ಮಂಗಳೂರಿನಲ್ಲಿ ಬಜರಂಗದಳ ಸಂಯೋಜಕರ ಸಮಾವೇಶಕ್ಕೆ ಚಾಲನೆ: ಸಂಘನಿಕೇತನದಲ್ಲಿ ಎರಡು ದಿನಗಳ ಕಾರ್ಯಕ್ರಮ

ಮಂಗಳೂರು: ಬಜರಂಗ ದಳ ಕರ್ನಾಟಕ ದಕ್ಷಿಣ ಪ್ರಾಂತದ ಸಂಯೋಜಕರ ಸಮಾವೇಶ ಮಂಗಳೂರಿನ ಸಂಘನಿಕೇತನ ನಲ್ಲಿ ಎರಡು ದಿನಗಳ ಕಾಲ ನಡೆಯುತ್ತಿದ್ದು, ಶನಿವಾರ ಅದಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಗೋಪೂಜೆ ಹಾಗೂ ಧ್ವಜಾರೋಹಣದ ಮೂಲಕ ಸಮಾವೇಶವನ್ನು ವಿಧಿವತ್ತಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಜರಂಗದಳ ಸಂಯೋಜಕ ಕಿಶನ್ ಪ್ರಜಾಪತ್ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಥಾಣು ಮಾಲಯನ್ ಜೀ, ಡಾ ಎಂ ಬಿ ಪುರಾಣಿಕ್, ಸುರೇಶ್ ಬಿ ಇ, ಶರಣ್ ಪಂಪುವೆಲ್ ಹಾಗೂ ಪ್ರಭಂಜನ್ ಸೂರ್ಯ ಸೇರಿದಂತೆ ಹಲವು ಪ್ರಮುಖರು…

Read More

ಸರ್ಕಾರಿ-ಖಾಸಗಿ ಆರೋಗ್ಯ ಒಪ್ಪಂದಗಳಿಗೆ ವಿರೋಧ: ಏ.28ರಂದು ಡಿವೈಎಫ್‌ಐ ಪ್ರತಿಭಟನೆ

Democratic Youth Federation of India (ಡಿವೈಎಫ್‌ಐ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು, ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳ ನಡುವಿನ ಒಪ್ಪಂದಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ, ಏಪ್ರಿಲ್ 28ರಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಪ್ರತಿಭಟನೆಯನ್ನು ನಡೆಸುವುದಾಗಿ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ , ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇತ್ತೀಚೆಗೆ ಕೈಗೊಂಡಿರುವ ಸರ್ಕಾರಿ ಆರೋಗ್ಯ ಕೇಂದ್ರಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ…

Read More

ರೆ| ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಆಯ್ಕೆ

ಮೈಸೂರು, ಎಪ್ರಿಲ್ 17, 2026: ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಶುಕ್ರವಾರ, ಎಪ್ರಿಲ್ 17, 2026 ರಂದು ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ (Discalced Carmelites) ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂದನೀಯ ರೆ| ಸಿಲ್ವೆಸ್ಟರ್ ಡಿ’ಸೋಜಾ, ಒಸಿಡಿ ಅವರ ಉತ್ತರಾಧಿಕಾರಿಯಾಗಿ ಇವರು ಅಧಿಕಾರ ವಹಿಸಿಕೊಂಡಿದ್ದಾರೆ….

Read More

ಸ್ಕೂಟರ್‌ನಲ್ಲಿ ಮಾದಕ ವಸ್ತು ಸಾಗಾಟ:19.340 ಗ್ರಾಂ ಎಂ.ಡಿ.ಎಂ.ಎ ಸಹಿತ ಯುವಕನ ಬಂಧನ

ಕಾಸರಗೋಡು: ಸ್ಕೂಟರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 19.340 ಗ್ರಾಂ ಎಂ.ಡಿ.ಎಂ.ಎ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ಕರ್ನಾಟಕದ ಪೆರುಮಣ್ಣೂರು, ಕಲ್ಲಾಪು ನಿವಾಸಿಯಾದ ಸಯ್ಯಿದ್ ಆಫ್ರೀದಿ (28) ಬಂಧಿತನಾಗಿದ್ದಾನೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ಶಿರಿಯ ಮುಟ್ಟಮ್ ಪ್ರದೇಶದಲ್ಲಿ ಪೇಟ್ರೋಲಿಂಗ್ ನಡೆಸುತ್ತಿದ್ದ ವೇಳೆ ಸರ್ವೀಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ಕರ್ನಾಟಕ ನೋಂದಣಿ ಸಂಖ್ಯೆಯ ಸ್ಕೂಟರ್ ಅನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಆರೋಪಿಯ ಬಳಿ ಇದ್ದ ಮಾದಕ ವಸ್ತು ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಮಂಜೇಶ್ವರ ರೈಲ್ವೆ ನಿಲ್ದಾಣಕ್ಕೆ ಅಭಿವೃದ್ಧಿಯ ಸ್ಪರ್ಶ: ಮೂಲಸೌಕರ್ಯ ವೃದ್ಧಿಗೆ ಡಿಆರ್‌ಎಂ ಮಧುಕರ್ ರಾವ್ ಭರವಸೆ

