ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ವನಿತಾ ತೋರ್ವಿ, ವಿಜಯಪುರ ರೀಗೆ ಕನ್ನಡ ಭವನದ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “2026.

ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ವನಿತಾ ತೋರ್ವಿ, ವಿಜಯಪುರ ರೀಗೆ ಕನ್ನಡ ಭವನದ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “2026. ಜುಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ…

Read More

ಮಂಜೇಶ್ವರ: ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ

ಮಂಜೇಶ್ವರ, ಜು.23: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳು, ರಸಗೊಬ್ಬರದ ಬೆಲೆ ಏರಿಕೆ ಹಾಗೂ ಅಮೆರಿಕದೊಂದಿಗೆ ಮಾಡಿಕೊಂಡಿರುವ ಜನವಿರೋಧಿ ಒಪ್ಪಂದವನ್ನು ಖಂಡಿಸಿ ರೈತ ಸಂಘದ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಮೀಯಪದವಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನೆಯನ್ನು ರಾಜ್ಯ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಕೃಷಿ ಹಾಗೂ ರೈತ ವಿರೋಧಿ ನೀತಿಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಸಗೊಬ್ಬರಗಳ ಬೆಲೆ ಏರಿಕೆಯಿಂದ ಕೃಷಿ ವೆಚ್ಚ ಮತ್ತಷ್ಟು ಹೆಚ್ಚಾಗಿದೆ ಎಂದು ಅವರು ಆರೋಪಿಸಿದರು. ಅಮೆರಿಕದೊಂದಿಗೆ…

Read More

ಭಾರತೀಯ ಮಜ್ದೂರ್ ಸಂಘದ 72ನೇ ಸ್ಥಾಪನಾ ದಿನ: ಚೌಕಿ ಜಂಕ್ಷನ್‌ನಲ್ಲಿ ಧ್ವಜಾರೋಹಣ

ಭಾರತೀಯ ಮಜ್ದೂರ್ ಸಂಘದ(BMS) 72 ನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ಚೌಕಿ ಜಂಕ್ಷನಿನಲ್ಲಿ BMS ಚೌಕಿ ಯೂನಿಟ್ ಅಧ್ಯಕ್ಷ ಶ್ರೀ ದಯಾನಂದ ಚೌಕಿ ಕಡಪ್ಪರ ಧ್ವಜಾರೋಹಣಗೈದರು. BMS Chowki Unit ಪ್ರಧಾನ ಕಾರ್ಯದರ್ಶಿ ಶ್ರೀ ರಂಜಿತ್ ರಾಮ್ ನಗರ ಬೆದ್ರಡ್ಕ ಪ್ರಾಸ್ತಾವಿಕ ಭಾಷಣ ಮಾಡಿದರು. ಚೌಕಿ ಕೋ-ಓಪರೇಟಿವ್ ಬ್ಯಾಂಕ್ ಮೇನೇಜರ್ ಶ್ರೀ ದೀಪಕ್ ಕೂಡ್ಲು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಇದೇ ಸಮಯದಲ್ಲಿ BMS ಜಿಲ್ಲಾ ಸಮಿತಿ ಉಪಾಧ್ಯಕ, BMS ಮೊಗ್ರಾಲ್ ಪುತ್ತೂರು ಪಂಚಾಯತ್ ಘಟಕದ ಅಧ್ಯಕ್ಷ,…

Read More

ಹೊಟ್ಟೆಯಲ್ಲಿ ವಿಷ ಪತ್ತೆ;ಅಸಹಜ ಸಾವು ಪ್ರಕರಣ ದಾಖಲು

​ಕಾಸರಗೋಡು : ಬೇಡಗಂ ಪೊಲೀಸ್ ಠಾಣಾ ವ್ಯಾಪ್ತಿಯ ತೋರೋ ನಿವಾಸಿ ಟಿ. ಅನಶ್ವರ (19) ಹೊಟ್ಟೆಗೆ ವಿಷ ಸೇರಿ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ಲಸ್‌ಟು ಮುಗಿಸಿ ಉನ್ನತ ಶಿಕ್ಷಣಕ್ಕೆ ಸಿದ್ಧತೆ ನಡೆಸುತ್ತಿದ್ದ ಈಕೆಗೆ ಮಂಗಳವಾರ ಮುಂಜಾನೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಂಡಂಗುಳಿ ಕ್ಲಿನಿಕ್, ಬೇಡಗಂ ತಾಲೂಕು ಆಸ್ಪತ್ರೆ ಹಾಗೂ ಚೆಂಗಳದ ಸಹಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾಥರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ​ಪರೀಕ್ಷೆಯ ವೇಳೆ ಯುವತಿಯ ಹೊಟ್ಟೆಗೆ ವಿಷ ಸೇರಿರುವುದು…

