ಕಣಪಗಾರು ಗ್ರಾಮದಲ್ಲಿ ಬಿಎಸ್ಎನ್ಎಲ್ ಮೊಬೈಲ್ ಟವರ್ ಲೋಕಾರ್ಪಣೆ: ಜನರ ಸಮಸ್ಯೆ ಆಲಿಸಿದ ಸಂಸದ ಬಿ.ವೈ. ರಾಘವೇಂದ್ರ
ಶಿವಮೊಗ್ಗ, ಜೂನ್ 13: ಸಾಗರ ತಾಲೂಕಿನ ಕಣಪಗಾರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಸ್ಎನ್ಎಲ್ ಮೊಬೈಲ್ ಟವರ್ ಅನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದರು. ಮೊಬೈಲ್ ಸಂಪರ್ಕ ಸೌಲಭ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಿರ್ಮಿಸಲಾದ ಈ ಟವರ್ನಿಂದ ಕಣಪಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಉತ್ತಮ ದೂರಸಂಪರ್ಕ ಸೇವೆ ದೊರೆಯಲಿದೆ. ಬಳಿಕ ಭಾನುಕುಳ್ಳಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಜನಸಂಪರ್ಕ ಸಭೆ ನಡೆಸಿದ ಸಂಸದರು, ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ…