ಕಾಸರಗೋಡು:ಎಸ್.ನಾರಾಯಣ ಭಟ್ ಸಂಸ್ಮರಣೆ.

ರಾಜ್ಯ ಲೈಬ್ರರಿ ಕೌನ್ಸಿಲ್ ಮಾಜಿ ಸದಸ್ಯರಾಗಿ, ಕೆಎಸ್ ಟಿಎ ರಾಜ್ಯ ಸಮಿತಿ ಸದಸ್ಯರಾಗಿ, ಸೇವಾ ಪಿಂಚಣಿದಾರರ ಸಂಘದ ರಾಜ್ಯ ನಾಯಕರಾಗಿ, ತುಳು ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ ಶ್ರೀ ಎಸ್ ನಾರಾಯಣ ಭಟ್ ಅವರನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ವತಿಯಿಂದ ಸಂಸ್ಕರಣೆ ನಡೆಯಿತು. ಕಾಸರಗೋಡು ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮವನ್ನು ಕಾಸರಗೋಡು ಶಾಸಕ ಶ್ರೀ ಎನ್. ಎ. ನೆಲ್ಲಿಕುನ್ನು ಅವರು ಶ್ರೀಯುತರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ಅಡ್ವ. ಪಿ ಅಪ್ಪುಕುಟ್ಟನ್ ಅಧ್ಯಕ್ಷತೆ…

Read More

ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವು.

ಮಂಜೇಶ್ವರ : ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ಸೋಂಕಾಲು ಪ್ರತಾಪ ನಗರ ನಿವಾಸಿ ನವೀನ (53) ಸಾವನ್ನಪ್ಪಿದ ದುರ್ದೈವಿ. ಶನಿವಾರ ರಾತ್ರಿ ಕುಂಬಳೆಯಲ್ಲಿ ಕೆಲಸ ಮುಗಿಸಿ ಮನೆಯ ಕಡೆ ಹಿಂತಿರುಗುತ್ತಿರುವ ಮಧ್ಯೆ ಕುಂಬಳೆ ಗೋಪಾಲಕೃಷ್ಣ ಕ್ಷೇತ್ರ ಸಮೀಪದ ಷಟ್ಪದ ರಸ್ತೆಯಲ್ಲಿ ಎದುರು ಭಾಗದಿಂದ ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಹೊಡೆತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡ…

Read More

ವಯೋಶ್ರೀ ಯೋಜನೆಯಡಿಯಲ್ಲಿ ಹಿರಿಯ ಅಶಕ್ತರಿಗೆ ಸಹಾಯಕ ಉಪಕರಣ ವಿತರಣೆ

ಕಾಸರಗೋಡು : ನರೇಂದ್ರ ಮೋದಿ ಸರ್ಕಾರದ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ 60 ವರ್ಷ ಮೇಲ್ಪಟ್ಟವರಿಗೆ ಸಹಾಯಕ ಉಪಕರಣಗಳನ್ನು ವಿತರಿಸಲಾಯಿತು. ವಿಕಸಿತ ಕೇರಳ ಕಾಸರಗೋಡು ಜಿಲ್ಲಾ ಹೆಲ್ಸ್ ಡೆಸ್ಕ್ ಮೂಲಕ ನೋಂದಾಯಿಸಿದವರಿಗೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷರಾದ ಅಶ್ವಿನಿ ಎಂ.ಎಲ್. ಅವರು ಸಹಾಯಕ ಉಪಕರಣಗಳನ್ನು ಹಸ್ತಾಂತರಿಸಿದರು. ಬಿಜೆಪಿ ಜಿಲ್ಲಾ ಕಚೇರಿ ಡಾ. ಶ್ಯಾಮ್ ಪ್ರಕಾಶ್ ಮುಖರ್ಜಿ ಮಂದಿರದಲ್ಲಿ ವಿತರಣಾ ಕಾರ್ಯಕ್ರಮ ನಡೆಯಿತು. 60 ವರ್ಷ ಮೇಲ್ಪಟ್ಟ ಹೆಸರು ನೋಂದಾಯಿಸಿದ ಹಿರಿಯ ಕಾರ್ಯಕರ್ತರಿಗೆ ಸಹಾಯಕ ಉಪಕರಣಗಳನ್ನು ವಿತರಿಸಲಾಯಿತು.

