ಗಡಿನಾಡಿನಲ್ಲಿ ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ: ಎಲ್.ಜಿ. ಜ್ಯೋತಿಶ್ವರ
ಕಾಸರಗೋಡು, ಜೂನ್ 5: ಕರ್ನಾಟಕದೊಳಗೆ ಎಲ್ಲಿಯೂ ಕಾಣಸಿಗದ ವಿಶಿಷ್ಟ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿ ನಿರ್ಮಾಣಗೊಂಡಿದ್ದು, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಆಶ್ರಯಧಾಮವಾಗಿ ಬೆಳೆದಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಜಾಹೀರಾತು ಹಾಗೂ ವೈದ್ಯಕೀಯ ಸಂವಹನ ತಜ್ಞ ಎಲ್.ಜಿ. ಜ್ಯೋತಿಶ್ವರ ಅಭಿಪ್ರಾಯಪಟ್ಟರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿ ಮಾಡಲು ಕನ್ನಡ ಗ್ರಾಮಕ್ಕೆ ಆಗಮಿಸಿದ್ದ ಜ್ಯೋತಿಶ್ವರ ದಂಪತಿಯನ್ನು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು,…