ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ವೈಭವದ ಆಚರಣೆ .ಬಾಕುಡ ಸಮುದಾಯದ ನಾಗಬನಗಳಲ್ಲಿ ಬಾಕುಡರಿಂದಲೇ ತನು ಸಮರ್ಪಣೆ .

ಮಂಜೇಶ್ವರ : ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಮೊದಲ ಹಬ್ಬ ನಾಗರಪಂಚಮಿಯನ್ನು ವೈಭವದಿಂದ ನಾಡಿನೆಲ್ಲೆಡೆ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ವಿವಿಧ ನಾಗ ಕ್ಷೇತ್ರಗಳಿಗೆ , ನಾಗಬನಗಳಿಗೆ, ತರವಾಡು , ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ತೆರಳಿ ನಾಗನಿಗೆ ತನು ಸಮರ್ಪಣೆ ಮಾಡಿ ಸಂಪನ್ನರಾದರು. ಸಪ್ತ ಭಾಷಾ ಸಂಗಮ ಭೂಮಿಯಾದ ಕಾಸರಗೋಡು ಮತ್ತು ಮಂಜೇಶ್ವರ ಪ್ರದೇಶದಲ್ಲಿ ಬರುವ ಬಾಕುಡ ಸಮುದಾಯದ ಇತಿಹಾಸ ಪ್ರಸಿದ್ಧ ನಾಗ ಬನಗಳಲ್ಲಿ ಬೆಳಗ್ಗಿನಿಂದಲೇ ವೈಭವದ ನಾಗರ ಪಂಚಮಿಯನ್ನು ಆಚರಿಸಲಾಯಿತು. ಆದರೆ ಈ ಬಾಕುಡ ಸಮುದಾಯ…

Read More

ಎಡನೀರು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ ಆ.2ರಂದು

ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, ‘ಕನ್ನಡದ ನಡಿಗೆ ಶಾಲೆಯ ಕಡೆಗೆ” ಶೈಕ್ಷಣಿಕ ಶಿಬಿರದ 4ನೇ ಕಾರ್ಯಕ್ರಮವು 2025 ಆಗಸ್ಟ್ 2ರಂದು ಬೆಳಗ್ಗೆ 10ರಿಂದ ಎಡನೀರಿನ ಸ್ವಾಮೀಜೀಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಎಡನೀರು ಶ್ರೀಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯರು ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ…

Read More

ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರ ಪ್ರತಿಜ್ಞಾ ಸ್ವೀಕಾರ

ಮಂಜೇಶ್ವರ : ಹೊಸಂಗಡಿ ಹಾಗೂ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ವಿದ್ಯಾರ್ಥಿ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರ ಪ್ರತಿಜ್ಞಾ ಸ್ವೀಕಾರ ಹಾಗೂ ಶಿಕ್ಷಕ ಶಿಕ್ಷಕಿಯರು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೂ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ಮಾಡಿದ ಶಾಲೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿತ್ತು. ಜೊತೆಯಾಗಿ ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯನ್ನು ತಿಳಿಯುವಲ್ಲಿ ಸಹಕಾರವಾಗುವ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆ…

Read More

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ;ನೀತಿ ಸಂಹಿತೆ ಜಾರಿಚುನಾವಣಾದಿಕಾರಿಗಳ ನೇಮಕ;ರಾಜಕೀಯ ಪಕ್ಷಗಳ ಪ್ರಮುಖರ ಸಭೆ

ಕಡಬ ಪಟ್ಟಣ ಪಂಚಾಯಿತಿ ಚುನಾವಣೆಗೆ ಅದಿಸೂಚನೆ ಪ್ರಕಟವಾಗಿದ್ದು, ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಂಗಳವಾರದಿoದಲೇ (ಜು. ೨೯ ) ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಮಂಗಳವಾರ ಸಂಜೆ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಾಮಪತ್ರ…

Read More

ಪಾವೂರು ವನದುರ್ಗಾ ನಾಗಬ್ರಹ್ಮ ಶಾಸ್ತಾರ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ತಂಬಿಲ ಪೂಜೆ

