ಮಂಗಳೂರು: ‘ವಿಸರ್ಜನೆ ಅಭಿಯಾನ’ದಲ್ಲಿ ಸಂಗ್ರಹವಾದ ₹1 ಲಕ್ಷ ಮೌಲ್ಯದ ಲೋಹ ವಸ್ತುಗಳು ಕದ್ರಿ ದೇವಸ್ಥಾನಕ್ಕೆ ಹಸ್ತಾಂತರ

ಧಾರ್ಮಿಕ ತ್ಯಾಜ್ಯವನ್ನು ಗೌರವಯುತವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ರಾಮಕೃಷ್ಣ ಮಿಷನ್, ರಾಮಕೃಷ್ಣ ಮಠ ಹಾಗೂ ಸ್ವಚ್ಛ ಮಂಗಳೂರು ಪ್ರತಿಷ್ಠಾನ ಸಂಯುಕ್ತವಾಗಿ ಆಯೋಜಿಸಿದ್ದ “ವಿಸರ್ಜನೆ ಅಭಿಯಾನ”ದಲ್ಲಿ ₹1 ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ, ತಾಮ್ರ ಹಾಗೂ ಹಿತ್ತಾಳೆ ಲೋಹಗಳು ಲಭಿಸಿದ್ದು, ಅವುಗಳನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ, ಧಾರ್ಮಿಕ ತ್ಯಾಜ್ಯ ವಿಲೇವಾರಿಯ ಕ್ಷೇತ್ರದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಇಂತಹ ವಿಶಿಷ್ಟ ಅಭಿಯಾನ…

Read More

ಮಂಗಳೂರು: ಮೇ 10ರಂದು ನಗರ ಮಟ್ಟದ ‘Apex Run 2026’ ಮ್ಯಾರಥಾನ್

ಮಂಗಳೂರು:ನಗರದ ಮಿಲಾಗ್ರಿಸ್ ಕಾಲೇಜು, ಐಸಿವೈಎಂ (ICYM) ಮಂಗಳೂರು ಧರ್ಮಪ್ರಾಂತ್ಯ ಹಾಗೂ ಮಂಗಳೂರು ರನ್ನರ್ಸ್ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ನಗರ ಮಟ್ಟದ ಬೃಹತ್ ಮ್ಯಾರಥಾನ್ “Apex Run 2026” ಇದೇ ಮೇ 10ರಂದು ನಡೆಯಲಿದೆ. ಮುಂಜಾನೆ 5 ಗಂಟೆಗೆ ಮಿಲಾಗ್ರಿಸ್ ಕಾಲೇಜು ಆವರಣದಲ್ಲಿ ಓಟಕ್ಕೆ ಚಾಲನೆ ನೀಡಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಲ್ವಿನ್ ಸೆರಾವೊ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದೈಹಿಕ ಕ್ಷಮತೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು…

Read More

ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ…

Read More

ರಸ್ತೆಯಲ್ಲೇ ಬಸ್ ನಿಲುಗಡೆ: ತಲಪಾಡಿಯಲ್ಲಿ ತಪ್ಪದ ಅಪಘಾತದ ಭೀತಿ – ಬಸ್ ಚಾಲಕರ ವಿರುದ್ಧ ಕ್ರಮಕ್ಕೆ ಸ್ಥಳೀಯರ ಆಗ್ರಹ.

