ಮಹಿಳಾ ಮೀಸಲಾತಿ ಜಾರಿಯಲ್ಲಿ ಕೇಂದ್ರದ ವಿಳಂಬ: ಮಹಿಳೆಯರ ವಿರುದ್ಧದ ನಿಲುವು ಎಂದ ಮಹಿಳಾ ಕಾಂಗ್ರೇಸ್ ಅದ್ಯಕ್ಷೆ ಉಷಾ ಅಂಚನ್
ದಕ್ಷಿಣ ಕನ್ನಡ ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ ಶ್ರೀ.ಬಿ.ರಮನಾಥ ರೈ ಮಾರ್ಗದರ್ಶನದಲ್ಲಿ ಬಿ.ಸಿ.ರೋಡ್ ಜಂಕ್ಷನ್ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಕಾರ್ಯಕರ್ತರು, ಸರ್ಕಾರದ ನಿಲುವು ಮಹಿಳೆಯರ ಆಶೆಗಳಿಗೆ ದ್ರೋಹವೆಂದು ಆರೋಪಿಸಿದರು. ಜಿಲ್ಲಾ ಮಹಿಳಾ ಗ್ರಾಮೀಣ ಅಧ್ಯಕ್ಷೆ ಉಷಾ ಅಂಚನ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹೆಚ್ಚಿನ…