ಅಡೂರಿನಲ್ಲಿ ಮಣ್ಣುಕುಸಿತ ದುರಂತ: ಇಬ್ಬರು ಬಾಲಕರ ಜೀವಬಲಿ

ಕಾಸರಗೋಡು, ಜೂನ್ 8: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು ಸಮೀಪದ ಸಂಚಕ್ಕಡವು ಪ್ರದೇಶದಲ್ಲಿ ಸಂಭವಿಸಿದ ಭೀಕರ ಮಣ್ಣುಕುಸಿತ ದುರಂತದಲ್ಲಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಸಾವನ್ನಪ್ಪಿದವರನ್ನು ಅಬೂಬಕ್ಕರ್ ಅವರ ಪುತ್ರರಾದ ಮುನ್ಸೀರ್ (10) ಹಾಗೂ ಮುಜಮ್ಮಿಲ್ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕನನ್ನು ತಕ್ಷಣವೇ ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇತ್ತೀಚೆಗೆ ಗೃಹಪ್ರವೇಶ ನಡೆದ ಮನೆಯ ಸಮೀಪ…

Read More

ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ: ನೂತನ ಪದಾಧಿಕಾರಿಗಳ ಆಯ್ಕೆ

ಸುಂಕದಕಟ್ಟೆ, ಜೂನ್ 8: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮ್ಮೇಳನವು ಸುಂಕದಕಟ್ಟೆಯ ಬಿಜೆಪಿ ಕಾರ್ಯಾಲಯದಲ್ಲಿ ಯಶಸ್ವಿಯಾಗಿ ನಡೆಯಿತು. ಸಮಿತಿ ಅಧ್ಯಕ್ಷೆ ವನಿತಾ ಜೆ. ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ಯಶವಂತಿ ಬೆಜ್ಜ, ಪಂಚಾಯತ್ ಸದಸ್ಯರಾದ ಚಂದ್ರಶೇಖರ ವರ್ಕಾಡಿ, ತುಳಸಿ ವರ್ಕಾಡಿ ಹಾಗೂ ರವಿ ಎಂ.ಕೆ. ಕೊಲ್ಯೂರು ಶುಭಾಶಯಗಳನ್ನು ತಿಳಿಸಿ ಮಾತನಾಡಿದರು. ಸಮ್ಮೇಳನದ ಸಮಾರೋಪ ಭಾಷಣವನ್ನು ಬಿಎಂಎಸ್ ಜಿಲ್ಲಾ…

Read More

‘ಭರವಸೆಯ ಬೆಳಕು’ ಹಾಗೂ ‘ಭರವಸೆಯ ಶಿಕ್ಷಣ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ “ಭರವಸೆಯ ಬೆಳಕು (Light of Hopes) – Student Achievement Award 2026” ಹಾಗೂ “ಭರವಸೆಯ ಶಿಕ್ಷಣ ರತ್ನ (Light of Hopes – Teachers Achievement Award 2026)” ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ…

Read More

ಕೊಟ್ಟಿಯೂರು ದೇವಸ್ಥಾನದಲ್ಲಿ ಕನ್ನಡಿಗರಿಗೆ ಅವಮಾನ? ಭಕ್ತರ ಆಕ್ರೋಶಕ್ಕೆ ಕಾರಣವಾದ ಅವ್ಯವಸ್ಥೆ!

ಕಣ್ಣೂರು: ಕೇರಳದ ಪ್ರಸಿದ್ಧ ಕೊಟ್ಟಿಯೂರು ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ವೈಶಾಖ ಮಹೋತ್ಸವದ ವೇಳೆ ಕನ್ನಡಿಗ ಭಕ್ತರು ಅನುಭವಿಸಿದ ಕಹಿ ಘಟನೆಗಳು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿವೆ. ಕರ್ನಾಟಕದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದರೂ, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೇ ಅವ್ಯವಸ್ಥೆ ಹಾಗೂ ದುರ್ವರ್ತನೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಸೆಳೆಯುವ ಈ ಪವಿತ್ರ ಕ್ಷೇತ್ರದಲ್ಲಿ ಈ ಬಾರಿ ಕನ್ನಡಿಗರು ನೂಕುನುಗ್ಗಲು, ತಳ್ಳಾಟ ಹಾಗೂ ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ತೀವ್ರ ಅಸಮಾಧಾನ…

