5K–10K ಎನ್‌ಎಸ್‌ಎಸ್ ರನ್‌ಗೆ ಭರ್ಜರಿ ಪ್ರತಿಕ್ರಿಯೆ: ನಿಟ್ಟೆ ಆವರಣದಲ್ಲಿ ಮ್ಯಾರಥಾನ್

ದೇರಳಕಟ್ಟೆ: ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಎನ್‌ಎಸ್‌ಎಸ್ ಘಟಕ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯದ ಸಹಯೋಗದಲ್ಲಿ “5K ಮತ್ತು 10K ಎನ್‌ಎಸ್‌ಎಸ್ ಮ್ಯಾರಥಾನ್” ಕಾರ್ಯಕ್ರಮವು ಕೆ.ಎಸ್. ಹೆಗ್ಡೆ ಆಡಿಟೋರಿಯಂ ಮುಂಭಾಗದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಂಗಳೂರುದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಿ. ದಿನೇಶ ಮ್ಯಾರಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದಿನ ಒತ್ತಡದ…

Read More

ಕುಳೂರಿನಲ್ಲಿ ಏ.19ರಂದು ಉಚಿತ ವೈದ್ಯಕೀಯ–ರಕ್ತದಾನ ಶಿಬಿರ: ಸಾರ್ವಜನಿಕರಿಗೆ ಆಹ್ವಾನ

ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಏಪ್ರಿಲ್ 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ ನಡೆಯಲಿದೆ. ಕಾರ್ಯಕ್ರಮವನ್ನು ಹೇರಂಭ ಇಂಡಸ್ಟ್ರೀಸ್ ಸಂಸ್ಥಾಪಕಾಧ್ಯಕ್ಷರು ಹಾಗೂ ಸೇವಾ ಬಳಗದ ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ . ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಪಾಧ್ಯಕ್ಷ ನಾರಾಯಣ ನೈಕ್ ನಡುಹಿತ್ಲು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Read More

ಬಿಸಿರೋಡು–ಮೆಲ್ಕಾರ್ ಹೆದ್ದಾರಿಗೆ ಬೆಳಕಿನ ಸ್ಪರ್ಶ: ಮೇ ಮೊದಲ ವಾರದಿಂದ ಬೀದಿ ದೀಪಗಳು ಶಾಶ್ವತವಾಗಿ ಬೆಳಕು

ಬಂಟ್ವಾಳ: ಬಿಸಿರೋಡಿನಿಂದ ಮೆಲ್ಕಾರ್ ವರೆಗೆ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಅಳವಡಿಸಲಾದ ನೂತನ ವಿದ್ಯುತ್ ದೀಪಗಳನ್ನು ಏಪ್ರಿಲ್ 16ರ ರಾತ್ರಿ ಪ್ರಾಯೋಗಿಕವಾಗಿ ಉರಿಸಿ ಪರೀಕ್ಷಿಸಲಾಗಿದ್ದು, ಮೇ ಮೊದಲ ವಾರದಿಂದ ಶಾಶ್ವತವಾಗಿ ಬೆಳಕು ನೀಡಲಿವೆ ಎಂದು ರಘನಾಥ ರೆಡ್ಡಿ ತಿಳಿಸಿದ್ದಾರೆ. ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ನೆಲ್ಯಾಡಿ ಹಾಗೂ ಪೆರ್ನೆ ಭಾಗಗಳಲ್ಲಿ ಮಾತ್ರ ಸ್ವಲ್ಪ ಕೆಲಸ ಬಾಕಿಯಿದೆ. ಬಿಸಿರೋಡು–ಪೆರಿಯಶಾಂತಿ ವರೆಗೆ ವಿದ್ಯುತ್ ಕಂಬಗಳ ಅಳವಡಿಕೆ ಮತ್ತು ಲೈಟ್ ಫಿಟಿಂಗ್ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ಅವರು…

Read More

5 ಬಾರಿ ವಾರಂಟ್ ಜಾರಿಯಾದ ಆರೋಪಿ ಬಂಧನ: ವಿದೇಶದಿಂದ ಬಂದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಮಂಗಳೂರು: ಐದು ಬಾರಿ ವಾರಂಟ್ ಜಾರಿಯಾಗಿದ್ದ ಪ್ರಕರಣದ ಆರೋಪಿ ವಿದೇಶದಿಂದ ಹಿಂತಿರುಗುವ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಬಂಧಿತನಾಗಿದ್ದು, ವಿಟ್ಲ ಪೊಲೀಸ್ ಠಾಣೆ ಯಲ್ಲಿ ದಾಖಲಾಗಿದ್ದ 2015ರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಅವನ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ (143, 147, 148, 504, 506, 323, 324, 326 r/w 149 IPC) ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ವಿದೇಶದಿಂದ ಮರಳಿದ ವೇಳೆ…