Read More

ಉಪ್ಪಳದ ಸೋಂಕಾಲ್ ನಿವಾಸಿ ಅಲ್ತಾಫ್ ಕೊಲೆ ಪ್ರಕರಣ:6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಜೇಶ್ವರ : ಉಪ್ಪಳದ ಸೋಂಕಾಲ್ ನಿವಾಸಿ ಅಲ್ತಾಫ್ ಕೊಲೆ ಪ್ರಕರಣದಲ್ಲಿ ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಲ್ಪಾಡಿಯ ಅಬ್ದುಲ್ ರುಮೀದ್ (29) ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ಗಲ್ಫ್‌ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅಧಿಕಾರಿಗಳು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ​2019 ಜೂನ್ 23ರಂದು ಅಲ್ತಾಫ್‌ರನ್ನು ಮನೆಯಿಂದ ಅಪಹರಿಸಿ ಹಲ್ಲೆ ನಡೆಸಿ ಕೈಯ ನರ ಕತ್ತರಿಸಿ ಮಂಗಳೂರು ಆಸ್ಪತ್ರೆ ವರಾಂಡದಲ್ಲಿ ಬಿಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಜೂನ್ 25ರಂದು ಅವರು ಸಾವನ್ನಪ್ಪಿದ್ದರು….

Read More

ಕೇಂದ್ರ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು: ಎಂ.ಎಲ್. ಅಶ್ವಿನಿ

ಮುಳ್ಳೇರಿಯ: ನರೇಂದ್ರ ಮೋದಿ ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಎಂ.ಎಲ್. ಅಶ್ವಿನಿ ಹೇಳಿದ್ದಾರೆ. ಪ್ರಧಾನಮಂತ್ರಿ ದಿವ್ಯಾಂಗ ಕೇಂದ್ರ, ಬಿಜೆಪಿ ಕಾಸರಗೋಡು ಜಿಲ್ಲಾ ಹೆಲ್ಪ್‌ಡೆಸ್ಕ್ ಹಾಗೂ ಬಿಜೆಪಿ ಬದಿಯಡ್ಕ ಮಂಡಲ ಸಮಿತಿ ಜಂಟಿಯಾಗಿ ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ವಯೋಶ್ರೀ ಯೋಜನೆ’ಯ ನೋಂದಣಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಹಿರಿಯ ನಾಗರಿಕರಿಗೆ ಐದು ಲಕ್ಷ ರೂಪಾಯಿ ಆರೋಗ್ಯ ಭದ್ರತೆ ಒದಗಿಸುವ ಆಯುಷ್ಮಾನ್…

Read More

ಕಾಸರಗೋಡು ಗುಡುಗು ಮಿಂಚು ಸಹಿತ ಬಿರುಸಿನ ಮಳೆಗೆ ಸಾಧ್ಯತೆ

ಕಾಸರಗೋಡು/ತಿರುವನಂತಪುರ: ರಾಜ್ಯದಲ್ಲಿ ಮಳೆಯ ಮುನ್ಸೂಚನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ​ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ​ಮುಂದಿನ 3 ಗಂಟೆಗಳ ಹವಾಮಾನ ಮುನ್ಸೂಚನೆ​ರಾಜ್ಯದ ಎರ್ನಾಕುಲಂ, ತ್ರೆಶೂರ್, ಪಾಲ್ಘಾಟ್ (ಪಾಲಕ್ಕಾಡ್), ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು…

