ಕಾಸರಗೋಡಿನಲ್ಲಿ ಮಾರ್ಚ್ 28ರಂದು ಜಿಲ್ಲಾ ಚುಟುಕು ಸಾಹಿತ್ಯೋತ್ಸವ

ಕಾಸರಗೋಡು: ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಹೆಸರಾದ ಕನ್ನಡ ಗ್ರಾಮದಲ್ಲಿ 2026ರ ಮಾರ್ಚ್ 28ರಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವವನ್ನು ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಹಾಗೂ ಕನ್ನಡ ಗ್ರಾಮ ಸಹಯೋಗದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಗೋ-ಕುಟೀರದಲ್ಲಿ ಮಧ್ಯಾಹ್ನ 2.30ರಿಂದ 4 ಗಂಟೆಯವರೆಗೆ ಚುಟುಕು ಸಾಹಿತ್ಯೋತ್ಸವ, ಬಹುಭಾಷಾ ಕವಿಗೋಷ್ಠಿ, ಚುಟುಕು ಕವಿಗೋಷ್ಠಿ…

Read More

ಅಂಗಡಿಪದವಿನಲ್ಲಿ ಮಾರ್ಚ್ 22ರಂದು ಬೃಹತ್ ರಕ್ತದಾನ ಶಿಬಿರ

ಹೊಸಂಗಡಿ: ಅಂಗಡಿಪದವು, ಶ್ರೀ ಆದಿಶಕ್ತಿ ಭಜನ ಮಂಡಳಿ, ಆದಿಶಕ್ತಿ ತರವಾಡು ಕ್ಷೇತ್ರ, ಚೇತನ್ ನಗರ ಅಂಗಡಿಪದವು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ ಈ ಶಿಬಿರ ನಡೆಯಲಿದೆ. ಮಾರ್ಚ್ 22ರಂದು ಆದಿತ್ಯವಾರ ಬೆಳಗ್ಗೆ 10.00 ಗಂಟೆಗೆ ನಡೆಯಲಿರುವ ಈ ಶಿಬಿರವು ದಿ. ಪ್ರಜ್ವಲ್ ಅವರ ದ್ವಿತೀಯ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಶಿಬಿರವು ಆದಿಶಕ್ತಿ ತರವಾಡು ಕ್ಷೇತ್ರ, ಚೇತನ್ ನಗರ, ಅಂಗಡಿಪದವು ಪ್ರದೇಶದಲ್ಲಿ ನಡೆಯಲಿದ್ದು, ಸಾರ್ವಜನಿಕರು…

Read More

ಮಂಜೇಶ್ವರದಲ್ಲಿ ಎನ್‌ಡಿಎ ಪ್ರಚಾರಕ್ಕೆ ಚಾಲನೆ: ಸುರೇಶ್ ಗೋಪಿ ಗೋಡೆ ಬರಹ

ಮಂಜೇಶ್ವರ: ವಿಧಾನಸಭಾ ಚುನಾವಣೆಯನ್ನು ಹಿನ್ನೆಲೆ ಮಾಡಿಕೊಂಡು ಎನ್‌ಡಿಎ ಪ್ರಚಾರ ಚಟುವಟಿಕೆಗಳು ಮಂಜೇಶ್ವರ ಕ್ಷೇತ್ರದಲ್ಲಿ ವೇಗ ಪಡೆದುಕೊಂಡಿವೆ. ಇದರ ಭಾಗವಾಗಿ ಕೇಂದ್ರ ಸಚಿವರಾದ ಸುರೇಶ್ ಗೋಪಿ ಅವರು ಕುಂಬಳೆ ಪಟ್ಟಣದಲ್ಲಿ ಗೋಡೆ ಬರಹದ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಜೇಶ್ವರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್, ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ಎನ್‌ಡಿಎ ಸಂಯೋಜಕ ವಿಜಯ್ ಕುಮಾರ್ ರೈ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಇದೇ ವೇಳೆ ರಾಜ್ಯ…

Read More

ಶಿರಿಯ ಮುಸ್ಲಿಂ ಲೀಗ್ ವತಿಯಿಂದ ರoಝಾನ್ ನೆರವು ವಿತರಣೆ: ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಸಹಾಯ

ಶಿರಿಯ: ಪವಿತ್ರ ರoಝಾನ್ ತಿಂಗಳ ಅಂಗವಾಗಿ ಶಿರಿಯ ಮುಸ್ಲಿಂ ಲೀಗ್ ಸಮಿತಿಯ ವತಿಯಿಂದ ರಮಝಾನ್ ನೆರವು ವಿತರಣೆ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ರಹ್ಮಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಅರ್ಹ ಕುಟುಂಬಗಳಿಗೆ ನೆರವು ಕಿಟ್‌ಗಳನ್ನು ಹಾಗೂ ಸುಮಾರು 50 ಮಕ್ಕಳಿಗೆ ಈದ್ ಹಬ್ಬದ ಉಡುಪುಗಳನ್ನು ವಿತರಿಸಲಾಯಿತು. ಮಂಗಲ್ಪಾಡಿ ಮುಸ್ಲಿಂ ಲೀಗ್ ಪಂಚಾಯತ್ ಅಧ್ಯಕ್ಷ ಶಾಹುಲ್ ಹಮೀದ್ ಬಂದಿಯೋಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಾಮಾಜಿಕ ಸೇವಾ ಕಾರ್ಯಗಳ ಅಂಗವಾಗಿ ಕುಡಿಯುವ…

