‘ದಿ ಕೇರಳ ಸ್ಟೋರಿ’ ಸಿನಿಮಾಗೆ ರಾಷ್ಟ್ರೀಯ ಪ್ರಶಸ್ತಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಖಂಡನೆ
ತಿರುವನಂತಪುರ: 2023ನೇ ಸಾಲಿನ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಇಡೀ ದೇಶಾದ್ಯಂತ ಸಂಚಲನ ಮೂಡಿಸಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾದ ಸುದಿತ್ತೋ ಸೇನ್ ಅವರಿಗೆ ‘ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ’ ಹಾಗೂ ‘ಅತ್ಯುತ್ತಮ ಛಾಯಾಗ್ರಹಣ’ ಪ್ರಶಸ್ತಿ ನೀಡಿರುವುದನ್ನು ಕೇರಳದ ಸಿಎಂ ಪಿಣರಾಯಿ ವಿಜಯನ್ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಕೋಮುವಾದ ಪ್ರಚೋದಿಸಲು ಹಾಗೂ ಕೇರಳಕ್ಕೆ ಅವಹೇಳನ ಮಾಡಲು ಯತ್ನಿಸಿದ್ದ ಸಿನಿಮಾವನ್ನ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ, ರಾಷ್ಟ್ರೀಯ ಸಮಗ್ರತೆ ಮತ್ತು ಕೋಮು ಸಾಮರಸ್ಯಕ್ಕೆ ಹೆಸರಾದ ಭಾರತೀಯ…