ಮಂಜೇಶ್ವರ :ಪಾವೂರು ವನದುರ್ಗಾ ನಾಗಬ್ರಹ್ಮ ಶಾಸ್ತಾರ ಕ್ಷೇತ್ರದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ತಂಬಿಲ ಪೂಜೆ ಶ್ರೀ ಕುಂಟ್ಟಾರು ರವೀಶ್ ತಂತ್ರಿ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕ್ಷೆತ್ರದ ಅಧ್ಯಕ್ಷರಾದ ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು ಉಪಾಧ್ಯಕ್ಷರಾದ ಶ್ರೀ ಗಣೇಶ್ ಪಾವೂರು ಕಾರ್ಯದರ್ಶಿ ಕಮಲಾಕ್ಷ ವಕೀಲರು ಮಂಗಳೂರು ಖಜಾಂಚಿ ಕೋಟಿಯಪ್ಪ ಪೂಜಾರಿ ಜಯರಾಮ ಪಾವೂರು ಉಮೇಶ ಪಾವೂರು ಗೋಪಾಲ ಕುಂಡಾಪು ಹಾಗೂ ಕ್ಷೆತ್ರದ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು ಹಾಗೂ ಪಾವೂರು ಶ್ರೀ ಚಾಮುಂಡೇಶ್ವರಿ ಕ್ಷೆತ್ರದ ಸೇವಾ ಸಮಿತಿ…

Read More

ಯುವಕನನ್ನು ಅಪಹರಿಸಿ ಕೊಲೆಗೈದುಶವವನ್ನು ಉಪೇಕ್ಷಿಸಿದ ಪ್ರಕರಣ – 10 ನೇ ಆರೋಪಿಯನ್ನು ಬಂಧಿಸಿದ ಪೊಲೀಸ್

ಮಂಜೇಶ್ವರ: ಕೊಲ್ಲಿ ಉದ್ಯೋಗಿ ಯುವಕನನ್ನುಅಪಹರಣಗೈದು ಹಿಗ್ಗಾ ಮಗ್ಗಾ ಥಳಿಸಿ ಕೊಲೆಗೈದ ಬಳಿಕ ಶವವನ್ನು ಕಾರಿನಲ್ಲಿ ಕೊಂಡೊಯ್ದು ಖಾಸಗಿ ಆಸ್ಪತ್ರೆಯಲ್ಲಿ ಉಪೇಕ್ಷಿಸಿದ ಪ್ರಕರಣಕ್ಕೆ ಸಂಬಂಧಿಸಿ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಡನ್ನು ನಡುಗಿಸಿದ ಈ ಪ್ರಕರಣದ 10ನೇ ಆರೋಪಿಯಾದ ಮಂಜೇಶ್ವರ ಆಚೆಕೆರೆಯ ಅಶರ್ ಅಲಿ (27) ಎಂಬಾತನನ್ನು ಕಾಸರಗೋಡು ಕ್ರೈಂಬ್ರಾಂಚ್ ತಂಡ ಬಂಧಿಸಿದೆ. ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳುತ್ತಿದ್ದ ವೇಳೆ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಈತ ನನ್ನು ಬಂಧಿಸಲಾಗಿದೆ. ಕಾಸರಗೋಡಿಗೆ ತಲುಪಿಸಿದ ಆರೋಪಿಯನ್ನು ಸಮಗ್ರ ವಾಗಿ ತನಿಖೆಗೊಳಪಡಿಸಿದ ಬಳಿಕ…

Read More

ಹೊಸಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ .

ಮಂಜೇಶ್ವರದ ಹೊಸಂಗಡಿಯ 45 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಇತ್ತೀಚೆಗೆ ಹೊಸಂಗಡಿ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಿತು.ಮಂಜೇಶ್ವರ ಸರ್ವಿಸ್ ಕೊ_ಓಪರೇಟಿವ್ ಬ್ಯಾಂಕ್ ನ ಆಡಳಿತ ಮಂಡಳಿ ನಿರ್ದೇಶಕರಾದ ಸಿ.ಎಚ್. ಗಣೇಶ್ ಬಿಡುಗಡೆಗೊಳಿಸಿದರು. ಪದ್ಮನಾಭ ಕಡಪ್ಪರ ,ಹರೀಶ್ ಮಾಡ , ನ್ಯಾಯವಾದಿ ನವೀನ್ ರಾಜ್,ದಿನಕರ ಹೊಸಂಗಡಿ,ಆದರ್ಶ್ ಬಿ ಎಂ , ಅವಿನಾಶ್ ಮಂಜೇಶ್ವರ ,ಭಾಸ್ಕರ ಮಂಜೇಶ್ವರ ,ರತನ್ ಹೊಸಂಗಡಿ ,ಚಿನ್ಮಯಾನಂದ ಹೊಸಂಗಡಿ ಮುಂತಾದವರು ಉಪಸ್ಥಿತರಿದ್ದರು. ಆಗಸ್ಟ್ 27 ರಿಂದ 30 ರ ತನಕ ವಿವಿಧ…

