ಐತಿಹಾಸಿಕ ಗುಜ್ಜರಕೆರೆ ನೀರು ಕುಡಿಯಲು ಅಯೋಗ್ಯ: ಪ್ರಯೋಗಾಲಯ ವರದಿಯಿಂದ ದೃಢ
ಮಂಗಳೂರಿನ ಗುಜ್ಜರಕೆರೆಗೆ ಐತಿಹಾಸಿಕಮತ್ತು ಧಾರ್ಮಿಕ ಮಹತ್ವವಿದೆ. ಆದರೆ ಅದರ ನೀರು ಈಗ ಬ್ಯಾಕ್ಟಿರಿಯಾಗಳಿಂದಾಗಿ ಕುಡಿಯಲು ಅಯೋಗ್ಯವಾಗಿದೆ.ನೀರು ಕಲುಷಿತವಾಗಿರುವುದು ಪ್ರಯೋಗಾಲಯ ವರದಿಯಿಂದ ಮತ್ತೊಮ್ಮೆ ಸಾಬೀತಾಗಿದೆ. ಒಂದು ಕಾಲದಲ್ಲಿ ರೋಗರುಜಿನ ಗಳಿದ್ದರೆ ಅದನ್ನು ಗುಣಪಡಿಸುವ ಪವಿತ್ರ ತೀರ್ಥಕೆರೆಯಾಗಿತ್ತು ಗುಜ್ಜರಕೆರೆ. ಅದು ಜನವಸತಿಯ ಒತ್ತಡದಿಂದಾಗಿ ಸದ್ಯ ರೋಗರುಜಿನ ಉಂಟುಮಾಡುವ ಬ್ಯಾಕ್ಟಿರಿಯಾಗಳಿಂದ ಕೂಡಿದೆ.ಕೆರೆ ನೀರು ಸಂಪೂರ್ಣ ಕಲುಷಿತಗೊಂಡಿದೆ. ಪ್ರಯೋಗಾಲಯದ ವರದಿ ಇದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ಕೋಟ್ಯಂತರ ರೂಪಾಯಿ ವ್ಯಯಿಸಿ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಕೆರೆಯನ್ನು ಅಭಿವೃದ್ದಿ ಮಾಡಲಾಗಿತ್ತು. ಸುತ್ತಮುತ್ತ ನೋಡಲು…