ಗಡಿನಾಡಿನಲ್ಲಿ ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ: ಎಲ್.ಜಿ. ಜ್ಯೋತಿಶ್ವರ

ಕಾಸರಗೋಡು, ಜೂನ್ 5: ಕರ್ನಾಟಕದೊಳಗೆ ಎಲ್ಲಿಯೂ ಕಾಣಸಿಗದ ವಿಶಿಷ್ಟ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿ ನಿರ್ಮಾಣಗೊಂಡಿದ್ದು, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಆಶ್ರಯಧಾಮವಾಗಿ ಬೆಳೆದಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಜಾಹೀರಾತು ಹಾಗೂ ವೈದ್ಯಕೀಯ ಸಂವಹನ ತಜ್ಞ ಎಲ್.ಜಿ. ಜ್ಯೋತಿಶ್ವರ ಅಭಿಪ್ರಾಯಪಟ್ಟರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿ ಮಾಡಲು ಕನ್ನಡ ಗ್ರಾಮಕ್ಕೆ ಆಗಮಿಸಿದ್ದ ಜ್ಯೋತಿಶ್ವರ ದಂಪತಿಯನ್ನು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು,…

Read More

ಪುತ್ತಿಗೆಯಲ್ಲಿ ಪಂಚಾಯತ್ ಆಸ್ತಿ ಲೂಟಿ: ಮರಗಳ್ಳತನಕ್ಕೆ ಡಿವೈಎಫ್‌ಐ ಆಕ್ರೋಶ

​ಕಾಸರಗೋಡು: ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಎಡನಾಡು ಕೋರ್ನಕಂಡದಲ್ಲಿ, ಪಂಚಾಯತ್ ಆಡಳಿತಕ್ಕೆ ಸೇರಿದ ಸುಮಾರು 50 ವರ್ಷಗಳ ಹಳೆಯ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲಾಗಿದೆ. ಸುಮಾರು 1 ಲಕ್ಷ ರೂ. ಮೌಲ್ಯದ ಮಾವು, ಹಾಲೆ ಮತ್ತು ಅಕೇಶಿಯಾ ಮರಗಳನ್ನು ಮೇ 26ರಂದು ಸದ್ದಿಲ್ಲದೆ ಕಳ್ಳತನ ಮಾಡಲಾಗಿದೆ.ಖಾಸಗಿ ಜಮೀನಿನ ಮರಗಳನ್ನು ಕಡಿಯುವ ನೆಪದಲ್ಲಿ ಪಂಚಾಯತ್ ಒಡೆತನದ ತೋಡಿನ ಬದಿಯಲ್ಲಿದ್ದ ಮರಗಳನ್ನೂ ಕಡಿದು ಸಾಗಿಸಲಾಗಿದೆ ಎಂದು ಪಂಚಾಯತ್ ಕಾರ್ಯದರ್ಶಿ ಸುದೀಶ್ ಅವರು ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ….

Read More

ಜೂನ್ 14ರಂದು ಬಾಕುಡ ಸಮಾಜ ಸೇವಾ ಸಮಿತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಹೊಸಂಗಡಿ: ಬಾಕುಡ ಸಮಾಜ ಸೇವಾ ಸಮಿತಿ (ರಿ) ಕೇರಳ-ಕರ್ನಾಟಕ ಕೇಂದ್ರ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಉಚಿತ ಪುಸ್ತಕ ವಿತರಣೆ ಹಾಗೂ ಕಲಿಕಾ ಕಿಟ್‌ಗಳ ವಿತರಣೆಯನ್ನು ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಈ ಸಾಲಿನ ಉಚಿತ ಪುಸ್ತಕ ವಿತರಣೆ, ಕಲಿಕಾ ಕಿಟ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 14ರಂದು ಆದಿತ್ಯವಾರ ಹೊಸಂಗಡಿ ಸಮೀಪದ ಪ್ರೇರಣಾ ಹಾಲ್‌ನಲ್ಲಿ ನಡೆಯಲಿದೆ ಎಂದು ಸಮಿತಿಯು ತಿಳಿಸಿದೆ. ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ…

Read More

ಪೈವಳಿಕೆ ಅಂಚೆ ಕಚೇರಿ ಎದುರು ಸಿಪಿಐಎಂ ಧರಣಿ: ಪೆಟ್ರೋಲಿಯಂ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಮಂಜೇಶ್ವರ: ಜನಜೀವನವನ್ನು ದುಸ್ತರಗೊಳಿಸುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಐಎಂ ನೇತೃತ್ವದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಭಾಗವಾಗಿ, ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿಯ ವತಿಯಿಂದ ಪೈವಳಿಕೆ ಅಂಚೆ ಕಚೇರಿ ಎದುರು ಧರಣಿ ನಡೆಸಲಾಯಿತು. ಧರಣಿಯನ್ನು ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಕೆ. ಪಿ. ಸತೀಶ್ಚಂದ್ರನ್ ಉದ್ಘಾಟಿಸಿ ಮಾತನಾಡಿದರು. ಬಳಿಕ ಸಿಪಿಐಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ. ಆರ್. ಜಯಾನಂದ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐಎಂ ಏರಿಯಾ ಸಮಿತಿ ಸದಸ್ಯ ರಝಾಕ್ ಚಿಪ್ಪಾರ್ ವಹಿಸಿದ್ದರು….