ಮಂಜೇಶ್ವರ: ಮಂಜೇಶ್ವರ ರೈಲ್ವೆ ನಿಲ್ದಾಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮಧುಕರ್ ರಾವ್ ತಿಳಿಸಿದ್ದಾರೆ. ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಜನಪ್ರತಿನಿಧಿಗಳು, ಪ್ರಯಾಣಿಕರು ಹಾಗೂ ನಿಲ್ದಾಣ ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ಅವರು, ಹಲವು ಪ್ರಮುಖ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಮಳೆಗಾಲದಲ್ಲಿ ನಿಲ್ದಾಣ ಆವರಣದಲ್ಲಿ ನೀರು ನಿಲ್ಲದಂತೆ ತಡೆಯಲು ಸುಸಜ್ಜಿತ ಚರಂಡಿ ವ್ಯವಸ್ಥೆ ನಿರ್ಮಿಸಲಾಗುವುದು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಪ್ಲಾಟ್‌ಫಾರ್ಮ್‌ನ ಎರಡೂ ಬದಿಗಳಲ್ಲಿ ಮೇಲ್ಛಾವಣಿ ನಿರ್ಮಾಣಕ್ಕೂ ಕ್ರಮ…

Read More

ಬೇಕೂರಿನಲ್ಲಿ ಪೈಪ್‌ಲೈನ್ ಸ್ಫೋಟ – ಮಿನಿ ಪ್ರವಾಹ, ಮನೆಗೆ ಹಾನಿ, ನೀರು ಸರಬರಾಜು ಸ್ಥಗಿತದ ಭೀತಿ

ಬೇಕೂರು: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ವಿವಿಧ ವಾರ್ಡ್‌ಗಳಿಗೆ ನೀರು ಸರಬರಾಜು ಮಾಡುವ ಬೇಕೂರಿನ ಜಲಸಂಪನ್ಮೂಲ ಘಟಕದಲ್ಲಿ ಇಂದು ಬೆಳಗ್ಗೆ ಭಾರೀ ಅವಘಡ ಸಂಭವಿಸಿದೆ. ಬೇಕೂರು ಮಿಲ್ ಸಮೀಪದಲ್ಲಿರುವ ಚೆಂಬರ್‌ನಲ್ಲಿ ಪೈಪ್‌ಲೈನ್ ತುಂಡಾಗಿ, ದೊಡ್ಡ ಪ್ರಮಾಣದ ನೀರು ಹೊರಹರಿದು ಮಿನಿ ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಇಂದು ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಸಂಭವಿಸಿದ್ದು, ಸ್ಥಳೀಯ ಸ್ಕ್ರಾಪ್ ಅಂಗಡಿ ಮಾಲೀಕ ಗಫೂರ್ ಅವರ ಮನೆಗೆ ನೀರು ನುಗ್ಗಿ, ಹಿತ್ತಲಿನಲ್ಲಿದ್ದ ಮರಗಿಡಗಳು ಹಾಗೂ ಅನೇಕ ವಸ್ತುಗಳು ಸಂಪೂರ್ಣ…

Read More

ಮಂಜೇಶ್ವರ ಬೀಚ್‌ನಲ್ಲಿ ಕಸದ ಪರ್ವತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೀನುಗಾರರು–ಪ್ರವಾಸಿಗರ ಆಕ್ರೋಶ

ಮಂಜೇಶ್ವರ: ಪ್ರವಾಸಿ ಆಕರ್ಷಣೆಯಾಗಿ ಹೆಸರು ಮಾಡಿರುವ ಮಂಜೇಶ್ವರ ಬೀಚ್ ಇದೀಗ ಕಸದ ಗುಡ್ಡಗಳ ಕೇಂದ್ರವಾಗುತ್ತಿದೆ. ಬೀಚ್ ಸಮೀಪದ ಎಲ್ಲ ಪ್ರದೇಶಗಳು ಈಗ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳಿಂದ ತುಂಬಿ ಹರಿಯುತ್ತಿವೆ. ಪ್ರತಿದಿನ ನೂರಾರು ಜನರು ಭೇಟಿ ನೀಡುವ ಈ ಪ್ರದೇಶದಲ್ಲಿ ಮಲಿನತೆ ಹೆಚ್ಚುತ್ತಿರುವುದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಬೀಚ್‌ಗೆ ಬರುವ ಪ್ರವಾಸಿಗರು ಮತ್ತು ಹತ್ತಿರದ ವಾಟರ್ ಥೀಮ್ ಪಾರ್ಕ್‌ಗೆ ಆಗಮಿಸುವವರು ಆಹಾರದ ಅವಶೇಷಗಳು ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ಎಸೆಯುತ್ತಿರುವುದು ಸಾಮಾನ್ಯವಾಗಿದೆ. ಕಸದ ರಾಶಿ ಹೆಚ್ಚಾಗುತ್ತಿದ್ದಂತೆ ಬೀದಿ ನಾಯಿಗಳ…

