ರಮೇಶ್ ಚೆನ್ನಿತ್ತಲಗೆ ಗೃಹ ಸಚಿವರಾಗುವ ಸಾಧ್ಯತೆ? ವಿ.ಡಿ. ಸತೀಶನ್ ಸಂಪುಟದಲ್ಲಿ ಚೆನ್ನಿತ್ತಲಗೆ ಮಹತ್ವದ ಸ್ಥಾನ?

ತಿರುವನಂತಪುರಂ:ರಮೇಶ್ ಚೆನ್ನಿತ್ತಲ್ ಅವರು ವಿ.ಡಿ.ಸತೀಸನ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗುವ ಸಾಧ್ಯತೆಯಿದೆ. ನಿಯೋಜಿತ ಮುಖ್ಯಮಂತ್ರಿ ವಿ.ಡಿ.ಸತೀಸನ್ ಹಾಗೂ ರಮೇಶ್ ಚೆನ್ನಿತ್ತಲ ನಡುವೆ ಮಾತುಕತೆ ನಡೆದ ಬಳಿಕ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದೇ ವೇಳೆ,ವಿ. ಡಿ. ಸತೀಶನ್ ಅವರ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸ್ಥಾನವನ್ನು ವಿ. ಡಿ. ಸತೀಶನ್ ಅವರಿಗೆ ನೀಡುವಂತೆ ಹೈಕಮಾಂಡ್ ಘೋಷಿಸಿದ ಬಳಿಕ ರಮೇಶ್ ಚೆನ್ನಿತ್ತಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ….

Read More

ಪೊಲೀಸರ ಕಣ್ಣುತಪ್ಪಿಸಿ ಓಡಾಡುತ್ತಿದ್ದ ಆರೋಪಿ ಕೊನೆಗೂ ಸೆರೆ

ಮಂಜೇಶ್ವರ: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಕುಂಬಳೆ ಪೊಲೀಸರು ಚಾಣಾಕ್ಷತನದಿಂದ ಬಂಧಿಸಿದ್ದಾರೆ.ಆರಿಕ್ಕಾಡಿ ಬನ್ನಂಗುಳ ನಿವಾಸಿ ಅಬ್ದುಲ್ ಜಲೀಲ್ ಅಲಿಯಾಸ್ ಜಲ್ಲು (28) ಬಂಧಿತ ಆರೋಪಿ. ​ಬದಿಯಡ್ಕ ಮತ್ತು ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಸೇರಿದಂತೆ ಹಲವಾರು ಗಂಭೀರ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಕಳೆದ ಕೆಲವು ಸಮಯದಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಣ್ಣೂರು ಜಿಲ್ಲೆಯ ವಳಪಟ್ಟಣಂ ಎಂಬಲ್ಲಿ ಗುಟ್ಟಾಗಿ ನೆಲೆಸಿದ್ದ ಈತನ ಬಗ್ಗೆ ಕುಂಬಳೆ ಎಸ್‌….

Read More

ಅಪಘಾತಕ್ಕೀಡಾದ ಬೈಕ್ ಕಳವು; ಯುವಕ ಬಂಧನ

ಮಂಜೇಶ್ವರ: ಅಪಘಾತಕ್ಕೀಡಾಗಿ ರಸ್ತೆ ಬದಿಯಲ್ಲಿದ್ದ ಬೈಕನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀಂಜ ಸಂತಡ್ಕ ನಿವಾಸಿ ಮುಹಮ್ಮದ್ ಅಲಿಯಾಸ್ ಮುನ್ನ (21) ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ​ಮೇ 1ರಂದು ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂ.ಎನ್. ಸಂತೋಷ್ ಎಂಬವರ ಬೈಕ್ ಅಪಘಾತಕ್ಕೀಡಾಗಿತ್ತು. ಗಾಯಗೊಂಡಿದ್ದ ಸಂತೋಷ್ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡು ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ​ ಈತನ ಮೇಲೆ ಈಗಾಗಲೇ ಮಂಜೇಶ್ವರ ಠಾಣೆಯಲ್ಲಿ ಪೋಕ್ಸೊ ಪ್ರಕರಣ…

Read More

ಕುಂಜತ್ತೂರು: ಬಸ್ ಚಾಲಕರ ಹಠಮಾರಿ ಧೋರಣೆಗೆ ಹೆಚ್ಚಿದ ಅಪಘಾತದ ಭೀತಿ: ಸಾರಿಗೆ ನಿಯಮ ಪಾಲಿಸುವಂತೆ ಮುಸ್ಲಿಂ ಯೂತ್ ಲೀಗ್ ಟೌನ್ ಕಮಿಟಿಯಿಂದ ಕಡಕ್ ಎಚ್ಚರಿಕೆ

