ಲೇಬರ್ ಕೋಡ್ ವಿರುದ್ಧ ಹೋರಾಟಕ್ಕೆ ಕೇರಳ LDF ಗೆಲುವು ಬಲ: ಕೆ.ಎನ್. ಉಮೇಶ್
ಮಂಗಳೂರು: ಕಾರ್ಮಿಕ ವಿರೋಧಿ ಲೇಬರ್ ಕೋಡ್ಗಳ ವಿರುದ್ಧ ದೇಶಾದ್ಯಂತ ಜಂಟಿ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ, ಕೇರಳದಲ್ಲಿ ಎಲ್ಡಿಎಫ್ ಸರ್ಕಾರದ ಗೆಲುವು ಈ ಹೋರಾಟಕ್ಕೆ ಬಲ ನೀಡಲಿದೆ ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್. ಉಮೇಶ್ ಅಭಿಪ್ರಾಯಪಟ್ಟರು. ಮಂಗಳೂರಿನ ಸಂದೇಶ ಸಂಸ್ಥೆಯ ಸಭಾಂಗಣದಲ್ಲಿ ನಡೆಯುತ್ತಿರುವ ಎರಡು ದಿನಗಳ ಸಿಐಟಿಯು ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೇಬರ್ ಕೋಡ್ಗಳನ್ನು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಜಾರಿಗೆ ತರಲು ಮುಂದಾಗಿವೆ….