ಕಾಸರಗೋಡಿನ ಕೇರಳ ಕೆ. ಎಸ್.ಆರ್. ಟಿ.ಸಿ.ಫಾಸ್ಟ್ ಪ್ಯಾಸೆಂಜರ್ ಬಸ್ಸು ಬೀರಿ ಬಸ್ ಸ್ಟಾಪ್ ನಲ್ಲಿ ನಿಲುಗಡೆಗೆ ಒತ್ತಾಯಿಸಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಿಗೆ ಮನವಿ

ಕಾಸರಗೋಡು ಮಂಗಳೂರು ಅಂತರ ರಾಜ್ಯ ಮಾರ್ಗದಲ್ಲಿ ವೇಗವಾಗಿ ಸಂಚರಿಸುವ ಕೇರಳ ಕೆ.ಎಸ್.ಆರ್. ಟಿ.ಸಿ ಫಾಸ್ಟ್ ಪ್ಯಾಸೆಂಜರ್ ಬಸ್, ಬೀರಿ ಬಸ್ ಸ್ಟಾಪ್ ನಲ್ಲಿ ನಿಲುಗಡೆಯಾಗಬೇಕೆಂದು ಕಾಸರಗೋಡು ಕಡೆಗೆ ದಿನನಿತ್ಯ ಹೋಗಿ ಬರುವ ಬಸ್ಸು ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ.ಈ ಫಾಸ್ಟ್ ಪ್ಯಾಸೆಂಜರ್ ಕೆ. ಎಸ್.ಆರ್. ಟಿ. ಸಿ ಬಸ್ಸು ತಲಪಾಡಿ ಮತ್ತು ತೊಕ್ಕೋಟು ಬಸ್ ಸ್ಟಾಪ್ ನಲ್ಲಿ ಮಾತ್ರ ನಿಲುಗಡೆಯಿದೆ. ದಿನಂಪ್ರತಿ ನೂರಾರು ಸಂಖ್ಯೆಯಲ್ಲಿ ಕಾಸರಗೋಡು ಬೀರಿ ಮಾರ್ಗವಾಗಿ ಉದ್ಯೋಗ ವ್ಯವಹಾರ ಹಾಗೂ ಇನ್ನಿತರ ಕೌಟುಂಬಿಕ ಅಗತ್ಯಗಳಿಗಾಗಿ ಪ್ರಯಾಣಿಸುವ ದಿನನಿತ್ಯದ…

Read More

ನಾಲ್ಕು ವರ್ಷಗಳಿಂದ ನೀರಿಲ್ಲ, ಆದರೂ ಬಿಲ್–ಜಪ್ತಿ ನೋಟಿಸ್: ಮಾಡ ಕೊಳಕೆಯ ಜನರ ಆಕ್ರೋಶ

​ಮಂಜೇಶ್ವರ: ಅಭಿವೃದ್ಧಿಯ ಹೆಸರಿನಲ್ಲಿ ಜನರ ಮೂಲಭೂತ ಹಕ್ಕನ್ನೇ ಕಸಿದುಕೊಳ್ಳುವುದು ಎಷ್ಟು ಸರಿ? ಮಂಜೇಶ್ವರ ಗ್ರಾಮ ಪಂಚಾಯಿತಿಯ 23ನೇ ವಾರ್ಡ್ ವ್ಯಾಪ್ತಿಯ ಮಾಡ ಕೊಳಕೆ ನಿವಾಸಿಗಳ ಇಂದಿನ ಸ್ಥಿತಿ ನೋಡಿದರೆ ವ್ಯವಸ್ಥೆಯ ಮೇಲೆ ಅಸಹ್ಯ ಹುಟ್ಟದಿರದು. ಕಳೆದ ನಾಲ್ಕು ವರ್ಷಗಳಿಂದ ಕುಡಿಯುವ ನೀರಿಲ್ಲದೆ ಇಲ್ಲಿನ ಕುಟುಂಬಗಳು ನರಕಯಾತನೆ ಅನುಭವಿಸುತ್ತಿದ್ದರೂ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ‘ಕುರುಡಾಗಿ’ ಕುಳಿತಿದ್ದಾರೆ. ​ತಲಪಾಡಿಯಿಂದ ಚೆಂಗಳವರೆಗಿನ ರಸ್ತೆ ಕಾಮಗಾರಿ ಆರಂಭವಾದಾಗ ಅಭಿವೃದ್ಧಿಯ ಕನಸು ಕಂಡಿದ್ದ ಜನರಿಗೆ ಇಂದು ಆ ರಸ್ತೆಯೇ ಶಾಪವಾಗಿ ಪರಿಣಮಿಸಿದೆ. ಕಾಮಗಾರಿ…

Read More

ಕಾಸರಗೋಡು ಕನ್ನಡ ಭವನ ಪ್ರಕಾಶನದ 3ನೇ ವಾರ್ಷಿಕೋತ್ಸವ ಇಂದು – ಪುಸ್ತಕ ಬಿಡುಗಡೆ, ಪ್ರತಿಭಾ ಪುರಸ್ಕಾರ

Kasaragod: ಕನ್ನಡ ಭವನದ ಅಂಗ ಸಂಸ್ಥೆಯಾದ ಕನ್ನಡ ಭವನ ಪ್ರಕಾಶನದ ಮೂರನೇ ವಾರ್ಷಿಕೋತ್ಸವವು ಇಂದು (ಏಪ್ರಿಲ್ 22) ಸಂಜೆ 5 ಗಂಟೆಗೆ ಕನ್ನಡ ಭವನ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಪತ್ರಕರ್ತ ಹಾಗೂ ಕನ್ನಡ ಭವನ ಗೌರವ ಅಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಭವನ ನಿರ್ದೇಶಕ ಹಾಗೂ ಧಾರ್ಮಿಕ ಮುಂದಾಳು ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಸಾಧನೆಗೈದ ಇಬ್ಬರು ಪ್ರತಿಭಾವಂತರಿಗೆ ಗೌರವ ಸಮರ್ಪಣೆ ನಡೆಯಲಿದೆ. ಎಂ.ಬಿ.ಬಿ.ಎಸ್.,…

Read More

ಸ್ಕೂಟರ್‌ನಲ್ಲಿ ಮಾದಕ ವಸ್ತು ಸಾಗಾಟ:19.340 ಗ್ರಾಂ ಎಂ.ಡಿ.ಎಂ.ಎ ಸಹಿತ ಯುವಕನ ಬಂಧನ

ಕಾಸರಗೋಡು: ಸ್ಕೂಟರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 19.340 ಗ್ರಾಂ ಎಂ.ಡಿ.ಎಂ.ಎ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ಕರ್ನಾಟಕದ ಪೆರುಮಣ್ಣೂರು, ಕಲ್ಲಾಪು ನಿವಾಸಿಯಾದ ಸಯ್ಯಿದ್ ಆಫ್ರೀದಿ (28) ಬಂಧಿತನಾಗಿದ್ದಾನೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ಶಿರಿಯ ಮುಟ್ಟಮ್ ಪ್ರದೇಶದಲ್ಲಿ ಪೇಟ್ರೋಲಿಂಗ್ ನಡೆಸುತ್ತಿದ್ದ ವೇಳೆ ಸರ್ವೀಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ಕರ್ನಾಟಕ ನೋಂದಣಿ ಸಂಖ್ಯೆಯ ಸ್ಕೂಟರ್ ಅನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಆರೋಪಿಯ ಬಳಿ ಇದ್ದ ಮಾದಕ ವಸ್ತು ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಮಂಜೇಶ್ವರ ರೈಲ್ವೆ ನಿಲ್ದಾಣಕ್ಕೆ ಅಭಿವೃದ್ಧಿಯ ಸ್ಪರ್ಶ: ಮೂಲಸೌಕರ್ಯ ವೃದ್ಧಿಗೆ ಡಿಆರ್‌ಎಂ ಮಧುಕರ್ ರಾವ್ ಭರವಸೆ

ಮಂಜೇಶ್ವರ: ಮಂಜೇಶ್ವರ ರೈಲ್ವೆ ನಿಲ್ದಾಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮಧುಕರ್ ರಾವ್ ತಿಳಿಸಿದ್ದಾರೆ. ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಜನಪ್ರತಿನಿಧಿಗಳು, ಪ್ರಯಾಣಿಕರು ಹಾಗೂ ನಿಲ್ದಾಣ ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಅವರು, ಹಲವು ಪ್ರಮುಖ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಮಳೆಗಾಲದಲ್ಲಿ ನಿಲ್ದಾಣ ಆವರಣದಲ್ಲಿ ನೀರು ನಿಲ್ಲದಂತೆ ತಡೆಯಲು ಸುಸಜ್ಜಿತ ಚರಂಡಿ ವ್ಯವಸ್ಥೆ ನಿರ್ಮಿಸಲಾಗುವುದು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಪ್ಲಾಟ್‌ಫಾರ್ಮ್‌ನ ಎರಡೂ ಬದಿಗಳಲ್ಲಿ ಮೇಲ್ಛಾವಣಿ ನಿರ್ಮಾಣಕ್ಕೂ ಕ್ರಮ…

Read More

ಬೇಕೂರಿನಲ್ಲಿ ಪೈಪ್‌ಲೈನ್ ಸ್ಫೋಟ – ಮಿನಿ ಪ್ರವಾಹ, ಮನೆಗೆ ಹಾನಿ, ನೀರು ಸರಬರಾಜು ಸ್ಥಗಿತದ ಭೀತಿ

ಬೇಕೂರು: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ವಿವಿಧ ವಾರ್ಡ್‌ಗಳಿಗೆ ನೀರು ಸರಬರಾಜು ಮಾಡುವ ಬೇಕೂರಿನ ಜಲಸಂಪನ್ಮೂಲ ಘಟಕದಲ್ಲಿ ಇಂದು ಬೆಳಗ್ಗೆ ಭಾರೀ ಅವಘಡ ಸಂಭವಿಸಿದೆ. ಬೇಕೂರು ಮಿಲ್ ಸಮೀಪದಲ್ಲಿರುವ ಚೆಂಬರ್‌ನಲ್ಲಿ ಪೈಪ್‌ಲೈನ್ ತುಂಡಾಗಿ, ದೊಡ್ಡ ಪ್ರಮಾಣದ ನೀರು ಹೊರಹರಿದು ಮಿನಿ ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಇಂದು ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಸಂಭವಿಸಿದ್ದು, ಸ್ಥಳೀಯ ಸ್ಕ್ರಾಪ್ ಅಂಗಡಿ ಮಾಲೀಕ ಗಫೂರ್ ಅವರ ಮನೆಗೆ ನೀರು ನುಗ್ಗಿ, ಹಿತ್ತಲಿನಲ್ಲಿದ್ದ ಮರಗಿಡಗಳು ಹಾಗೂ ಅನೇಕ ವಸ್ತುಗಳು ಸಂಪೂರ್ಣ…

Read More

ಮಂಜೇಶ್ವರ ಬೀಚ್‌ನಲ್ಲಿ ಕಸದ ಪರ್ವತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೀನುಗಾರರು–ಪ್ರವಾಸಿಗರ ಆಕ್ರೋಶ

ಮಂಜೇಶ್ವರ: ಪ್ರವಾಸಿ ಆಕರ್ಷಣೆಯಾಗಿ ಹೆಸರು ಮಾಡಿರುವ ಮಂಜೇಶ್ವರ ಬೀಚ್ ಇದೀಗ ಕಸದ ಗುಡ್ಡಗಳ ಕೇಂದ್ರವಾಗುತ್ತಿದೆ. ಬೀಚ್ ಸಮೀಪದ ಎಲ್ಲ ಪ್ರದೇಶಗಳು ಈಗ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳಿಂದ ತುಂಬಿ ಹರಿಯುತ್ತಿವೆ. ಪ್ರತಿದಿನ ನೂರಾರು ಜನರು ಭೇಟಿ ನೀಡುವ ಈ ಪ್ರದೇಶದಲ್ಲಿ ಮಲಿನತೆ ಹೆಚ್ಚುತ್ತಿರುವುದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಬೀಚ್‌ಗೆ ಬರುವ ಪ್ರವಾಸಿಗರು ಮತ್ತು ಹತ್ತಿರದ ವಾಟರ್ ಥೀಮ್ ಪಾರ್ಕ್‌ಗೆ ಆಗಮಿಸುವವರು ಆಹಾರದ ಅವಶೇಷಗಳು ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ಎಸೆಯುತ್ತಿರುವುದು ಸಾಮಾನ್ಯವಾಗಿದೆ. ಕಸದ ರಾಶಿ ಹೆಚ್ಚಾಗುತ್ತಿದ್ದಂತೆ ಬೀದಿ ನಾಯಿಗಳ…

Read More

ಕುಂಬಳೆ: ವಾಹನ ಕಳ್ಳತನ ಪ್ರಕರಣ—ಆರೋಪಿ ಬಂಧನ

ಕುಂಬಳೆಯಲ್ಲಿ ಹೋಟೆಲ್ ಎದುರು ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣದ ನಿವಾಸಿ ರವಿ ಅಲಿಯಾಸ್ ‘ಡಬ್ಬ ರವಿ’ ಬಂಧಿತ ಆರೋಪಿ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದರು. ಇದೇ ವೇಳೆ ಅಪಘಾತದಲ್ಲಿ ಗಾಯಗೊಂಡ ರವಿಯನ್ನು ಕುಂಬಳೆ ಸರಕಾರಿ ಆಸ್ಪತ್ರೆಗೆ ತರಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ದೊರಕಿತು. ತಕ್ಷಣ ಆಸ್ಪತ್ರೆಯಲ್ಲಿ ಕಾದಿದ್ದ ಪೊಲೀಸರು, ಅಲ್ಲಿಗೆ ಬಂದ ಆರೋಪಿಯನ್ನು ಬಂಧಿಸಿದರು. ನಂತರ ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿನ ಪೊಲೀಸ್…

Read More

ಕಾಸರಗೋಡು: ವಸಂತ್ ಕೆರೆಮನೆ–ದಿವ್ಯಶ್ರೀ ದಂಪತಿಗೆ “ಕನ್ನಡ ಸೇವಾ ನಿರತರು” ಪ್ರಶಸ್ತಿ

ಕಾಸರಗೋಡು: ಕನ್ನಡ ಭವನ ಪ್ರದಾನ ಕಾರ್ಯದರ್ಶಿ ವಸಂತ್ ಕೆರೆಮನೆ ಹಾಗೂ ದಿವ್ಯಶ್ರೀ ದಂಪತಿಗಳಿಗೆ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕನ್ನಡ ಭವನ ಪ್ರಕಾಶನ ವತಿಯಿಂದ “ಕನ್ನಡ ಸೇವಾ ನಿರತರು” ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಂಪತಿಗಳ ವಿವಾಹ ದಶಮಾನೋತ್ಸವದ ಪ್ರಯುಕ್ತ ಕನ್ನಡ ಭವನದ ಅಭಿಮಾನಿಗಳಿಂದ ಬೇಕಲ್ ಇಂಟರ್ನ್ಯಾಷನಲ್ ಬೀಚ್‌ನಲ್ಲಿ ಸವಿ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕನ್ನಡ ಭವನದ ಗೌರವ ಅಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ರಾಮರಾಜ ಕ್ಷತ್ರಿಯ ಕಾಸರಗೋಡು ಅಧ್ಯಕ್ಷ ಹಾಗೂ ಕನ್ನಡ…

Read More

​ಸೌಹಾರ್ದತೆಯ ಸಂಭ್ರಮ: ಉದ್ಯಾವರ ಜಮಾ ಹತ್ ಗೆ ಉದ್ಯಾವರ ಶ್ರೀ ಅರಸು ದೈವಗಳ ಭೇಟಿ; ಜಾತ್ರೆಗೆ ಮುಸ್ಲಿಂ ಬಾಂಧವರಿಗೆ ಪ್ರೀತಿಯ ಆಮಂತ್ರಣ

ಮಂಜೇಶ್ವರದಲ್ಲಿ ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಪ್ರತಿರೂಪವಾಗಿರುವ ಉದ್ಯಾವರ ಅರಸು ಮಂಜೀಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿ ವಿಧಿವಿಧಾನಗಳು ಭಕ್ತಿ ಹಾಗೂ ಸೌಹಾರ್ದತೆಯೊಂದಿಗೆ ನೆರವೇರಿದವು. ಹಿಂದೂ–ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಈ ಅಪೂರ್ವ ಸಂಪ್ರದಾಯವು ಮತ್ತೆ ಗಮನ ಸೆಳೆದಿದೆ. ಪ್ರಾಚೀನ ಕಾಲದಿಂದ ನಡೆದುಕೊಂಡು ಬರುತ್ತಿರುವ ಪದ್ಧತಿಯಂತೆ, ಕ್ಷೇತ್ರದ ಅರಸು ದೈವಗಳ ಪಾತ್ರಿಗಳು ಶುಕ್ರವಾರ ಮಧ್ಯಾಹ್ನ ಉದ್ಯಾವರ ಸಾವಿರ ಜಮಾತ್ ಮಸೀದಿಗೆ ಭೇಟಿ ನೀಡಿ ಮುಸ್ಲಿಂ ಬಾಂಧವರನ್ನು ಜಾತ್ರೆಗೆ ಆತ್ಮೀಯವಾಗಿ ಆಹ್ವಾನಿಸಿದರು. ಮೇಷ ಸಂಕ್ರಮಣದ ನಂತರದ ಮೊದಲ ಶುಕ್ರವಾರದಂದು ಈ ಭೇಟಿ…

Read More
error: Content is protected !!