Read More

ಜೂನ್ 7ರಂದು ಸುಂಕದಕಟ್ಟೆಯಲ್ಲಿ ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ

ಉಪ್ಪಳ, ಜೂ. 6:ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮಿತಿಯ ವತಿಯಿಂದ ಜೂನ್ 7ರಂದು ಆದಿತ್ಯವಾರ ಸಂಜೆ 3 ಗಂಟೆಗೆ ಸುಂಕದಕಟ್ಟೆಯ ಬಿ.ಜೆ.ಪಿ. ಕಾರ್ಯಾಲಯದಲ್ಲಿ ಪಂಚಾಯತ್ ಸಮ್ಮೇಳನ ನಡೆಯಲಿದೆ. ಈ ಕುರಿತು ಸಂಘದ ಅಧ್ಯಕ್ಷೆ ವನಿತಾ ಜೆ. ನಾಯಕ್ ಹಾಗೂ ಕಾರ್ಯದರ್ಶಿ ರವೀಂದ್ರ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. “ಶ್ರಮವೇ ಆರಾಧನೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮಜ್ದೂರ್ ಸಂಘವು ಕಾರ್ಮಿಕರು ತಮ್ಮ ಕರ್ತವ್ಯವನ್ನು ರಾಷ್ಟ್ರಸೇವೆಯೆಂದು ಭಾವಿಸಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸುವ ಉದ್ದೇಶ ಹೊಂದಿದೆ. ಕಾರ್ಮಿಕರು, ಮಾಲಕರು…

Read More

ವಿಶ್ವ ರಾಮಕ್ಷತ್ರಿಯ ಮಹಾಸಂಘ ಪದಾಧಿಕಾರಿಗಳಿಗೆ ಕನ್ನಡ ಭವನದ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ “ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “ಪ್ರದಾನ.

ಕಾಸರಗೋಡು :ವಿಶ್ವ ರಾಮಕ್ಷತ್ರಿಯ ಮಹಾಸಂಘ (ರಿ.) ಕುಂದಾಪುರ ಇದರ ಅಧ್ಯಕ್ಷರು ಹಾಗೂ ಸಮಾಜ ಸೇವಕ, ಹಿರಿಯ ಸಂಘಟಕ ಶ್ರೀ ಎಚ್. ಆರ್ ಶಶಿಧರ್ ನಾಯ್ಕ್, ಉದ್ಯಮಿ, ಸಮಾಜಸೇವಕ, ವಿಶ್ವ ಸಂಘ ಉಪಾಧ್ಯಕ್ಷರಾದ ಶ್ರೀ ನಾಗರಾಜ್ ಕಲ್ಪತರು ಕುಂದಾಪುರ, ರಾಮಕ್ಷತ್ರಿಯ ಮಾಸಪತ್ರಿಕೆ ಸಂಪಾದಕರಾದ ಮಹಾಸಂಘ ಉಪಾಧ್ಯಕ್ಷರಾದ ಶ್ರೀ ಬಿ. ಎಮ್ ನಾಥ್ ಬೆಂಗಳೂರು, ವಿಶ್ವ ಮಹಾಸಂಘ ಕೋಶಾಧಿಕಾರಿ, ಧಾರ್ಮಿಕ ಮುಖಂಡ ಶ್ರೀ ಕರುಣಾಕರ ಉಡುಪಿ ಈ ಮೇಲಿನ ನಾಲ್ಕು ಮಂದಿಯ ಶ್ರೇಷ್ಠ ಸಮುದಾಯಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಸರ್ವತೋಮುಖ…

