ಮಂಗಲ್ಪಾಡಿಯಲ್ಲಿ ಅಂಬೇಡ್ಕರ್ ಜಯಂತಿ ಹಾಗೂ ವಾರ್ಷಿಕೋತ್ಸವ: ಪೂರ್ವಭಾವಿ ಸ್ಪರ್ಧೆಗಳು ಆಯೋಜನೆ

ಮಂಜೇಶ್ವರ (ಮಂಗಲ್ಪಾಡಿ):ಡಾ. ಬಿ.ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ, ಮಂಗಲ್ಪಾಡಿ ವತಿಯಿಂದ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 137ನೇ ಜನ್ಮದಿನ ಹಾಗೂ ಕಲಾವೇದಿಕೆಯ 29ನೇ ವಾರ್ಷಿಕೋತ್ಸವವನ್ನು ಏಪ್ರಿಲ್ 11, 2026ರಂದು ಶನಿವಾರ ರಾತ್ರಿ 8 ಗಂಟೆಗೆ ವೈಭವದಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಏಪ್ರಿಲ್ 5, 2026ರಂದು ಭಾನುವಾರ ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಈ ಸ್ಪರ್ಧೆಗಳಲ್ಲಿ ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿ ಕ್ರೀಡಾತ್ಮಕ ಮನೋಭಾವವನ್ನು ತೋರಿಸಿದರು….

Read More

ಕಾಸರಗೋಡು ಮಂಜೇಶ್ವರ ಸೇರಿದಂತೆ ಐದು ವಿಧಾನ ಸಭಾ ಕ್ಷೇತ್ರ ಸಮೀಕ್ಷೆ: ಗಡಿ ಜಿಲ್ಲೆಯಲ್ಲಿ ಹಳೆ ಆಟ, ಹಳೆ ಲೆಕ್ಕಾಚಾರ? ಐದು ಚಾನೆಲ್‌ಗಳ ಭವಿಷ್ಯ ಹೀಗಿದೆ.

​ ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿರುವಂತೆಯೇ ಹೊರಬಿದ್ದಿರುವ ಮಲಯಾಳಂನ ಪ್ರಮುಖ ಐದು ಸುದ್ದಿವಾಹಿನಿಗಳ ಸಮೀಕ್ಷಾ ವರದಿಗಳು ಜಿಲ್ಲೆಯಲ್ಲಿ ಹಳೆ ಫಲಿತಾಂಶವೇ ಮರುಕಳಿಸುವ ಮುನ್ಸೂಚನೆ ನೀಡಿವೆ. ಏಶ್ಯಾನೆಟ್, ಮನೋರಮಾ, ಮಾತೃಭೂಮಿ, ಬಿಗ್ ಟಿವಿ ಮತ್ತು ರಿಪೋರ್ಟರ್ ಚಾನೆಲ್‌ಗಳ ಸಮೀಕ್ಷೆಯ ಪ್ರಕಾರ, ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಎಡರಂಗ 3 ಮತ್ತು ಯುಡಿಎಫ್ 2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿವೆ. ​ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಬದಲಾಗದ ಹವಾ!​ಎಲ್ಲರ ಕಣ್ಣು ನೆಟ್ಟಿರುವ ಮಂಜೇಶ್ವರ ಮತ್ತು ಕಾಸರಗೋಡು ಕ್ಷೇತ್ರಗಳಲ್ಲಿ ಈ ಬಾರಿಯೂ ಯಾವುದೇ…

Read More

ಲೀಗ್ ನಾಯಕರ ವಿರುದ್ಧ ಅಸಮಾಧಾನ: ಮಂಜೇಶ್ವರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಬ್ದುಲ್ಲ ಮಾಸ್ಟರ್ ಕಣಕ್ಕೆ