​ಮಂಜೇಶ್ವರ: ಕೇರಳ-ಕರ್ನಾಟಕ ಗಡಿ ಭಾಗವಾದ ತಲಪಾಡಿಯ ಕೇರಳ ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳನ್ನು ರಸ್ತೆಯಲ್ಲೇ ಅಡ್ಡಾದಿಡ್ಡಿಯಾಗಿ ನಿಲುಗಡೆಗೊಳಿಸುತ್ತಿರುವ ಪರಿಣಾಮ, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಸ್ಸುಗಳನ್ನು ನಿಲುಗಡೆಗೆ ನೀಡಿದ ನಿಲ್ದಾಣದ ಒಳಗೆ ರಸ್ತೆಯಲ್ಲೇ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುತ್ತಿರುವುದು ದೊಡ್ಡ ಅಪಘಾತಗಳಿಗೆ ಆಹ್ವಾನ ನೀಡುವಂತಿದೆ. ಕುಂಜತ್ತೂರು ಹಾಗೂ ತೂಮಿನಾಡು ಭಾಗದಿಂದ ಮಂಗಳೂರು ಕಡೆಗೆ ತೆರಳುವ ಖಾಸಗಿ ಬಸ್ಸುಗಳು ರಸ್ತೆಯ ಮಧ್ಯದಲ್ಲೇ ಸಾಲುಗಟ್ಟಿ ನಿಲ್ಲುತ್ತಿವೆ. ಇದರಿಂದಾಗಿ ಬಲ ಭಾಗದಿಂದ ವೇಗವಾಗಿ ಬರುವ ಇತರ ವಾಹನಗಳ ಚಾಲಕರಿಗೆ…

Read More

ಬೋಳಿಯಾರ್: ಬಿಂದಾಝ್ ಫ್ರೆಂಡ್ಸ್ (ರಿ)ಬೋಳಿಯಾರ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ

​ಬೋಳಿಯಾರ್: ಬಿಂದಾಝ್ ಫ್ರೆಂಡ್ಸ್ (ರಿ) ಬೋಳಿಯಾರ್ ಇದರ ರಜತ ಮಹೋತ್ಸವದ ಸವಿನೆನಪಿಗಾಗಿ ಸಾರ್ವಜನಿಕರ ಸೇವೆಗಾಗಿ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು. ಅಮ್ಮೆಂಬಳ ಕೇಂದ್ರ ಜುಮಾ‌ ಮಸೀದಿ ಖತೀಬ್ ಅಸೈಯ್ಯದ್ ಅಮೀರ್ ತಂಙಳ್ ಹಾಗೂ ಮಜಿ ಮಹಮ್ಮಾಯ ದೇವಸ್ಥಾನದ ಅರ್ಚಕ ಮನೋಹರ್ ಭಟ್, ಮತ್ತು ಚೇಳೂರು ಸಂತ ತೋಮಸ್ ಇಗರ್ಜಿಯ ಧರ್ಮಗುರು ಫಾದರ್ ಮೈಕಲ್ ಡಿಸಿಲ್ವಾ ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಬಿಂದಾಝ್ ಫ್ರೆಂಡ್ಸ್ ಅಧ್ಯಕ್ಷ ಬದ್ರುದ್ದೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಳಿಯಾರು ಮೊಹಿಯದ್ದೀನ್ ಜುಮಾ‌…

Read More

ಬ್ರಹ್ಮರಕೂಟ್ಟು ಟೋಲ್‌ಗೇಟ್‌ ಬಂದ್‌: ಏಪ್ರಿಲ್‌ 28ಕ್ಕೆ ಬೃಹತ್‌ ಜನಾಂದೋಲನ ನಡಿಗೆ

ಮಂಗಳೂರು: ಇಲ್ಲಿನ ಬ್ರಹ್ಮರಕೂಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್ ಗೇಟ್ ಸಂಪೂರ್ಣ ಮುಚ್ಚಲು ಆಗ್ರಹಿಸಿ ಏಪ್ರಿಲ್‌ 28ರಂದು ಬೃಹತ್‌ ಜನಾಂದೋಲನ ನಡಿಗೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್‌ ನಾಯಕರು, ಟೋಲ್‌ ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಎಚ್ಚರಿಸಿದ್ದಾರೆ. ಗುರುಪುರ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ. ರೋಡ್‌ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು…

