ಭಾರತ್ ಬಂದ್‌ಗೆ ಕಾಸರಗೋಡಿನಲ್ಲಿ ವ್ಯಾಪಕ ಬೆಂಬಲ: ವಾಣಿಜ್ಯ–ಸಾರಿಗೆ ಸ್ಥಗಿತ, ಜನಜೀವನ ಅಸ್ತವ್ಯಸ್ತ

ಮಂಜೇಶ್ವರ : ಕೇಂದ್ರ ಸರ್ಕಾರದ ನೂತನ ಲೇಬರ್ ಕೋಡ್ ಹಿಂಪಡೆಯುವಂತೆ ಹಾಗೂ ಕೃಷಿ-ಕಾರ್ಮಿಕ, ಆರ್ಥಿಕ ನೀತಿಗಳ ವಿರುದ್ಧ ದೇಶವ್ಯಾಪಿ ಕರೆ ನೀಡಲಾದ ಭಾರತ್ ಬಂದ್‌ಗೆ ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ವಾಣಿಜ್ಯ ವಹಿವಾಟು ಹಾಗೂ ಸಾರಿಗೆ ವ್ಯವಸ್ಥೆ ಬಹುತೇಕ ಸ್ಥಗಿತಗೊಂಡು ಸಾಮಾನ್ಯ ಜನಜೀವನಕ್ಕೆ ವ್ಯತ್ಯಯ ಉಂಟಾಯಿತು. ನಗರ ಸೇರಿದಂತೆ ವಿವಿಧ ಪಟ್ಟಣ-ಪೇಟೆಗಳಲ್ಲಿ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಅಗತ್ಯ ಸೇವೆಗಳಾದ ಔಷಧ ಅಂಗಡಿ ಮತ್ತು ಹಾಲು ಮಾರಾಟ ಕೇಂದ್ರಗಳು ಮಾತ್ರ ಕೆಲವೆಡೆ ತೆರೆಯಲ್ಪಟ್ಟವು. ಮಂಜೇಶ್ವರ ಸೇರಿದಂತೆ ಗ್ರಾಮೀಣ…

Read More

ತುಳುನಾಡಿನಲ್ಲಿ ಕಮ್ಯುನಿಸ್ಟ್ ಸ್ವರ ಮೊಳಗಿಸಿದ ಕಾಂ. ಬಿ.ವಿ. ರಾಜನ್ ದ್ವಿತೀಯ ಚರಮ ವಾರ್ಷಿಕ ಆಚರಣೆ

ಹಿರಿಯ ಸಿಪಿಐ ನೇತಾರ ತುಳುನಾಡಿನಲ್ಲಿ ಕಮ್ಯುನಿಸ್ಟ್ ಸ್ವರ ಮೊಳಗಿಸಿದ ಕಾಂ|| ಬಿ.ವಿ ರಾಜನ್ ರವರ ದ್ವಿತೀಯ ಚರಮ ವಾರ್ಷಿಕ ದಿನವು ಪುಷ್ಪಾರ್ಚನೆ ಮತ್ತು ಅನುಸ್ಮರಣೆಯೊಂದಿಗೆ ಜರಗಿತು. ಸಿಪಿಐ ದೇಶೀಯ ಕೌನ್ಸಿಲ್ ಸದಸ್ಯರಾದ ಗೋವಿಂದನ್ ಪಳ್ಳಿಕಾಪ್ಪಿಲ್ ಉದ್ಘಾಟಿಸಿದರು. ಜಯರಾಮ್ ಬಲ್ಲಂಗುಡೇಲ್ ಅಧ್ಯಕ್ಷತೆ ವಹಿಸಿದರು. ಹಿರಿಯ ಕಾರ್ಯಕರ್ತರಾದ ಚಂದ್ರಶೇಖರ ಕೀರ್ತೇಶ್ವರ ಧ್ವಜಾರೋಹಣಗೈದರು. ಎಸ್. ರಾಮಚಂದ್ರ ಬಡಾಜೆ, ರಾಮಕೃಷ್ಣ ಕಡಂಬಾರ್ ಮೊದಲಾದವರು ಅನುಸ್ಮರಣಾ ಭಾಷಣ ಮಾಡಿದರು. ಬಿ.ವಿ ರಾಜನ್ ಪತ್ನಿ ನಾರಾಯಣಿ ರಾಜನ್, ಪುತ್ರಿ ರಮ್ಯಾ ರಾಜನ್,ಮೋಟಾರ್ ಯೂನಿಯನ್ ಜಿಲ್ಲಾ ಅಧ್ಯಕ್ಷರಾದ…