Read More

ಮಂಜೇಶ್ವರ: ಭಾರೀ ಮಳೆ: ಕುಸಿದುಬಿದ್ದ ಜಿಮ್ ಕಟ್ಟಡದ ಆವರಣ ಗೋಡೆ: ಕೂದಲೆಳೆತದ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಮಂಜೇಶ್ವರ: ಮಂಜೇಶ್ವರದ ಒಳಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ‘ಮೈ ಜಿಂ ಹೆಲ್ತ್ ಕ್ಲಬ್’ ಕಟ್ಟಡದ ಆವರಣ ಗೋಡೆಯು ಬುಧವಾರ ಸುರಿದ ಬಿರುಸಿನ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ವೇಳೆ ಯಾವುದೇ ಜೀವಹಾನಿ ಸಂಭವಿಸಿಲ್ಲದಿದ್ದರೂ, ಸ್ಥಳದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ​​ಪ್ರತಿದಿನ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ವಾಹನ ಸವಾರರು ಈ ಜಿಮ್ ಕಟ್ಟಡದ ಸಮೀಪವಿರುವ ರಸ್ತೆಯ ಮೂಲಕ ಸಂಚರಿಸುತ್ತಾರೆ. ಗೋಡೆ ಕುಸಿದುಬಿದ್ದ ಸಂದರ್ಭದಲ್ಲಿ ಅದೃಷ್ಟವಶಾತ್ ಯಾರೂ ಆ ಮಾರ್ಗದಲ್ಲಿ ಸಂಚರಿಸುತ್ತಿರಲಿಲ್ಲ. ಇದರಿಂದಾಗಿ ದೊಡ್ಡದೊಂದು ದುರಂತ ಕೂದಲೆಳೆತದ ಅಂತರದಲ್ಲಿ ತಪ್ಪಿದಂತಾಗಿದೆ….

Read More

ಗ್ರಾಹಕರ ಪರ ತೀರ್ಪು; ಸೌತ್ ಇಂಡಿಯನ್ ಬ್ಯಾಂಕ್‌ಗೆ ಪರಿಹಾರ ಪಾವತಿಸಲು ಆದೇಶ

ಕಾಸರಗೋಡು: ಗ್ರಾಹಕರ ಖಾತೆಯಿಂದ ಕಡಿತಗೊಳಿಸಿದ ಹಣವನ್ನು ಮರುಪಾವತಿಸುವುದರ ಜೊತೆಗೆ, ಉಂಟಾದ ಮಾನಸಿಕ ವೇದನೆ ಹಾಗೂ ಅನಾನುಕೂಲತೆಗೆ ಸೂಕ್ತ ಪರಿಹಾರವನ್ನು ನೀಡುವಂತೆ ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆಗೆ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ಆದೇಶ ನೀಡಿದೆ. ಈ ಆದೇಶವು ಸೌತ್ ಇಂಡಿಯನ್ ಬ್ಯಾಂಕ್, ಸೀತಾಂಗೋಳಿ ಶಾಖೆ ವಿರುದ್ಧ ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು ದಾಖಲಿಸಿದ್ದ ದೂರಿನ ವಿಚಾರಣೆಯ ಬಳಿಕ ಹೊರಬಿದ್ದಿದೆ. ದೂರಿನ ಪ್ರಕಾರ, ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು 2022ರಲ್ಲಿ ಸೌತ್ ಇಂಡಿಯನ್…

Read More

ಉದ್ಯಾವರ ಹಿಂದೂ ರುದ್ರಭೂಮಿ ವಿವಾದ: ಸಮಾಧಿ ಧ್ವಂಸ ಆರೋಪ, ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಆಗ್ರಹ

ಕಾಸರಗೋಡು: ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ಹಲವು ವರ್ಷಗಳಿಂದ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.ಸುಮಾರು 2.70 ಎಕರೆ ವಿಸ್ತೀರ್ಣ ಹೊಂದಿರುವ ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ಅನೇಕ ವರ್ಷಗಳಿಂದ ಹಿಂದೂ ಸಮುದಾಯದ ಅಂತ್ಯಕ್ರಿಯೆಗಳು ನಡೆಯುತ್ತಿವೆ. ರುದ್ರಭೂಮಿಯ ಸುತ್ತಮುತ್ತ ಕಾನೂನು ಪ್ರಕಾರ ನಿರ್ದಿಷ್ಟ ಅಂತರದೊಳಗೆ ವಸತಿ ನಿರ್ಮಾಣಕ್ಕೆ ಅವಕಾಶ ಇರಬಾರದು. ಆದರೆ, ರುದ್ರಭೂಮಿಯ ಸುತ್ತಲೂ ಮನೆಗಳು ನಿರ್ಮಾಣವಾಗಿರುವ ಬಗ್ಗೆ ಸಭೆಯಲ್ಲಿ ಪ್ರಶ್ನೆ ಎತ್ತಲಾಯಿತು. ಇದೇ ವೇಳೆ,…

Read More
error: Content is protected !!