ಕುಂಬಳೆ (ಕಾಸರಗೋಡು):ಮುಸ್ಲಿಂ ಲೀಗ್ ನಾಯಕರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲವೆಂದು ಆರೋಪಿಸಿ, ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಬ್ದುಲ್ಲ ಮಾಸ್ಟರ್ ಕಣ್ಣೂರು ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅಲ್ಪ ಮತಾಂತರದಲ್ಲಿ ಜಯಗಳಿಸಿದ್ದ ಮುಸ್ಲಿಂ ಲೀಗ್ ಪಕ್ಷವನ್ನು ಮತ್ತೆ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸುತ್ತಿರುವ ಸಂದರ್ಭದಲ್ಲೇ, ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಅಬ್ದುಲ್ಲ ಮಾಸ್ಟರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸುಮಾರು 14 ವರ್ಷಗಳ ಹಿಂದೆ ತನ್ನ ಪುತ್ರ ಮೊಹಮ್ಮದ್ ಇರ್ಷಾದ್ ಮೂಲಕ, ಲೀಗ್…

Read More

ಗಡಿನಾಡ ಕನ್ನಡ ಸೇವೆಗೆ ಡಾ. ವಾಮನ್ ರಾವ್ ಬೇಕಲ್‌ಗೆ ‘ಹೊಯ್ಸಳ ಪ್ರಶಸ್ತಿ–2025’ ಗೌರವ

ಕಾಸರಗೋಡು/ಮೈಸೂರು:ಗಡಿನಾಡ ಕಾಸರಗೋಡಿನಲ್ಲಿ ಕನ್ನಡ ಸೇವೆಗಾಗಿ ನಿರಂತರವಾಗಿ ದುಡಿಯುತ್ತಿರುವ ಕನ್ನಡ ಭವನದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಅವರಿಗೆ ಪ್ರತಿಷ್ಠಿತ “ಹೊಯ್ಸಳ ಪ್ರಶಸ್ತಿ–2025” ಪ್ರದಾನ ಮಾಡಲಾಗಿದೆ. ಮೈಸೂರಿನ ಹೊಯ್ಸಳ ಕನ್ನಡ ಸಂಘ ಹಾಗೂ ಸವಿಗನ್ನಡ ಪತ್ರಿಕಾ ಬಳಗದ ವತಿಯಿಂದ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏಪ್ರಿಲ್ 5, 2026ರಂದು ನಡೆದ 26ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕೃತ ಪುಸ್ತಕಪ್ರೇಮಿ ಅಂಕೆಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

Read More

ಚಂದ್ರಗಿರಿ ಕೊಪ್ಪಲು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಳದಲ್ಲಿ 55ನೇ ಪ್ರತಿಷ್ಠಾ ಮಹೋತ್ಸವ ವೈಭವ

ಕಾಸರಗೋಡು:ಜಿಲ್ಲೆಯ ಐತಿಹಾಸಿಕ ಚಂದ್ರಗಿರಿ ಕೋಟೆ ಪರಿಸರದಲ್ಲಿರುವ ಚಂದ್ರಗಿರಿ ಕೊಪ್ಪಲು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಳದ 55ನೇ ಪ್ರತಿಷ್ಠಾ ಮಹೋತ್ಸವವು ಭಕ್ತಿಭಾವದಿಂದ ಹಾಗೂ ವೈಭವದಿಂದ ಜರಗಿತು. ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ, ಕೀಕಾಂಗೋಡು ಪನ್ನಿಪಳ್ಳಿ ಬ್ರಹ್ಮಶ್ರೀ ಶ್ರೀಧರ ಕಾಯರ್ ತ್ತಾಯರ ನೇತೃತ್ವದಲ್ಲಿ, ಚಂದ್ರಗಿರಿ ಅವಿನಾಶ್ ಭಟ್ ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು ನೆರವೇರಿದವು. ಏಪ್ರಿಲ್ 3ರಿಂದ 5ರವರೆಗೆ ನಡೆದ ಈ ಮಹೋತ್ಸವದ ಅಂಗವಾಗಿ ಕುಲಪುರೋಹಿತರಾದ ನಾಗೇಶ್ ಭಟ್ ತಲ್ಲಾಣಿ ಅವರ ಪೌರೋಹಿತ್ಯದಲ್ಲಿ ಸಾಮೂಹಿಕ ಉಚಿತ ಬ್ರಹ್ಮೋಪದೇಶ, ಹರಿಸೇವೆ ಹಾಗೂ…

