ಡಾ. ನಾಗರತ್ನ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ 2026

ಕಾಸರಗೋಡು: ಸಮಾಜ ಸೇವಕಿ ಹಾಗೂ ಶ್ರೀ ಜಗಜ್ಯೋತಿ ಬಸವೇಶ್ವರ ಮಹಿಳಾ ಸೇವಾ ಟ್ರಸ್ಟ್‌ನ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ನಾಗರತ್ನ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ 2026ಕ್ಕೆ ಆಯ್ಕೆ ಮಾಡಲಾಗಿದೆ. ಕಾಸರಗೋಡಿನ ಕನ್ನಡ ಭವನದ ಗೌರವಾನ್ವಿತ ಪ್ರಶಸ್ತಿಯಾದ ಈ ಸನ್ಮಾನವನ್ನು Dr. Vaman Rao Bekal ಮತ್ತು ಸಂದ್ಯಾ ರಾಣಿ ಟೀಚರ್ ಅವರ ಸಾರತ್ಯದಲ್ಲಿ ನೀಡಲಾಗುತ್ತಿದೆ. ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವರ್ಷಾಚರಣೆಯ ಅಂಗವಾಗಿ 22.02.2026 ರಂದು ಕನ್ನಡ…

Read More

ಬಂಟ್ವಾಳ ಉಪವಿಭಾಗದ ನೂತನ ಎಎಸ್ಪಿ ಯವರನ್ನು ಭೇಟಿ ಮಾಡಿದ SDPI ನಾಯಕರು

ಬಂಟ್ವಾಳ : ಬಂಟ್ವಾಳ ಪೊಲೀಸ್ ಉಪ ವಿಭಾಗಕ್ಕೆ ನೂತನವಾಗಿ ನೇಮಕವಾದ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ರವರನ್ನು SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದಲ್ಲಿ ಸೌಹಾರ್ದ ಭೇಟಿಯಾಗಿ ಮಾತುಕತೆ ನಡೆಸಿದರು. ಜಿಲ್ಲೆಯಲ್ಲಿ ಶಾಂತಿ ಕಾಪಾಡುವಲ್ಲಿ ಪೊಲೀಸ್ ಇಲಾಖೆ ತೆಗೆದುಕೊಂಡ ದಿಟ್ಟ ಕ್ರಮಗಳ ಬಗ್ಗೆ ಅಭಿನಂದನೆ ಸಲ್ಲಿಸಿದರು. ಇತ್ತೀಚೆಗೆ ಒಂದು ಧರ್ಮದ ಹೆಸರಿನಲ್ಲಿ ಹಿಂದೂ ರಾಷ್ಟ್ರಸಮಿತಿ ಎಂಬ ದೇಶವಿರೋಧಿ ಕಾರ್ಯಕ್ರಮಗಳು ಬಂಟ್ವಾಳ ಸೇರಿದಂತೆ ಕೆಲವು ಕಡೆ ನಡೆಯುತ್ತಿರುವುದನ್ನು ಸಹಾಯಕ ಪೊಲೀಸ್ ವರಿಷ್ಟಾಧಿಕಾರಿಯವರ…

