ಮಂಗಲ್ಪಾಡಿಯಲ್ಲಿ ಮೇಲೈಸಿದ ಬಂಟರ ಆಟಿದ ಕೂಟ.
ಉದ್ಯಮಿ,ಕೊಡುಗೈ ದಾನಿ ಕಾಸರಗೋಡು ಜಿಲ್ಲಾ ಬಂಟರ ಭವನ ಕಟ್ಟಡ ಸಮಿತಿಯ ಅಧ್ಯಕ್ಷ ಡಾ. ಸದಾಶಿವ ಶೆಟ್ಟಿ, ಕುಳೂರು ಕನ್ಯಾನ ಇವರ ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಮಂಗಲ್ಪಾಡಿ ಮನೆಯ ಗದ್ದೆಯಲ್ಲಿ ಕಾಸರಗೋಡು ಜಿಲ್ಲಾ ಬಂಟರ ಸಮ್ಮಿಲನ ಹಾಗೂ ಆಟಿದ ಕೂಟ ಕಾರ್ಯಕ್ರಮ ಅದ್ದೂರಿಯಿಂದ ಜರುಗಿತು.ಜಿಲ್ಲೆಯ ಬಂಟರ ಸಂಘ, ಫಿರ್ಕಾ ಬಂಟರ ಸಂಘಗಳು, ಪಂಚಾಯತ್ ಮಟ್ಟದ ಎಲ್ಲಾ ಬಂಟರ ಸಂಘದ ಸಹಯೋಗದೊಂದಿಗೆ ಜರಗಿದ ಈ ಕಾರ್ಯಕ್ರಮದಲ್ಲಿ ಆಟಿದ ಕೂಟದ ಸಲುವಾಗಿ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಹಾಗೂ ಸ್ಪರ್ಧೆಗಳನ್ನು ಮನೋರಂಜನಾ ಕಾರ್ಯಕ್ರಮಗಳನ್ನು…
