ಇನ್‌ಲ್ಯಾಂಡ್ ಅಸ್ಕಾಟ್ ಮಾಡೆಲ್ ಫ್ಲಾಟ್ ಉದ್ಘಾಟನೆ: ಮನೆ ಖರೀದಿದಾರರಿಗೆ ಪ್ರೀಮಿಯಂ ಜೀವನಶೈಲಿಯ ಅನುಭವ

ಮಂಗಳೂರು: ಇನ್‌-ಲ್ಯಾಂಡ್ ಗ್ರೂಪ್‌ನ ಪ್ರತಿಷ್ಠಿತ ವಸತಿ ಯೋಜನೆಯಾದ ಇನ್‌ಲ್ಯಾಂಡ್ ಅಸ್ಕಾಟ್ನ ಮಾಡೆಲ್ ಫ್ಲಾಟ್ ಉದ್ಘಾಟನೆಯು ಯೋಜನೆಯ ಮಹತ್ವದ ಮೈಲಿಗಲ್ಲಾಗಿ ಗುರುತಿಸಿಕೊಂಡಿದೆ. ಈ ಮೂಲಕ ಭಾವೀ ಮನೆ ಖರೀದಿದಾರರಿಗೆ ಯೋಜನೆಯ ಒಳಾಂಗಣ ವಿನ್ಯಾಸ, ವಿಶಾಲ ಸ್ಥಳಾವಕಾಶದ ಯೋಜನೆ ಹಾಗೂ ಗುಣಮಟ್ಟದ ನಿರ್ಮಾಣ ವೈಶಿಷ್ಟ್ಯಗಳನ್ನು ನೇರವಾಗಿ ಅನುಭವಿಸುವ ಅವಕಾಶ ಲಭಿಸಿದೆ. ಆಧುನಿಕ ಅಗತ್ಯತೆಗಳು, ಪ್ರಾಯೋಗಿಕತೆ ಹಾಗೂ ಬಜೆಟ್‌ನ್ನು ಗಮನದಲ್ಲಿಟ್ಟುಕೊಂಡು ಇನ್‌-ಲ್ಯಾಂಡ್ ಇಂಡೋರ್ಸ್ ಸಂಸ್ಥೆಯು ಮಾಡೆಲ್ ಫ್ಲಾಟ್‌ನ್ನು ಅತ್ಯಂತ ಸೂಕ್ಷ್ಮವಾಗಿ ವಿನ್ಯಾಸಗೊಳಿಸಿ ಕಾರ್ಯಗತಗೊಳಿಸಿದೆ. ನಿವಾಸಿಗಳು ತಮ್ಮ ಭವಿಷ್ಯದ ಮನೆಯಲ್ಲಿ ನಿರೀಕ್ಷಿಸಬಹುದಾದ ಜೀವನಶೈಲಿ,…

Read More

ಕನ್ನಡ ನಾಡು-ನುಡಿಗೆ ಅನನ್ಯ ಸೇವೆ: ಡಾ. ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್‌ಗೆ ಆಯರ್ಭಟ ರಾಷ್ಟ್ರೀಯ ಪ್ರಶಸ್ತಿ-2026

ಬೆಂಗಳೂರು, ಕನ್ನಡ ಭಾಷೆ, ಸಾಹಿತ್ಯ ಹಾಗೂ ಕನ್ನಡ ಸೇವೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಶ್ರೀಮತಿ ಸಂಧ್ಯಾರಾಣಿ ಟೀಚರ್ ಅವರಿಗೆ ಪ್ರತಿಷ್ಠಿತ ‘ಆಯುರ್ಭಟ ರಾಷ್ಟ್ರೀಯ ಪ್ರಶಸ್ತಿ-2026’ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ. ಕನ್ನಡ ನಾಡು-ನುಡಿ, ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇಬ್ಬರೂ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು…