Read More

​ಅಪ್ಪನ ನೆನಪಿನ ‘ಎಂ-80’ ಮೋಪೆಡ್‌ಗೆ ಮಗನ ಮದುವೆಯಲ್ಲಿ ರಾಜಮರ್ಯಾದೆ

​ಮಂಜೇಶ್ವರ: ಮದುವೆ ಸಮಾರಂಭಗಳಲ್ಲಿ ದುಬಾರಿ ಕಾರುಗಳು, ಅದ್ದೂರಿ ಅಲಂಕಾರಗಳು ಇರುವುದು ಸಾಮಾನ್ಯ. ಆದರೆ ಪೆರ್ಲದ ಬಜಕೂಡ್ಲು ಪರ್ಪಕರಿಯದಲ್ಲಿ ನಡೆದ ನವೀನ್ ರೈ ಅವರ ವಿವಾಹದ ಸನ್ಮಾನ ಕೂಟದಲ್ಲಿ ಎಲ್ಲರ ಗಮನ ಸೆಳೆದದ್ದು ಒಂದು ಹಳೆಯ ಕಾಲದ ‘ಬಜಾಜ್ ಎಂ-80’ ಮೋಪೆಡ್! ​ಕೇರಳ ತೋಟಗಾರಿಕಾ ನಿಗಮದಲ್ಲಿ ಸೇವೆ ಸಲ್ಲಿಸುತ್ತಿದ್ದ ದಿವಂಗತ ಅಮ್ಮು ರೈ ಅವರ ನೆಚ್ಚಿನ ವಾಹನವಿದು. ಅಪ್ಪನ ಅಗಲಿಕೆಯ ನಂತರವೂ ಅವರ ಸ್ಮರಣಾರ್ಥವಾಗಿ ಮಕ್ಕಳು ಈ ವಾಹನವನ್ನು ಅತ್ಯಂತ ಜತನದಿಂದ ಕಾಯ್ದಿರಿಸಿದ್ದರು. ಅಪ್ಪನ ಮೇಲಿನ ಅಪಾರ ಪ್ರೀತಿ…

Read More

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು: ಕಬಕ ನಿವಾಸಿ ಹಾಗೂ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ಮಹಾನಗರಗಳಲ್ಲಿ ಖಾಸಗಿ ಉಪಗ್ರಹ ವಾಹಿನಿಗಳಲ್ಲಿ ಮುಖ್ಯ ಸಂಪಾದಕೀಯ ಹುದ್ದೆಗಳನ್ನು ಅಲಂಕರಿಸಿದ್ದ ಅವರು, ತಮ್ಮ ವೃತ್ತಿಜೀವನದಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದರು.ಅವರು ಅನಾರೋಗ್ಯದ ಹಿನ್ನೆಲೆ ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.ಅವರ ನಿಧನ…

Read More

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕೋವಿ ದಾಸ್ತಾನು ಕೊಠಡಿಗಳ ಪರಿಶೀಲನೆ; ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ನೇತೃತ್ವದಲ್ಲಿ ಕಾರ್ಯಾಚರಣೆ

ಪುತ್ತೂರು: ಕೃಷಿಕರಿಂದ ಕೋವಿಗಳನ್ನು ಠೇವಣಿ ಇಟ್ಟ ಕೋವಿಗಳ ದಾಸ್ತಾನು ಕೊಠಡಿಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ಪೊಲೀಸರ ಸಮಕ್ಷಮದಲ್ಲಿ ಫೆ.20ರಂದು ಪುತ್ತೂರಿನಲ್ಲಿ ಪರಿಶೀಲನೆ ಮಾಡಿದರು. ರೈತರಿಂದ ಕೋವಿಗಳನ್ನು ಠೇವಣಿ ಮೂಲಕ ದಾಸ್ತಾರಿಸಿಕೊಂಡ ಪುತ್ತೂರಿನ ದೇವಕಿಕೃಪ ಮತ್ತು ಎಸ್‍ಬಿಬಿ ಕಟ್ಟಡಗಳ ಕೊಠಡಿಗಳಲ್ಲಿ ಇರಿಸಲಾಗಿದ್ದು, ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್ ಅವರು ಪುತ್ತೂರು ಪೊಲೀಸರ ಸಮಕ್ಷಮದಲ್ಲಿ ದೇವಿಕೃಪಾದ ಕಟ್ಟಡದ ಮೇಲಂತಸ್ತಿನಲ್ಲಿರುವ ಎರಡು ಕೊಠಡಿಗಳನ್ನು ಪರಿಶೀಲಿಸಿದರು. ಬಳಿಕ ಕೆಳಗಿನ ಅಂಗಡಿಯೊಳಗಿರುವ ಇನ್ನೊಂದು ಕೊಠಡಿಗೂ ತೆರಳಿದರು ಸಂಜೆ ವೇಳೆ ಪಕ್ಕದ…