Read More

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಸಭೆ

ಬಂಟ್ವಾಳ: ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಮಹಿಳಾ ಸಭೆ ಬಿಸಿರೋಡಿನ ಪ್ಲೈ ಓವರ್ ನ ಕೆಳಭಾಗದಲ್ಲಿ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ,ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡಿದೆ, ಆದರೆ ಮಹಿಳಾ ಮಸೂದೆ ಜಾರಿಯಾಗದಂತೆ ವಿರೋಧ ವ್ಯಕ್ತಪಡಿಸುವ ಕಾಂಗ್ರೆಸ್ ಜಿಲ್ಲೆಯಲ್ಲಿ ಎಷ್ಟು ಸೀಟು ನೀಡಿದೆ ಹೇಳಲಿ. ಅಂತವರು ಬಿಜೆಪಿಯ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆ ಇದೆಯಾ ಎಂದು…

Read More

ಉಡುಪಿ ವಾಣಿಜ್ಯ ಕಟ್ಟಡ ಅಗ್ನಿ ದುರಂತ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Udupi: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದ ಸ್ಥಳಕ್ಕೆ ಶಾಸಕ Yashpal Suvarna ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಹಾನಿಯ ಪ್ರಮಾಣ ಹಾಗೂ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾತನಾಡಿದ ಅವರು, ನಷ್ಟದ ಅಂದಾಜು ಪರಿಶೀಲಿಸಿದ ನಂತರ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಉಡುಪಿಗೆ ಹೊಸ ತಂತ್ರಜ್ಞಾನದ ಅಗ್ನಿಶಾಮಕ ವಾಹನ ಒದಗಿಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದೂ ಹೇಳಿದರು. ಜಿಲ್ಲೆಯಲ್ಲಿ ಅಗ್ನಿಶಾಮಕ ಸೇವೆಯನ್ನು…

Read More

ದಕ್ಷಿಣ ಕನ್ನಡ ಹಾಲು ಒಕ್ಕೂಟಕ್ಕೆ ₹10.61 ಕೋಟಿ ನಿವ್ವಳ ಲಾಭ

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು 2025-26ನೇ ಸಾಲಿನಲ್ಲಿ ₹10.61 ಕೋಟಿ ನಿವ್ವಳ ಲಾಭ ಗಳಿಸಿರುವುದಾಗಿ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಾಲಿನಲ್ಲಿ ಒಕ್ಕೂಟವು ₹1,270 ಕೋಟಿ ಆರ್ಥಿಕ ವ್ಯವಹಾರ ನಡೆಸಿದ್ದು, ಕಳೆದ ವರ್ಷದ ₹1,174 ಕೋಟಿಯೊಂದಿಗೆ ಹೋಲಿಸಿದರೆ ಶೇ.8.18ರಷ್ಟು ಬೆಳವಣಿಗೆ ದಾಖಲಿಸಲಾಗಿದೆ ಎಂದರು. ಒಕ್ಕೂಟವು ಒಟ್ಟು 51,693 ಸಕ್ರಿಯ ಸದಸ್ಯರನ್ನು ಹೊಂದಿದ್ದು, ದಿನಕ್ಕೆ ಸರಾಸರಿ 4.07 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹಾಲು ಶೇಖರಣೆಯಲ್ಲಿ ಶೇ.19ರಷ್ಟು…

Read More

ಕಾರಿನಲ್ಲಿ ಸಾಗಿಸುತ್ತಿದ್ದ 43 ಗ್ರಾಂ ಎಂಡಿಎಂಎ ವಶ: ಮೂವರು ಬಂಧನ

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 43 ಗ್ರಾಂ ಎಂಡಿಎಂಎ ಮಾದಕ ವಸ್ತುವಿನೊಂದಿಗೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿ.ಎ. ಮೊಹಮ್ಮದ್ ಸಹಲ್, ಎರ್ನಾಕುಲಂ edws ಜಿಲ್ಲೆಯ ನಾರ್ತ್ ಪರವೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರುಣ್ ಕುಮಾರ್ ಹಾಗೂ ವಡಕರಾ ಪೊಲೀಸ್ ಠಾಣೆ ವ್ಯಾಪ್ತಿಯ ಎಂ.ಪಿ. ಅನುಷ್ ಎಂ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 7.30ರ ವೇಳೆಗೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಪಾವೂರಿನಲ್ಲಿ ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದ ಮಾದಕ ವಸ್ತುವನ್ನು…

Read More
error: Content is protected !!