Read More

ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಆರಿಕ್ಕಾಡಿ ಕಡವತ್ ನಲ್ಲಿ ಟಾಲ್ ಪ್ಲಾಝಾ ಸ್ಥಾಪಿಸಲು ನಾಗರಿಕರ ಅಡ್ಡಿ -ಸಂರಕ್ಷಣೆ ನೀಡುವಂತೆ ಪೊಲೀಸ್ ಮೊರೆ ಹೋದ ಗುತ್ತಿಗೆದಾರ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಆರಿಕ್ಕಾಡಿ ಕಡವತ್ ನಲ್ಲಿ ಟಾಲ್ ಪ್ಲಾಝಾ ಸ್ಥಾಪಿಸಲು ನಾಗರಿಕ ಹಿತಾಸಕ್ತಿಯ ಕ್ರಿಯಾ ಸಮಿತಿ ವಿರೋಧ ಒಡ್ಡಿ, ಕಾಮಗಾರಿ ತಡೆಯುತ್ತಿರುವುದರಿಂದ ಕಾರ್ಮಿಕರಿಗೆ ಸಂರಕ್ಷಣೆ ನೀಡಿ ಕಾಮಗಾರಿಗೆ ಭದ್ರತೆ ಒದಗಿಸಬೇಕೆಂದು ಗುತ್ತಿಗೆದಿರರಾದULPC ಸೊಸೈಟಿ ಪ್ರತಿನಿಧಿಗಳು ಪೋಲೀಸ್ ಮೊರೆ ಹೊರೆ ಹೋಗಿದ್ದಾರೆ. ಟಾಲ್ ಪ್ಲಾಝಾ ನಿರ್ಮಾಣದ ತಡೆಯಾಜ್ಞೆಯನ್ನು ಹೈಕೋರ್ಟು ಮಧ್ಯಂತರ ಆದೇಶದಲ್ಲಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮುಂದಿನ 60ದಿನದೊಳಗೆ ಟೋಲ್ ಪ್ಲಾಝಾ ನಿರ್ಮಿಸಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುತ್ತಿಗೆದಾರರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅವರು ಕಾಮಗಾರಿ…

Read More

ಪ್ರತಾಪನಗರ 42 ನೇ ಸಾರ್ವಜನಿಕ ಗೌರಿ ಗಣೇಶೋತ್ಸವ ,8 ನೇ ವರ್ಷದ ಭಜನೋತ್ಸವ , ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ . ಆಗಸ್ಟ್ 24 ರಿಂದ.

ಉಪ್ಪಳ :ಪ್ರತಾಪನಗರ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಮಂದಿರದಲ್ಲಿ 42 ನೇ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಹಾಗೂ ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ ಮತ್ತು 8 ನೇ ವರ್ಷದ ಭಜನೋತ್ಸವ ಆಗಸ್ಟ್ 24 ರಿಂದ 28 ರ ವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ದಿನಾಂಕ 24 ರಂದು ಬೆಳಿಗ್ಗೆ 7 ರಿಂದ ಸಾಮೂಹಿಕ ಪ್ರಾರ್ಥನೆ ,ಗಣಹೋಮ .ಸಾಯಂಕಾಲ 3 30 ರಿಂದ ಬಜೆ ಹರಿನಾರಾಯಣ ಮಯ್ಯ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ…

Read More

ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಕುಂಬಳೆ.

ಕುಂಬಳೆ: ಕಾರ್ಯನಿರ್ವಹಣಾ ಶ್ರೇಷ್ಠತೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆಯ ಕುಂಬಳೆ ಶಾಖೆ ಪೌರ ಸ್ವಾಗತ ಕಾರ್ಯಕ್ರಮ ನಡೆಯಿತು . ರಾಜ್ಯ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗ ,ಹಿಂದುಳಿದ ವರ್ಗ ಖಾತೆ ಸಚಿವ ಓ .ಆರ್. ಕೇಳು ಉಧ್ಘಾಟಿಸಿದರು.ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ತಾಯಿರ ಯೂಸುಫ್ , ಸಂಸದ ರಾಜಮೋಹನ್ ಉಣ್ಣಿತಾನ್ ,ತ್ರಿಕರಿಪುರ ಶಾಸಕ ಎಂ ರಾಜಗೋಪಾಲನ್ , ಶಾಸಕ ಇ…

Read More

ಉಪ್ಪಳದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಅಗ್ನಿ ಅವಘಡ : ಲಕ್ಷಾಂತರ ರೂ. ಮೌಲ್ಯದ ಸಾಮಾಗ್ರಿಗಳು ಸುಟ್ಟು ಭಸ್ಮ.

ಮಂಜೇಶ್ವರ : ಉಪ್ಪಳ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಮಾಸ್ಟರ್ ಕಂಪ್ಯೂಟರ್ಸ್” ಎಂಬ ಸಂಸ್ಥೆಯಲ್ಲಿ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ಸಾಮಾಗ್ರಿಗಳು ಹೊತ್ತಿ ನಾಶಗೊಂಡಿದೆ.ಮಾಹಿತಿ ಅರಿತು ಸ್ಥಳಕ್ಕೆ ಉಪ್ಪಳ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಸ್ಥಳೀಯರಲ್ಲೂ ಆತಂಕ ಉಂಟಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ರೈಲ್ವೆ…

Read More

ಬೀದಿ ನಾಯಿಗಳ ಅಟ್ಟಹಾಸಕ್ಕೆ ನಾಗರಿಕರ ಮುಗಿಲು ಮುಟ್ಟಿದ ಆಕ್ರಂಧನ: ಅಧಿಕಾರಸ್ಥರ ಮಡುಗಟ್ಟಿದ ಮೌನದ ವಿರುದ್ಧ ಮುಸ್ಲಿಂ ಲೀಗ್ ನಿಂದ ಬೃಹತ್ ಪ್ರತಿಭಟನೆ.