Read More

ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕರಾಗಿ ಕರೂಣ್ ನಾಯರ್ ನೇಮಕ

ಮಂಗಳೂರು, ಜೂನ್ 14 : ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ರ ಅಂಗವಾಗಿ ಕೋಸ್ಟಲ್ ಕಿಂಗ್ಸ್ ಮಂಗಳೂರು ಫ್ರಾಂಚೈಸಿಯು ಭಾರತೀಯ ಕ್ರಿಕೆಟಿಗ ಕರೂಣ್ ನಾಯರ್ ಅವರನ್ನು ತಂಡದ ನಾಯಕರಾಗಿ ಘೋಷಿಸಿದೆ. ಭಾನುವಾರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಫ್ರಾಂಚೈಸಿಯು ತನ್ನ ಚೊಚ್ಚಲ ತಂಡವನ್ನು ಪರಿಚಯಿಸುವುದರ ಜೊತೆಗೆ ನಾಯಕತ್ವ ತಂಡವನ್ನು ಪ್ರಕಟಿಸಿ, ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ಅಧಿಕೃತ ಗೀತೆಯನ್ನು ಬಿಡುಗಡೆ ಮಾಡಿತು ಹಾಗೂ ತಂಡದ ಅಧಿಕೃತ ಜೆರ್ಸಿಯನ್ನು ಅನಾವರಣಗೊಳಿಸಿತು. ಕಾರ್ಯಕ್ರಮದಲ್ಲಿ ಕೆಎಸ್ಸಿಎ ಮಂಗಳೂರು…

Read More

ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರನ್ನು ಹೊರಹಾಕುವ ಹುನ್ನಾರ: ವೇದವ್ಯಾಸ ಕಾಮತ್ ಆರೋಪ

ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತೀ ಮನೆಯ ಯಜಮಾನಿಗೆ ಯಾವುದೇ ಷರತ್ತಿಲ್ಲದೇ ಎರಡು ಸಾವಿರ ರೂಪಾಯಿ ನೀಡುತ್ತೇವೆ ಎಂದು ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ನಾನಾ ಕಾರಣಗಳನ್ನು ನೀಡಿ ಒಂದೂವರೆ ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಯೋಜನೆಯಿಂದ ಹೊರ ಹಾಕಲು ಹುನ್ನಾರ ನಡೆಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸ್ಪಷ್ಟ ಮಾರ್ಗಸೂಚಿ, ಸಮರ್ಪಕ ಯೋಜನೆ, ಪಾರದರ್ಶಕ ವ್ಯವಸ್ಥೆಯಿಲ್ಲದೇ ಬೇಕಾಬಿಟ್ಟಿಯಾಗಿ ಯೋಜನೆ ಜಾರಿಗೆ ತಂದ ಪರಿಣಾಮ ರಾಜ್ಯದ ಪ್ರತಿಯೊಬ್ಬ ತೆರಿಗೆದಾರರ ಶ್ರಮದ ಹಣಕ್ಕೆ…

Read More

ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಎಂಸಿಸಿ ಬ್ಯಾಂಕ್‌ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್‌ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ…

Read More

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡದಿದ್ದಲ್ಲಿ ಹೋರಾಟ ತೀವ್ರಗೊಳ್ಳಲಿದೆ : ವಸಂತ ಆಚಾರಿ ಎಚ್ಚರಿಕೆ

ಮೂಡಬಿದಿರೆ ಸಮುದಾಯ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸುವ ಆದೇಶ ರದ್ದುಗೊಳಿಸಬೇಕು ಮೂಡಬಿದಿರೆಗೆ ಪೂರ್ಣಪ್ರಮಾಣದ ತಾಲೂಕು ಆಸ್ಪತ್ರೆ ಮಂಜೂರು ಮಾಡಬೇಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕ ಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಮೂಡಬಿದಿರೆ ಸಮುದಾಯ ಆಸ್ಪತ್ರೆ ಮುಂಭಾಗ ಸಿಪಿಐಎಂ ಮೂಡಬಿದಿರೆ ವಲಯ ಸಮಿತಿ ಮುಂಭಾಗ “ಮಾನವ ಸರಪಳಿ” ಕಾರ್ಯಕ್ರಮ ನಡೆಯಿತು. ಮಾನವ ಸರಪಳಿಯ ತರುವಾಯ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ…

Read More

ಬೇಕಲ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

​ಕಾಸರಗೋಡು: ಬೇಕಲ ಕೋಟೆ ಸಮೀಪದ ಪಳ್ಳಿಕರೆ ಬೀಚ್‌ನಲ್ಲಿ ಭಾನುವಾರ ಸಂಜೆ ನಡೆದ ದುರ್ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾಗಿದ್ದಾರೆ. ಕೊಟ್ಟಾಯಂ ಚಂಗನಾಶೇರಿಯ ನಿವಾಸಿಗಳಾದ ಅಂಗಿತ್ (20) ಮತ್ತು ಅಪ್ಪು ಟಿ. ಎಬ್ರಹಾಂ (20) ಕಾಣೆಯಾದ ವಿದ್ಯಾರ್ಥಿಗಳು. ​ಘಟನೆ ನಡೆದಾಗ ನಾಲ್ವರು ವಿದ್ಯಾರ್ಥಿಗಳ ತಂಡ ಸಮುದ್ರದಲ್ಲಿ ಈಜಲು ಇಳಿದಿತ್ತು. ಈ ವೇಳೆ ಬಲವಾದ ಅಲೆಗಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಉಳಿದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಜೆ ಸುಮಾರು 6:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ವಿಷಯ ತಿಳಿದ…

