೆ. ಕೂಡಲೇ ಕಾರನ್ನು ನಿಲ್ಲಿಸಿ ಅವರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಕೆಲವೇ ನಿಮಿಷಗಳೊಳಗೆ ಕಾರಿಗೆ ಪೂರ್ಣವಾಗಿ ಬೆಂಕಿ ಆವರಿಸಿದೆ. ವಿಷಯ ತಿಳಿದು ಸೀನಿಯರ್ ಫಯರ್…

Read More

ಕುಂಬಳೆ : ಲೈಟಿಂಗ್ಸ್ ಕಾರ್ಮಿಕನಾಗಿದ್ದ ಯುವಕ ಆತ್ಮಹತ್ಯೆ

ಕುಂಬಳೆ: ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಮಲಗಿದ ಕೋಣೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ. ಕುಂಬಳೆ ಮಾವಿನಕಟ್ಟೆ ನಿವಾಸಿ, ಪೇಟೆಯ ಲೈಟ್ ಏಂಡ್ ಸೌಂಡ್ಸ್ ಸಂಸ್ಥೆಯ ನೌಕರ ನಿತಿನ್ ಕುಮಾರ್ ಗಟ್ಟಿ (25)ಎಂಬವರು ಆತ್ಮಹತ್ಯೆ ಮಾಡಿದವರಾಗಿದ್ದಾರೆ. ರಾತ್ರಿ ಮಲಗಿದ ವ್ಯಕ್ತಿ ಬೆಳಗ್ಗೆ ಏಳದೇ ಇರುವುದನ್ನು ಗಮನಿಸಿ ಬಾಗಿಲು ಬಡಿದಾಗ ಪ್ರತಿಕ್ರಿಯೆ ಇಲ್ಲದಿರುವುದನ್ನು ನೋಡಿ ತಪಾಸಿಸಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಪತ್ತೆಯಾಯಿತು. ಕುಂಬಳೆ ಪೋಲೀಸರು ತಲುಪಿ ಮೃತದೇಹವನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ಸಾಗಿಸಿ ಶವ…

Read More

ಕಾಸರಗೋಡು ಸರಕಾರಿ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ

ಕಾಸರಗೋಡು ಸರಕಾರಿ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಕಾಸರಗೋಡು: ವಿದ್ಯಾನಗರದಲ್ಲಿರುವ ಕಾಸರಗೋಡು ಸರಕಾರಿ ಕಾಲೇಜಿನ ಪ್ರಥಮ ಬಿ.ಎ.ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಪಾಣತ್ತೂರು ಕಣ್ಣಿಮೇಡ್ ನಿವಾಸಿ ಪಿ.ಡಿ.ಅಭಿಷೇಕ್(20)ಎಂಬಾತ ಆತ್ಮಹತ್ಯೆ ನಡೆಸಿದ ಯುವಕ.ವಿದ್ಯಾನಗರದ ಸರಕಾರಿ ಕಾಲೇಜ್ ಹಾಸ್ಟೆಲಿನಲ್ಲಿ ಸಹ ವಿದ್ಯಾರ್ಥಿಗಳು ಇಂದು ಮುಂಜಾನೆ ಫೋನ್ ಕರೆ ಮಾಡಿದರೂ ತೆಗೆಯದಿದ್ದಾಗ ಅವರು ಈತನ ಕೋಣೆಯ ಕಿಟಿಕಿ ಸರಿಸಿ ನೋಡಿದರು. ಈ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೈ…

Read More

ಮಂಜೇಶ್ವರ: ಬಿರುಸಿನ ಮಳೆ ಸುರಿದು ವಿವಿಧೆಡೆಗಳಲ್ಲಿ ಹಾನಿ

ಮಂಜೇಶ್ವರ ಹೊಸಂಗಡಿ ಎಂ ಎಂ ಪ್ಲಾಜದಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ಕಟ್ಟಡದ ಕೆಳಭಾಗದಲ್ಲಿರುವ ಎಲ್ಲಾ ವ್ಯಾಪಾರ ಕೇಂದ್ರಗಳು ಜಲಾವೃತಗೊಂಡಿದೆ. ಅದೇ ರೀತಿ ಪೊಸೋಟು ರಾಷ್ಟ್ರೀಯ ಹೆದ್ದಾರಿಯ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಸಮೀಪದ ಅಂದುಞ ಎಂಬವರ ಮನೆ ಜಲಾವೃತಗೊಂಡಿದೆ. ಇದರ ಸಮೀಪದ ಎರಡು ಮನೆಗಳು ಕೂಡಾ ಜಲಾವೃತಗೊಂಡಿದೆ. ಅದೇ ರೀತಿ ಎಡನೀರು ಸಮೀಪದ ಚೂರಿಮೂಲೆ ಎಂಬಲ್ಲಿ ತೆಂಗಿನಮರವೊಂದುದು ರಸ್ತೆಯ ಮೇಲೆ ಸಾಗುತ್ತಿದ್ದ ವಿದ್ಯುತ್ ತಂತಿಗೆ…

Read More
error: Content is protected !!