Read More

ಮಾಜಿ ಸೈನಿಕನಿಗೆ ತಲವಾರು ಹಿಡಿದು ಕೊಲೆ ಬೆದರಿಕೆ: ಬಂಟ್ವಾಳದಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಮಾಜಿ ಸೈನಿಕನೊಬ್ಬರ ಮನೆಯ ಅಂಗಳಕ್ಕೆ ಅಕ್ರಮವಾಗಿ ನುಗ್ಗಿದ ನಾಲ್ವರು ವ್ಯಕ್ತಿಗಳು ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ಸಜಂಕಬೆಟ್ಟು ನಿವಾಸಿ ಮಾಜಿ ಸೈನಿಕ ಎಸ್. ಪುಷ್ಪರಾಜ್ ಅವರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ನಾವೂರ ನಿವಾಸಿಗಳಾದ ವಿಜಯ್, ಸಿರಿಲ್ ಹಾಗೂ ಇಬ್ಬರು ಅಪರಿಚಿತರು ಇನ್ನೋವಾ ಕಾರಿನಲ್ಲಿ ಬಂದು ಮನೆಯ ಅಂಗಳಕ್ಕೆ ನುಗ್ಗಿ, ಅವಾಚ್ಯ ಶಬ್ದಗಳಿಂದ ಬೈದು ತಲವಾರು…

Read More

ಮಂಗಳೂರು–ಮಂತ್ರಾಲಯ ಸ್ಲೀಪರ್ ಬಸ್‌ಗೆ ಚಾಲನೆ: ಶಾಸಕ ವೇದವ್ಯಾಸ ಕಾಮತ್ ಸ್ವತಃ ಬಸ್ ಚಾಲನೆ

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಸುಮಾರು ಎರಡು ಕಿಲೋಮೀಟರ್ ದೂರ ಬಸ್ ಚಾಲನೆ ಮಾಡಿ ವಿಶೇಷ ಗಮನ ಸೆಳೆದರು. ಮಂಗಳೂರು ಕೆಎಸ್‌ಆರ್‌ಟಿಸಿ ವಿಭಾಗದಿಂದ ಪ್ರಾರಂಭಿಸಲಾದ ಮಂಗಳೂರು–ಮಂತ್ರಾಲಯ ಪಲ್ಲಕ್ಕಿ ಸ್ಲೀಪರ್ ಬಸ್ ಸೇವೆಗೆ ಅವರು ಸ್ವತಃ ಚಾಲನೆ ನೀಡಿದರು. ಕೆಎಸ್‌ಆರ್‌ಟಿಸಿ ವತಿಯಿಂದ ನಾಲ್ಕು ನಾನ್‌ ಎಸಿ ಸ್ಲೀಪರ್ ಬಸ್‌ಗಳು ಮಂತ್ರಾಲಯದತ್ತ ಸಂಚಾರ ಆರಂಭಿಸಿದ್ದು, ಈ ಬಸ್ ಸುಮಾರು 12 ಗಂಟೆಗಳಲ್ಲಿ ಗಮ್ಯಸ್ಥಾನ ತಲುಪಲಿದೆ. ಇದರಿಂದ ಮಂತ್ರಾಲಯ ಮಂಗಳೂರಿನ ಪ್ರಯಾಣಿಕರಿಗೆ ಇನ್ನಷ್ಟು ಸುಲಭವಾಗಿ ತಲುಪುವಂತಾಗಿದೆ. ಈ ಬಸ್…

Read More

ಪಕ್ಷ ಕ್ರಮಗಳಿಗೆ ಚುನಾವಣಾ ಫಲಿತಾಂಶಕ್ಕೆ ಸಂಬಂಧವಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಮಂಗಳೂರು: ಪಕ್ಷದಲ್ಲಿ ಕೈಗೊಳ್ಳಲಾದ ಕ್ರಮಗಳಿಗೂ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಿನ ಭೀತಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಚುನಾವಣಾ ಫಲಿತಾಂಶ ಏನಾಗುತ್ತದೆ ಎಂಬುದು ಯಾರಿಗೂ ತಿಳಿದಿಲ್ಲ. ನಾನು ಜ್ಯೋತಿಷಿ ಅಲ್ಲ,” ಎಂದು ಹೇಳಿದರು. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಪಕ್ಷದ ಚೌಕಟ್ಟಿನೊಳಗೆ ಕೆಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಇದೇ ವೇಳೆ…

