ಮಂಗಳೂರಿನಲ್ಲಿ ‘EDU Connect Expo 2026’: ವಿದ್ಯಾರ್ಥಿಗಳಿಗೆ ಕರಿಯರ್ ಮಾರ್ಗದರ್ಶನದ ಬೃಹತ್ ವೇದಿಕೆ

ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ನಂತರ ಮುಂದೇನು ಎಂಬ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸರಿಯಾದ ದಾರಿ ತೋರಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಬೃಹತ್ ಶೈಕ್ಷಣಿಕ ಮೇಳ ‘EDU Connect Expo 2026 ಆಯೋಜಿಸಲಾಗಿದೆ ಎಂದು ತುಂಬೆಜಾ ಪಬ್ಲಿಸಿಟಿ ಸಂಸ್ಥೆಯ ಸಿಇಓ ಶಕೀಲ್ ತುಂಬೆಜಾ ತಿಳಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 27 ಮತ್ತು 28 ರಂದು ಮಂಗಳೂರಿನ ಪಂಪ್‌ವೆಲ್ ಸರ್ಕಲ್ ಬಳಿ ಇರುವ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿಈ ಎಕ್ಸ್ಪೋ ನಡೆಯಲಿದೆ….

Read More

ಅಶ್ವಥ ಎಲೆಯಲ್ಲಿ ಮೂಡಿಬಂದ ರಾಜಕುಮಾರ್ ರೇಖಾಚಿತ್ರ

ಉಡುಪಿ: ಇಂದು ನಟಸಾರ್ವಭೌಮ ಡಾ. ರಾಜಕುಮಾರ್ ಜನ್ಮದಿನ . ಈ ದಿನವನ್ನು ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ .ನಟಸಾರ್ವಭೌಮನ ಜನ್ಮದಿನದ ಅಂಗವಾಗಿ ಅಶ್ವಥ್ದ ಎಲೆಯಲ್ಲಿ ಚಿತ್ರವನ್ನು ರಚಿಸಲಾಗಿದೆ‌ 97ನೇ ವರ್ಷದ ಜನುಮದಿನದ. ಅಂಗವಾಗಿ ಕಲಾವಿದ ಸಾಮಾಜಿಕ ಕಾರ್ಯಕರ್ತ ಸರಳೆಬೆಟ್ಟು ಗಣೇಶ್ ರಾಜ್ ಅವರು ಈ ಅಪರೂಪದ ಚಿತ್ರ ರಚಿಸಿದ್ದಾರೆ.ಕಲಾವಿದನ ಕೈಚಳಕದಲ್ಲಿ ಒಣಗಿದ ಅಶ್ವಥ ಎಲೆಯಲ್ಲಿ ವರನಟ ರಾಜಕುಮಾರ್ ಅವರ ರೇಖಾ ಚಿತ್ರ ಮೂಡಿಬಂದಿದೆ. ಉಡುಪಿಯಲ್ಲಿ ರಾಜ್ ಅಭಿಮಾನಿ ಸಂಘದ ಕಾರ್ಯದರ್ಶಿಯಾಗಿ ಗಣೇಶ್ ರಾಜ್ ಕೆಲಸ ಮಾಡಿದ್ದರು

Read More

ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಾಧ್ಯಮ ಸಮಾವೇಶ–2026: ಏಪ್ರಿಲ್ 28–29ರಂದು ಕಾರ್ಯಕ್ರಮ

ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (NICO) ವತಿಯಿಂದ ಏಪ್ರಿಲ್ 28 ಮತ್ತು 29ರಂದು ಎರಡು ದಿನಗಳ ಅಂತರರಾಷ್ಟ್ರೀಯ ಮಾಧ್ಯಮ ಸಮಾವೇಶ–2026 ಕಾರ್ಯಕ್ರಮವು ಪನೀರ್ ಕ್ಯಾಂಪಸ್‌ನಲ್ಲಿರುವ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಮೌಲ್ಯಾ ಬಾಲಾಡಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಏಪ್ರಿಲ್ 29ರಂದು ನಡೆಯಲಿರುವ ಮಾಧ್ಯಮ ಕಾರ್ಯಾಗಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗಾಗಿ ವಿಶೇಷವಾಗಿ ಆಯೋಜಿಸಲಾಗಿದೆ ಎಂದರು. ಡಿಜಿಟಲ್ ಯುಗದ ಸವಾಲುಗಳಾದ ‘ಡೀಪ್ ಫೇಕ್’…

