ಸುಂದರ್ ರಾಮ್ ಶೆಟ್ಟಿಯವರ ಸಮಾಧಿ ಮರುಸ್ಥಾಪನೆಗೆ ಒತ್ತಾಯ

ಮಂಗಳೂರು, ಜೂ.13: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಮುಲ್ಕಿಯ ಬಪ್ಪನಾಡು ಪ್ರವೇಶ ದ್ವಾರದ ಸಮೀಪವಿದ್ದ ವಿಜಯಾ ಬ್ಯಾಂಕಿನ ಆಧುನಿಕ ಶಿಲ್ಪಿ ದಿವಂಗತ ಸುಂದರ್ ರಾಮ್ ಶೆಟ್ಟಿಯವರ ಸಮಾಧಿಯನ್ನು ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿರುವ ಕ್ರಮವನ್ನು ಸುಂದರ್ ರಾಮ್ ಶೆಟ್ಟಿ ಅಭಿಮಾನಿ ಬಳಗ ತೀವ್ರವಾಗಿ ಖಂಡಿಸಿದೆ. ಕುಟುಂಬ ಸದಸ್ಯರು, ಅಭಿಮಾನಿಗಳು ಹಾಗೂ ಸ್ಥಳೀಯ ಸಾರ್ವಜನಿಕರೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಸಮಾಧಿಯನ್ನು ಧ್ವಂಸಗೊಳಿಸಿರುವುದು ನೋವುಂಟುಮಾಡಿದೆ ಎಂದು ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಜಯಾ ಬ್ಯಾಂಕನ್ನು…

Read More

ಅಸ್ಸಾಂನಲ್ಲಿ IAF AN-32 ವಿಮಾನ ಅಪಘಾತ: ಜೋರ್ಹತ್ ವಾಯುನೆಲೆಯಲ್ಲಿ ಇಳಿಯುವ ವೇಳೆ ಬೆಂಕಿಗಾಹುತಿ

ಜೋರ್ಹತ್ (ಅಸ್ಸಾಂ), ಜೂನ್ 13: ಭಾರತೀಯ ವಾಯುಪಡೆಯ (IAF) AN-32 ಸಾರಿಗೆ ವಿಮಾನವು ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ ಶನಿವಾರ ಬೆಳಿಗ್ಗೆ ಅಪಘಾತಕ್ಕೀಡಾಗಿದೆ. ಇಳಿಯುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದ ಬಳಿಕ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಜೋರ್ಹತ್‌ನ ರೌರಿಯಾ ವಾಯುನೆಲೆಯ ಆವರಣದಲ್ಲೇ ವಿಮಾನ ಪತನಗೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ರಕ್ಷಣಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿವೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ…

Read More

ಬಂಟ್ವಾಳ : ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಿಂದ ನಾಪತ್ತೆ

ಬಂಟ್ವಾಳ : ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಿಂದ ನಾಪತ್ತೆತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಯುವತಿಯೊಬ್ಬಳು ಮನೆಯಿಂದ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಬರಿಮಾರು ನಿವಾಸಿ ಮಾದೇವಿ (21) ಎಂದು ಗುರುತಿಸಲಾಗಿದೆ. ಈಕೆ ಸುಮಾರು ಆರು ತಿಂಗಳ ಕಾಲ ಧಾರವಾಡದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿದ್ದು, ಬಳಿಕ ಕೆಲಸ ಬಿಟ್ಟು ಕಳೆದ ಐದು ತಿಂಗಳಿನಿಂದ ತಂದೆ-ತಾಯಿ ಜತೆ ಮನೆಯಲ್ಲಿ…

Read More

‘ವೋಟ್ ಚೋರಿ, ಸೀಟ್ ಚೋರಿ ಪ್ರಜಾಪ್ರಭುತ್ವಕ್ಕೆ ಕಳಂಕ’: ಐವನ್ ಡಿ’ಸೋಜಾ ಆರೋಪ

ಮಂಗಳೂರು, ಜೂನ್ 13: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ಕಾರ್ಯವೈಖರಿಯಿಂದ ದೇಶದಲ್ಲಿ ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆ ಕುಸಿಯುವಂತಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆರೋಪಿಸಿದರು. ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವೋಟ್ ಚೋರಿ” ಮತ್ತು “ಸೀಟ್ ಚೋರಿ” ಪ್ರಜಾಪ್ರಭುತ್ವಕ್ಕೆ ಗಂಭೀರ ಹೊಡೆತ ನೀಡಿದ್ದು, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಮೌನ…

Read More

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ–ಎನ್‌ಡಿಪಿಎಸ್‌ ಕಾಯ್ದೆಯಡಿ ಆರೋಪಿಯ ಬಂಧನ

ಉಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿಐಟಿ–ಎನ್‌ಡಿಪಿಎಸ್‌ (PIT-NDPS) ಕಾಯ್ದೆಯಡಿ ಬಂಧಿಸಲಾಗಿದೆ.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದಲ್ಲಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಜೂನ್ 12ರಂದು ಆರೋಪಿಯನ್ನು ಬಂಧಿಸಲಾಗಿದೆ. ಜಗದೀಶ ಪೂಜಾರಿ ವಿರುದ್ಧ ಮಣಿಪಾಲ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ…

