ಸ್ನಾನಕ್ಕೆಂದು ಕೆರೆಗೆ ಇಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣ ಸಾವು
ಮಂಜೇಶ್ವರ: ಸ್ನಾನಕ್ಕೆಂದು ಕೆರೆಗೆ ಇಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನೊಂದು ಬಾಲಕನನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಸಾವನ್ನಪ್ಪಿದ ಬಾಲಕರು.ಅನ್ವರ್ ನ ಸಹೋದರ ಹಾಶಿಮ್ ನನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಣಿಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಾಹಿತಿ ಅರಿತು ನಾಗರಿಕರು, ಅಗ್ನಿಶಾಮಕ…
