ನಾಲ್ಕು ವರ್ಷಗಳಿಂದ ನೀರಿಲ್ಲ, ಆದರೂ ಬಿಲ್–ಜಪ್ತಿ ನೋಟಿಸ್: ಮಾಡ ಕೊಳಕೆಯ ಜನರ ಆಕ್ರೋಶ

​ಮಂಜೇಶ್ವರ: ಅಭಿವೃದ್ಧಿಯ ಹೆಸರಿನಲ್ಲಿ ಜನರ ಮೂಲಭೂತ ಹಕ್ಕನ್ನೇ ಕಸಿದುಕೊಳ್ಳುವುದು ಎಷ್ಟು ಸರಿ? ಮಂಜೇಶ್ವರ ಗ್ರಾಮ ಪಂಚಾಯಿತಿಯ 23ನೇ ವಾರ್ಡ್ ವ್ಯಾಪ್ತಿಯ ಮಾಡ ಕೊಳಕೆ ನಿವಾಸಿಗಳ ಇಂದಿನ ಸ್ಥಿತಿ ನೋಡಿದರೆ ವ್ಯವಸ್ಥೆಯ ಮೇಲೆ ಅಸಹ್ಯ ಹುಟ್ಟದಿರದು. ಕಳೆದ ನಾಲ್ಕು ವರ್ಷಗಳಿಂದ ಕುಡಿಯುವ ನೀರಿಲ್ಲದೆ ಇಲ್ಲಿನ ಕುಟುಂಬಗಳು ನರಕಯಾತನೆ ಅನುಭವಿಸುತ್ತಿದ್ದರೂ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ‘ಕುರುಡಾಗಿ’ ಕುಳಿತಿದ್ದಾರೆ. ​ತಲಪಾಡಿಯಿಂದ ಚೆಂಗಳವರೆಗಿನ ರಸ್ತೆ ಕಾಮಗಾರಿ ಆರಂಭವಾದಾಗ ಅಭಿವೃದ್ಧಿಯ ಕನಸು ಕಂಡಿದ್ದ ಜನರಿಗೆ ಇಂದು ಆ ರಸ್ತೆಯೇ ಶಾಪವಾಗಿ ಪರಿಣಮಿಸಿದೆ. ಕಾಮಗಾರಿ…

Read More

ಕಾಸರಗೋಡು ಕನ್ನಡ ಭವನ ಪ್ರಕಾಶನದ 3ನೇ ವಾರ್ಷಿಕೋತ್ಸವ ಇಂದು – ಪುಸ್ತಕ ಬಿಡುಗಡೆ, ಪ್ರತಿಭಾ ಪುರಸ್ಕಾರ

Kasaragod: ಕನ್ನಡ ಭವನದ ಅಂಗ ಸಂಸ್ಥೆಯಾದ ಕನ್ನಡ ಭವನ ಪ್ರಕಾಶನದ ಮೂರನೇ ವಾರ್ಷಿಕೋತ್ಸವವು ಇಂದು (ಏಪ್ರಿಲ್ 22) ಸಂಜೆ 5 ಗಂಟೆಗೆ ಕನ್ನಡ ಭವನ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಪತ್ರಕರ್ತ ಹಾಗೂ ಕನ್ನಡ ಭವನ ಗೌರವ ಅಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಭವನ ನಿರ್ದೇಶಕ ಹಾಗೂ ಧಾರ್ಮಿಕ ಮುಂದಾಳು ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅಖಿಲ ಭಾರತ ಮಟ್ಟದಲ್ಲಿ ಸಾಧನೆಗೈದ ಇಬ್ಬರು ಪ್ರತಿಭಾವಂತರಿಗೆ ಗೌರವ ಸಮರ್ಪಣೆ ನಡೆಯಲಿದೆ. ಎಂ.ಬಿ.ಬಿ.ಎಸ್.,…

Read More

ಮಂಗಳೂರು: ಮಹಿಳಾ ಮೀಸಲಾತಿಗೆ ಆಗ್ರಹಿಸಿ ನಾರಿ ಹಕ್ಕು ಹೋರಾಟ ಸಮಿತಿಯಿಂದ ಪ್ರತಿಭಟನೆ

ನಾರಿ ಶಕ್ತಿ ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಸೂಚಿಸಿ ಹಾಗೂ ಮಹಿಳೆಯರಿಗೆ ಮತ್ತೆ ಮೀಸಲಾತಿ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಮಂಗಳೂರಿನ ಪುರಭವನದ ಎದುರುಗಡೆಯ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಾರಿ ಹಕ್ಕು ಹೋರಾಟ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ ಹಿನ್ನೆಲೆಯಲ್ಲಿ, ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಸಮಾನ ಅವಕಾಶ ದೊರಕಬೇಕು ಹಾಗೂ ಮೀಸಲಾತಿ ಮರುಜಾರಿಗೆ ಬರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಹನಾ ಕುಂದ್ರರ್ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ರೇಖಾ ಸುದೇಶ್…