Read More

ಕುಂಬಳೆ: ವಾಹನ ಕಳ್ಳತನ ಪ್ರಕರಣ—ಆರೋಪಿ ಬಂಧನ

ಕುಂಬಳೆಯಲ್ಲಿ ಹೋಟೆಲ್ ಎದುರು ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣದ ನಿವಾಸಿ ರವಿ ಅಲಿಯಾಸ್ ‘ಡಬ್ಬ ರವಿ’ ಬಂಧಿತ ಆರೋಪಿ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದರು. ಇದೇ ವೇಳೆ ಅಪಘಾತದಲ್ಲಿ ಗಾಯಗೊಂಡ ರವಿಯನ್ನು ಕುಂಬಳೆ ಸರಕಾರಿ ಆಸ್ಪತ್ರೆಗೆ ತರಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ದೊರಕಿತು. ತಕ್ಷಣ ಆಸ್ಪತ್ರೆಯಲ್ಲಿ ಕಾದಿದ್ದ ಪೊಲೀಸರು, ಅಲ್ಲಿಗೆ ಬಂದ ಆರೋಪಿಯನ್ನು ಬಂಧಿಸಿದರು. ನಂತರ ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿನ ಪೊಲೀಸ್…

Read More

ಕಾಸರಗೋಡು: ವಸಂತ್ ಕೆರೆಮನೆ–ದಿವ್ಯಶ್ರೀ ದಂಪತಿಗೆ “ಕನ್ನಡ ಸೇವಾ ನಿರತರು” ಪ್ರಶಸ್ತಿ

ಕಾಸರಗೋಡು: ಕನ್ನಡ ಭವನ ಪ್ರದಾನ ಕಾರ್ಯದರ್ಶಿ ವಸಂತ್ ಕೆರೆಮನೆ ಹಾಗೂ ದಿವ್ಯಶ್ರೀ ದಂಪತಿಗಳಿಗೆ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕನ್ನಡ ಭವನ ಪ್ರಕಾಶನ ವತಿಯಿಂದ “ಕನ್ನಡ ಸೇವಾ ನಿರತರು” ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಂಪತಿಗಳ ವಿವಾಹ ದಶಮಾನೋತ್ಸವದ ಪ್ರಯುಕ್ತ ಕನ್ನಡ ಭವನದ ಅಭಿಮಾನಿಗಳಿಂದ ಬೇಕಲ್ ಇಂಟರ್ನ್ಯಾಷನಲ್ ಬೀಚ್‌ನಲ್ಲಿ ಸವಿ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕನ್ನಡ ಭವನದ ಗೌರವ ಅಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ರಾಮರಾಜ ಕ್ಷತ್ರಿಯ ಕಾಸರಗೋಡು ಅಧ್ಯಕ್ಷ ಹಾಗೂ ಕನ್ನಡ…

Read More

ಹುಣಸೂರು: ಯುವಕನ ಅನುಮಾನಾಸ್ಪದ ಸಾವು, ಪ್ರಕರಣ ದಾಖಲು

ಹುಣಸೂರು: ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ (27) ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಂಚವಳ್ಳಿ ಗ್ರಾಮದಲ್ಲಿ ಕಾರ್ ಗ್ಯಾರೇಜ್ ನಡೆಸುತ್ತಿದ್ದ ಫರ್ಮಾನ್ ಪಾಷಾ, ಏಪ್ರಿಲ್ 15ರಂದು ಮೈಸೂರಿನ ಬಿಳಿಕೆರೆ ಗ್ರಾಮದ ಆಫ್ರಿನ್ ಹಾಗೂ ಆಕೆಯ ಸಹೋದರ ಸಲ್ಮಾನ್ ಅವರನ್ನು ಭೇಟಿ ಮಾಡಲು ಹೋಗುತ್ತಿರುವುದಾಗಿ ತಂದೆಗೆ ತಿಳಿಸಿ ಮನೆಯಿಂದ ಹೊರಟಿದ್ದರು. ನಂತರ ಫರ್ಮಾನ್ ಪಾಷಾ ಅವರು ಜಾಜಿರ್ ಎಂಬ ವ್ಯಕ್ತಿಯ ಮೂಲಕ ದೂರವಾಣಿ ಕರೆ ಮಾಡಿ ತನ್ನ…

Read More
error: Content is protected !!