Read More

ಕಾಸರಗೋಡು ಜಿಲ್ಲೆ ಚುನಾವಣೆಗೆ ಸಜ್ಜು: ಎಲ್ಲಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ -ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಹೇಳಿಕೆ

ಕಾಸರಗೋಡು: ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 11,00,036 ಮತದಾರರಿದ್ದು, ಇವರಲ್ಲಿ 5,57,163 ಮಹಿಳೆಯರು, 5,42,861 ಪುರುಷರು ಹಾಗೂ 12 ಟ್ರಾನ್ಸ್‌ಜೆಂಡರ್ ಮತದಾರರು ಸೇರಿದ್ದಾರೆ. ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 1,141 ಮತಗಟ್ಟೆಗಳು ಸ್ಥಾಪಿಸಲಾಗಿದ್ದು, ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಕ್ಷೇತ್ರವಾರು ಮತಗಟ್ಟೆಗಳ ವಿವರದಲ್ಲಿ ಮಂಜೇಶ್ವರ –…

Read More

ಮಂಜೇಶ್ವರ ಬಿಜೆಪಿ ಬೆಳವಣಿಗೆಯ ಹಂತಗಳು – ತುಳುನಾಡ ಮಣ್ಣಿನ ಐತಿಹಾಸಿಕ ಕ್ಷಣಗಳು

ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಯ ಬೆಳವಣಿಗೆ ಹಲವು ಹಂತಗಳನ್ನು ದಾಟಿ ಇಂದು ಬಲಿಷ್ಠವಾಗುತ್ತಿದೆ. 2001ರಲ್ಲಿ ಕಾಸರಗೋಡು ಜಿಲ್ಲಾ ಚುನಾವಣಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದೇಶದ ಇಂದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಜೇಶ್ವರ ಕ್ಷೇತ್ರದ ಚುನಾವಣಾ ಕಾರ್ಯಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆ ಸಮಯದಲ್ಲಿ ಮಂಜೇಶ್ವರ ಚುನಾವಣಾ ಉಸ್ತುವಾರಿಯಾಗಿ ಕೆ. ಸುರೇಂದ್ರನ್ ಕೂಡ ಕಾರ್ಯನಿರ್ವಹಿಸುತ್ತಿದ್ದರು. ಆ ಸಭೆ ನಡೆಯುತ್ತಿದ್ದ ವೇಳೆ ನರೇಂದ್ರ ಮೋದಿ ಅವರಿಗೆ ತಕ್ಷಣ ಗುಜರಾತ್‌ಗೆ ಬರಬೇಕೆಂದು ಕರೆ ಬಂದಿತ್ತು. ಎರಡು ದಿನಗಳ ಬಳಿಕ ನರೇಂದ್ರ ಮೋದಿ…

Read More

ಮಂಜೇಶ್ವರ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ: ಗೆಲುವಿಗೆ ಶ್ರಮಿಸಲು ಶೋಭಾ ಕರಂದ್ಲಾಜೆ ಕರೆ

ಬಿಜೆಪಿ ನೇತೃತ್ವದ ಎನ್‌ಡಿಎ ಮಂಜೇಶ್ವರ ಮಂಡಲ ಚುನಾವಣಾ ಕಾರ್ಯಾಲಯವು ಉಪ್ಪಳದ ಸೋಂಕಾಲಿನಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಕೇಂದ್ರ ಉದ್ಯೋಗ ಖಾತೆ ಸಹ ಸಚಿವೆ ಹಾಗೂ ಕೇರಳ ವಿಧಾನಸಭಾ ಚುನಾವಣೆಯ ಕೋಝಿಕ್ಕೋಡ್ ವಲಯ ಉಸ್ತುವಾರಿ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇನ್ನುಳಿದ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಮಂಜೇಶ್ವರದಲ್ಲಿ ಪಕ್ಷವನ್ನು ಗೆಲ್ಲಿಸಬೇಕು. ಕೇರಳದಲ್ಲಿ ಈ ಬಾರಿ ಬಿಜೆಪಿ ನಿರ್ಣಾಯಕ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದೆ. ಪ್ರಬಲ ತೃತೀಯ ಶಕ್ತಿಯಾಗಿ ಬೆಳೆಯುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು….