Read More

ಅನಂತಪುರ ಕೈಗಾರಿಕಾ ಪಾರ್ಕ್ ದುರ್ವಾಸನೆ ವಿರುದ್ಧ ಜನರ ಆಕ್ರೋಶ: ಜೂನ್ 8ರಂದು ಪ್ರತಿಭಟನೆ

ಕುಂಬಳೆ, ಜೂನ್ 4: ಅನಂತಪುರ ಕೈಗಾರಿಕಾ ಪಾರ್ಕ್‌ನ ಕಾರ್ಖಾನೆಗಳಿಂದ ಹೊರಹೊಮ್ಮುತ್ತಿರುವ ದುರ್ವಾಸನೆಯನ್ನು ತಕ್ಷಣ ನಿಯಂತ್ರಿಸಲು ಸಂಬಂಧಿತ ಅಧಿಕಾರಿಗಳು ಮಧ್ಯಪ್ರವೇಶಿಸಬೇಕು ಹಾಗೂ ಮಾನವ ಜೀವ ಮತ್ತು ಆಸ್ತಿಗೆ ಅಪಾಯಕಾರಿಯಾಗಿರುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ಕುಂಬಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ಅನಂತಪುರ ಕೈಗಾರಿಕಾ ಪಾರ್ಕ್‌ನಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯದಿಂದ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಹೊಸದಾಗಿ ಆರಂಭಗೊಳ್ಳಲಿರುವ ಕೈಗಾರಿಕೆಗಳಿಗೆ ಅನುಮತಿ ನೀಡಬಾರದು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಾಲಿನ್ಯಯುಕ್ತ…

Read More

ಜುಲೈ 4-5ರಂದು ಕಾಸರಗೋಡಿನಲ್ಲಿ ಹಲಸು ಮತ್ತು ಮಾವು ಮೇಳ: ವಿವಿಧ ತಳಿಗಳ ಪ್ರದರ್ಶನ, ಮಾರಾಟಕ್ಕೆ ಅವಕಾಶ

ಕಾಸರಗೋಡು, ಜೂನ್ 4: ಹಲಸು ಹಾಗೂ ಮಾವು ಪ್ರಿಯರಿಗಾಗಿ ಸಪ್ತಭಾಷಾ ಸಂಗಮ ನೆಲ ಕಾಸರಗೋಡಿನಲ್ಲಿ ಜುಲೈ 4 ಮತ್ತು 5ರಂದು ಎರಡು ದಿನಗಳ ‘ಹಲಸು ಮತ್ತು ಮಾವು ಮೇಳ’ ಆಯೋಜಿಸಲಾಗಿದೆ. ಕೋಟೆಕಣಿಯ ಜೀವಾಸ್ ಮಾನಸ ಆಡಿಟೋರಿಯಂನಲ್ಲಿ ನಡೆಯಲಿರುವ ಈ ಮೇಳದಲ್ಲಿ ಹಲಸು ಮತ್ತು ಮಾವಿನ ವಿವಿಧ ತಳಿಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದ್ದು, ಇವುಗಳಿಂದ ತಯಾರಿಸಲಾದ ವೈವಿಧ್ಯಮಯ ಆಹಾರ ಉತ್ಪನ್ನಗಳ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿದೆ. ಮೇಳದಲ್ಲಿ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ರೈತರಿಗೆ ತಮ್ಮ…

Read More

ಕೂಡ್ಲು ಶ್ರೀ ಚಾಮುಂಡೇಶ್ವರೀ ಕಾಲಭೈರವ ದೇವಸ್ಥಾನ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಭಜನಾ ಸಂಘದ ಅಮೃತ ಮಹೋತ್ಸವಕ್ಕೆ ಸಿದ್ಧತೆ