Read More

5 ವರ್ಷಗಳಿಂದ ಖಾಸಗಿ ಜಾಗದಲ್ಲೇ ಸೇತುವೆ ಸ್ಲಾಬ್‌ಗಳು: ಪಂಚಾಯತ್ ನಿರ್ಲಕ್ಷ್ಯ ಬಯಲು

​ಮಂಜೇಶ್ವರ: ಅಭಿವೃದ್ಧಿ ಕಾಮಗಾರಿಗಳಿಗಾಗಿ ತಂದಿರಿಸಿದ ಸಾಮಗ್ರಿಗಳನ್ನು ಸಕಾಲದಲ್ಲಿ ಬಳಸದಿದ್ದರೆ ಅದು ಸಾರ್ವಜನಿಕರಿಗೆ ಹೇಗೆ ಹೊರೆಯಾಗಬಹುದು ಎಂಬುದಕ್ಕೆ ಮಂಜೇಶ್ವರ ಗ್ರಾಮ ಪಂಚಾಯತ್‌ನ 23ನೇ ವಾರ್ಡ್ ಒಂದು ಜ್ವಲಂತ ಉದಾಹರಣೆಯಾಗಿದೆ. ಇಲ್ಲಿನ ನಿವಾಸಿ ಸನ್ನಿ ಎಂಬುವವರ ಖಾಸಗಿ ಜಾಗದಲ್ಲಿ ಕಾಲು ಸೇತುವೆಗೆ ಬಳಸಬೇಕಾದ ಸ್ಲಾಬ್‌ಗಳನ್ನು ತಂದಿರಿಸಿ ಬರೋಬ್ಬರಿ 5 ವರ್ಷಗಳು ಕಳೆದಿವೆ. ಆದರೆ, ಈವರೆಗೆ ಆ ಸ್ಲಾಬ್‌ಗಳನ್ನು ಅಲ್ಲಿಂದ ತೆರವುಗೊಳಿಸದೆ ಪಂಚಾಯತ್ ಆಡಳಿತವು ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತಿದೆ.​​ಸುಮಾರು ಐದು ವರ್ಷಗಳ ಹಿಂದೆ ಸ್ಥಳೀಯವಾಗಿ ಕಾಲು ಸೇತುವೆಯೊಂದನ್ನು ನಿರ್ಮಿಸುವ ಉದ್ದೇಶದಿಂದ…

Read More

SSLC ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮತ್ತೆ ಮೆಲುಗೈ – ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಹಿಳಾ ಕಾಂಗ್ರೇಸ್ ಮುಖಂಡರಾದ ಅಸ್ಮ ಹಸೈನಾರ್ ತಾಳಿತ್ತನೂಜಿ

ಕರ್ನಾಟಕ ಸರ್ಕಾರದ ಮಾರ್ಗದರ್ಶನ ಹಾಗೂ ಶಿಕ್ಷಣ ಕ್ಷೇತ್ರದ ಸಮಗ್ರ ಪ್ರಯತ್ನಗಳ ಫಲವಾಗಿ ಈ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯದಾದ್ಯಂತ ವಿದ್ಯಾರ್ಥಿಗಳು ಸಾಧನೆ ಮೆರೆದಿರುವ ಸಂದರ್ಭದಲ್ಲಿ, ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಉತ್ತಮ ಫಲಿತಾಂಶ ದಾಖಲಿಸಿ ಮೆಲುಗೈ ಸಾಧಿಸಿರುವುದು ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿ ಪರಿಣಮಿಸಿದೆ. ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು ಸಲ್ಲಿಸುತ್ತೇವೆ. ಈ ಸಾಧನೆ ನಿಮ್ಮ ಪರಿಶ್ರಮ, ಶ್ರಮಶೀಲತೆ ಹಾಗೂ ಗುರುಗಳ ಸಮರ್ಪಿತ ಮಾರ್ಗದರ್ಶನದ ಫಲವಾಗಿದೆ. ಪೋಷಕರ ಪ್ರೋತ್ಸಾಹ ಮತ್ತು ಶಿಕ್ಷಕರ…

Read More

ಬಿಲ್ಲವ ಬ್ರಿಗೇಡ್–ನಂದಾದೀಪ ಫೌಂಡೇಶನ್ ವತಿಯಿಂದ 14ನೇ ಮತ್ತು 15ನೇ ಮನೆಗಳ ಹಸ್ತಾಂತರ: ಏ.25ರಂದು ‘ಸೇವಾ ಸಂಭ್ರಮ’

ಬಡವರ ಕಣ್ಣೀರು ಒರೆಸುವ ಸಂಕಲ್ಪದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬಿಲ್ಲವ ಬ್ರಿಗೇಡ್ ಹಾಗೂ ನಂದಾದೀಪ ಫೌಂಡೇಶನ್ ವತಿಯಿಂದ ನಿರ್ಮಿಸಲಾದ 14ನೇ ಮತ್ತು 15ನೇ ಮನೆಗಳ ಹಸ್ತಾಂತರ ಹಾಗೂ ‘ಸೇವಾ ಸಂಭ್ರಮ’ ಕಾರ್ಯಕ್ರಮ ಏಪ್ರಿಲ್ 25ರಂದು ಸಂಜೆ 6 ಗಂಟೆಗೆ ಬಂಟ್ವಾಳ ತಾಲೂಕಿನ ಪಂಬದಬೆಟ್ಟು ಬ್ರಹ್ಮರಕೂಟ್ಟು ಟೋಲ್‌ಗೇಟ್ ಸಮೀಪದ ಕ್ರೀಡಾಂಗಣದಲ್ಲಿ ನಡೆಯಲಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಂದಾದೀಪ ಫೌಂಡೇಶನ್ ಮಂಗಳೂರು ಸ್ಥಾಪಕ ಸದಾನಂದ ಪೂಜಾರಿ ಈ ಕುರಿತು ಮಾಹಿತಿ ನೀಡಿದರು. ಈಗಾಗಲೇ 13 ಮನೆಗಳನ್ನು ನಿರ್ಮಿಸಿ…