Read More

ಮಂಗಳೂರು ಪೊಲೀಸ್ ವಿವಾದ: ಡಿಜಿಪಿ ಸಲೀಂ ಮೌನ – ಶಾಂತಿ ಕಾಪಾಡುವತ್ತ ಒತ್ತಡ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಎಸ್ಪಿ ಎಸ್.ಎಸ್. ಕಾಶಿ ನೀಡಿರುವ ದೂರಿನ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ರಾಜ್ಯದ ಡಿಜಿಪಿ ಸಲೀಂ ಅವರು ನೇರ ಉತ್ತರ ನೀಡದೇ ಮೌನ ವಹಿಸಿದರು. ಆದರೆ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಮುಂದುವರಿಯಬೇಕೆಂಬುದರ ಮೇಲೆ ಅವರು ಒತ್ತಡ ಹಾಕಿದರು. ನಗರಕ್ಕೆ ಭೇಟಿ ನೀಡಿದ್ದ ಡಿಜಿಪಿ ಸಲೀಂ, ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ, ಕಮಿಷನರ್ ವಿರುದ್ಧದ…

Read More

ಕಟೀಲು ಜಾತ್ರೋತ್ಸವದ ತೂಟೆದಾರ ಆಚರಣೆ ಭಕ್ತರಲ್ಲಿ ರೋಮಾಂಚನ

ಮಂಗಳೂರು: ಮಂಗಳೂರಿನ ಸಮೀಪದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವದ ಕೊನೆಯ ದಿನ ‘ತೂಟೆದಾರ’ ಆಚರಣೆ ಭಕ್ತರಲ್ಲಿ ಅಪಾರ ರೋಮಾಂಚನ ಮೂಡಿಸಿತು. ಎರಡು ತಂಡಗಳು ಒಂದರ ಮೇಲೊಂದು ಉರಿಯುತ್ತಿರುವ ಬೆಂಕಿ ಕೊಳ್ಳಿಗಳನ್ನು ಎಸೆಯುತ್ತಾ ರಣರೋಚಕ ದೃಶ್ಯವನ್ನು ಸೃಷ್ಟಿಸಿತು. ರಾಶಿರಾಶಿಯಾಗಿ ಹಾರಾಡುವ ಬೆಂಕಿ ಪಂಜುಗಳು ಹಾಗೂ ದಟ್ಟ ಹೊಗೆ ನಡುವೆ ರಥಬೀದಿ ರಣರಂಗದಂತಾಗಿ ಕಾಣಿಸಿಕೊಂಡಿತು. ಈ ಅಪರೂಪದ ದೃಶ್ಯವನ್ನು ನೋಡಲು ನೆರೆದಿದ್ದ ಭಕ್ತರು ಕಣ್ಣೆವೆಯಿಕ್ಕದೆ ಗಮನಿಸಿ ಬೆಕ್ಕಸಬೆರಗಾದರು. ಜಾತ್ರೆಯ ಪ್ರಮುಖ ಆಕರ್ಷಣೆಯಾದ ತೂಟೆದಾರವು ಪ್ರತಿವರ್ಷ ಏಪ್ರಿಲ್…

Read More

ಮಹಿಳಾ ಮೀಸಲಾತಿ ಮಸೂದೆ ಕುರಿತು ಕಾಂಗ್ರೆಸ್ ಟೀಕೆ

ಮಂಗಳೂರು: ಮಹಿಳೆಯರಿಗೆ 50% ಮೀಸಲಾತಿ ನೀಡುವ ಬದಲು, ಕ್ಷೇತ್ರ ಮರುವಿಂಗಡಣೆಯನ್ನು ಜೋಡಿಸುವ ಮೂಲಕ ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಹಾಗೂ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಪ್ಪಿ ಆರೋಪಿಸಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ಚರ್ಚೆಯಿಲ್ಲದೆ ಲೋಕಸಭೆಯಲ್ಲಿ ಮಸೂದೆ ಮಂಡಿಸಿ, ಅದರೊಂದಿಗೆ ಕ್ಷೇತ್ರ ಮರುವಿಂಗಡಣೆಯನ್ನು ಲಿಂಕ್ ಮಾಡಿರುವುದು ರಾಜಕೀಯ ಸಂಚು ಎಂದರು. ಇದರಿಂದ ಮಸೂದೆ ಅಸ್ತಿತ್ವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದು ಕೇಂದ್ರ…