ಮಂಜೇಶ್ವರ, ಆಗಸ್ಟ್ 22 – ಬೀದಿ ನಾಯಿಗಳ ಅಟ್ಟಹಾಸದಿಂದ ತತ್ತರಿಸಿರುವ ಮಂಜೇಶ್ವರ ಗ್ರಾಮಸ್ಥರ ಮುಗಿಲು ಮುಟ್ಟಿದ ಆಕ್ರಂಧನಕ್ಕೆ ಕಿಂಚತ್ತೂ ಬೆಲೆ ಕಲ್ಪಿಸಿದ ಮಂಜೇಶ್ವರ ಗ್ರಾಮ ಪಂಚಾಯತು ಅಧಿಕಾರಸ್ಥರ ಮಡುಗಟ್ಟಿದ ಮೌನದ ವಿರುದ್ಧ ನಾಗರಿಕರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಿನ ರೀತಿಯಲ್ಲಿ ಸ್ಪೋಟಕಗೊಳ್ಳುತ್ತಿರುವ ದೃಶ್ಯ ಕಂಡು ಬರುತ್ತಿದೆ.ಶುಕ್ರವಾರದಂದು ಪಂಚಾಯತು ಅಧಿಕಾರಸ್ಥರ ವಿರುದ್ಧ ಅವರ ನಿರ್ಲಕ್ಷ್ಯವನ್ನು ವಿರೋಧಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮಂಜೇಶ್ವರ ಪಂಚಾಯತು ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು. ಪಕ್ಷದ…

Read More

ಮಂಜೇಶ್ವರ ಠಾಣಾ ಎ ಎಸ್ಸೈ ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆ : ಡೆತ್ ನೋಟ್ ಲಭಿಸಿರುವುದಾಗಿ ಸೂಚನೆ

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ಎಎಸ್ಟೈ ಯೊಬ್ಬರು ಪೊಲೀಸ್ ಕ್ಟಾರ್ಟರ್ಸ್ ನೊಳಗೆ ಆತ್ಮಹತ್ಯೆಗೈದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಕುತ್ತಿಕೋಲ್ ನಿವಾಸಿ ಮಧು (50) ಸಾವನ್ನಪ್ಪಿದ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಅವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಮಾಹಿತಿ ಅರಿತು ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಒಂದು ಡೆತ್ ನೋಟ್ ಕ್ವಾರ್ಟರ್ಸ್‌ನಿಂದ ಪತ್ತೆಯಾಗಿದೆ ಎಂಬ ಮಾಹಿತಿ ಇದೆ. ಮಧು ಅವಿವಾಹಿತರಾಗಿದ್ದರು. ಠಾಣೆಗೆ ಬರುವ ನಾಗರಿಕರೊಡನೆ ಉತ್ತಮ ಸಂಬಂಧ…

Read More

ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ವತಿಯಿಂದ ಪ್ರಶಾಂತ್ ರೈ ಮೆಮೋರಿಯಲ್ ಕ್ರಿಕೆಟ್ ಪಂದ್ಯಾಟ

ಮಿಯಪದವು : ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ಕಾಸರಗೋಡು ಇದರ ನೇತೃತ್ವದಲ್ಲಿ ದಿವಂಗತ ಅಧ್ಯಾಪಕ ಪ್ರಶಾಂತ್ ರೈ ಅವರ ಸ್ಮರಣಾರ್ಥ ಇಂಡಿಪೆಂಡೆನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಮೀಯಪದವು ಶಾಲಾ ಮೈದಾನದಲ್ಲಿ ಜರಗಿತು. ಪಂದ್ಯಾಟವನ್ನು ಮೀಯಪದವು ಯು ಪಿ ಶಾಲಾ ಮುಖ್ಯೋಪಾಧ್ಯಾಯರಾದ ಅರವಿಂದಾಕ್ಷ ಭಂಡಾರಿ ಉದ್ಘಾಟಿಸಿದರು. ಟಿ ಎಸ್ಸಿ ಯ ಅಧ್ಯಕ್ಷರಾದ ಸಂಜೀವ ಸಿ ಎಚ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರುಗಳಾದ ಉದಯ್ ಸಾರಂಗ್ ಮತ್ತು ಸದಾಶಿವ ಬಾಲಮಿತ್ರ,ಜತೆ ಕಾರ್ಯದರ್ಶಿ ರಘುವೀರ್ ಉಪಸ್ಥಿತರಿದ್ದರು. ಟಿ ಎಸ್ಸಿ ಕಾರ್ಯದರ್ಶಿ ಪ್ರಶಾಂತ್…

Read More
error: Content is protected !!