ಮಂಜೇಶ್ವರ ಪಂಚಾಯತ್ ಶಾಪಿಂಗ್ ಕಾಂಪ್ಲೆಕ್ಸ್ ಹಾಗೂ ಮೀನು ಮಾರುಕಟ್ಟೆ ನಿರ್ಜೀವ – ರಸ್ತೆ ಬದಿಯಲ್ಲೇ ಮೀನು ಮಾರಾಟ

ಮಂಜೇಶ್ವರ: ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಮಂಜೇಶ್ವರ ಪಂಚಾಯತ್ ನಿರ್ಮಿಸಿದ ಶಾಪಿಂಗ್ ಕಾಂಪ್ಲೆಕ್ಸ್ ಹಾಗೂ ಮೀನು ಮಾರುಕಟ್ಟೆ ನಿರ್ಲಕ್ಷ್ಯಕ್ಕೆ ಗುರಿಯಾಗಿ ನಿರ್ಜೀವವಾಗಿ ಪರಿಣಮಿಸಿದೆ. ಇಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವುದು ಕೇವಲ ಒಂದು ಗುಜರಿ ಅಂಗಡಿ ಮತ್ತು ಒಂದು ಸೈಕಲ್ ರಿಪೇರಿ ಅಂಗಡಿ ಮಾತ್ರ. ಶಾಪಿಂಗ್ ಕಾಂಪ್ಲೆಕ್ಸ್‌ನ ಐದಕ್ಕಿಂತ ಹೆಚ್ಚು ಕೊಠಡಿಗಳು ಹಲವು ವರ್ಷಗಳಿಂದ ಖಾಲಿಯಾಗಿಯೇ ಇವೆ. ಮೀನು ಮಾರಾಟಕ್ಕಾಗಿ ಕಟ್ಟಡದ ನೆಲಮಹಡಿಯನ್ನು ವಿಶೇಷವಾಗಿ ಸಜ್ಜುಗೊಳಿಸಲಾಗಿತ್ತು. ಆದರೆ ಪ್ರಸ್ತುತ ಅಲ್ಲಿ ಗುಜರಿ ಅಂಗಡಿ ಕಾರ್ಯನಿರ್ವಹಿಸುತ್ತಿದೆ. ಇದರಿಂದಾಗಿ ಮೀನು ಮಾರಾಟ ಸಂಪೂರ್ಣವಾಗಿ ರಸ್ತೆ…

Read More

ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾಗಿ ಕೆ.ಎ. ಅಸ್ಮ ಹಸೈನಾರ್ ಹಾಗೂ ಸವಿತಾ ಕೊಳ್ನಾಡು ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ (ಗ್ರಾಮಾಂತರ) ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಶ್ರೀಮತಿ ಕೆ.ಎ. ಅಸ್ಮ ಹಾಗೂ ಶ್ರೀಮತಿ ಸವಿತಾ ಬರ್ಕಳ ಕೊಳ್ನಾಡು ಅವರನ್ನು ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಗೆ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ಇವರಿಬ್ಬರ ಆಯ್ಕೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಕೊಳ್ನಾಡು ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಹಾಗೂ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿರುವ ಶ್ರೀಮತಿ ಕೆ.ಎ. ಅಸ್ಮ ಅವರು ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಮನ್ನಣೆ…

Read More

ಮಾಡಮೆ ನಿವಾಸಿ ಪ್ರಶಾಂತ್ ಆಚಾರ್ಯ ನಿಧನ – ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಪ್ರಾಣ ಕಳೆದುಕೊಂಡ ಯುವಕ

ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ 24 ರ ಹರೆಯದ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ನಿಧನಹೊಂದಿದ ಘಟನೆ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಮಾಡಮೆ ನಿವಾಸಿ ಶ್ರೀರಾಮ ಆಚಾರ್ಯ ಅವರ ಮೂವರು ಪುತ್ರರಲ್ಲಿ ಎರಡನೇಯವನಾದ ಪ್ರಶಾಂತ್ ಆಚಾರ್ಯ ( 24) ಹೃದಯಾಘಾತದಿಂದ ನಿಧನರಾಗಿರಯವ ಯುವಕ.ಸಿದ್ದಕಟ್ಟೆಯ ಯಂತ್ರೋಪಕರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಫೆ.22 ರಂದು ಭಾನುವಾರ ಅರಂತಾಡಿ ಮನೆಯೊಂದರಲ್ಲಿ ಕೃಷಿ ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದ ವೇಳೆ ಸುಮಾರು 11 ವೇಳೆ ಹಠಾತ್‌…

