ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಭಕ್ತಿಭರವಸೆಯ ಹರಿಕಥಾ ಸಪ್ತಾಹ: ಸದಸ್ಯರು ಮತ್ತು ಭಕ್ತರಿಗೆ ಆಹ್ವಾನ

ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರ, ಹೊಸಂಗಡಿ–ಮಂಜೇಶ್ವರ ಪ್ರದೇಶದಲ್ಲಿ ಮಾರ್ಚ್ 25ರಿಂದ 31ರವರೆಗೆ ಭಕ್ತಿಭಾವದಿಂದ ಹರಿಕಥಾ ಸಪ್ತಾಹವನ್ನು ವೈಭವದಿಂದ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 6.00ರಿಂದ 8.00ರವರೆಗೆ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಖ್ಯಾತ ಹರಿಕಥಾ ವಿದ್ವಾಂಸರು ಭಾಗವಹಿಸಿ ಪುರಾಣ ಪ್ರಸಂಗಗಳನ್ನು ನಿರೂಪಿಸಲಿದ್ದಾರೆ. ಮಾರ್ಚ್ 25, 2026 (ಬುಧವಾರ) ರಿಂದ ಮಾರ್ಚ್ 31, 2026 (ಮಂಗಳವಾರ) ರವರೆಗೆ ವಾರಪೂರ್ತಿ ಹರಿಕಥಾ ಸಪ್ತಾಹವನ್ನು ವೈಭವದಿಂದ ಆಯೋಜಿಸಲಾಗಿದೆ. ಈ ಸಪ್ತಾಹದ ಅಂಗವಾಗಿ ಪ್ರತಿದಿನ ಸಂಜೆ 6.00 ಗಂಟೆಗೆ ಹರಿಕಥಾ ಕಾರ್ಯಕ್ರಮ…

Read More

ಮಂಜೇಶ್ವರದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ

ಮಂಜೇಶ್ವರ: ಯುಡಿಎಫ್ (UDF) ನೇತಾರರು ಹಾಗೂ ಮಂಜೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಘವ್ ಮಂಜೇಶ್ವರ ಮತ್ತು ಪೈವಳಿಕೆಯ ಅಬ್ದುಲ್ ಸಮದ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ)ಗೆ ಅಧಿಕೃತವಾಗಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ K. Surendran ಅವರು ಇಬ್ಬರಿಗೂ ಸದಸ್ಯತ್ವ ನೀಡಿ ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ತತ್ವಗಳು ಮತ್ತು ಅಭಿವೃದ್ಧಿ ದೃಷ್ಟಿಕೋನದಿಂದ ಪ್ರೇರಿತರಾಗಿ ಹೊಸ ಮುಖಗಳು ಬಿಜೆಪಿಗೆ ಸೇರುತ್ತಿರುವುದು ಸಂತೋಷದ ವಿಚಾರ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ…

Read More

ಕಾಸರಗೋಡಿನಲ್ಲಿ ಎನ್‌ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಭರ್ಜರಿ ರೋಡ್ ಶೋ, ನಾಮಪತ್ರ ಸಲ್ಲಿಕೆ

ಕಾಸರಗೋಡು: ಸಪ್ತ ಭಾಷಾ ಸಂಗಮ ಭೂಮಿ ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಭರ್ಜರಿ ರೋಡ್ ಶೋ ನಡೆಸಿ ಇಂದು ನಾಮಪತ್ರ ಸಲ್ಲಿಸಿದರು. ಕರಂದಕ್ಕಾಡು ಮೈದಾನದಿಂದ ಆರಂಭವಾದ ರೋಡ್ ಶೋ ಭಾರೀ ಜನಸಾಗರದ ಮಧ್ಯೆ ಸಾಗಿದ್ದು, ಸಾರ್ವಜನಿಕ ಮೆರವಣಿಗೆ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿತು. ಮೆರವಣಿಗೆಯಲ್ಲಿ ಪಕ್ಷದ ಧ್ವಜಗಳು, ಘೋಷಣೆಗಳು ಮತ್ತು ಭರ್ಜರಿ ಸ್ವಾಗತದ ನಡುವೆ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಗಮನಸೆಳೆದರು . ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಎಡನೀರು ಮಠಕ್ಕೆ ಭೇಟಿ ನೀಡಿ…

Read More

ಗೋಡೆ ಬರಕ್ಕೆ ಹೈಟೆಕ್ ಸ್ಪರ್ಶ ….. !