Read More

ಮಂಗಳೂರಿನಲ್ಲಿ ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಠಿಣ ಕ್ರಮ: ₹10,000 ದಂಡ, ಜಾಗೃತಿ ಅಭಿಯಾನ ಆರಂಭ

ಮಂಗಳೂರು : ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆ ನಿಷೇದ ಹಿನ್ನಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಂಗಳೂರು ಮಹಾನಗರ ಪಾಲಿಕೆ ಕೈಗೆತ್ತಿಕೊಂಡಿದೆ.ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆಮಾಡಿದಲ್ಲಿ 10 ,000 ದಂಡ ವಿಧಿಸಲಾಗುತ್ತದೆ.ಹಸಿಕಸ-ಒಣಕಸವನ್ನು ವಿಂಗಡಿಸಿ ಕೊಡುವ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.ಅಂಗಡಿ ,ಫ್ಲಾಟ್ ,ಸಾರ್ವಜನಿಕರಿಗೆ sticker ನೀಡಿ ಮಾಹಿತಿ ಪ್ರಸಾರದ ಕಾರ್ಯ ನಡೆಸಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ವಿರುದ್ಧ ಶೀಘ್ರದಲ್ಲೇ ಎಲ್ಲಾ ಕಡೆ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ವಲಯ ಆಯುಕ್ತರಾದ ರೇಖಾ ಶೆಟ್ಟಿ ತಿಳಿಸಿದ್ದಾರೆ.ನಗರದಲ್ಲಿ ಬಹುತೇಕ…

Read More

ಫೆ.14 ರಂದು ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026 … !

ಮಂಗಳೂರು:ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಫೆ.14 ರಂದು ಬೆಳಗ್ಗೆ 10 ಗಂಟೆಗೆ ತುಳು ಸಾಹಿತ್ಯ ಅಕಾಡೆಮಿಯ ಸಭಾಂಗಣದಲ್ಲಿ ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಸದಸ್ಯ ಸಂಚಾಲಕರಾದ ಡಾ|ಗೀತಾ ಬಿ.ವಿ. ತಿಳಿಸಿದರು. ಅವರು ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶುಭ ಧನಂಜಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಚಾರ ಸಂಕಿರಣವನ್ನು ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರದ ನಿಕಟಪೂರ್ವ ಯೋಜನಾ ನಿರ್ದೇಶಕ ಪ್ರೊ|ಬೋಳಾರ ಶಿವರಾಮ ಶೆಟ್ಟಿಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Read More

ಫೆ.21ರಂದು ಕುದ್ರೋಳಿ ತೀರ್ಥಾಟನೆ ‘ ನಡಿಗೆ ದೇವರ ಕಡೆಗೆ … !

ಮಂಗಳೂರು:ನಗರದ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಶಿವಲಿಂಗ ಪ್ರತಿಷ್ಟಾಪನೆ ಮಾಡಿದ ಸವಿ ನೆನಪಿಗಾಗಿ ಫೆ. 21ರಂದು ಕ್ಷೇತ್ರದ ವತಿಯಿಂದ ‘ಕುದ್ರೋಳಿ ತೀರ್ಥಾಟನೆ’ ನಡಿಗೆಯನ್ನು ಆಯೋಜಿಸಲಾಗಿದ್ದು ಬೆಳಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11. 30 ಕ್ಕೆ ಶ್ರೀ ಸನ್ನಿಧಿಯನ್ನು ತಲುಪಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರ ದೇವಾಲಯದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಈ ಬಗ್ಗೆ ಹೆಚ್ಚಿನ…

Read More

ಡಾ. ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ ಶರವೂರಿನ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2ರವರೆಗೆ ಬ್ರಹ್ಮಕಲಶಾಭಿಷೇಕ ಮಹೋತ್ಸವ …. !