Read More

ವಿಟ್ಲ: ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ: ಹತ್ತನೇ‌ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೋರ್ವರ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿ ಯಲ್ಲಿ ನಡೆದಿದೆ.ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ10 ನೇ ತರಗತಿಯ ವಿದ್ಯಾರ್ಥಿನಿ, ಬೆಂಗಳೂರು ಮೂಲದ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ವೈಗಲಕ್ಷ್ಮಿ ರವರು ಫೆ.೨೨ರಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ವಿವಿದೆಡೆ ಹುಡುಕಾಟ ನಡೆಸಿದರು ಅವರು ಪತ್ತರಯಾಗಿರಲಿಲ್ಲ. ಇದೀಗ ಫೆ.೨೩ರಂದು ಅಲ್ಲೇ ಪಕ್ಕದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.ಈ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ…

Read More

ಬ್ರಹ್ಮರಕೋಟ್ಲು ಬಳಿ ಭೀಕರ ಅಪಘಾತ – ಪಿಕಪ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಬೈಕ್ ಸವಾರನೋರ್ವ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಮರ್ದೊಳಿ ನಿವಾಸಿ ಸಂತೋಷ್ ಎಂಬವರು ಬೈಕ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.ಅವರು ಬೆಳಿಗ್ಗೆ ಮನೆಯಿಂದ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮರಕೋಟ್ಲು ಎಂಬಲ್ಲಿ ಟಯರ್ ಬ್ಲಾಸ್ಟ್ ಆಗಿದ್ದ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ…

Read More

ಸಿಬ ಮೆಹಂದಿ ಆಯೋಜಿಸಿದ ಮೆಹಂದಿ ಹಾಕುವ ಸ್ಪರ್ಧೆ.ಮಕ್ಕಳ ಕೈಗಳಲ್ಲಿ ಅರಳಿದ ಕಲಾತ್ಮಕ ವಿನ್ಯಾಸಗಳು

ಉಪ್ಪಳ ಬಪ್ಪಾಯತೊಟ್ಟಿಯ ಶೇಖ್ ಅಖ್ತರ್ ಕಳೆದ ನಲವತ್ತು ವರ್ಷಗಳಿಂದ ಮೆಹಂದಿ ವ್ಯಾಪಾರ ನಡೆಸುತ್ತಿದ್ದಾರೆ. ರಮಝಾನ್ ಪ್ರಯುಕ್ತ ಪೆರುನಾಳ್ ಮಾರುಕಟ್ಟೆಗೆ ಮುನ್ನೋಟವಾಗಿ ಸ್ಥಳೀಯ ಮಕ್ಕಳಿಗಾಗಿ ಆಯೋಜಿಸಿದ ಮೈಲಾಂಜಿ ಹಾಕುವ ಸ್ಪರ್ಧೆ ವಿಶೇಷ ಗಮನ ಸೆಳೆಯಿತು.ಕಳೆದ 28 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಸ್ಪರ್ಧೆಯನ್ನು ವರ್ಷದಿಂದ ವರ್ಷಕ್ಕೆ ವಿಸ್ತರಿಸಲಾಗುತ್ತಿದೆ. ಆರಂಭದಲ್ಲಿ ಹತ್ತು ಮಕ್ಕಳಿಗಿಂತ ಕಡಿಮೆ ಸಂಖ್ಯೆಯಲ್ಲಿ ನಡೆದಿದ್ದ ಈ ಸ್ಪರ್ಧೆಯಲ್ಲಿ ಈ ಬಾರಿ ಐವತ್ತಕ್ಕೂ ಹೆಚ್ಚು ಮಕ್ಕಳು ಸಿಬ ಮೆಹಂದಿಯ ಮೈಲಾಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದರು. ಭಾನುವಾರ ಬೆಳಗ್ಗೆ 9 ಗಂಟೆಗೆ…

Read More

ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿ ಚುನಾವಣೆ-ಸಿಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡಕ್ಕೆ ಜಯ

ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡ ಎಲ್ಲ 10 ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು. ಸೋಮವಾರ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದಲ್ಲಿ ಮತ ಎಣಿಕೆ ನಡೆಯಿತು. ಸಿಎ ಶಾಂತಾರಾಮ ಶೆಟ್ಟಿ -1005, ಡಾ.ಸುಮನ.ಬಿ.-876, ಡಾ.ಸತೀಶ್ ರಾವ್-870,ಡಾ. ಬಿ.ಸಚ್ಚಿದಾನಂದ ರೈ-868, ರಾಘವೇಂದ್ರ ರಾವ್- 844,ಪುಷ್ಪರಾಜ್ ಜೈನ್-835, ಪಿ.ಬಿ.ಹರಿಪ್ರಸಾದ್…

Read More

ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಪೂರ್ಣಗೊಂಡಿದ್ದರೂ ಉದ್ಘಾಟನೆ ಇಲ್ಲ – ಕುಂಬಳೆ ಮೀನು ಮಾರುಕಟ್ಟೆ ಕಟ್ಟಡ ಬಳಕೆಗೆ ಸಿಗದೆ ವ್ಯಾಪಾರಿಗಳಿಗೆ ಸಂಕಷ್ಟ