ಮಂಜೇಶ್ವರ: ಕುಂಜತ್ತೂರು ಜಂಕ್ಷನ್‌ನಲ್ಲಿ ತಲಪಾಡಿ ಕಡೆಗೆ ಹೋಗುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ನಿಗದಿಪಡಿಸಿದ ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ, ಅಂಡರ್‌ಪಾಸ್ ಬಳಿಯೇ ನಿಲ್ಲಿಸುತ್ತಿರುವುದರಿಂದ ಅಪಘಾತಗಳು ನಿತ್ಯ ದರ್ಶನವಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾದ ನಂತರ ಅಂಡರ್‌ಪಾಸ್ ಬಳಿ ಬಸ್‌ಗಳನ್ನು ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿರುವುದು ಇತರ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ದೊಡ್ಡ ಪ್ರಾಣಭೀತಿಯನ್ನು ತಂದೊಡ್ಡಿದೆ. ​ಈ ಬಗ್ಗೆ ಸಾರ್ವಜನಿಕರು ಮತ್ತು ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳನ್ನು ಹಾಗೂ ಪೊಲೀಸರನ್ನು ಸಂಪರ್ಕಿಸಿದರೂ ಯಾರೂ ಇತ್ತಕಡೆ ತಿರುಗಿಯೂ ನೋಡಿಲ್ಲವೆಂಬ ಆರೋಪವಿದೆ. ​ಈ…

Read More

ಮೇ 26ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯ ನಿರೀಕ್ಷೆ

ತಿರುವನಂತಪುರಂ: ಈ ಬಾರಿ ಕೇರಳಕ್ಕೆ ಮೇ 26ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು, ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಆಗಮಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯ ದಕ್ಷಿಣ ಭಾಗ ಹಾಗೂ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳಲಿದ್ದು, ಮೇ 24ರೊಳಗೆ ಕೇರಳ ತಲುಪುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಮುಂಗಾರು ಉತ್ತರದತ್ತ…

Read More

ಮೇ 18ರಂದು ಕೇರಳ ನೂತನ ಸಚಿವ ಸಂಪುಟ ಪ್ರಮಾಣವಚನ; ಸಿಎಂ ಆಗಿ ವಿ.ಡಿ. ಸತೀಶನ್ ಪ್ರಮಾಣವಚನ

ತಿರುವನಂತಪುರ: ಕೇರಳದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಮೇ 18ರಂದು ನಡೆಯಲಿದ್ದು, ಇದೇ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ವಿ.ಡಿ. ಸತೀಶನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿನ್ನೆ ಸಂಜೆ ನಡೆದ ಕಾಂಗ್ರೆಸ್ ವಿಧಾನಸಭಾ ಪಕ್ಷದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಮೇ 21ರಂದು ವಿಧಾನಸಭೆ ಸಮಾವೇಶಗೊಳ್ಳಲಿದ್ದು, ಆ ಸಂದರ್ಭದಲ್ಲಿ ನೂತನ ಶಾಸಕರು ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ.ಇದರ ಜೊತೆಗೆ…

Read More

ಮಂಜೇಶ್ವರ ಗೋವಿಂದ ಪೈ-ಕೆದಂಬಾಡಿ ರಸ್ತೆಯಲ್ಲಿ ಗುಂಡಿ, ನೀರು ನಿಂತು ಜನರ ಆಕ್ರೋಶ

​ಮಂಜೇಶ್ವರ: ರಾಜ್ಯ ಸರ್ಕಾರದ ಕಿಫ್ಬಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಂಜೇಶ್ವರ ಗೋವಿಂದ ಪೈ – ಕೆದಂಬಾಡಿ ರಸ್ತೆ ಕಾಮಗಾರಿ ಮುಗಿದ ಬೆನ್ನಲ್ಲೇ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. 2027ರ ತನಕ ರಸ್ತೆಯ ನಿರ್ವಹಣಾ ವಾರಂಟಿ ಅವಧಿ ಇದ್ದರೂ, ಗುತ್ತಿಗೆದಾರನ ಬೇಜವಾಬ್ದಾರಿತನ ಹಾಗೂ ಅಧಿಕಾರಿಗಳ ಮೌನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಿಫ್ಬಿ ಫಂಡ್‌ನಿಂದ ಮಂಜೂರಾದ 5 ಕೋಟಿ 24 ಲಕ್ಷ ರೂ. ವೆಚ್ಚದಲ್ಲಿ ಈ ರಸ್ತೆಯ ಕಾಮಗಾರಿಯು 2024ರಲ್ಲಿ ಪೂರ್ಣಗೊಂಡಿತ್ತು. ನಿಯಮದಂತೆ ಸತತ ಮೂರು ವರ್ಷಗಳ ಕಾಲ…