Read More

ಕ್ಷೇತ್ರ ಮರುವಿಂಗಡನೆ ವಿರುದ್ಧ ಉಡುಪಿ ಕಾಂಗ್ರೆಸ್ ಪ್ರತಿಭಟನೆ: ರಸ್ತೆ ತಡೆ ಮಾಡಿ ಆಕ್ರೋಶ

ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡನೆ ಮಸೂದೆ ವಿರೋಧಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು. ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಕಾಲ್ನಡಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್‌ಗೆ ಆಗಮಿಸಿದ ಕಾರ್ಯಕರ್ತರು ಅಲ್ಲಿಗೆ ತಲುಪಿ ಕೆಲಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಗುರಾಣಿಯಾಗಿ ಬಳಸಿಕೊಂಡು ಕ್ಷೇತ್ರ ಮರುವಿಂಗಡನೆ ಮಸೂದೆ ಮಂಡಿಸಲು ಯತ್ನಿಸಿದೆ ಎಂದು…

Read More

ಉಡುಪಿಯಲ್ಲಿ ‘ಶ್ರೀರಾಮ ಟಂಕ ಜಪ’ ಅಭಿಯಾನಕ್ಕೆ ಚಾಲನೆ: ಗೀತಾಮಂದಿರದಲ್ಲಿ ಭಕ್ತಿಭಾವದ ಕಾರ್ಯಕ್ರಮ

ಉಡುಪಿ: ಧಾರ್ಮಿಕ ನಗರಿ ಉಡುಪಿಯ ಶ್ರೀಕೃಷ್ಣ ಮಠ ಸಮೀಪದ ಗೀತಾಮಂದಿರ ದ ಶ್ರೀ ಪುತ್ತಿಗೆ ನರಸಿಂಹ ಸಭಾಂಗಣದಲ್ಲಿ ವಿಶೇಷ ‘ಶ್ರೀರಾಮ ಟಂಕ ಜಪ’ ಅಭಿಯಾನಕ್ಕೆ ಭಕ್ತಿಪೂರ್ವಕ ಚಾಲನೆ ನೀಡಲಾಯಿತು. ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಅಭಿಯಾನವನ್ನು ಉದ್ಘಾಟಿಸಿ ಚಾಲನೆ ನೀಡಿದರು. ಇನ್ನು ಮುಂದೆ ಪ್ರತಿ ಭಾನುವಾರ ಸಾರ್ವಜನಿಕರಿಗಾಗಿ ಈ ಜಪ ಅಭಿಯಾನ ನಿರಂತರವಾಗಿ ನಡೆಯಲಿದೆ. ಪುರಾಣ ಕಾಲದ ಅಪರೂಪದ ನಾಣ್ಯವಾಗಿರುವ “ಶ್ರೀರಾಮ ಟಂಕ”ಕ್ಕೆ ವಿಶಿಷ್ಟ ಧಾರ್ಮಿಕ ಮಹತ್ವವಿದೆ. ಈ ಪವಿತ್ರ ನಾಣ್ಯವನ್ನು ಎರಡು ಕೈಗಳ ಮಧ್ಯೆ…

Read More

ಮಹಿಳಾ ಮೀಸಲಾತಿ ಹೆಸರಿನಲ್ಲಿ ವಂಚನೆ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಆರೋಪ

ಬೆಂಗಳೂರು: ಕೇಂದ್ರ ಸರ್ಕಾರ ಮಹಿಳೆಯರ ಹೆಸರಿನಲ್ಲಿ ವಂಚನೆ ಮಾಡಲು ಮುಂದಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ವಾಸ್ತವದಲ್ಲಿ ಬಿಜೆಪಿ ನಾಯಕರು ಎಂದರು. 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆ ಬಂದಾಗ ಅದನ್ನು ಸರ್ವಾನುಮತದಿಂದ ಅಂಗೀಕರಿಸಿದ್ದೇವೆ ಎಂದು ತಿಳಿಸಿದರು. ಮಹಿಳಾ ಮೀಸಲಾತಿಗೆ ಕ್ಷೇತ್ರ ಪುನರ್‌ವಿಂಗಡಣೆ ಯಾವುದೇ ರೀತಿಯ ಸಂಬಂಧ ಹೊಂದಿಲ್ಲ. ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ಕುರಿತು ತಕ್ಷಣ ತೀರ್ಮಾನ ಕೈಗೊಳ್ಳಬೇಕು…

Read More
error: Content is protected !!