ಪಾಲಕ್ಕಾಡ್: ಗೋಡೆ ಬರಹ ಅದು ಕಲಾ ಕೃತಿಯ ಒಂದು ಪ್ರಕಾರ ದೇವರ ನಾಡು ಕೇರಳದಲ್ಲಿ ಚುನಾವಣೆಯ ಪ್ರಚಾರಕ್ಕಾಗಿ ಗೋಡೆ ಬರವನ್ನು ಬರೆಯುತ್ತಾರೆ. ವರುಷಗಳು ಉರುಳಿದರು ಇಂದಿಗೂ ಗೋಡೆ ಪ್ರಚಾರ ಜೀವಂತವಾಗಿ ಕೇರಳದಲ್ಲಿ ಇಂದಿಗೂ ಮುಂದುವರಿದು ಕೊಂಡು ಹೋಗುತ್ತಿದೆ . ತಂತ್ರಜ್ಞಾನವು ಸಕತ್ ಆಗಿ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ . ಈಗ ಗೋಡೆ ಬರಹಕ್ಕೂ ಆಧುನಿಕ ಸ್ಪರ್ಶವನ್ನು ನೀಡಿ ಗೋಡೆ ಬರಹ ಬರವಣಿಗೆಗೆ ಕೇರಳದಲ್ಲಿ ರೋಬೋಟ್ ಕೂಡಾ ಪಾದಾರ್ಪಣೆ ಮಾಡಿರುವುದು ವಿಶೇಷ . ಚುವರ್ ಬೋಟ್ ಎಂಬ…

Read More

ಮಂಜೇಶ್ವರ ವಿಧಾನಸಭಾ ಕ್ಷೇತ್ರ: ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ನಾಮಪತ್ರ ಸಲ್ಲಿಕೆ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಅಭ್ಯರ್ಥಿ ಅಶ್ರಫ್ ಬಡಾಜೆ ಅವರು ಸೋಮವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಉಪ್ಪಳ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಬೆಂಬಲ ಸೂಚಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ ಕಾರ್ಯಕರ್ತರು ಉಪ್ಪಳ ಪಟ್ಟಣದ ವಿವಿಧ ಭಾಗಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದರು. ಪಕ್ಷದ…

Read More

ಮಾಂಸದ ಕೋಳಿಗಳ ಸಾಕಾಣಿಕೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು

ಕೋಳಿ ಮನೆಗಳಲ್ಲಿ ದಿನದ 24 ಗಂಟೆಗಳ ಕಾಲ ತಂಪಾದ ಮತ್ತು ಶುಚಿಯಾದ ನೀರನ್ನು ಒದಗಿಸಬೇಕು. ಒಂದು ಗಂಟೆ ನೀರು ಇಲ್ಲದಿದ್ದರೆ ಕೋಳಿಗಳು ಸಾವನ್ನಪ್ಪಬಹುದು. ಚೆನ್ನಾಗಿ ಗಾಳಿಯಾಡಲು ಅನುಕೂಲವಾಗುವಂತೆ ಎಲ್ಲಾ ತಡೆಗಳನ್ನು ತೆಗೆಯಬೇಕು. ಕೋಳಿ ಮನೆ ಮಾಡಿನ ಮೇಲ್ಭಾಗಕ್ಕೆ ಸುಣ್ಣ ಬಳಿಯಬೇಕು ಆಥವಾ ಹುಲ್ಲು ಅಡಿಕೆಗರಿ, ತೆಂಗಿನ ಗರಿಗಳಿಂದ ಹೊದಿಸಬೇಕು. ಅನುಕೂಲವಿದ್ದರೆ ಕೋಳಿ ಮನೆಯ ಮಾಡಿನ ಮೇಲೆ ಸ್ಪ್ರಿಂಕ್ಲರ್ನಲ್ಲಿ ನೀರು ಸಿಂಪಡಿಸಬೇಕು. ಕೋಳಿ ಮನೆಯ ಒಳಗೆ ಫ್ಯಾನ್ ಅಥವಾ ಫಾಗಸ್ರ್ಗಳನ್ನು ಅಳವಡಿಸಬೇಕು. ವಿಟಮಿನ್ ಸಿ ಮತ್ತು ಇತರೆ ಎಲೆಕ್ಟ್ರೋಲೈಟ್‍ಗಳನ್ನು…