ಕುಂಬಳೆ : ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣ ಪೂರ್ಣಗೊಂಡ ಕುಂಬಳೆ ಮೀನು ಮಾರುಕಟ್ಟೆ ಕಟ್ಟಡವನ್ನು ಇನ್ನೂ ಸಾರ್ವಜನಿಕರಿಗೆ ತೆರೆಯಲು ಕ್ರಮ ಕೈಗೊಳ್ಳಲಾಗಿಲ್ಲ.ಹೊಸ ಪಂಚಾಯತ್ ಆಡಳಿತ ಸಮಿತಿ ಅಧಿಕಾರ ಸ್ವೀಕರಿಸಿದ ಬಳಿಕ ಉದ್ಘಾಟನೆ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿದ್ದ ಮೀನು ಮಾರುಕಟ್ಟೆ, ವಿಧಾನಸಭಾ ಚುನಾವಣೆಯ ಆಚರಣಾ ಸಂಹಿತೆ ಜಾರಿಯಾದರೆ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ ಎಂಬ ಆತಂಕ ಮೀನು ಮಾರಾಟ ಕಾರ್ಮಿಕರಲ್ಲಿ ಮೂಡಿದೆ. ಮೀನು ಮಾರಾಟ ಮಾತ್ರವಲ್ಲದೆ ಮಾಂಸ, ತರಕಾರಿ ಹಾಗೂ ಹಣ್ಣುಗಳ ಮಾರಾಟಕ್ಕೂ ಕಟ್ಟಡದಲ್ಲಿ ವ್ಯವಸ್ಥೆ…

Read More

ತೊಕ್ಕೊಟ್ಟಿ ನಲ್ಲಿ ದುರ್ಘಟನೆ: ವಿದ್ಯುತ್ ಆಘಾತಕ್ಕೆ ಯುವಕ ಬಲಿ

ಉಳ್ಳಾಲ: ಫೆ-23: ನೂತನ ವಸ್ತ್ರಮಳಿಗೆಯೊಂದನ್ನ ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತ ಪಟ್ಟಿರುವ ದಾರುಣ ಘಟನೆ ತೊಕ್ಕೊಟ್ಟುವಿನ ಹೃದಯಭಾಗದಲ್ಲಿ ನಡೆದಿದೆ. ಮೂಲತ: ಪಜೀರು ಬೆಂಗೋಡಿ ಪದವು ನಿವಾಸಿ,ಸದ್ರಿ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್(20) ಮೃತ ಯುವಕ.ತೊಕ್ಕೊಟ್ಟಿನ ಸ್ಮಾರ್ಟ್ ಸಿಟಿ ವಾಣಿಜ್ಯ ಮಳಿಗೆಯಲ್ಲಿ ಸಲ್ಮಾನ್ ಫಾರಿಶ್ ಮಾಲಕತ್ವದಲ್ಲಿ ನೂತನ(ಝೀರೋ) ವಸ್ತ್ರ ಮಳಿಗೆಯೊಂದು ಇದೇ ಶುಕ್ರವಾರದಂದು ಶುಭಾರಂಭಗೊಳ್ಳಲಿದ್ದು, ಆ ನಿಟ್ಟಿನಲ್ಲಿ ನೂತನ ಮಳಿಗೆಯ ಒಳ ವಿನ್ಯಾಸ ಕಾಮಗಾರಿ ನಡೆಯುತ್ತಿತ್ತು. ಭಾನುವಾರ ರಾತ್ರಿಯೂ ಮಳಿಗೆಯ ಒಳಗಡೆ…

Read More

ಉಡುಪಿ: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕ

ಉಡುಪಿ: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕನನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ಕಲ್ಸಂಕ ಜಂಕ್ಷನ್ ನಲ್ಲಿ ನಡೆದಿದೆ. ಸದಾ ಸಂಚಾರದಟ್ಟನೆಯಿಂದ ಕೂಡಿರುವ ಜಂಕ್ಷನ್‌ನಲ್ಲಿ ಯುವಕ ಹುಚ್ಚಾಟ ಮೆರೆದಿದ್ದಾನೆ. ಭಯದ ವಾತಾವರಣ ಸೃಷ್ಟಿಸಿ ಟ್ರಾಫಿಕ್ ಸಿಬ್ಬಂದಿಗಳ ಕರ್ತವ್ಯಕ್ಕೂ‌ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಎಚ್ಚೆತ್ತ ಟ್ರಾಫಿಕ್ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡು ಸಹಕರಿಸಿದರು. ಈತ ಈ ಹಿಂದೆಯೂ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿಕೊಂಡು‌ ಬಂದು ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಳ್ಳುತ್ತೇನೆಂದು ಬೊಬ್ಬೆ…

Read More
error: Content is protected !!