Read More

ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ” ನಾಗರ ಪಂಚಮಿ ” ಆಚರಣೆ

ಮಂಜೇಶ್ವರ : ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ” ನಾಗರ ಪಂಚಮಿ ” ಸಂಭ್ರಮ ದಿಂದ ಆಚರಿಸಲಾಯಿತು . ಪ್ರಾತಃ ಕಾಲ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ವಾಸುಕೀ ಪೂಜೆ , ದೇವಳದ ಮುಂಭಾಗದಲ್ಲಿರುವ ಅಶ್ವತ್ಥ ಕಟ್ಟೆಯಲ್ಲಿ ಶ್ರೀ ನಾಗದೇವರ ಶೀಲಾ ಪ್ರತಿಮೆಗಳಿಗೆ ಪಂಚಾಮೃತ , ಕ್ಷೀರಾಭಿಷೇಕ , ಶಿಯಾಳಾಭಿಷೇಕ ಗಳು ಭಜಕರ ಸಮ್ಮುಖದಲ್ಲಿ ನೆರವೇರಿತು . ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು .ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು ತಾಲೂಕು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಾಸರಗೋಡು ವಲಯದ ಅಡ್ಕತ್ತಬೈಲು ಕಾರ್ಯ ಕ್ಷೇತ್ರದಲ್ಲಿ BEMHS ಶಾಲೆಯ ಹತ್ತನೇ ತರಗತಿಯ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ ನಿನ್ನೆ BEMHS ಶಾಲೆಯಲ್ಲಿ ನಡೆಯಿತ್ತು . ಕಾಸರಗೋಡು ತಾಲೂಕಿನ ಭಜನಾ ಪರಿಷತ್ ಅಧಕ್ಷರಾದ ಶ್ರೀ ವೆಂಕಟ್ರಮಣ ಹೊಳ್ಳ ದೀಪ ಬೆಳಗಿಸಿ ಉದ್ಘಾಟಿಸಿದರು . ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಹಾಗೂ…

Read More

ಮಂಜೇಶ್ವರ ಕ್ವಾಟರ್ಸ್ನಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ : ಮಂಜೇಶ್ವರ ಕಡಂಬಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಕೆ ಎ ಅಬ್ದುಲ್ಲ ಮಾಲಕತ್ವದ ಕೆ ಎ ಬೋರ್ಡ್ ಪ್ಲೈವುಡ್ ಕಾರ್ಖಾನೆಯಲ್ಲಿ ನೌಕರನಾಗಿರುವ ಬಿಹಾರ ಮೂಲದ ಯುವಕನೊಬ್ಬ ಅಲ್ಲೇ ಸಮೀಪವಿರುವ ಕ್ವಾರ್ಟರ್ಸ್ ನಲ್ಲಿ ಸೋಮವಾರ ಸಂಜೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಿಹಾರ ನಿವಾಸಿ ಸೂರಜ್ ಸಾವನ್ನಪ್ಪಿದ ಯುವಕನಾಗಿದ್ದಾನೆ. ಈತ 8 ತಿಂಗಳು ಮೊದಲು ಬಿಹಾರದಿಂದ ಕೆಲಸಕ್ಕಾಗಿ ಬಂದಿದ್ದಾನೆನ್ನಲಾಗಿದೆ. ಜೊತೆಯಾಗಿದ್ದ ಈತನ ಭಾವ ಸೂರಜ್ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡ ಮೊದಲ ವ್ಯಕ್ತಿಯಾಗಿದ್ದಾನೆ. ಬಳಿಕ ಈತನೇ ಸೂರಜ್…

Read More
error: Content is protected !!