Read More

ನಾಪತ್ತೆಯಾದ ಕುಂಜತ್ತೂರಿನ ಇಬ್ಬರು ಬಾಲಕರು ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಸುರಕ್ಷಿತವಾಗಿ ಪತ್ತೆ

​ಮಂಜೇಶ್ವರ: ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕುಂಜತ್ತೂರಿನ ಇಬ್ಬರು ಬಾಲಕರು ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ​ಕುಂಜತ್ತೂರು ಸ್ವಾಗತ್ ಹೋಟೆಲ್ ಸಮೀಪದ ನಿವಾಸಿಗಳಾದ ಇಬ್ರಾಹಿಂ ಅಶ್ರಫ್ ಅವರ ಪುತ್ರ ಯಾಸೀನ್ (13) ಮತ್ತು ಅಮೀರ್ ಅವರ ಪುತ್ರ ಸುಲ್ತಾನ್ (14) ನಾಪತ್ತೆಯಾಗಿದ್ದ ಬಾಲಕರು. ಶನಿವಾರ ಸಂಜೆ 5 ಗಂಟೆಯ ಬಳಿಕ ಇವರು ನಾಪತ್ತೆಯಾಗಿದ್ದರು. ​​ಬಾಲಕರು ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳೀಯರು ಮತ್ತು ಸಂಬಂಧಿಕರು ಜಂಟಿ ಕಾರ್ಯಾಚರಣೆ ನಡೆಸಿದರು….

Read More

ಮಹಾರಾಜ ಟ್ರೋಫಿಗೆ ಕೋಸ್ಟಲ್ ಕಿಂಗ್ಸ್ ಸಜ್ಜು: ಕರುಣ್ ನಾಯರ್ ನಾಯಕ, ಶ್ರೇಯಸ್ ಗೋಪಾಲ್ ಉಪನಾಯಕ

ಮಂಗಳೂರು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಶ್ರಯದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಟಿ20 ಲೀಗ್‌ಗಾಗಿ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕನಾಗಿ ಭಾರತ ಕ್ರಿಕೆಟಿಗ ಕರುಣ್ ನಾಯರ್ ಹಾಗೂ ಉಪನಾಯಕನಾಗಿ ಶ್ರೇಯಸ್ ಗೋಪಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ನಡೆದ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ಜರ್ಸಿ ಅನಾವರಣ ಹಾಗೂ ತಂಡದ ಆಂಥಮ್ ಬಿಡುಗಡೆ ಕಾರ್ಯಕ್ರಮದಲ್ಲಿ ನಾಯಕ ಮತ್ತು ಉಪನಾಯಕರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಯಿತು. ಈ ಬಾರಿಯ ಆಟಗಾರರ ಹರಾಜಿನಲ್ಲಿ…

Read More

ಕುಂದಾಪುರ : ಕಾಲು ಜರಿ ನೀರಿಗೆ ಬಿದ್ದು ಯುವಕನ ದಾರುಣ ಸಾವು

ಕುಂದಾಪುರ ತಾಲೂಕಿನ ಬೇಳೂರು ಗ್ರಾಮದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಸಾವಣ್ಣಪ್ಪಿದ್ದ ಸಾಮರಾಜ್ (21)ಗೆ ಸಂತಾಪ ಸೂಚಿಸಿದ ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ ಕುಂದಾಪುರ ತಾಲೂಕಿನ ಬೇಳೂರು ಗ್ರಾಮದ ಸುಳಿಗುಂಡಿ ಹೀರೆಹೊಳೆಗೆ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿ ಸಾಮರಾಜ್ (21) ಅವರು ನೀರಿನಲ್ಲಿ ಜಾರಿ ಬಿದ್ದು ಸಾವು ಸಂಭಾವಿಸಿದೆ.. ಸಾಮರಾಜ್ ಭೋವಿ ಸಮಾಜದ ಹುಡುಗ ಅವರು ನಾಗರಾಜ್ ಮತ್ತು ಶಿವಾಗಾಮಿ ಅವರ ಪುತ್ರ ನಾಗಿರುತ್ತಾರೆ.. ಸಾಮರಾಜ್ ಅವರು ಸ್ಥಳೀಯ ECR ಕಾಲೇಜಿನಲ್ಲಿ ಅಂತಿಮ ವರ್ಷದ…

Read More
error: Content is protected !!