ಗೋವಾದ ಪಣಜಿಯಲ್ಲಿ ರಾಷ್ಟ್ರೀಯ ಕನ್ನಡ ಸಮ್ಮೇಳನ: ನಾಡು-ನುಡಿಗೆ ಸೇವೆ ಶ್ರೇಷ್ಠ ಕಾರ್ಯ – ಡಾ. ಸುಬ್ರಮಣಿ
ಪಣಜಿ: ಗೋವಾದ ಪಣಜಿಯಲ್ಲಿ ನಡೆದ 21ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಯಶಸ್ವಿಯಾಗಿ ನೆರವೇರಿದ್ದು, ನಾಡು-ನುಡಿಗೆ ಸೇವೆ ಸಲ್ಲಿಸುವ ಮಹತ್ವವನ್ನು ಮತ್ತೊಮ್ಮೆ ನೆನಪಿಸಿದೆ.ವಿಷ್ಣು ನಾಯ್ಕ್ ವೇದಿಕೆ – ಗೋವಾದ ಪಣಜಿಯಲ್ಲಿ ಆಯೋಜಿಸಿದ್ದ 21ನೇ ರಾಷ್ಟ್ರೀಯ ಕನ್ನಡ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ ಸುಬ್ರಮಣಿ (ಪಲ್ಲವಿ ಮಣಿ) ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನಾಡು-ನುಡಿಗೆ ಸೇವೆ ಸಲ್ಲಿಸುವುದು ಒಂದು ಶ್ರೇಷ್ಠ ಕಾರ್ಯ ಹಾಗೆ ನಡೆದುಕೊಂಡಾಗ ಒಬ್ಬ ವ್ಯಕ್ತಿ ಪರಿಪೂರ್ಣನಾಗಲು ಸಾಧ್ಯ. ನಾಡು ನುಡಿ ಮತ್ತು ಸಂಸ್ಕೃತಿಗಳಿಗೆ ಶ್ರದ್ಧೆ ಮತ್ತು ಭಕ್ತಿಯಿಂದ ಸೇವೆ…