ಲೀಗ್ ನಾಯಕರ ವಿರುದ್ಧ ಅಸಮಾಧಾನ: ಮಂಜೇಶ್ವರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಬ್ದುಲ್ಲ ಮಾಸ್ಟರ್ ಕಣಕ್ಕೆ
ಕುಂಬಳೆ (ಕಾಸರಗೋಡು):ಮುಸ್ಲಿಂ ಲೀಗ್ ನಾಯಕರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲವೆಂದು ಆರೋಪಿಸಿ, ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಬ್ದುಲ್ಲ ಮಾಸ್ಟರ್ ಕಣ್ಣೂರು ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅಲ್ಪ ಮತಾಂತರದಲ್ಲಿ ಜಯಗಳಿಸಿದ್ದ ಮುಸ್ಲಿಂ ಲೀಗ್ ಪಕ್ಷವನ್ನು ಮತ್ತೆ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸುತ್ತಿರುವ ಸಂದರ್ಭದಲ್ಲೇ, ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದ ಅಬ್ದುಲ್ಲ ಮಾಸ್ಟರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸುಮಾರು 14 ವರ್ಷಗಳ ಹಿಂದೆ ತನ್ನ ಪುತ್ರ ಮೊಹಮ್ಮದ್ ಇರ್ಷಾದ್ ಮೂಲಕ, ಲೀಗ್…