Read More

‘ತಾಯಿಯ ಹೆಸರಲ್ಲಿ ಒಂದು ಗಿಡ’ ಅಭಿಯಾನಕ್ಕೆ ಚಾಲನೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅವರ ಸ್ವಾಗತ ಸಮಾರಂಭದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಯಿತು. ಜಿಲ್ಲೆಯ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಸಮ್ಮುಖದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಸ್ಪಂದಿಸಿ ಹಮ್ಮಿಕೊಳ್ಳಲಾದ ‘ತಾಯಿಯ ಹೆಸರಲ್ಲಿ ಒಂದು ಗಿಡ’ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ…

Read More

ಜಾಗತಿಕ ಸವಾಲುಗಳ ನಡುವೆಯೂ ಭಾರತ 7.7% ಆರ್ಥಿಕ ಬೆಳವಣಿಗೆ ಸಾಧನೆ: ರಾಧಾ ಮೋಹನ್ ದಾಸ್ ಅಗರ್ವಾಲ್

ಮಂಗಳೂರು, ಜೂನ್ 13: ಜಾಗತಿಕ ಆರ್ಥಿಕ ಹಿಂಜರಿತ, ಇಂಧನ ಬಿಕ್ಕಟ್ಟು ಹಾಗೂ ವಿವಿಧ ಅಂತರರಾಷ್ಟ್ರೀಯ ಸಂಘರ್ಷಗಳ ನಡುವೆಯೂ ಭಾರತವು ಶೇ.7.7ರ ಆರ್ಥಿಕ ಬೆಳವಣಿಗೆ ದರ ಸಾಧಿಸಿದ್ದು, ವಿಶ್ವದ ಪ್ರಮುಖ ಆರ್ಥಿಕ ರಾಷ್ಟ್ರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಹೇಳಿದರು. ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14ರಲ್ಲಿ 1.9 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ ಇಂದು 4.1 ಟ್ರಿಲಿಯನ್ ಡಾಲರ್…

Read More

​ಪಯ್ಯನ್ನೂರು ಚಿನ್ನಾಭರಣ ದರೋಡೆ ಪ್ರಕರಣ: ಉಪ್ಪಳದಿಂದ ಬಿಜೆಪಿ ಪ್ರಾದೇಶಿಕ ನಾಯಕನ ಬಂಧನ

ಮಂಜೇಶ್ವರ: ಪಯ್ಯನ್ನೂರು ಎಡಾಟ್‌ನಲ್ಲಿ ಸ್ವರ್ಣೋದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣವನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪ್ರಮುಖ ಆರೋಪಿಯನ್ನು ಉಪ್ಪಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ​ಕಣ್ಣೂರು ಅಂಜಾಪೀಡಿಗ ನಿವಾಸಿ, ಬಿಜೆಪಿ ಪ್ರಾದೇಶಿಕ ನಾಯಕ ಸನು ಅಲಿಯಾಸ್ ಸಂತೋಷ್ ಬಂಧಿತ ಆರೋಪಿ. ಈತನ ಬಂಧನವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ಪಡೆದಿದೆ. ಮೂಲತಃ ಮಹಾರಾಷ್ಟ್ರದವರಾಗಿದ್ದು, ತಲಕ್ಕೇರಿಯಲ್ಲಿ ಚಿನ್ನಾಭರಣ ಸಂಸ್ಥೆಯನ್ನು ನಡೆಸುತ್ತಿದ್ದ ಕುಟುಂಬವು ಜೂನ್ 2ರಂದು ಪ್ರಯಾಣಿಸುತ್ತಿದ್ದಾಗ, ಎಡಾಟ್‌ನಲ್ಲಿ ದುಷ್ಕರ್ಮಿಗಳು ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ದರೋಡೆ ನಡೆಸಿದ್ದರು….

Read More

ಅಕ್ರಮ ಆನೆದಂತ ಸಾಗಾಟ ಪತ್ತೆ: ಮೂವರು ವಶ

ಮಂಗಳೂರು,- ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ಬೆಳ್ತಂಗಡಿ ಶಶಾಂಕ ಪುದುವೆಟ್ಟು, ಮಂಜೇಶ್ವರದ ಅಬ್ದುಲ್ ಖಾದರ್, ಅತ್ತಾವರದ ಪ್ರಭಾಚಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಕಾರು ಮತ್ತು 42.700 ಕಿ.ಗ್ರಾಂ ತೂಕದ 2 ಆನೆದಂತಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೆÇಲೀಸ್ ಅಧೀಕ್ಷಕ ಪವನ್‍ನೆಜ್ಜೂರು ಐ.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೆÇಲೀಸ್ ಅರಣ್ಯ ಸಂಚಾರಿ…

Read More

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು: ನ್ಯಾಯಾಧೀಶೆ ಜೈಬುನ್ನೀಸಾ

ಮಂಗಳೂರು, ಜೂನ್ 13: ಬಾಲಕಾರ್ಮಿಕ ಎಂಬ ಸಾಮಾಜಿಕ ಪಿಡುಗನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಲಕಾರ್ಮಿಕ ನಿರ್ಮೂಲನೆ ಕುರಿತ…

Read More
error: Content is protected !!