Read More

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ

ತಿರುವನಂತಪುರಂ: ಕೇರಳದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್‌ (ಯುಡಿಎಫ್) ಭರ್ಜರಿ ಗೆಲುವಿನ ಬಳಿಕ ಕಳೆದ ಹತ್ತು ದಿನಗಳಿಂದ ಮುಂದುವರಿದಿದ್ದ ಮುಖ್ಯಮಂತ್ರಿ ಆಯ್ಕೆ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಕೇರಳದ ನೂತನ ಮುಖ್ಯಮಂತ್ರಿಯಾಗಿ ಹಿರಿಯ ನಾಯಕ ಹಾಗೂ ಮಾಜಿ ಪ್ರತಿಪಕ್ಷ ನಾಯಕ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಿದೆ. ಮೇ 4ರಂದು ಪ್ರಕಟವಾದ ಕೇರಳ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭೂತಪೂರ್ವ ಗೆಲುವು ಸಾಧಿಸಿತ್ತು. ಆದರೆ ಮುಖ್ಯಮಂತ್ರಿ ಹುದ್ದೆಗಾಗಿ ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್…

Read More

ವಿ.ಡಿ. ಸತೀಶನ್ vs ಕೆ.ಸಿ. ವೇಣುಗೋಪಾಲ್: ಅಂತಿಮ ಘಟ್ಟದಲ್ಲಿ ಸಿಎಂ ಪೈಪೋಟಿ

ಚರ್ಚೆಗಳಿಗೆ ಇಂದು ಅಂತ್ಯ ಸಿಗುವ ಸಾಧ್ಯತೆ ಇದೆ. ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಲಾಗಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.ಹಿರಿಯ ನಾಯಕರಾದ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್…

Read More

ಭಾವೈಕ್ಯತೆಯ ಬಂಡಿ ಉತ್ಸವ: ಉದ್ಯಾವರ ಅರಸು ಮಂಜೀಷ್ಣಾರ್ ಜಾತ್ರೋತ್ಸವ ಸಂಪನ್ನ

​ಮಂಜೇಶ್ವರ: ತುಳುನಾಡಿನ ಸುಪ್ರಸಿದ್ಧ ಸೌಹಾರ್ದತಾ ತಾಣಗಳಲ್ಲಿ ಒಂದಾದ ಉದ್ಯಾವರ ಅರಸು ಮಂಜೀಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವವು ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಹಿಂದೂ-ಮುಸ್ಲಿಂ ಭಾವೈಕ್ಯತೆಯೊಂದಿಗೆ ಅದ್ಧೂರಿಯಾಗಿ ನೆರವೇರಿತು. ಈ ಕ್ಷೇತ್ರದ ವಿಶೇಷತೆಯೆಂಬಂತೆ, ಶತಮಾನಗಳ ಪ್ರಾಚೀನ ಪದ್ಧತಿಯನ್ನು ಈ ಬಾರಿಯೂ ಅಚ್ಚುಕಟ್ಟಾಗಿ ಪಾಲಿಸಲಾಯಿತು. ಜಾತ್ರೋತ್ಸವದ ಪ್ರಮುಖ ವಿಧಿವಿಧಾನಗಳ ಸಂದರ್ಭದಲ್ಲಿ ಸಿಂಹಾಸನ ಕಟ್ಟೆಯ ಬಲಭಾಗದಲ್ಲಿ ಕ್ಷೇತ್ರದ ಆಡಳಿತ ವರ್ಗದವರು ಹಾಗೂ ಎಡಭಾಗದಲ್ಲಿ ಮುಸ್ಲಿಂ ಬಾಂಧವರು (ಜಮಾಹತಿನವರು) ಆಸೀನರಾಗಿ ಇಡೀ ಉತ್ಸವವನ್ನು ಕಣ್ತುಂಬಿಕೊಂಡರು. ಧರ್ಮದ ಗಡಿಗಳನ್ನು ಮೀರಿ ಒಂದೇ ವೇದಿಕೆಯಲ್ಲಿ ಸೌಹಾರ್ದತೆಯಿಂದ…

Read More
error: Content is protected !!