Read More

ಬೆಳಿಂಜದಲ್ಲಿ ಕಿನ್ನಿಮಾಣಿ ಯುವಕೇಂದ್ರದ 44ನೇ ವಾರ್ಷಿಕೋತ್ಸವ: ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು

ಬೆಳಿಂಜ: ಶ್ರೀ ಪೂಮಾಣಿ ಕಿನ್ನಿಮಾಣಿ ಯುವಕೇಂದ್ರದ 44ನೇ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಬೆಳಂಜ ಕಿನ್ನಿಗೋಳಿ ಮಾಡದ ಜಾತ್ರೋತ್ಸವದ ಸುಸಂದರ್ಭದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾರ್ಚ್ 22 ಮತ್ತು 23ರಂದು ಆಯೋಜಿಸಲಾಗಿದೆ. ಮಾರ್ಚ್ 22, ಭಾನುವಾರ ಬೆಳಿಗ್ಗೆ 8.30ಕ್ಕೆ ದೀಪಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಬಳಿಕ ಬೆಳಿಗ್ಗೆ 9 ಗಂಟೆಯಿಂದ ಶ್ರೀ ಮಹಾವಿಷ್ಣು ಭಜನಾ ಸಂಘ, ಆಲಿಂಜ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10.30ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಲಿದ್ದು, ಮಧ್ಯಾಹ್ನ…

Read More

ಮಂಜೇಶ್ವರದಲ್ಲಿ ಲೈಲತುಲ್ ಖದ್ರ್ ಆಚರಣೆ – ಮಸೀದಿಗಳಲ್ಲಿ ಭಕ್ತರ ಸಾಗರ

ಮಂಜೇಶ್ವರ: ಪವಿತ್ರ ರಂಜಾನ್ ಮಾಸದ 27ನೇ ರಾತ್ರಿಯಾದ ‘ಲೈಲತುಲ್ ಖದ್ರ್’ ಸಂದರ್ಭದಲ್ಲಿ ಮಂಜೇಶ್ವರದ ವಿವಿಧ ಮಸೀದಿಗಳಲ್ಲಿ ಭಕ್ತಿಭಾವದಿಂದ ಕೂಡಿದ ವಿಶೇಷ ಪ್ರಾರ್ಥನಾ ಸಭೆಗಳು ಮತ್ತು ಧಾರ್ಮಿಕ ಪ್ರಭಾಷಣಗಳು ನಡೆದವು. ಸಾವಿರ ತಿಂಗಳುಗಳಿಗಿಂತಲೂ ಶ್ರೇಷ್ಠವೆಂದು ಪರಿಗಣಿಸಲ್ಪಡುವ ಈ ರಾತ್ರಿಯ ಪುಣ್ಯವನ್ನು ಅರಸಿ ಸಾವಿರಾರು ವಿಶ್ವಾಸಿಗಳು ಮಸೀದಿಗಳಲ್ಲಿ ಜಮಾಯಿಸಿದ್ದರು. ​ಕುಂಜತ್ತೂರು ತೂಮಿನಾಡು ಮಸ್ಜಿದ್ ನೂರ್‌ನಲ್ಲಿ ನಡೆದ ವಿಶೇಷ ಸಮಾರಂಭವು ಭಕ್ತರ ಗಮನ ಸೆಳೆಯಿತು. ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಹಿರಿಯ ವಿದ್ವಾಂಸರಾದ ಕೆ.ಟಿ. ಸಿರಾಜ್ ಅವರು ಆಗಮಿಸಿದ್ದರು.ಕೆ.ಟಿ. ಸಿರಾಜ್ ಅವರು…

Read More

ಮಾರ್ಚ್ 24ರಂದು ಶ್ರೀ ಉಳ್ಳಾಲ್ತಿ ನಾಗಬ್ರಹ್ಮ ಕಾಳಿಚಾಮುಂಡಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ

ಹೇರೂರು: ಶ್ರೀ ಉಳ್ಳಾಲ್ತಿ ನಾಗಬ್ರಹ್ಮ ಕಾಳಿಚಾಮುಂಡಿ ದೈವಸ್ಥಾನ ಹೇರೂರು ಇಲ್ಲಿ ನಾಗದೇವರ ಪ್ರತಿಷ್ಠಾ ದಿನಾಚರಣೆ ಹಾಗೂ ನಾಗತಂಬಿಲ ಸೇವೆ ಮತ್ತು ವರ್ಷಾವಧಿ ನೇಮೋತ್ಸವವು ಭಕ್ತಿಭಾವದಿಂದ ಜರುಗಲಿದೆ.ಮಾರ್ಚ್ 24ರಂದು ಆರಂಭವಾಗುವ ಈ ಧಾರ್ಮಿಕ ಕಾರ್ಯಕ್ರಮವು ಮಾರ್ಚ್ 25ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಬಡಾಜೆ ಬೂಡು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿವರ್ಯರ ಉಪಸ್ಥಿತಿಯಲ್ಲಿ ಪೂಜಾ ವಿಧಿವಿಧಾನಗಳು ನೆರವೇರಲಿವೆ.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಹೋಮ, ನಾಗದೇವರಿಗೆ ನಾಗತಂಬಿಲ ಸೇವೆ, ಸಂಜೆ ಭಂಡಾರ ಏರಿಸುವುದು ಹಾಗೂ ವಿವಿಧ ದೈವಗಳ ನೇಮೋತ್ಸವಗಳು ನಡೆಯಲಿವೆ. ರಾತ್ರಿ ಉಳ್ಳಾಲ್ತಿ ದೈವ, ಬಿಲ್ಲಾರ,…

Read More
error: Content is protected !!