Read More

ಧರ್ಮತ್ತಡ್ಕ ಶಾಲೆಗೆ ಅಮಾನತುಗೊಂಡ ಶಿಕ್ಷಕ ಮರುಪ್ರವೇಶ: ಪೋಷಕರ ತೀವ್ರ ವಿರೋಧ

ಮಂಜೇಶ್ವರ : ಧರ್ಮತ್ತಡ್ಕದ ಎಂ.ಐ.ಎ.ಎಲ್.ಪಿ ಶಾಲೆಯಲ್ಲಿ ಅಮಾನತುಗೊಂಡಿದ್ದ ಶಿಕ್ಷಕ ಕೆ.ವಿ. ಜಯಪ್ರಸಾದ್ ಮರಳಿ ಶಾಲೆಗೆ ಹಾಜರಾಗಿರುವುದು ಮತ್ತೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಡಿಇಒ ಆದೇಶದ ಮೇರೆಗೆ ಬದಿಯಡ್ಕ ಪೊಲೀಸರ ಸಮ್ಮುಖದಲ್ಲಿ ಶಿಕ್ಷಕರು ಹಾಜರಾತಿ ದಾಖಲಿಸಿದ್ದು, ಇದನ್ನು ವಿರೋಧಿಸಿ ಪೋಷಕರು ತೀವ್ರ ಪ್ರತಿಭಟನೆ ನಡೆಸಿದರು.ಮಕ್ಕಳನ್ನು ತರಗತಿಯಲ್ಲಿ ಕೂಡಿ ಹಾಕುವುದು ಮತ್ತು ಶೌಚಾಲಯಕ್ಕೆ ಹೋಗಲು ಅವಕಾಶ ನೀಡದಿರುವುದು ಸೇರಿದಂತೆ ಈ ಶಿಕ್ಷಕನ ವಿರುದ್ಧ ಗಂಭೀರ ಆರೋಪಗಳಿವೆ. ಸದ್ಯ ತಮ್ಮ ಬೇಡಿಕೆಗೆ ಮನ್ನಣೆ ಸಿಗದಿದ್ದರೆ ಮಕ್ಕಳನ್ನು ಶಾಲೆ ಬದಲಾಯಿಸುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ….

Read More

ಕೇರಳದಲ್ಲಿ ಭಾರೀ ಮಳೆ ಎಚ್ಚರಿಕೆ: ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್, ಜೂನ್ 8ರವರೆಗೆ ಮೀನುಗಾರಿಕೆ ನಿಷೇಧ

ತಿರುವನಂತಪುರ: ನೈಋತ್ಯ ಮುಂಗಾರು ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ವ್ಯಾಪಕ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಶನಿವಾರ ರೆಡ್ ಅಲರ್ಟ್ ಜಾರಿಯಲ್ಲಿರಲಿದೆ. ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಇತರ ಆರು ಜಿಲ್ಲೆಗಳಲ್ಲಿ…

Read More

ಸಂಭ್ರಮದಿಂದ ನಡೆದ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಪ್ರಾರಂಭೋತ್ಸವ

ಮೀಯಪದವು, ಜೂನ್ 1: ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಸೋಮವಾರ ಬೆಳಿಗ್ಗೆ 9.15ಕ್ಕೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ನಡೆಯಿತು. ಶಾಲಾ ವಾದ್ಯಗೋಷ್ಠಿಯ ಭವ್ಯ ಮೆರವಣಿಗೆಯೊಂದಿಗೆ ಕಾರ್ಯಕ್ರಮದ ಅತಿಥಿಗಳು ಹಾಗೂ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಶಾಲಾ ಸಭಾಂಗಣಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ವಿವಿಧ ಧಾರ್ಮಿಕ ಗ್ರಂಥಗಳ ವಾಚನ, ಪ್ರಾರ್ಥನಾ ವಿಧಿ ಹಾಗೂ ಆಕರ್ಷಕ ಸ್ವಾಗತ ನೃತ್ಯದ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಜೊತೆ ಕಾರ್ಯದರ್ಶಿ ವಂ….

Read More

‘ಹರಿತ ಕೇರಳ’ ಗುರಿಯತ್ತ ಮಂಜೇಶ್ವರ ಪಂಚಾಯತ್ ಹೆಜ್ಜೆ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ಕೃಷಿ ಭವನದ ನೇತೃತ್ವದಲ್ಲಿ ಪರಿಸರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ ಜಿ.ಎಲ್.ಪಿ.ಎಸ್ ಹೊಸಬೆಟ್ಟು ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಬಶೀರ್ ಕನಿಲ ಅವರು ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ​ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಫಾತಿಮತ್ ಸುಹರಾ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯರಾದ ಶ್ರೀ ಮುಕ್ತಾರ್, ಶ್ರೀ ಇಲ್ಯಾಸ್ ಸೇರಿದಂತೆ ಗ್ರಾಮ ಪಂಚಾಯತ್‌ನ ಎಲ್ಲಾ ಎ.ಡಿ.ಸಿ ಸದಸ್ಯರು, ವಾರ್ಡ್…

Read More
error: Content is protected !!