ಮಂಗಳೂರು: ‘ವಿಸರ್ಜನೆ ಅಭಿಯಾನ’ದಲ್ಲಿ ಸಂಗ್ರಹವಾದ ₹1 ಲಕ್ಷ ಮೌಲ್ಯದ ಲೋಹ ವಸ್ತುಗಳು ಕದ್ರಿ ದೇವಸ್ಥಾನಕ್ಕೆ ಹಸ್ತಾಂತರ
ಧಾರ್ಮಿಕ ತ್ಯಾಜ್ಯವನ್ನು ಗೌರವಯುತವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ರಾಮಕೃಷ್ಣ ಮಿಷನ್, ರಾಮಕೃಷ್ಣ ಮಠ ಹಾಗೂ ಸ್ವಚ್ಛ ಮಂಗಳೂರು ಪ್ರತಿಷ್ಠಾನ ಸಂಯುಕ್ತವಾಗಿ ಆಯೋಜಿಸಿದ್ದ “ವಿಸರ್ಜನೆ ಅಭಿಯಾನ”ದಲ್ಲಿ ₹1 ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ, ತಾಮ್ರ ಹಾಗೂ ಹಿತ್ತಾಳೆ ಲೋಹಗಳು ಲಭಿಸಿದ್ದು, ಅವುಗಳನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ, ಧಾರ್ಮಿಕ ತ್ಯಾಜ್ಯ ವಿಲೇವಾರಿಯ ಕ್ಷೇತ್ರದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಇಂತಹ ವಿಶಿಷ್ಟ ಅಭಿಯಾನ…