Read More

ಮಂಜೇಶ್ವರ ಪೊಲೀಸ್ ಠಾಣಾ ಆವರಣದಲ್ಲಿ ಅಗ್ನಿ ಅವಘಡ: ಕಸ್ಟಡಿಯಲ್ಲಿದ್ದ 36 ವಾಹನಗಳು ಭಸ್ಮ

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ಕಸ್ಟಡಿಯಲ್ಲಿದ್ದ ಸುಮಾರು 36ಕ್ಕೂ ಹೆಚ್ಚು ವಾಹನಗಳು ಆಕಸ್ಮಿಕ ಬೆಂಕಿಗೆ ತುತ್ತಾಗಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.​​ವಿವಿಧ ಅಪರಾಧ ಪ್ರಕರಣಗಳು, ದಾಖಲೆಗಳಿಲ್ಲದ ಕಾರಣಕ್ಕಾಗಿ ಮುಟ್ಟುಗೋಲು ಹಾಕಿಕೊಂಡಿದ್ದ ಮತ್ತು ಅಪಘಾತಕ್ಕೀಡಾಗಿ ಮಾಲೀಕರು ಬಿಟ್ಟು ಹೋಗಿದ್ದ ವಾಹನಗಳನ್ನು ಠಾಣಾ ಆವರಣದಲ್ಲಿ ನಿಲ್ಲಿಸಲಾಗಿತ್ತು. ದಿಢೀರಾಗಿ ಕಾಣಿಸಿಕೊಂಡ ಬೆಂಕಿಯು ಕ್ಷಣಾರ್ಧದಲ್ಲಿ ಆವರಣದಾದ್ಯಂತ ಹರಡಿದೆ. ಈ ಅಗ್ನಿ ದುರಂತದಲ್ಲಿ ಆಟೋರಿಕ್ಷಾಗಳು, ಓಮ್ನಿ ವ್ಯಾನ್‌ಗಳು, ಮಿನಿ ಲಾರಿಗಳು ಹಾಗೂ ಕಾರುಗಳು ಸೇರಿದಂತೆ ಒಟ್ಟು 36 ವಾಹನಗಳು ಬೆಂಕಿಗಾಹುತಿಯಾಗಿವೆ….

Read More

ಮಂಜೇಶ್ವರ ‘ಹಾಟ್ ಸೀಟ್’ ಗೆ ಬಿಜೆಪಿ ಕಸರತ್ತು: ಮನೆಮನೆಗೆ ತೆರಳಿ ಮತಯಾಚನೆ

ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ “ಹಾಟ್ ಸೀಟ್” ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ ಕಮಲ ಅರಳಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ. .ಈ ನಿಟ್ಟಿನಲ್ಲಿ ತುಳು ಕನ್ನಡ ಮಾತನಾಡುವ ಜನರೇ ಅಧಿಕವಾಗಿರುವ ಎಣ್ಮಕಜೆ ವ್ಯಾಪ್ತಿಯ ಕಂಡೇರಿ ಗ್ರಾಮ ಪಂಚಾಯತ್ ನಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ಕೆ ಸುರೇಂದ್ರನ್ ರವರ ಪರವಾಗಿ ವಿಧಾನ ಪರಿಷತ್ ಸದಸ್ಯರಾದ ಶ್ರೀ…

Read More

ಬೆಜ್ಜ ಮೂಡಂಬೈಲು ಧೂಮಾವತಿ ಬಂಟ ದೈವಗಳ ಉತ್ಸವಕ್ಕೆ ಸಜ್ಜು: ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಹೋತ್ಸವ