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಲಂಕಾರು ಗ್ರಾಮದ ಶರವೂರಿನ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2ರವರೆಗೆ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿವರ್ಯರ ಮಾರ್ಗದರ್ಶನದಲ್ಲಿ , ಡಾ . ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರ ಗೌರವಾಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಹೇಮಂತ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ , ದೇವಾಲಯದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕ್ರಾಯಕ್ರಮಗಳೊಂದಿಗೆ…

Read More

ತೆರೆದ ಪಿಕಪ್–ಟಿಪ್ಪರ್‌ನಲ್ಲಿ ಶಾಲಾ ಮಕ್ಕಳ ಪ್ರವಾಸ: ಬೆಳ್ತಂಗಡಿಯಲ್ಲಿ ಪ್ರಬಾರ ಮುಖ್ಯೋಪಾಧ್ಯಾಯ ಅಮಾನತು

ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನು ಬಾಹಿರವಾಗಿ ಸರಕು ಸಾಗಣೆಯಂತೆ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರ ನೇತೃತ್ವದಲ್ಲಿ ಫೆ.10 ರಂದು ಬೆಳಗ್ಗೆ ಶಾಲಾ ಮಕ್ಕಳನ್ನು…

Read More

ಪುತ್ತೂರಿನಲ್ಲಿ ‘ಅಬ್ಬಕ್ಕ @500’ ರಾಷ್ಟ್ರೀಯ ವಿಚಾರ ಸಂಕಿರಣ: 21 ಸಾಧಕ ಮಹಿಳೆಯರಿಗೆ ವೀರರಾಣಿ ಅಬ್ಬಕ್ಕ ಪುರಸ್ಕಾರ

ಪುತ್ತೂರು: ಅಖಿಲ ಭಾರತೀಯ ರಾಷ್ಟಿçÃಯ ಶೈಕ್ಷಿಕ್ ಮಹಾಸಂಘ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು ಇದರ ಇತಿಹಾಸ ವಿಭಾಗ, ಐಕ್ಯೂಎಸಿ ಸಹಯೋಗದೊಂದಿಗೆ ರಾಣಿ ಅಬ್ಬಕ್ಕಳ ಸಾಧನೆಗಳನ್ನು ರಾಷ್ಟ್ರ ವ್ಯಾಪ್ತಿಗೊಳಿಸುವ ನಿಟ್ಟಿನಲ್ಲಿ `ಅಬ್ಬಕ್ಕ @೫೦೦’ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಫೆ.೧೬ರಂದು ವಿವೇಕಾನಂದ ಎಂಜಿನಿಯರಿAಗ್ ಕಾಲೇಜಿನ ಸಾವರ್ಕರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ತಿಳಿಸಿದ್ದಾರೆ….

Read More

ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮ: ಫೆ.14–15 ರಂದು

ಪುತ್ತೂರು: ಒಳಮೊಗ್ರು ಗ್ರಾಮದ ಹೃದಯಭಾಗದಲ್ಲಿರುವ ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಶತಮಾನೋತ್ಸವ ಸಮಾರಂಭವು ಫೆ.14 ಮತ್ತು 15ರಂದು ನಡೆಯಲಿದ್ದು, ಈ ಸಂದರ್ಭ ನೂತನ ಸಾಂಸ್ಕೃತಿಕ ಸಭಾಭವನ. ವೇದಿಕೆ, ರಂಗಮಂದಿರದ ಉದ್ಘಾಟನೆ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ, ಶಾಲಾ ಮಕ್ಕಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗು ಹಿರಿಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಸನ್ಮಾನ ಹಾಗು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ…

Read More

ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ ಗೌಡ ಅವರ ಪತ್ನಿ ನಳಿನಿ ಲೋಕಪ್ಪ ಗೌಡ ಅವರು ಸಮಾಜ ಸೇವಕಿಯಾಗಿದ್ದರು. 2008ರಲ್ಲಿ ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅವರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. 2005ರಲ್ಲಿ ಜಿ.ಪಂ ಸದಸ್ಯರಾಗಿದ್ದರು. 2010ರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ…

Read More
error: Content is protected !!