Read More

ಪುತ್ತೂರು ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಯ ಮೇಲೆ ದಾಳಿ: ಐವರು ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ. ಏಪ್ರಿಲ್ 22ರಂದು ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯನ್ನು…

Read More

ಡಾ. ಸಚಿನ್ ಬೇಕಲ್‌ಗೆ “ಭರವಸೆಯ ಭಾರತ ರತ್ನ ಪ್ರಶಸ್ತಿ 2026” ಗೌರವ

ಕಾಸರಗೋಡು : ಆಲ್ ಇಂಡಿಯಾ ಲೆವೆಲ್ನಲ್ಲಿ ರಾಂಕ್ ಗಳಿಸಿ ಮುಂಬೈಯ ಕೆ. ಇ. ಎಮ್. ಆಸ್ಪತ್ರೆಯಲ್ಲಿ ನ್ಯೂರೋಸರ್ಜರಿ ಎಮ್. ಸಿ. ಎಚ್. ಉಪರಿಪಠನಕ್ಕೆ ಆಯ್ಕೆಯಾದ ಕಾಸರಗೋಡು ಅನಂಗೂರು ನಿವಾಸಿಯಾದ, ಡಾ. ಸಚಿನ್ ಬೇಕಲ್ ಇವರೀಗೆ ಕಾಸರಗೋಡು ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ ವಾಮನ್ ರಾವ್ ಬೇಕಲ್ -ಸಂಧ್ಯಾ ರಾಣಿ ದಂಪತಿಗಳು “ಭರವಸೆಯ ಭಾರತ ರತ್ನ ” ಅಭಿನಂದನಾ ಪ್ರಶಸ್ತಿ ನೀಡಿ ಗೌರವಿಸಿದರು. ಧಾರ್ಮಿಕ ರತ್ನ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದ ಕನ್ನಡ ಭವನ…

Read More

ಪ್ರಧಾನಿ ಮೋದಿಯವರನ್ನು ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿರುವುದು ಇಡೀ ದೇಶದ ಜನರಿಗೆ ಮಾಡಿದ ಅಪಚಾರ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾದ ನಾಯಕ, ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅವಹೇಳನಕಾರಿಯಾಗಿ ನಿಂದಿಸಿರುವುದು ದೇಶದ ಸಮಸ್ತ ಪ್ರಜೆಗಳಿಗೆ ಮಾಡಿದ ಅವಮಾನ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. “ಮೋದಿ ಭಯೋತ್ಪಾದಕ ” ಎಂಬ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ದೇಶದ ನಾಯಕ ಅದರಲ್ಲಿಯೂ ದೇಶದ ಪ್ರಧಾನಮಂತ್ರಿಯನ್ನು ಇಂತಹ ಕೀಳುಮಟ್ಟದ ಶಬ್ದಗಳಿಂದ…

Read More

ಎನ್.ಎಂ.ಪಿ.ಎ. ಶಾಲೆ ವಿಲೀನ ಯತ್ನಕ್ಕೆ ಬಿ.ಎ. ಮೊಯ್ದೀನ್ ಬಾವಾ ಆಕ್ರೋಶ: ಹೋರಾಟದ ಎಚ್ಚರಿಕೆ

ನವಮಂಗಳೂರು ಬಂದರು ಮಂಡಳಿ (NMPA) ಆಡಳಿತಕ್ಕೆ ಒಳಪಟ್ಟಿರುವ ಹಾಗೂ ಕಳೆದ ನಾಲ್ಕು ದಶಕಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ ಮಾಧ್ಯಮ ಶಾಲೆಯನ್ನು ವಿಲೀನಗೊಳಿಸುವ ಅಥವಾ ಮುಚ್ಚುವ ಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದೀನ್ ಬಾವಾ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಗತ್ಯವಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ನಡೆದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಶಾಲೆ ಕೇವಲ ಕಟ್ಟಡವಲ್ಲ; ನವಮಂಗಳೂರು ಬಂದರಿಗಾಗಿ ತಮ್ಮ ಭೂಮಿಯನ್ನು ತ್ಯಾಗ…

Read More
error: Content is protected !!