Read More

ಆರ್ಯಭಟ ಪ್ರಶಸ್ತಿಗೆ ಡಾ.ಸಂಜೀವ ದಂಡೆಕೇರಿ ಆಯ್ಕೆ

ಮಂಗಳೂರು: ಬೆಂಗಳೂರಿನ ಆರ್ಯಭಟ ಕಲ್ಬರಲ್ ಆರ್ಗನೈಸೇಷನ್‌ ಸಂಸ್ಥೆಯು ರಾಷ್ಟ್ರ- ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದ ಅಸಾಧಾರಣ ಸಾಧಕರಿಗೆ ನೀಡುವ 51ನೇ ವರ್ಷದ ಅಂತರ್‌ರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಕರಾವಳಿ ಕರ್ನಾಟಕದ ಶ್ರೇಷ್ಠ ನಾಟಕಕಾರ, ನಿರ್ದೇಶಕ ತುಳು ರಂಗಭೂಮಿ ಮತ್ತು ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಡಾ.ಸಂಜೀವ ದಂಡೆಕೇರಿ ಆಯ್ಕೆಯಾಗಿದ್ದಾರೆ. ನಾಟಕ ರಂಗದೊಂದಿಗೆ ಡಾ. ಸಂಜೀವ ದಂಡೆಕೇರಿ ಮಾಡಿರುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ. ಆಯುರ್ವೇದ ವೈದ್ಯ ಡಾ.ಸಂಜೀವ ದಂಡೆಕೇರಿ,…

Read More

ಮಹಿಳಾ ಮೀಸಲಾತಿ ಮಸೂದೆ ಸೋಲು: ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಕಿಡಿ

ಮಂಗಳೂರು: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಉದ್ದೇಶದ ‘ನಾರಿ ಶಕ್ತಿ ವಂದನಾ’ ಕಾಯ್ದೆ ಸೋತಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್ ಆರೋಪಿಸಿದ್ದಾರೆ. ಭಾರತೀಯ ಜನತಾ ಪಕ್ಷ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳೆಯರಿಗೆ ರಾಜಕೀಯ ಅವಕಾಶ ನೀಡಲು ಮಾಡಿದ ಪ್ರಯತ್ನಕ್ಕೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಅಡ್ಡಿಯಾಗಿವೆ ಎಂದು ಕಿಡಿಕಾರಿದರು. ‘ನಾರಿ ಶಕ್ತಿ ವಂದನಾ’…

Read More

ಭಾರತೀಯ ಮಹಿಳೆಯರಿಗೆ ಅವಮಾನ ಮಾಡಿದ ಭಾರತದ ಕೇಂದ್ರ ವಿಪಕ್ಷಗಳು : ಶ್ರೀಮತಿ ರಮಿತಾ ಸೂರ್ಯವಂಶಿ

ಭಾರತದ ಇತಿಹಾಸವನ್ನು ನೋಡುತ ಬಂದಂದಾಗಲು ಮಹಿಳೆಯರ ಸ್ವತಂತ್ರ ಕಿತ್ತು ಕೊಂಡಂದ್ದು ಯಾರು ಎಂದು ಪುನರ್ವರ್ಥಿಸುವ ಸಂದರ್ಭ ಕಣ್ಣೆದುರು ಇದೆ. ಪ್ರತಿ ಯೊಂದು ಮಹಿಳೆಯರಿಗೆ ಗೌರವಿಸುವ ಈ ನೆಲದಲ್ಲಿ ಇನ್ನೇನು 70 ಕೋಟಿ ಮಹಿಳೆಯರ ಶೇ. 33ರಷ್ಟು ಮೀಸಲಾತಿ ಮೂಲಕ ಶಾಸನಸಭೆಗಳನ್ನು ಪ್ರವೇಶಿಸಬೇಕು ಎಂದು ಮಹಿಳೆಯರು ದಶಕಗಳ ಕಾಲ ಕಂಡಿದ್ದ ಕನಸಿಗೆ ಭಾರತೀಯ ಕಾಂಗ್ರೆಸ್ ತಣ್ಣೀರೆರಚಿದೆ. ನಾರಿ ಶಕ್ತಿಯ ಸಬಲೀಕರಣಕ್ಕೆ ಬಿಜೆಪಿಯ ದೃಢ ಸಂಕಲ್ಪ ಒಂದೆಡೆಯಾದರೆ, ಮಹಿಳಾ ಮೀಸಲಾತಿ ಮಸೂದೆಗೆ ತಡೆಯೊಡ್ಡುವ ಭಾರತೀಯ ಕಾಂಗ್ರೆಸ್ ಹಾಗೂ ಇಂಡಿ ಮೈತ್ರಿಕೂಟದ…

Read More

ಮಂಗಳೂರು ಅಭಿವೃದ್ಧಿಗೆ ₹200 ಕೋಟಿ ಅನುದಾನ: ನಗರ ವಿಕಾಸ ಯೋಜನೆಗೆ ವೇಗ

ಮಂಗಳೂರು, ಏಪ್ರಿಲ್ 18: ರಾಜ್ಯದಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ನಗರಾಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ₹2,600 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ನಗರದ ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನ ನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ 25 ಕಾಮಗಾರಿಗಳಿಗೆ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ (ಹಂತ–2) ಅಡಿಯಲ್ಲಿ ಜಿಎಸ್‌ಟಿ ಸೇರಿ ₹200 ಕೋಟಿ ಅನುದಾನವನ್ನು ಮಂಗಳೂರು ಮಹಾನಗರ ಪಾಲಿಕೆಗೆ ನೀಡಲಾಗಿದೆ…

Read More
error: Content is protected !!