ಕಾಸರಗೋಡು, : ಶತಮಾನಗಳ ಧಾರ್ಮಿಕ ಪರಂಪರೆಯನ್ನು ಹೊಂದಿರುವ ಕಾಸರಗೋಡು ಸೀಮೆಯ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ರಾಮದಾಸನಗರ ಪೆರ್ನಡ್ಕದ ಕೂಡ್ಲು ಶ್ರೀ ಚಾಮುಂಡೇಶ್ವರೀ ಕಾಲಭೈರವ ದೇವಸ್ಥಾನ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೆ. ಮೋಹನ ಕುಂಬಳೆ ವಹಿಸಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಲೀಲಾಧರ ಕೂಡ್ಲು, ಅರ್ಚಕ ಶ್ರೀಪತಿ ಅಡಿಗ ಕೂಡ್ಲು, ಉದಯಕುಮಾರ್ ಅಂಬಿಕಾ ರೋಡ್, ಕೆ. ಮನ್ಮಥ ಕೂಡ್ಲು ಹಾಗೂ ಧಾರ್ಮಿಕ ಮುಂದಾಳು ಕೆ. ಜಗದೀಶ ಕೂಡ್ಲು ಉಪಸ್ಥಿತರಿದ್ದು…

Read More

ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಹಿಫ್‌ಝ್ ಸಾಧನೆಗೆ ಗೌರವ, ಶೈಕ್ಷಣಿಕ ವರ್ಷಕ್ಕೆ ಭಕ್ತಿಪೂರ್ಣ ಚಾಲನೆ

ಮಂಜೇಶ್ವರ, ಜೂನ್ 3: ರಾಷ್ಟ್ರವನ್ನು ಸರಿಯಾದ ಶಿಕ್ಷಣದ ಮೂಲಕ ಸಬಲಗೊಳಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕುಂಜತ್ತೂರಿನ ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭವು ಅರ್ಥಪೂರ್ಣ ಮತ್ತು ಭಕ್ತಿಪೂರ್ಣ ಕಾರ್ಯಕ್ರಮದೊಂದಿಗೆ ನೆರವೇರಿತು. ಶಾಲೆಗೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವ ಜೊತೆಗೆ, ಕುರ್‌ಆನ್ ಅನ್ನು ಸಂಪೂರ್ಣವಾಗಿ ಕಂಠಪಾಠ (ಹಿಫ್‌ಝ್) ಮಾಡಿದ ಇಬ್ಬರು ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಗುಣಮಟ್ಟದ ಶಿಕ್ಷಣದೊಂದಿಗೆ ಶೈಕ್ಷಣಿಕ ಚಟುವಟಿಕೆಗಳ ಮರುಆರಂಭದ ಸಂಭ್ರಮದಲ್ಲಿ ಈ ಸಾಧನೆ ವಿಶೇಷ ಮೆರಗು ನೀಡಿತು. ಸಾಹುಲ್ ಹಮೀದ್–ರಜಿಯಾ ದಂಪತಿಗಳ ಪುತ್ರ ಹಾಫಿಲ್…

Read More

​ಮಂಜೇಶ್ವರ: ಉದ್ಯಾವರದಲ್ಲಿ ಕೋಳಿ ಅಂಗಡಿಗೆ ಕಳ್ಳರ ಲಗ್ಗೆ; 20 ಸಾವಿರ ರೂಪಾಯಿ ನಗದು ಕಳವು

​ಮಂಜೇಶ್ವರ: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಕೋಳಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ನಗದನ್ನು ದೋಚಿರುವ ಘಟನೆ ನಡೆದಿದೆ. ​ಉದ್ಯಾವರದ ರಫೀಕ್ ಎಂಬುವರಿಗೆ ಸೇರಿದ ಕೋಳಿ ಅಂಗಡಿಯನ್ನು ಗುರಿಯಾಗಿಸಿ ಈ ಕೃತ್ಯ ನಡೆದಿದೆ. ಅಂಗಡಿಯ ಡ್ರಾಯರ್‌ನಲ್ಲಿ ಇರಿಸಿದ್ದ ಸುಮಾರು 20,000 ರೂಪಾಯಿ ನಗದನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.​ಬುಧವಾರ ಬೆಳಿಗ್ಗೆ ಅಂಗಡಿಯ ಮಾಲಕರು ಬಂದಾಗ ಕಳ್ಳತನದ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಅವರು ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ…

Read More

ದುರ್ಗಾ ಶಕ್ತಿ ಕುಣಿತ ಭಜನಾ ತಂಡದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ಅಭಿನಂದನಾ ಸಭೆಯು ಇತ್ತೀಚೆಗೆ ಶ್ರೀ ಭಾರತ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇದರ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ಗೌರವ ಮಾರ್ಗದರ್ಶಕಿ ಶ್ರೀಮತಿ ರಮ್ಯಾ ಯನ್ ಧರ್ಬೆತಡ್ಕ ವಹಿಸಿದರು .ಸಭೆಯನ್ನು ಶ್ರೀ ಪ್ರಜಿತ್ ಅಭಕಾರಿ ಅಧಿಕಾರಿ ಕುಂಬಳೆ ಇವರು ಉದ್ಘಾಟಿಸಿದರು . ಮುಖ್ಯ ಅತಿಥಿಗಾಳಗಿ ವಸುದೈವ ಭಜನಾ ಕುಟುಂಬ…

Read More
error: Content is protected !!