ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜೂನ್ 10 ರಂದು ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ “ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿ” ಪ್ರದಾನ
ಕರ್ನಾಟಕ ರಾಜಧಾನಿಯ ಹಿರಿಯ ಸಂಘಟನೆಯಾದ ವಿ. ಕೆ. ಎಂ. ಕಲಾವಿದರು(ರಿ.), ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ನಡೆಯುವ ಡಾ. ಬಿ. ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾo ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳ – ರಂಗೋತ್ಸವ ಮತ್ತು ನಿರಂತರ 45ನೇ ವರ್ಷದ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2026 ಜೂನ್ 8 ರಿಂದ 10 ರ ತನಕ ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಜೂನ್ 10…