ಬೆಜ್ಜ ಮೂಡಂಬೈಲು: ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ಏಪ್ರಿಲ್ 1ರಂದು ಉತ್ಸವದ ಗೊನೆ ಮುಹೂರ್ತ , ಕೋಳಿಗೂಟ ಮತ್ತು ಉತ್ಸವದ ಚೆಂಡು ಆರಂಭಗೊಂಡು 6 ರಿಂದ 9 ರವರೆಗೆ ಭಕ್ತಿಭಾವದಿಂದ ದೈವಗಳ ಉತ್ಸವ ನಡೆಯಲಿದೆ. ಉತ್ಸವವು ಬುಧವಾರ ಬೆಳಗ್ಗೆ 9 ಗಂಟೆಯಿಂದ ಆರಂಭಗೊಂಡು ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಗ್ರಾಮಸ್ಥರು ಹಾಗೂ ಕ್ಷೇತ್ರ ಸೇವಾ ಸಮಿತಿಯವರ ಸಹಕಾರದಲ್ಲಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಭಕ್ತರು ತಮ್ಮ ಬಂಧು-ಮಿತ್ರರೊಂದಿಗೆ ಆಗಮಿಸಿ ತನು-ಮನ-ಧನಗಳಿಂದ ಸಹಕರಿಸಿ, ಗಂಧ ಪ್ರಸಾದವನ್ನು…

Read More

ಕಯ್ಯಾರು ಉಳ್ಳಾಲ್ತಿ ಕಾಳಿಚಾಮುಂಡಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಯ್ಯಾರು (ಮೇರ್ಲ): ಶ್ರೀ ಉಳ್ಳಾಲ್ತಿ ಕಾಳಿಚಾಮುಂಡಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ನೇಮೋತ್ಸವವು ಏಪ್ರಿಲ್ 28ರಿಂದ 30ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ನಡೆಯಲಿರುವ ಈ ಮಹೋತ್ಸವವು ಊರ-ಪರವೂರ ಹಾಗೂ ಹತ್ತು ಸಮಸ್ತರು ಮತ್ತು ಕುಟುಂಬಸ್ಥರ ಸಹಕಾರದಿಂದ ಜರುಗಲಿದೆ. ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಶಂಕರನಾರಾಯಣ ಕಡಮಣ್ಣಾಯ (ಬಂಬ್ರಾಣ ಬೂಡು, ಕರ್ಕುಳ) ಅವರ ದಿವ್ಯ ಹಸ್ತದಿಂದ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. ಈ ನಡುವೆ…

Read More

ಕುಂಬಳೆಯಲ್ಲಿ 159 ಲೀಟರ್ ಕರ್ಣಾಟಕ ಮದ್ಯ ವಶ : ಓರ್ವ ಬಂಧನ, ಮತ್ತೊಬ್ಬ ಪರಾರಿ

ಕುಂಬಳೆ: ಕೇರಳದಲ್ಲಿ ಮಾರಾಟ ನಿಷೇಧಿತವಾಗಿರುವ ಕರ್ಣಾಟಕ ನಿರ್ಮಿತ ಮದ್ಯವನ್ನು ಸಾಗಿಸುತ್ತಿದ್ದ ಇಬ್ಬರನ್ನು ಎಕ್ಸೈಸ್ ಇಲಾಖೆ ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿ ಮತ್ತೊಬ್ಬರು ಪರಾರಿಯಾಗಿದ್ದಾರೆ. ತಲಪಾಡಿ ತಚ್ಚನಿ ನಿವಾಸಿ ನಿಖಿಲ್ ಬಂಧಿತ ಆರೋಪಿಯಾಗಿದ್ದು, ವಿಧಾನಸಭಾ ಚುನಾವಣೆಯ ಹಿನ್ನೆಲೆ ನಡೆಯುತ್ತಿದ್ದ ತಪಾಸಣೆ ವೇಳೆ ಅವರಿಂದ ಸುಮಾರು 159 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದೇ ವೇಳೆ, ಎರಡನೇ ಆರೋಪಿಯಾದ ಕುಂಟಾಂಗಿರಡ್ಕ ನಿವಾಸಿ ಪ್ರಭಾಕರನ್ ಅಲಿಯಾಸ್ ಅನ್ನಿ ಪ್ರಭಾಕರನ್ ಪರಾರಿಯಾಗಿದ್ದಾನೆ. ಪರಾರಿಯಾಗುವ ಸಂದರ್ಭದಲ್ಲಿ ಮದ್ರಸದಿಂದ ಬರುತ್ತಿದ್ದ ಸುಮಾರು 15 ಬಾಲಕಿಯರ…

Read More
error: Content is protected !!