Read More

ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆ

ಪುತ್ತೂರು: ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಸ್ಥಳೀಯರು ಶವವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತದೇಹವು ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ…

Read More

ಪುತ್ತೂರಿನಲ್ಲಿ ದಲಿತ ನಿಂದನೆ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಎಸ್‌ಸಿ ಘಟಕ; ಅಶೋಕ್ ರೈ ವಿರುದ್ಧದ ಆರೋಪ ರಾಜಕೀಯ ಪ್ರೇರಿತವೆಂದ ಬಾಬು ಮರಿಕೆ

ಪುತ್ತೂರು: ವಿಧಾನ ಪರಿಷತ್ ವಿರೋಧÀ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಉಪ್ಪಿನಂಗಡಿಯಲ್ಲಿ ಶಾಸಕ ಅಶೋಕ್ ರೈ ವಿರುದ್ಧ ರಾಜಕೀಯ ಹೇಳಿಕೆ ನೀಡಿ ಲೇವಡಿ ಮಾಡಿದ್ದರು. ಇದಕ್ಕೆ ಶಾಸಕರು ಕೂಡ ರಾಜಕೀಯ ಹೇಳಿಕೆ ಮೂಲಕ ಪ್ರತ್ಯುತ್ತರ ನೀಡಿದ್ದಾರೆಯೇ ಹೊರತು ಎಲ್ಲೂ ಕೂಡ ಅವರು ದಲಿತ ಸಮುದಾಯವನ್ನು ನಿಂದಿಸುವ ಹೇಳಿಕೆ ನೀಡಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಎಸ್‌ಸಿ ಘಟಕ ಹೇಳಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಾಬು ಮರಿಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಶೋಕ್ ರೈ…

Read More

ಪುತ್ತೂರು ಹಾರಾಡಿ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಪುತ್ತೂರು ಹಾರಾಡಿ ರೈಲ್ವೇ ಹಳಿಯಲ್ಲಿ ಫೆಬ್ರವರಿ 20ರಂದು ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಹಳಿಯ ಬಳಿ ಶವ ಪತ್ತೆಯಾಗಿರುವುದನ್ನು ಗಮನಿಸಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸ್ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ.ಈ ಕುರಿತು ಪ್ರಕರಣ…

Read More

ಕಾರ್ಕಳ: ಮನೆಯಲ್ಲಿ ಕುಸಿದುಬಿದ್ದು ಯುವಕ ಮೃತ್ಯು

ಉಡುಪಿ: ಮನೆಯಲ್ಲಿ ಕುಳಿತಿದ್ದ ಯುವಕನೋರ್ವ ದಿಢೀರ್ ಆಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಫೆ. 19ರಂದು ಕಾರ್ಕಳ ತಾಲೂಕಿನ ಎರ್ಲಪಾಡಿಯಲ್ಲಿ ನಡೆದಿದೆ. ಎರ್ಲಪಾಡಿಯ ನಿವಾಸಿ ಸುಹೇಶ್ ಕುಮಾರ್ (22) ಮೃತಪಟ್ಟ ಯುವಕ. ಇವರು 15 ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದು, ಔಷಧಿ ತೆಗೆದುಕೊಳ್ಳುತ್ತಿದ್ದರು. ಗುರುವಾರ ಮನೆಯಲ್ಲಿ ಕುಳಿತಿದ್ದವರು ಒಮ್ಮೇಲೆ ಕೆಳಗೆ ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸುಹೇಶ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ‌. ಈ ಬಗ್ಗೆ ಕಾರ್ಕಳ ನಗರ…

Read More

ಉಡುಪಿ ಶ್ರೀಕೃಷ್ಣಮಠಕ್ಕೆ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.

Read More
error: Content is protected !!