Read More

ಮಂಜೇಶ್ವರದಲ್ಲಿ ಯು.ಡಿ.ಎಫ್. ಅಬ್ಬರ: ಎ.ಕೆ.ಎಂ. ಅಶ್ರಫ್ ನಾಮಪತ್ರ ಸಲ್ಲಿಕೆ

ಮಂಜೇಶ್ವರ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯು.ಡಿ.ಎಫ್. ಅಧಿಕೃತ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಅವರು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಉಪ್ಪಳದ ಲೀಗ್ ಕಚೇರಿಯಿಂದ ಯು.ಡಿ.ಎಫ್. ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಪಕ್ಷದ ಧ್ವಜಗಳನ್ನು ಹಿಡಿದು ಭರ್ಜರಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ್ದು, ಭಾರೀ ಜನಸಮೂಹ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶ್ರಫ್ ಅವರು, “ಮಂಜೇಶ್ವರದ ಅಭಿವೃದ್ಧಿ ಹಾಗೂ ಜನಸಾಮಾನ್ಯರ…

Read More

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಜನ್ಮ ದಿನಾಚರಣೆ: ಕೆ. ಸುರೇಂದ್ರನ್ ಭಾವನಾತ್ಮಕ ನಮನ

ಕಾಸರಗೋಡು: ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಜನ್ಮ ದಿನದ ಅಂಗವಾಗಿ ಅವರ ನಿವಾಸಕ್ಕೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆ. ಸುರೇಂದ್ರನ್ ಅವರು, ರಾಷ್ಟ್ರಕವಿಗಳ ಜನ್ಮನಾಡಿನಲ್ಲಿ ಗಡಿನಾಡ ಕನ್ನಡಿಗರ ಜನ್ಮಸಿದ್ಧ ಹಕ್ಕುಗಳ ಸಂರಕ್ಷಣೆ ತನ್ನ ಮುಖ್ಯ ಗುರಿಯಾಗಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಮಂಜೇಶ್ವರ ಗೋವಿಂದ ಪೈ ಅವರ ಸೇವೆಯನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದೂ ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು…

Read More

ಕಾಸರಗೋಡು ಕನ್ನಡಿಗರ ಆತಿಥ್ಯ ಅವಿಸ್ಮರಣೀಯ: ನಾ. ನಾಗಚಂದ್ರ

ಕಾಸರಗೋಡು: ಗಡಿನಾಡು ಕಾಸರಗೋಡಿನ ಕನ್ನಡಿಗರು ತೋರಿಸುವ ಆತಿಥ್ಯ, ಪ್ರೀತ್ಯಾದರ ಹೃದಯಸ್ಪರ್ಶಿಯಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ ಎಂದು ರಂಗಭೂಮಿ ನಟ, ನಿರ್ದೇಶಕ ಹಾಗೂ ಸಾಹಿತಿ ನಾ. ನಾಗಚಂದ್ರ ಹೇಳಿದ್ದಾರೆ. ನುಳ್ಳಿಪ್ಪಾಡಿಯ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ನಡೆಯುವ ಕನ್ನಡ ಭವನ ಗ್ರಂಥಾಲಯದಲ್ಲಿ “ಕನ್ನಡ ಪಯಸ್ವಿನಿ ಪ್ರಶಸ್ತಿ” ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕದ ಹಲವಾರು ಭಾಗಗಳಿಗೆ ಭೇಟಿ ನೀಡಿದ ಅನುಭವದಲ್ಲಿಯೂ ಕಾಸರಗೋಡಿನಂತಹ ಪ್ರೀತಿ, ಗೌರವ ಎಲ್ಲಿಯೂ ಸಿಗಲಿಲ್ಲ ಎಂದು ಹೇಳಿದರು. ಯಕ್ಷಗಾನ ಪಿತಾಮಹ ಪಾರ್ತಿಸುಬ್ಬ, ರಾಷ್ಟ್ರಕವಿ ಮಂಜೇಶ್ವರ…

Read More

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವಕ್ಕೆ ಆಹ್ವಾನ

ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಕವಿ-ಕವಯತ್ರಿಯರಲ್ಲಿರುವ ಸಾಹಿತ್ಯ ಪ್ರತಿಭೆಯನ್ನು ಉತ್ತೇಜಿಸುವ ಉದ್ದೇಶದಿಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ವಿಶೇಷ ಸಾಹಿತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. 2000ರಲ್ಲಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ, ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ ಸ್ಥಾಪಿತವಾದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ಚುಟುಕು ಸಾಹಿತ್ಯ ಹಾಗೂ ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ಈಗಾಗಲೇ 7 ಬಾರಿ ಜಿಲ್ಲಾ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನ…

Read More
error: Content is protected !!